ವೃತ್ತಿಪರ ವಿದ್ಯಾರ್ಥಿಗಳಿಗೆ ಅನ್ಯಾಯವಾಗಲು ಬಿಡಬೇಡಿ


Team Udayavani, Aug 8, 2022, 6:00 AM IST

ವೃತ್ತಿಪರ ವಿದ್ಯಾರ್ಥಿಗಳಿಗೆ ಅನ್ಯಾಯವಾಗಲು ಬಿಡಬೇಡಿ

ಈಗಾಗಲೇ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಸಂಬಂಧ ಸಿಇಟಿ ಫ‌ಲಿತಾಂಶ ಪ್ರಕಟವಾಗಿದ್ದು, ಕೌನ್ಸೆಲಿಂಗ್‌ನ ಪ್ರಕ್ರಿಯೆಯ ವೇಳಾಪಟ್ಟಿ ಬಿಡುಗಡೆ­ಯಾಗಬೇಕಾಗಿದೆ. ಎಲ್ಲವೂ ಅಂದುಕೊಂಡಂತಾಗಿದ್ದರೆ ಆ.5ರಂದೇ ದಾಖಲಾತಿ ಪರಿಶೀಲನೆ ಪ್ರಕ್ರಿಯೆ ಆರಂಭವಾಗಬೇಕಾಗಿತ್ತು. ಇದನ್ನು ಸೆಪ್ಟಂಬರ್‌ಗೆ ಮುಂದೂಡಲಾಗಿದ್ದು, ಇನ್ನೂ ವೇಳಾಪಟ್ಟಿ ಪ್ರಕಟಿಸದಿರುವುದು ವಿದ್ಯಾರ್ಥಿಗಳಲ್ಲಿ ಆತಂಕಕ್ಕೂ ಕಾರಣವಾಗಿದೆ.

ಇದರ ಮಧ್ಯೆಯೇ ವಿದ್ಯಾರ್ಥಿಗಳು ಮತ್ತು ಪೋಷಕರು ದೊಡ್ಡ­ದೊಂದು ಗೊಂದಲಕ್ಕೆ ಸಿಲುಕಿದ್ದಾರೆ. ಖಾಸಗಿ ಕಾಲೇಜುಗಳಿಗೆ ಪ್ರವೇಶಾತಿ ಸಂಬಂಧ ಕಾಮೆಡ್‌-ಕೆ ನಡೆಸಿದ್ದ ಪರೀಕ್ಷೆಯ ಫ‌ಲಿತಾಂಶ ಪ್ರಕಟವಾಗಿ ಆ.18ರಿಂದಲೇ ದಾಖಲಾತಿ ಪರಿಶೀಲನೆ ಆರಂಭವಾಗಲಿದೆ. ಆ.26­ರಿಂದಲೇ ಪ್ರವೇಶ ಪ್ರಕ್ರಿಯೆಯನ್ನೂ ಆರಂಭಿಸಲು ಅದು ನಿರ್ಧರಿಸಿದೆ. ಇದರಿಂದಾಗಿ ವಿದ್ಯಾರ್ಥಿಗಳು ತಾವು ಮೊದಲಿಗೆ ಕಾಮೆಡ್‌-ಕೆ ಕೌನ್ಸೆ­ಲಿಂಗ್‌ಗೆ ಹಾಜರಾಗಿ ಸೀಟು ಆಯ್ದುಕೊಳ್ಳಬೇಕೋ ಅಥವಾ ಸಿಇಟಿಯಡಿ ಸೀಟು ಆಯ್ಕೆ ಮಾಡಿಕೊಳ್ಳಬೇಕೋ ಎಂಬ ಗೊಂದಲಕ್ಕೆ ಸಿಲುಕಿದ್ದಾರೆ.

ಬಡ ವಿದ್ಯಾರ್ಥಿಗಳು ಕಾಮೆಡ್‌-ಕೆಯಡಿಯಲ್ಲಿ ಎಂಜಿನಿಯರಿಂಗ್‌ ಪ್ರವೇಶ ಪಡೆಯುವುದು ಕಷ್ಟಕರ. ಅಲ್ಲಿನ ಶುಲ್ಕವೂ ದುಬಾರಿ. ಅಲ್ಲದೆ, ಮಧ್ಯಮ ವರ್ಗದ ವಿದ್ಯಾರ್ಥಿಗಳೂ ಕಾಮೆಡ್‌-ಕೆಯಡಿ ಬರುವ ಕಾಲೇಜಿಗೆ ಸೇರಲು ಹಿಂದೆ ಮುಂದೆ ನೋಡುತ್ತಾರೆ. ಇದಕ್ಕೆ ಬದಲಾಗಿ ಮೊದಲೇ ಸಿಇಟಿಯಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವೇ ಸೀಟು ಹಂಚಿಕೆ ಮಾಡಿದ್ದರೆ ಚೆನ್ನಾಗಿತ್ತು. ಒಂದು ವೇಳೆ ಇಲ್ಲಿ ಸೀಟು ಸಿಗದಿದ್ದರೆ, ಅನಂತರದಲ್ಲಿ ಕಾಮೆಡ್‌-ಕೆ ಕಾಲೇಜುಗಳಲ್ಲಿ ಸೀಟು ಪಡೆಯಲು ನೋಡ­ಬಹುದಿತ್ತು. ಈಗ ಮೊದಲೇ ನಾವು ಕಾಮೆಡ್‌ ಕೆ ಕಾಲೇಜುಗಳಲ್ಲಿ ಸೀಟು ಆರಿಸಿಕೊಳ್ಳುವ ಸ್ಥಿತಿ ಎದುರಾಗಿದೆ ಎಂಬುದು ವಿದ್ಯಾರ್ಥಿಗಳ ಅಳಲು.

