ಸಾಂವಿಧಾನಿಕ ಬಿಕ್ಕಟ್ಟಿಗೆ ಎಡೆಮಾಡಿಕೊಡದಿರಲಿ


Team Udayavani, Jan 3, 2020, 6:17 AM IST

kerala

ಕೇರಳ ಸರಕಾರದ ನಡೆಯಿಂದಾಗಿ ಹೋರಾಟದ ದಿಕ್ಕು ಬದಲಾದಂತಾಗಿದೆ. ಅದು ಈಗ ಒಂದು ಸಮುದಾಯ ಅಥವಾ ಒಂದು ಪಕ್ಷ ನಡೆಸುವ ಹೋರಾಟದ ಬದಲಾಗಿ ಸಮಾನ ಮನಸ್ಕರೆಲ್ಲ ಸೇರಿ
“ದೇಶದ ಜಾತ್ಯಾತೀತ ಚೌಕಟ್ಟನ್ನು ಉಳಿಸಿಕೊಳ್ಳಲು’ ನಡೆಸುವ ಹೋರಾಟದ ರೂಪವನ್ನು ಪಡೆದುಕೊಂಡಿದೆ.

ಪೌರತ್ವ ತಿದ್ದುಪಡಿ ಕಾಯಿದೆಯನ್ನು (ಸಿಎಎ) ವಿರೋಧಿಸಿ ಕೇರಳ ವಿಧಾನಸಭೆಯಲ್ಲಿ ನಿರ್ಣಯ ಮಂಜೂರಾಗಿರುವುದು ರಾಜ್ಯ ಮತ್ತು ಕೇಂದ್ರದ ನಡುವೆ ಗಂಭೀರವಾದ ಸಾಂವಿಧಾನಿಕ ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು ಮಂಡಿಸಿದ ನಿರ್ಣಯ ಬಹುತೇಕ
ಅವಿರೋಧಿವಾಗಿ ಮಂಜೂರಾಗಿದೆ. ಬಿಜೆಪಿಯ ಏಕೈಕ ಶಾಸಕ ಓ.ರಾಜಗೋಪಾಲ್‌ ಮಾತ್ರ ನಿರ್ಣಯವನ್ನು ವಿರೋಧಿಸಿದ್ದಾರೆ. ವಿಪಕ್ಷ ಕಾಂಗ್ರೆಸ್‌ ನೇತೃತ್ವದ ಯುಡಿಎಫ್ನ ಬೆಂಬಲವೂ ನಿರ್ಣಯಕ್ಕಿತ್ತು. ಈ ಮೂಲಕ ಸಿಎಎ ವಿರುದ್ಧದ ಹೋರಾಟಕ್ಕೆ ವಿಪಕ್ಷಗಳು ಸಾಂವಿಧಾನಿಕವಾದ ಆಯಾಮವನ್ನು ನೀಡಿದಂತಾಗಿದೆ.

ಕೇರಳದ ಜೊತೆಗೆ ಪಶ್ಚಿಮ ಬಂಗಾಳ ಮತ್ತು ಎನ್‌ಡಿಎ ಆಡಳಿತವಿರುವ ಬಿಹಾರ ಸೇರಿದಂತೆ ಏಳು ರಾಜ್ಯಗಳು ಈಗಾಗಲೇ ಸಿಎಎ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ)ಯನ್ನು ಅನುಷ್ಠಾನಿಸಲು ತಕರಾರು ತೆಗೆದಿವೆ. ಈ ಪೈಕಿ ಪಶ್ಚಿಮ ಬಂಗಾಳದಲ್ಲಿ ಎನ್‌ಎಎ ವಿರುದ್ಧ ತೀವ್ರ ಹೋರಾಟ ನಡೆಯುತ್ತಿದೆ. ಎನ್‌ಎಎ ವಿರುದ್ಧ ನಡೆಯುತ್ತಿರುವ ಹೋರಾಟದ ರಾಜಕೀಯ ಕಾರಣಗಳು ಏನೇ ಇದ್ದರೂ ಅದು ಸೃಷ್ಟಿಸಿರುವ ಸಾಂವಿಧಾನಕ ಬಿಕ್ಕಟ್ಟು ಮಾತ್ರ ಕಳವಳಕಾರಿಯಾದದ್ದು.

