ಡ್ರಗ್ಸ್‌ ದಂಧೆಯ ಸುತ್ತ ಮಾದಕ ಜಾಲ ಅಂತ್ಯವಾಗಲಿ


Team Udayavani, Sep 8, 2020, 6:27 AM IST

ಡ್ರಗ್ಸ್‌ ದಂಧೆಯ ಸುತ್ತ ಮಾದಕ ಜಾಲ ಅಂತ್ಯವಾಗಲಿ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಕಳೆದ ಕೆಲವು ದಿನಗಳಿಂದ ರಾಜ್ಯದ ಚಿತ್ರರಂಗ ಋಣಾತ್ಮಕ ಕಾರಣದಿಂದಾಗಿ ಸುದ್ದಿಯಲ್ಲಿದೆ.

ಡ್ರಗ್ಸ್‌ ದಂಧೆಯ ವಿಚಾರದಲ್ಲಿ ಇತ್ತೀಚೆಗೆ ಹೊರಬರುತ್ತಿರುವ ಚಿತ್ರರಂಗದ ಕೆಲವು ಹೆಸರುಗಳು, ತನಿಖೆ ಪಡೆಯುತ್ತಿರುವ ತಿರುವುಗಳನ್ನು ನೋಡಿದರೆ ಸ್ಯಾಂಡಲ್‌ ವುಡ್‌ನಲ್ಲಿ ಡ್ರಗ್ಸ್‌ ಜಾಲ ಬಲವಾಗಿ ಬೇರೂರಿದೆಯೇ ಎನ್ನುವ ಅನುಮಾನ ಬರಲಾರಂಭಿಸಿದೆ.

ಈ ನಿಟ್ಟಿನಲ್ಲಿ ಸ್ಯಾಂಡಲ್‌ ವುಡ್‌ ನಟಿ, ರಾಜಕಾರಣಿಯೊಬ್ಬರ ಮಗ, ಉದ್ಯಮಿಗಳು ಸೇರಿದಂತೆ ಅನೇಕರನ್ನು ಬಂಧನಕ್ಕೆ ಒಳಪಡಿಸಿ ತನಿಖೆ ನಡೆಸಲಾಗುತ್ತಿದೆ.

ಅತ್ತ ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ಸಾವಿನಲ್ಲೂ ಮಾದಕ ಜಾಲದ ಪಾತ್ರವಿದೆಯೇ ಎನ್ನುವ ಕುರಿತೂ ತನಿಖೆ ವೇಗ ಪಡೆದಿದ್ದು, ದೇಶಾದ್ಯಂತ ನಾರ್ಕೊಟಿಕ್ಸ್‌ ಕಂಟ್ರೋಲ್‌ ಬ್ಯೂರೋ (ಎನ್‌ಸಿಬಿ) ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಒಂದು ಕಾಲಕ್ಕೆ ದೇಶಾದ್ಯಂತ ಡ್ರಗ್ಸ್‌ ಜಾಲವು ಭೂಗತ ಲೋಕದ ಹಿಡಿತದಲ್ಲಿತ್ತು. ಈಗ ಭೂಗತ ಪಾತಕಿಗಳ ಹಾವಳಿ ಕಡಿಮೆಯಾಗಿದೆಯಾದರೂ, ಡ್ರಗ್ಸ್‌ ಜಾಲ ಮಾತ್ರ ಮೊದಲಿಗಿಂತಲೂ ಬಲಿಷ್ಠವಾಗಿಬಿಟ್ಟಿದೆ ಎನ್ನುವುದು ಇತ್ತೀಚಿನ ವರ್ಷಗಳಲ್ಲಿನ ಎನ್‌ಸಿಬಿಯ ಕಾರ್ಯಾಚರಣೆಗಳಿಂದ ಸ್ಪಷ್ಟವಾಗುತ್ತಿದೆ.

ಕೇವಲ ಚಿತ್ರರಂಗವೆಂದಷ್ಟೇ ಅಲ್ಲ, ಹಣ ಹರಿದಾಡುವಲ್ಲೆಲ್ಲ ಡ್ರಗ್ಸ್‌ ಹಾವಳಿ ಅಧಿಕವಿದೆ ಎನ್ನುತ್ತಾರೆ ಅಧಿಕಾರಿಗಳು. ಅದರಲ್ಲೂ ಮಹಾನಗರಿಗಳಲ್ಲಂತೂ ಕೊಕೇನ್‌, ಗಾಂಜಾ, ಚರಸ್‌, ಹೆರಾಯಿನ್‌, ಮಾರ್ಫೀನ್‌, ಕೆಟಮೀನ್‌, ಎಲ್‌ಎಸ್‌ಡಿಯ ದಾಸ್ಯಕ್ಕೆ ಸಿಲುಕುವವರ ಸಂಖ್ಯೆ ವೃದ್ಧಿಸುತ್ತಲೇ ಇದೆ.

