ಆತಂಕ ಬೇಡ; ಇರಲಿ ಎಚ್ಚರ


Team Udayavani, Dec 23, 2020, 5:26 AM IST

ಆತಂಕ ಬೇಡ; ಇರಲಿ ಎಚ್ಚರ

ಸಾಂದರ್ಭಿಕ ಚಿತ್ರ

ಈ ವರ್ಷವಿಡೀ ವಿಶ್ವಾದ್ಯಂತ ಜನರನ್ನು ಕಂಗೆಡುವಂತೆ ಮಾಡಿದ ಕೋವಿಡ್ ಸೋಂಕಿಗೆ ಕಡಿವಾಣ ಹಾಕುವ ದಿಸೆಯಲ್ಲಿ ನಡೆಯುತ್ತಿರುವ ಪ್ರಯತ್ನಗಳು ಬಹುತೇಕ ದಡ ಸೇರುತ್ತಿರುವಂತೆಯೇ ಬ್ರಿಟನ್‌ನಲ್ಲಿ ಸೋಂಕು ಹೊಸ ರೂಪದಲ್ಲಿ ಕಾಣಿಸಿಕೊಂಡಿರುವುದು ಮತ್ತೂಮ್ಮೆ ಆತಂಕದೆಡೆಗೆ ದೂಡಿದೆ. ಲಸಿಕೆ ಸಂಶೋಧಿಸುವಲ್ಲಿ ಹಲವು ದೇಶಗಳು ಯಶಸ್ವಿಯಾಗಿ ಜನರಿಗೆ ತಲುಪಿಸಲು ಕಾರ್ಯೋನ್ಮುಖವಾಗಿವೆ. ಇಂಥ ಸಂದರ್ಭದಲ್ಲಿಯೇ ಈ ಬೆಳವಣಿಗೆ ವಿಶ್ವ ಸಮುದಾಯದಲ್ಲಿ ಗೊಂದಲ ಸೃಷ್ಟಿಸಿದೆ.

ಕಳೆದೆರಡು ತಿಂಗಳುಗಳಿಂದ ಸೋಂಕಿನ ಹರಡುವಿಕೆ ಪ್ರಮಾಣ ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ನಿಯಂತ್ರಣಕ್ಕೆ ಬಂದಿತ್ತು. ಈ ಹಿನ್ನೆಲೆಯಲ್ಲಿ ವಿಶ್ವದೆಲ್ಲೆಡೆ ಜನಜೀವನ, ವಾಣಿಜ್ಯ, ವ್ಯವಹಾರ ಸಹಿತ ಎಲ್ಲವೂ ನಿಧಾನವಾಗಿ ಸಹಜತೆಯತ್ತ ಮರಳಲಾ ರಂಭಿಸಿದ್ದವು. ದೇಶದ ಕೆಲವು ರಾಜ್ಯಗಳಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿ ದೆಯಾದರೂ ಇದನ್ನು ನಿಯಂತ್ರಿಸಲು ಆಯಾ ರಾಜ್ಯ ಸರಕಾರಗಳು ಸೂಕ್ತ ಕ್ರಮಗಳನ್ನು ಕೈಗೊಂಡಿವೆ. ಆದರೆ ಇದೀಗ ಏಕಾಏಕಿಯಾಗಿ ಬ್ರಿಟನ್‌ನಲ್ಲಿ ಕೊರೊನಾ ವೈರಸ್‌ ಹೊಸರೂಪದಲ್ಲಿ ಜನರ ಮೇಲೆ ದಾಳಿ ಮಾಡಿರುವುದು ಎಲ್ಲ ದೇಶಗಳಿಗೂ ಎಚ್ಚರಿಕೆಯ ಗಂಟೆಯಾಗಿದೆ. ಈ ಹಿನ್ನೆಲೆಯಲ್ಲಿ ಭಾರತ ಸೇರಿ ದಂತೆ ವಿಶ್ವದ ಬಹುತೇಕ ದೇಶಗಳು ಬ್ರಿಟನ್‌ನ ವಿಮಾನಗಳಿಗೆ ನಿರ್ಬಂಧ ಹೇರಿವೆ.

ಈ ರೂಪಾಂತರಿತ ಕೊರೊನಾ ವೈರಸ್‌ನ ಬಗ್ಗೆ ಆತಂಕ ಪಡುವ ಅಗತ್ಯವೇನಿಲ್ಲ. ಪ್ರತಿಯೊಂದೂ ವೈರಸ್‌ ರೂಪಾಂತರ ಗೊಳ್ಳುವುದು ಸಹಜ. ಇದೇನು ಮರಣಾಂತಿ ಕವಲ್ಲ. ಜನರು ಆತಂಕಪಡುವ ಅಗತ್ಯವಿಲ್ಲ ಎಂದು ಎಲ್ಲ ದೇಶಗಳ ಸರಕಾರಗಳು ಮತ್ತು ಆರೋಗ್ಯ ಇಲಾಖೆ ಜನತೆಗೆ ಅಭಯ ನೀಡಿವೆ. ಹಾಗೆಂದು ಕೊರೊನಾದೊಂದಿಗೆ ಹುಡುಗಾಟಿಕೆ ಬೇಡ. ಜನರು ಎಚ್ಚರಿಕೆಯಿಂದಿರಬೇಕು. ಮಾಸ್ಕ್ ಧಾರಣೆ, ನೈರ್ಮಲ್ಯ-ಸಾಮಾಜಿಕ ಅಂತರ ಪಾಲನೆ. ಈ ಮೊದಲಾದ ಮುಂಜಾಗ್ರತ ಕ್ರಮಗಳನ್ನು ಅನುಸರಿಸಬೇಕು ಎಂದು ಇದೇ ವೇಳೆ ಜನತೆಯಲ್ಲಿ ವಿನಂತಿಸಿವೆ.

