ಗೊಂದಲಕ್ಕೆ ಆಸ್ಪದ ಬೇಡ, ನಿರ್ಧಾರ ಬೇಗ ತೆಗೆದುಕೊಳ್ಳಿ


Team Udayavani, Jun 1, 2021, 3:19 AM IST

ಗೊಂದಲಕ್ಕೆ ಆಸ್ಪದ ಬೇಡ, ನಿರ್ಧಾರ ಬೇಗ ತೆಗೆದುಕೊಳ್ಳಿ

ರಾಜ್ಯಾದ್ಯಂತ ಕಾಡುತ್ತಿರುವ ಕೊರೊನಾದಿಂದಾಗಿ ಎಲ್ಲ ಚಟುವಟಿಕೆಗಳು ಬಂದ್‌ ಆಗಿರುವುದಷ್ಟೇ. ವಾಣಿಜ್ಯ ಚಟುವಟಿಕೆಗಳಾದರೂ ಕೊಂಚ ಸಮಯವಾದ ಒಪನ್‌ ಆಗಿದ್ದವು. ಆದರೆ ಕೊರೊನಾ ಆರಂಭವಾದಾಗಿನಿಂದಲೂ ಹೆಚ್ಚು ಹೊಡೆತ ತಿಂದಿರುವುದು ಶೈಕ್ಷಣಿಕ ಕ್ಷೇತ್ರ. ಕಳೆದ ವರ್ಷದ ಮಾರ್ಚ್‌ ಅಂತ್ಯದಿಂದ ಹಿಡಿದು, ಇಲ್ಲಿವರೆಗೂ ಬರೀ ಗೊಂದಲದಲ್ಲೇ ಈ ವಲಯ ಮುಳುಗಿದೆ.

ಶೈಕ್ಷಣಿಕ ಆರಂಭದ ದಿನಗಳಲ್ಲಿ ಶಾಲಾರಂಭದ ಬಗ್ಗೆ ಗೊಂದಲಗಳಿದ್ದರೆ, ಪರೀಕ್ಷಾ ಋತು ಬಂದರೆ ಸಾಕು ಬೇಕೋ ಅಥವಾ ಬೇಡವೋ ಎಂಬ ಚರ್ಚೆಗಳು ಶುರುವಾಗುತ್ತವೆ. ಈ ಬಾರಿಯಂತೂ ಎರಡನೇ ಅಲೆ ಕಳೆದ ಬಾರಿಗಿಂತಲೂ ಹೆಚ್ಚು ಕಾಡಿದ್ದು, ಸಾವು ನೋವೂ ಹೆಚ್ಚಾಗಿದೆ. ಇದನ್ನು ಮನಗಂಡೇ ಈಗಾಗಲೇ ಕೆಲವು ರಾಜ್ಯಗಳು ಮತ್ತು ಸಿಬಿಎಸ್‌ಇ ಮತ್ತು ಐಸಿಎಸ್‌ಇಗಳು 10ನೇ ತರಗತಿ ಪರೀಕ್ಷೆಯನ್ನೇ ರದ್ದು ಮಾಡಿವೆ. ಈಗ 12ನೇ ತರಗತಿ ಪರೀಕ್ಷೆ ರದ್ದು ಮಾಡಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಚರ್ಚೆಯಲ್ಲಿ ತೊಡಗಿವೆ. ಈ ಬಗ್ಗೆ ಸುಪ್ರೀಂಕೋರ್ಟ್‌ ಕೂಡ ವಿಚಾರಣೆ ನಡೆಸುತ್ತಿದೆ.

ಇವೆಲ್ಲದರ ಮಧ್ಯೆ, ಉದಯವಾಣಿ ನಡೆಸಿದ ಮೆಗಾ ಸರ್ವೆಯಲ್ಲಿ ವಿದ್ಯಾರ್ಥಿಗಳೂ ಪರೀಕ್ಷೆ ಬರೆಯಲು ಸಿದ್ಧವಾಗಿರುವುದು ಬಹಿರಂಗಗೊಂಡಿದೆ. ಆದರೆ ಇಲ್ಲಿ ವಿದ್ಯಾರ್ಥಿಗಳು ಮತ್ತು ಹೆತ್ತವರು ಪ್ರಶ್ನೆ ಇರುವುದು ಗೊಂದಲಗಳ ಬಗ್ಗೆ. ದಯಮಾಡಿ ಯಾವುದೇ ಕಾರಣಕ್ಕೆ ವಿದ್ಯಾರ್ಥಿಗಳಲ್ಲಿ ಗೊಂದಲ ಸೃಷ್ಟಿಸಿ ಅವರಲ್ಲಿ ಒತ್ತಡ ಹೆಚ್ಚಿಸಬೇಡಿ. ಒಂದು ಪರೀಕ್ಷೆ ಮಾಡುವುದಾದರೆ ಮಾಡಿ, ಇಲ್ಲವೇ ರದ್ದು ಮಾಡಿ ಬಿಡಿ ಎಂದು ಹೇಳಿದ್ದಾರೆ. ಹೆತ್ತವರುೂ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದು, ನಮ್ಮ ಮಕ್ಕಳನ್ನು ಪರೀಕ್ಷೆಗೆ ಕಳುಹಿಸಲು ಸಿದ್ಧ ಎಂಬ ಅರ್ಥದಲ್ಲಿ ಮಾತನಾಡಿದ್ದಾರೆ.