ಸಾಂವಿಧಾನಿಕವಾಗಿ ರಾಜ್ಯದ ವಿಧಾನಸಭೆಗೆ ಸಂಸತ್ತು ಅಂಗೀಕರಿಸಿರುವ ಮಸೂದೆಯ ವಿರುದ್ಧ ನಿರ್ಣಯ ಕೈಗೊಳ್ಳುವ ಅಧಿಕಾರ ಇಲ್ಲ. ಅಲ್ಲದೆ ಪೌರತ್ವ ನೀಡುವುದು ಕೇಂದ್ರದ ಅಧಿಕಾರ ವ್ಯಾಪ್ತಿಗೆ ಬರುವ ವಿಷಯ. ಇದರಲ್ಲಿ ರಾಜ್ಯಗಳು ಹಸ್ತಕ್ಷೇಪ ಮಾಡುವಂತಿಲ್ಲ. ಈ ಮಾತನ್ನು ಕೇರಳದ ರಾಜ್ಯಪಾಲರು ಕೂಡ ಹೇಳಿದ್ದಾರೆ.

ಕೇರಳದ ಸಿಪಿಎಂ ನೇತೃತ್ವದ ಎಡರಂಗ ಸರಕಾರಕ್ಕೆ ಸಿಎಎಯನ್ನು ವಿರೋಧಿಸುವ ಅನಿವಾರ್ಯತೆಯೂ ಇದೆ ಎನ್ನುವ ವಾದವೂ ಸರಿ. ತನ್ನಿಂದ ವಿಮುಖವಾಗಿರುವ ಮುಸ್ಲಿಂ ಸಮುದಾಯದ ಮತಗಳನ್ನು ಮರಳಿ ಗಳಿಸಿಕೊಳ್ಳಲು ಎಡರಂಗಕ್ಕೆ ಈ ಮಾದರಿಯ ನಡೆಯ ಅಗತ್ಯವಿತ್ತು. ಲೋಕಸಭಾ ಚುನಾವಣೆಯಲ್ಲಾದ ಹೀನಾಯ ಸೋಲಿಗೆ ಕೇರಳ ಜನಸಂಖ್ಯೆಯ ಸುಮಾರು ಶೇ. 44ರಷ್ಟಿರುವ ಮುಸ್ಲಿಂ ಸಮುದಾಯದವರು ಪಕ್ಷದಿಂದ ದೂರವಾದದ್ದೇ ಕಾರಣ ಎನ್ನುವುದನ್ನು ಎಡರಂಗದ ನಾಯಕರು ಅರಿತುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲೇ ಪಿಣರಾಯಿ ವಿಜಯನ್‌ ವಿಧಾನಸಭೆಯಲ್ಲಿ ಸಿಎಎ ಒಂದು ಸಮುದಾಯಕ್ಕೆ ಧಾರ್ಮಿಕ ನೆಲೆಯಲ್ಲಿ ತಾರತಮ್ಯ ಮಾಡುವುದು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ. ಈ ಮೂಲಕ ಪಿಣರಾಯಿ ವಿಜಯನ್‌ ಸಿಎಎ ವಿರುದ್ಧದ ಹೋರಾಟದ ಮುಂಚೂಣಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ.