ವಿದ್ಯಾರ್ಥಿಗಳ ಈ ಬೇಸರಕ್ಕೆ ಅರ್ಥವೂ ಇದೆ. ಕಾಮೆಡ್‌-ಕೆನಲ್ಲಿ ಸೀಟು ಆಯ್ಕೆ ಮಾಡಿಕೊಂಡು ಪ್ರವೇಶ ಪಡೆದು, ಮತ್ತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಕೌನ್ಸೆಲಿಂಗ್‌ಗೆ ಹಾಜರಾಗಿ ಅಲ್ಲಿ ಸೀಟು ಸಿಕ್ಕರೆ ಮೊದಲು ಆಯ್ಕೆ ಮಾಡಿಕೊಂಡಿದ್ದ ಕಾಲೇಜನ್ನು ಬಿಡಬೇಕಾಗು­ತ್ತದೆ. ಅಲ್ಲದೆ, ಪ್ರವೇಶಕ್ಕಾಗಿ ಶುಲ್ಕವನ್ನೂ ಕಟ್ಟಿರಬೇಕಾಗುತ್ತದೆ. ಕರ್ನಾ­ಟಕ ಪರೀಕ್ಷಾ ಪ್ರಾಧಿಕಾರದಡಿ ಸೀಟು ಪಡೆದ ಬಳಿಕ ಕಾಮೆಡ್‌-ಕೆಯ­ಡಿಯ ಕಾಲೇಜಿನಲ್ಲಿ ಶುಲ್ಕ ವಾಪಸ್‌ ಕೊಡಿ ಎಂದು ಕೇಳುವುದು ಕಷ್ಟ. ಹೀಗಾಗಿ ಮುಂದೇನು ಮಾಡಬೇಕು ಎಂಬುದು ಗೊತ್ತಾಗದಂತಾಗಿದೆ.
ಈ ಹಿಂದೆ ಪ್ರತಿ ವರ್ಷವೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರವೇ, ಕಾಮೆಡ್‌-ಕೆಗಿಂತ ಮೊದಲು ಕೌನ್ಸೆಲಿಂಗ್‌ ಮುಗಿಸುತ್ತಿತ್ತು.

ಇದರಿಂದ ವಿದ್ಯಾರ್ಥಿಗಳಿಗೆ ಬಹಳಷ್ಟು ಉಪಯೋಗವಾಗುತ್ತಿತ್ತು. ಮೊದಲೇ ಹೇಳಿದ ಹಾಗೆ, ಒಂದು ವೇಳೆ ಇಲ್ಲಿ ಸೀಟು ಸಿಗದೇ ಹೋದರೆ ಅಥವಾ ತಾವು ಆಯ್ಕೆ ಮಾಡಿಕೊಳ್ಳಲು ಇಚ್ಚಿಸುವ ಕಾಲೇಜಿನಲ್ಲಿ ಸೀಟು ಸಿಗದಿದ್ದರೆ ಕಾಮೆಡ್‌-ಕೆ ಮೂಲಕ ಪ್ರವೇಶ ಪಡೆಯುತ್ತಿದ್ದರು. ಈಗ ಮೊದಲ ಆಯ್ಕೆಯೇ ಕಾಮೆಡ್‌-ಕೆ ಆದರೆ ಕಷ್ಟಕರ ಎಂಬುದು ವಿದ್ಯಾರ್ಥಿಗಳ ನೋವು.

ಈಗ ರಾಜ್ಯ ಸರಕಾರ ಮಾಡಬೇಕಾಗಿರುವುದು ಇಷ್ಟೇ. ಕಾಮೆಡ್‌-ಕೆ ಪ್ರಕ್ರಿಯೆಗಿಂತ ಮೊದಲೇ ಇಲ್ಲಿ ಪ್ರವೇಶ ಪ್ರಕ್ರಿಯೆ ಆರಂಭಿಸಬೇಕು. ಈ ಮೂಲಕ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಕಾಯಬೇಕು. ಇಲ್ಲದೆ ಹೋದರೆ, ದುಬಾರಿ ಶುಲ್ಕ ತೆತ್ತು ಕಾಲೇಜಿಗೆ ಸೇರುವ ಅನಿವಾರ್ಯತೆ ಉಂಟಾಗುವ ಸಾಧ್ಯತೆಯೇ ಹೆಚ್ಚು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.