ಹೀಗಾಗಿ ರಾಜ್ಯ ಸರಕಾರ ಕೊರೊನಾ ಕಡಿಮೆಯಾದ ಮೇಲೆ ಪರೀಕ್ಷೆ ನಡೆಸುವುದಾದರೆ ನಡೆಸಲಿ. ಆದರೆ ಇದಕ್ಕೆ ಬೇಕಾದ ಅಗತ್ಯ ಸಿದ್ಧತೆಗಳನ್ನೂ ಮಾಡಿಕೊಳ್ಳಲಿ. ಕಳೆದ ಬಾರಿಯೂ ದೇಶದ ಹಲವಾರು ರಾಜ್ಯಗಳು 10 ಮತ್ತು 12ನೇ ತರಗತಿ ಪರೀಕ್ಷೆ ರದ್ದು ಮಾಡಿದ್ದವು. ಆದರೆ ರಾಜ್ಯ ಸರಕಾರ ಮಾತ್ರ ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡದೇ ಯಶಸ್ವಿಯಾಗಿ ನಡೆಸಿತ್ತು. ಈ ಮೂಲಕ ದೇಶದಲ್ಲೇ ಪ್ರಶಂಸೆಗೂ ಪಾತ್ರವಾಗಿತ್ತು.

ಅದೇ ರೀತಿಯಲ್ಲಿ ಈ ಬಾರಿಯೂ ಪರೀಕ್ಷೆ ನಡೆಸಲಿ. ಆದರೆ ಇಲ್ಲಿ ಕೆಲವೊಂದು ಅಂಶಗಳಿವೆ. ಉದಯವಾಣಿ ಸಮೀಕ್ಷೆಯಲ್ಲಿ ಕಂಡುಕೊಂಡ ಹಾಗೆ, ವರ್ಷವಿಡೀ ನಡೆದ ಆನ್‌ ಲೈನ್‌ ತರಗತಿಗಳು ಮಕ್ಕಳಿಗೆ ಅರ್ಥವಾಗಿಲ್ಲ. ಶಿಕ್ಷಕರೂ ಸಿಲಬಸ್‌ ಮುಗಿಸಿದ್ದೇವೆ ಎಂದು ಹೇಳಿದ್ದಾರೆಯೇ ಹೊರತು, ಭೌತಿಕ ತರಗತಿಯಷ್ಟು ಆನ್‌ ಲೈನ್‌ ತರಗತಿ ಪರಿಣಾಮಕಾರಿಯಲ್ಲ ಎಂಬುದನ್ನು ಒಪ್ಪಿಕೊಂಡಿದ್ದಾರೆ. ಹೀಗಾಗಿ ಕಡಿಮೆ ಅಂಕದ, ಸುಲಭವಾಗಿರುವಂಥ ಪ್ರಶ್ನೆಗಳುಳ್ಳ, ಕಡಿಮೆ ಅವಧಿಯ, ಪ್ರಮುಖ ವಿಷಯಗಳ ಮೇಲೆ ಪರೀಕ್ಷೆ ನಡೆಸುವುದು ಒಳಿತು. ಇದರಿಂದ ಮಕ್ಕಳ ಮೇಲಿನ ಒತ್ತಡವೂ ಕಡಿಮೆಯಾಗುತ್ತದೆ, ಹಾಗೆಯೇ ಪರೀಕ್ಷೆ ಮೇಲಿನ ಮಕ್ಕಳ ಭಯವೂ ಹೋಗುತ್ತದೆ.

ಏನೇ ಆಗಲಿ ಸರಕಾರ ಈ ಬಗ್ಗೆ ಬೇಗನೇ ನಿರ್ಧಾರ ತೆಗೆದುಕೊಳ್ಳಲಿ ಎಂಬುದು ರಾಜ್ಯದ ಜನರ ಆಗ್ರಹ. ಇತ್ತ ಸರಕಾರ ಗಮನ ಹರಿಸುವುದು ಒಳಿತು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.