ದ್ರೌಪದಿ ಮುರ್ಮು ಜನರ ರಾಷ್ಟ್ರಪತಿಯಾಗಲಿ


Team Udayavani, Jul 25, 2022, 6:00 AM IST

ದ್ರೌಪದಿ ಮುರ್ಮು ಜನರ ರಾಷ್ಟ್ರಪತಿಯಾಗಲಿ

ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರ ಐದು ವರ್ಷಗಳ ಅವಧಿ ಭಾನುವಾರಕ್ಕೆ ಅಂತ್ಯವಾಗಿದ್ದು, ಸೋಮವಾರ ದೇಶಕ್ಕೆ ಹೊಸ ರಾಷ್ಟ್ರ ಪತಿಯ ಆಗಮನವಾಗಲಿದೆ. ನಿಯೋಜಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೋಮವಾರ, ಸುಪ್ರೀಂಕೋರ್ಟ್‌ ಮುಖ್ಯ ನ್ಯಾ. ಎನ್‌.ವಿ.ರಮಣ ಅವರಿಂದ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.

ದೇಶದಲ್ಲಿ ಎಲ್ಲಾ ಧರ್ಮ, ಜಾತಿಯವರಿಗೂ ಅತ್ಯುನ್ನತ ಸ್ಥಾನಗಳಲ್ಲಿ ಮಾನ್ಯತೆ ಸಿಗುವುದು ನಮ್ಮ ಸಂವಿಧಾನದ ಹೆಮ್ಮೆಯೇ ಸರಿ. ಈ ದಿನದ ವರೆಗೆ ಇದ್ದ ರಾಷ್ಟ್ರಪತಿಗಳು, ದೇಶದಲ್ಲೇ ಅತ್ಯಂತ ಹಿಂದುಳಿದಿದೆ ಎಂದೇ ಗುರುತಿಸಿಕೊಂಡಿರುವ ದಲಿತ ಸಮುದಾಯದವರು. ಈಗ ಹೊಸದಾಗಿ ಬರುತ್ತಿರುವವರು ಬುಡಕಟ್ಟು ಸಮುದಾಯಕ್ಕೆ ಸೇರಿದ ಒಡಿಶಾ ಮೂಲದವರು. ಹೀಗಾಗಿ ಅತ್ಯುನ್ನತ ಹುದ್ದೆಗಳು ಎಲ್ಲಾ ವರ್ಗ, ಸಮು ದಾಯಕ್ಕೆ ಸೇರಿವೆ ಎಂಬುದು ಆಗಾಗ ಸಾಬೀತಾಗುತ್ತಲೇ ಇರುತ್ತದೆ.

ರಾಮನಾಥ್‌ ಕೋವಿಂದ್‌ ಅವರು, ರಾಷ್ಟ್ರಪತಿ ಭವನದ ಘನತೆಯನ್ನು ಹಾಗೆಯೇ ಉಳಿಸಿಕೊಂಡು, ಬೆಳೆಸಿಕೊಂಡು ಬಂದಿದ್ದಾರೆ. ಸಾರ್ವಜನಿ ಕರಿಗೂ ರಾಷ್ಟ್ರಪತಿ ಭವನ ಎಟಕಬೇಕು ಎಂಬ ಪ್ರಣಬ್‌ ಮುಖರ್ಜಿ ಅವರ ಆಶಯವನ್ನು ಹಾಗೆಯೇ ಮುಂದುವರಿಸಿಕೊಂಡು ಹೋದವರು ಕೋವಿಂದ್‌. ಅಲ್ಲದೆ, ಈ ಐದು ವರ್ಷಗಳ ಕಾಲವೂ ಎಲ್ಲೂ ವಿವಾದಕ್ಕೆ ಆಸ್ಪದ ನೀಡದಂತೆ ಅಧಿಕಾರ ನಡೆಸಿಕೊಂಡು ಹೋಗಿದ್ದುದೂ ಅವರ ಹೆಗ್ಗಳಿಕೆ. ಹಾಗೆಯೇ, ಗಲ್ಲುಶಿಕ್ಷೆಗೆ ಗುರಿಯಾದವರ ಕ್ಷಮಾದಾನ ನಿರಾಕರಣೆ ವಿಚಾರದಲ್ಲಿಯೂ ರಾಮನಾಥ ಕೋವಿಂದ್‌ ಅವರು ಮೃಧು ಸ್ವಭಾವ ಹೊಂದಿರಲಿಲ್ಲ. ಇವರ ಐದು ವರ್ಷಗಳ ಆಳ್ವಿಕೆಯಲ್ಲಿ ಒಟ್ಟು ಆರು ಗಲ್ಲು ಶಿಕ್ಷೆಗಳ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದ್ದಾರೆ. ಇವುಗಳಲ್ಲಿ ಪ್ರಮುಖವಾದವು ನಿರ್ಭಯಾ ಹಂತಕರ ಕ್ಷಮಾದಾನ ಅರ್ಜಿಗಳು. ಆದರೆ, ಇವರಿಗಿಂತ ಹಿಂದಿನ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಅವರು 30 ಕ್ಷಮಾದಾನ ಅರ್ಜಿಗಳನ್ನು ತಿರಸ್ಕರಿಸಿದ್ದರು.