ಕೊರೊನಾದ ತೀವ್ರತೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸಹಿತ ದೇಶಾದ್ಯಂತ ಶಾಲಾ-ಕಾಲೇಜುಗಳನ್ನು ಹಂತಹಂತವಾಗಿ ತೆರೆಯುವ ಪ್ರಕ್ರಿಯೆ ಆರಂಭಗೊಂಡಿತ್ತು. ರಾಜ್ಯದಲ್ಲಿ ಜನವರಿಯಿಂದ ಶಾಲೆಗಳನ್ನು ತೆರೆಯಲು ಸರಕಾರ ನಿರ್ಧರಿಸಿತ್ತು. ಅಲ್ಲದೆ ವಾರದೊಳಗಾಗಿ ಎಸೆಸೆಲ್ಸಿ ಮತ್ತು ಪಿಯುಸಿ ಪರೀಕ್ಷಾ ದಿನಾಂಕ ವನ್ನು ಪ್ರಕಟಿಸುವ ಇರಾದೆಯಲ್ಲಿದ್ದ ಸರಕಾರ ಮತ್ತೆ ಇಕ್ಕಟ್ಟಿಗೆ ಸಿಲುಕಿದೆ. ರಾಜ್ಯದಲ್ಲಿನ ವಿವಿಧ ವಿ.ವಿ.ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದೇಶಿ ವಿದ್ಯಾರ್ಥಿಗಳು ಪರೀಕ್ಷೆಗಾಗಿ ಈಗಾಗಲೇ ರಾಜ್ಯಕ್ಕೆ ವಾಪಸಾಗಿದ್ದು ಪರೀಕ್ಷೆ ಬರೆಯಲು ಸನ್ನದ್ಧರಾಗುತ್ತಿದ್ದಾರೆ. ಯುಕೆಯಲ್ಲಿ ವೈರಸ್‌ ಹೊಸರೂಪದಲ್ಲಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಈ ವಿದ್ಯಾರ್ಥಿಗಳ ಜತೆ ಪರೀಕ್ಷೆ ಬರೆಯಲು ಅವರು ಹಿಂದೇಟು ಹಾಕುವ ಸಾಧ್ಯತೆಗಳು ಇಲ್ಲದಿಲ್ಲ. ಈ ಮಧ್ಯೆ ಕೇಂದ್ರ ಸರಕಾರ ಜನವರಿ-ಫೆಬ್ರವರಿ ತಿಂಗಳಲ್ಲಿ ನಡೆಸಲು ಉದ್ದೇಶಿಸಿದ್ದ ಸಿಬಿಎಸ್‌ಇ ಪರೀಕ್ಷೆಯನ್ನು ಮುಂದೂಡುವ ನಿರ್ಧಾರ ಕೈಗೊಂಡಿದೆ. ಈ ಎಲ್ಲ ವಿದ್ಯಮಾನಗಳು ರಾಜ್ಯ ಮಾತ್ರವಲ್ಲದೆ ದೇಶಾದ್ಯಂತ ಶೈಕ್ಷಣಿಕ ವ್ಯವಸ್ಥೆಯನ್ನು ಮತ್ತಷ್ಟು ಗೊಂದಲಕ್ಕೀಡು ಮಾಡಿದೆ.

ಕೊರೊನಾ ವೈರಸ್‌ ಹೊಸ ಅವತಾರದಲ್ಲಿ ಕಾಣಿಸಿಕೊಂಡಿರುವುದು ಸಹಜವಾಗಿ ಜನರಿಗೆ ಮಾತ್ರವಲ್ಲದೆ ಆರೋಗ್ಯ ಕ್ಷೇತ್ರಕ್ಕೂ ಸವಾಲಾಗಿ ಪರಿಣಮಿಸಿದೆ. ಇದೀಗ ಸಂಶೋಧಿಸಲಾಗಿರುವ ಕೊರೊನಾ ಲಸಿಕೆಗಳು ರೂಪಾಂತರಿತ ವೈರಸ್‌ಗೆ ಕಡಿವಾಣ ಹಾಕಬಲ್ಲುದೇ ಎಂಬುದನ್ನು ಕಾದುನೋಡಬೇಕಿದೆ. ಜನತೆಯಂತೂ ಆತಂಕಕ್ಕೀ ಡಾಗದೆ ಆರೋಗ್ಯ ಇಲಾಖೆ ಸೂಚಿಸಿರುವ ಮಾರ್ಗದರ್ಶಿ ಸೂತ್ರಗಳನ್ನು ಪಾಲಿಸುವ ಮೂಲಕ ಸೋಂಕಿನಿಂದ ಅಂತರ ಕಾಯ್ದುಕೊಳ್ಳಬೇಕಿದೆ. ಸಮುದಾಯ ಸಹಭಾಗಿತ್ವ ದಿಂದಲಷ್ಟೇ ಇಂಥ ಸಾಂಕ್ರಾಮಿಕಗಳಿಂದ ಪಾರಾಗಲು ಸಾಧ್ಯ ಎಂಬುದನ್ನು ಜನರು ಮೊದಲು ಅರ್ಥೈಸಿಕೊಳ್ಳಬೇಕು. ಸರಕಾರ ಕೂಡ ಹೇಳಿಕೆಗಳಿಗೆ ಸೀಮಿತವಾಗದೆ ಮುಂದಾಲೋಚನೆಯಿಂದ ಹೆಜ್ಜೆ ಇಡಬೇಕಿದೆ.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.