ಕಳೆದ ಐದು ವರ್ಷಗಳಲ್ಲಿ ಕರ್ನಾಟಕದಲ್ಲಿ ಕೊಕೇನ್‌ ಬಳಕೆ ದುಪ್ಪಟ್ಟಾಗಿದೆ ಎನ್ನುತ್ತಾರೆ ಗೃಹ ಸಚಿವಾಲಯದ ಅಧಿಕಾರಿಗಳು. ಆತಂಕದ ಸಂಗತಿಯೆಂದರೆ, ದಕ್ಷಿಣ ಏಷ್ಯನ್‌ ರಾಷ್ಟ್ರಗಳಿಗೆ ಬೆಂಗಳೂರೇ ಮುಖ್ಯ ಡ್ರಗ್ಸ್‌ ಸಾಗಣೆಯ ಮಾರ್ಗವಾಗಿ ಬದಲಾಗುತ್ತಿದೆ ಎನ್ನುವ ವಿಚಾರ.

ಒಂದು ಸಮಯದಲ್ಲಿ ರೇವ್‌ ಪಾರ್ಟಿಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಮಾದಕ ದ್ರವ್ಯಗಳು, ಈಗ ಪಬ್‌ಗಳಲ್ಲಿ, ಹಲವಾರು ಪಾರ್ಟಿಗಳಲ್ಲಿ, ರಾಜ್ಯದ ಹಲವು ರೆಸಾರ್ಟುಗಳು, ಹೋಂ ಸ್ಟೇಗಳಲ್ಲೂ ಹರಿದಾಡುತ್ತಿವೆ. ಎಲ್ಲಕ್ಕಿಂತ ಹೆಚ್ಚಾಗಿ ಕೊಕೇನ್‌, ಗಾಂಜಾ ಸೇರಿದಂತೆ ವಿವಿಧ ಮಾದಕ ಪದಾರ್ಥಗಳು ಕಾಲೇಜು ವಿದ್ಯಾರ್ಥಿಗಳ ಕೈ ಸೇರುತ್ತಿರುವ ಅನುಮಾನವಿದೆ.

ಶಾಲಾ-ಕಾಲೇಜು ಆವರಣದಲ್ಲಿ ಐಸ್‌ ಕ್ರೀಂನಲ್ಲಿ ಡ್ರಗ್ಸ್‌ ಸವರಿ ನೀಡುತ್ತಿರುವ ಗುಮಾನಿಯಿದೆ, ಅಂಥ ದಂಧೆಕೋರರನ್ನು ಹಿಡಿಯಲಾಗುವುದು ಎಂದು ಸಚಿವ ಸುರೇಶ್‌ ಕುಮಾರ್‌ ಎಚ್ಚರಿಸಿರುವುದು ಈ ಹಿನ್ನೆಲೆಯಲ್ಲಿಯೇ. ಇವನ್ನೆಲ್ಲ ಗಮನಿಸಿದಾಗ ರಾಜ್ಯದಲ್ಲಿ ಡ್ರಗ್‌ ಪೆಡ್ಲರ್‌ಗಳ ಬೃಹತ್‌ ಜಾಲವೇ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸುತ್ತಿದೆ ಎನ್ನುವುದು ನಿರ್ವಿವಾದ.

ಈ ಹಿನ್ನೆಲೆಯಲ್ಲಿ ಮಾದಕ ವಸ್ತುಗಳ ದಂಧೆ ಪ್ರಕರಣದಲ್ಲಿ ಪುನರಾವರ್ತಿತ ಅಪರಾಧಿಗಳ ವಿರುದ್ಧ ಗೂಂಡಾ ಕಾಯ್ದೆ ಪ್ರಯೋಗ ಮಾಡಲು ಸೂಚನೆ ನೀಡಿರುವುದಾಗಿ ಗೃಹ ಸಚಿವ ಬೊಮ್ಮಾಯಿ ಹೇಳಿರುವುದು ಸ್ವಾಗತಾರ್ಹ. ಒಟ್ಟಿrನಲ್ಲಿ ಡ್ರಗ್ಸ್‌ ಜಾಲದ ಬೆನ್ನೆಲುಬನ್ನು ಮುರಿಯುವಲ್ಲಿ ಆಡಳಿತ ವ್ಯವಸ್ಥೆ ಸಫ‌ಲವಾದರೆ, ರಾಜ್ಯವು ಸ್ವಸ್ಥವಾಗುತ್ತದೆ.

ಟಾಪ್ ನ್ಯೂಸ್

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.