ಆಡಳಿತಾತ್ಮಕ ವಿಚಾರಕ್ಕೆ ಬಂದರೆ, ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರ ನಡುವಿನ ಸಂಬಂಧ ಉತ್ತಮವಾಗಿಯೇ ಇತ್ತು. ಎಲ್ಲಿಯೂ ರಾಷ್ಟ್ರಪತಿ ಭವನ ಮತ್ತು ಕೇಂದ್ರ ಸರ್ಕಾರದ ನಡುವೆ ತಿಕ್ಕಾಟಗಳು ಕಂಡು ಬರಲಿಲ್ಲ.

ಈಗ ರಾಮನಾಥ್‌ ಕೋವಿಂದ್‌ ಅವರ ಅವಧಿ ಮುಗಿದಿದೆ. ಸೋಮವಾರದಿಂದ ದ್ರೌಪದಿ ಮುರ್ಮು ಅವರ ಕಾಲ ಆರಂಭವಾಗಲಿದೆ. ದೇಶದ ಮಹಿಳೆಯರ ಸ್ವಾವಲಂಬನೆ ವಿಚಾರದಲ್ಲಿ ಮುರ್ಮು ಅವರ ಆಯ್ಕೆ ಅತ್ಯಂತ ಶ್ಲಾಘನೀಯ ಎಂದರೆ ತಪ್ಪಾಗಲಾರದು. ಕಾಲಕಾಲಕ್ಕೆ ದೇಶದ ಅತ್ಯುನ್ನತ ಪದವಿಗಳ ನೇತೃತ್ವ ಮಹಿಳೆಯರಿಗೆ ಸಿಗುತ್ತಿರಬೇಕು.

ಶಿಕ್ಷಕ ವೃತ್ತಿಯಿಂದ ಒಡಿಶಾದ ಕ್ಯಾಬಿನೆಟ್‌ ಸಚಿವೆ ಮತ್ತು ಜಾರ್ಖಂಡ್‌ ರಾಜ್ಯಪಾಲರಾಗಿ ಸೇವೆ ಸಲ್ಲಿಸಿರುವ ದ್ರೌಪದಿ ಮುರ್ಮು ಅವರು, ಉತ್ತಮ ಆಡಳಿತಗಾರ್ತಿ ಎಂಬುದನ್ನು ಈಗಾಗಲೇ ಸಾಬೀತು ಮಾಡಿ ದ್ದಾರೆ. ಒಡಿಶಾದಲ್ಲೇ ನವೀನ್‌ ಪಾಟ್ನಾಯಕ್‌ ಸಂಪುಟದಲ್ಲಿ ಸಚಿವೆಯಾಗಿ ಕಾರ್ಯ ನಿರ್ವಹಿಸಿದ ಸಂದರ್ಭದಲ್ಲೂ ಅತ್ಯುತ್ತಮ ಶಾಸಕಿ ಎಂಬ ಹೆಗ್ಗಳಿಕೆ ಪಡೆದವರು ಇವರು. ಜಾರ್ಖಂಡ್‌ನ‌ ರಾಜ್ಯಪಾಲರಾಗಿದ್ದಾ ಗಲೂ, ಜನ ವಿರೋಧಿ ತೀರ್ಮಾನಗಳ ವಿಚಾರದಲ್ಲಿ ದೃಢ ನಿಲುವು ತೆಗೆದುಕೊಂಡ ಹೆಚ್ಚುಗಾರಿಕೆಯೂ ಇವರಿಗಿದೆ. ಹೀಗಾಗಿ, ರಾಷ್ಟ್ರಪತಿ ಭವನ ಮುಂದೆಯೂ ಜನರಿಗೆ ಎಟಕುವ ಭವನವಾಗಲಿ. ಮುರ್ಮು ಅವರು ಜನರ ರಾಷ್ಟ್ರಪತಿಯಾಗಲಿ ಎಂಬುದು ಎಲ್ಲರ ಹಾರೈಕೆ.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.