ಆರಂಭದಲ್ಲಿ ಸಿಎಎ ವಿರುದ್ಧ ನಡೆದದ್ದು ಹಿಂಸಾತ್ಮಕ ಪ್ರತಿಭಟನೆ. ಇದನ್ನು ಆಡಳಿತ ವ್ಯವಸ್ಥೆ ಸುಲಭವಾಗಿ
ಹತ್ತಿಕ್ಕಿದೆ. ಆದರೆ ಕೇರಳ ಸರಕಾರದ ನಡೆಯಿಂದಾಗಿ ಹೋರಾಟದ ದಿಕ್ಕು ಬದಲಾದಂತಾಗಿದೆ. ಅದು ಈಗ ಒಂದು ಸಮುದಾಯ ಅಥವಾ ಒಂದು ಪಕ್ಷ ನಡೆಸುವ ಹೋರಾಟದ ಬದಲಾಗಿ ಸಮಾನ ಮನಸ್ಕರೆಲ್ಲ ಸೇರಿ “ದೇಶದ ಜಾತ್ಯಾತೀತ ಚೌಕಟ್ಟನ್ನು ಉಳಿಸಿಕೊಳ್ಳಲು’ ನಡೆಸುವ ಹೋರಾಟದ ರೂಪವನ್ನು ಪಡೆದುಕೊಂಡಿದೆ. ಇದು ಕೇಂದ್ರಕ್ಕೆ ಖಂಡಿತ ತಲೆನೋವಾಗುವ ಕೆಲಸ.

ಬೀದಿ ಹೋರಾಟಗಳನ್ನು ನಿಭಾಯಿಸಿದಷ್ಟು ಸುಲಭವಾಗಿ ಇಂಥ ಸೈದ್ಧಾಂತಿಕ ಮತ್ತು ತಾತ್ವಿಕ
ಹೋರಾಟಗಳನ್ನು ನಿಭಾಯಿಸಲು ಸಾಧ್ಯವಿಲ್ಲ. ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳು ಮತ್ತು ಕೇಂದ್ರದ ನಡುವಿನ ಸಂಬಂಧದಲ್ಲಿ ಬಿರುಕು ಮೂಡುವುದು ಹೊಸದಲ್ಲವಾದರೂ ಅದು ಸಾಂವಿಧಾನಿಕ ಬಿಕ್ಕಟ್ಟಿಗೆ ಎಡೆ ಮಾಡಿಕೊಡುವಷ್ಟು ಗಂಭೀರವಾಗದು. ಇದರಿಂದ ಅಂತಿಮವಾಗಿ ಒಕ್ಕೂಟ ವ್ಯವಸ್ಥೆಯೇ ವಿಫ‌ಲಗೊಳ್ಳುವ ಅಪಾಯವಿದೆ. ಸಿಎಎ ಮತ್ತು ಎನ್‌ಆರ್‌ಸಿಗೆ ರಾಜ್ಯಗಳು ವ್ಯಕ್ತಪಡಿಸುತ್ತಿರುವ ಕಳವಳವನ್ನು ಆಲಿಸಿ ಸಮರ್ಪಕಪರಿಹಾರವನ್ನು ಕಂಡುಕೊಳ್ಳುವ ಜವಾಬ್ದಾರಿ ಕೇಂದ್ರ
ಸರಕಾರದ್ದು. ರಾಜ್ಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಕ್ತವಾಗಿ ಚರ್ಚೆ ನಡೆಸಿದ ಬಳಿಕ ಸೂಕ್ತ
ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ಈಗ ಎದುರಾಗಿರುವ ಬಿಕ್ಕಟ್ಟನ್ನು ಸೌಹಾರ್ದಯುತವಾಗಿಯೇ ಬಗೆಹರಿಸಿಕೊಳ್ಳಬಹುದು.

ಟಾಪ್ ನ್ಯೂಸ್

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

7-rbi

Editorial: ರೆಪೊ ದರದಲ್ಲಿ ಯಥಾಸ್ಥಿತಿ: ಆರ್‌ಬಿಐ ಜಾಣ್ಮೆಯ ನಡೆ

Climate Change: ಹವಾಮಾನ ವೈಪರೀತ್ಯ… ಆರೋಗ್ಯದ ಮೇಲಿರಲಿ ಕಾಳಜಿ

Climate Change: ಹವಾಮಾನ ವೈಪರೀತ್ಯ… ಆರೋಗ್ಯದ ಮೇಲಿರಲಿ ಕಾಳಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.