ಸಂಪಾದಕೀಯ :ಮಾದಕ ಪದಾರ್ಥ ದಂಧೆಯ ಮೂಲೋತ್ಪಾಟನೆ ಅನಿವಾರ್ಯ


Team Udayavani, Mar 20, 2021, 6:10 AM IST

Editorial

ರಾಜ್ಯದಲ್ಲಿ ಮಾದಕ ವಸ್ತುಗಳು ಮತ್ತು ಅಮಲು ಪದಾರ್ಥಗಳ ಸೇವ ನೆಯ ಪ್ರಕರಣಗಳು ಹೆಚ್ಚುತ್ತಿರುವುದು ತೀರಾ ಕಳವಳಕಾರಿ ವಿಷಯ. ಕೆಲವೊಂದು ದಶಕಗಳ ಹಿಂದೆ ನಗರಗಳಿಗೆ ಸೀಮಿತವಾಗಿದ್ದ ಈ ದಂಧೆ ಈಗ ಗ್ರಾಮೀಣ ಪ್ರದೇಶಗಳಿಗೂ ವಿಸ್ತರಿಸಲ್ಪಟ್ಟಿದೆ. ಮಾದಕ ವಸ್ತು ಅಥವಾ ಅಮಲು ಪದಾರ್ಥಗಳಿಗೆ ಯುವಪೀಳಿಗೆ ಅದರಲ್ಲೂ ವಿದ್ಯಾರ್ಥಿ ಸಮು ದಾಯ ದಾಸರಾಗುತ್ತಿರುವುದು ತೀರಾ ಆತಂಕಕಾರಿ. ಮಾದಕ ಪದಾರ್ಥ ಗಳ ಸೇವನೆಯ ಚಟಕ್ಕೆ ಬಲಿಯಾದ ಯುವ ಜನಾಂಗ ಮತ್ತು ಸಂತ್ರಸ್ತ ಕುಟುಂಬಗಳ ಯಾತನೆ ಹೇಳತೀರದು.

ಮಾದಕ ಪದಾರ್ಥಗಳ ಸೇವನೆ, ಮಾರಾಟ ಪ್ರಕರಣಗಳು ಬಯಲಾ ದಾಗಲೆಲ್ಲ ಈ ದಂಧೆಯ ಕರಾಳತೆಯ ನೈಜ ಮುಖ ಅನಾವರಣ ಗೊಳ್ಳುತ್ತಲೇ ಬರುತ್ತಿದೆ. ಈ ಸಂದರ್ಭದಲ್ಲಿ ಪೊಲೀಸ್‌, ಆರೋಗ್ಯ, ಶಿಕ್ಷಣ ಇಲಾಖೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಡ್ರಗ್ಸ್‌ ಪೆಡ್ಲರ್‌ಗಳ ಬೆನ್ನು ಹತ್ತುವುದು ಸಾಮಾನ್ಯ. ಈ ವೇಳೆ ಮಾದಕ ವಸ್ತುಗಳ ದಂಧೆಯ ಕಬಂಧ ಬಾಹುಗಳು ವ್ಯಾಪಕವಾಗಿ ಹರಡಿರುವುದು ಬೆಳಕಿಗೆ ಬರುತ್ತಲೇ ಇವೆ. ಅದರಲ್ಲೂ ಪ್ರಮುಖವಾಗಿ ಶಿಕ್ಷಣ ಸಂಸ್ಥೆಗಳ ಪರಿಸರದಲ್ಲಿಯೇ ಈ ದಂಧೆ ಸಕ್ರಿಯವಾಗಿರುವುದು ಒಂದಿಷ್ಟು ಚಿಂತೆಯ ವಿಷಯ.

ಸರಕಾರ ವಿಧಾನಪರಿಷತ್‌ನಲ್ಲಿ ನೀಡಿದ ಅಂಕಿಅಂಶಗಳ ಪ್ರಕಾರ ರಾಜ್ಯದಲ್ಲಿ ಕಳೆದ ಮೂರು ವರ್ಷಗಳ ಅವಧಿಯಲ್ಲಿ 7,943 ಮಾದಕ ವಸ್ತುಗಳ ಪ್ರಕರಣಗಳು ದಾಖಲಾಗಿದ್ದರೆ ಈ ಸಂಬಂಧ 10,566 ಆರೋಪಿಗಳನ್ನು ಬಂಧಿಸಲಾಗಿದೆ. ಇವು ಪೊಲೀಸರಿಂದ ಪತ್ತೆಹಚ್ಚಲ್ಪಟ್ಟ ಪ್ರಕರಣಗಳಾಗಿದ್ದರೆ ಇನ್ನು ಇಡೀ ರಾಜ್ಯದಲ್ಲಿ ಪತ್ತೆಯಾಗದ ಪ್ರಕರಣಗಳು, ಈ ದಂಧೆಯಲ್ಲಿ ತೊಡಗಿರುವವರ ಸಂಖ್ಯೆಯನ್ನು ಊಹಿಸುವುದು ಸ್ವಲ್ಪ ಕಷ್ಟವೇ.
ಸದ್ಯ ಮಾದಕ ವಸ್ತುಗಳ ಸಾಗಾಟ, ಪೂರೈಕೆ, ಮಾರಾಟ, ಸೇವನೆ ಯಂಥ ಪ್ರಕರಣಗಳನ್ನು ಕೇಂದ್ರ ಸರಕಾರದ ಎನ್‌ಡಿಪಿಎಸ್‌ ಕಾಯ್ದೆಯಡಿ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುತ್ತಿದೆ. ರಾಜ್ಯದಲ್ಲಿ ಮಾದಕ ವಸ್ತುಗಳ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಕಾಯ್ದೆಯ ಕೆಲವೊಂದು ನಿಯಮಾವಳಿಗಳಲ್ಲಿ ಬದಲಾವಣೆ ತರಲು ರಾಜ್ಯ ಸರಕಾರ ಉದ್ದೇಶಿಸಿದೆ.

ಕಾನೂನು ತಜ್ಞರು ಮತ್ತು ಹಿರಿಯ ಪೊಲೀಸ್‌ ಅಧಿಕಾರಿಗಳ ಪ್ರಕಾರ ಕೇಂದ್ರದ ಎನ್‌ಡಿಪಿಎಸ್‌ ಕಾಯ್ದೆಯೇ ಬಲಿಷ್ಠವಾಗಿದೆ. ಕಾಯ್ದೆಯ ನಿಯ ಮಾವಳಿಗಳಡಿಯಲ್ಲಿ ಸರಕಾರಿ ಇಲಾಖೆಗಳು ಕಾರ್ಯ ನಿರ್ವಹಿಸಿದ್ದೇ ಆದಲ್ಲಿ ಮಾದಕ ವಸ್ತು ದಂಧೆಗೆ ಕಡಿವಾಣ ಹಾಕಲು ಸಾಧ್ಯ ಎಂಬುದು ಇವರ ವಾದ. ಹಾಗೊಂದು ವೇಳೆ ಸರಕಾರ ಕಾಯ್ದೆಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ನಿಯಮಾವಳಿಗಳಲ್ಲಿ ಕೆಲವೊಂದು ಬದಲಾವಣೆ ತರಲು ಮುಂದಾ ಗಿದ್ದಲ್ಲಿ ಅದು ಸ್ವಾಗತಾರ್ಹವೇ. ಆದರೆ ಜಾರಿಯಲ್ಲಿರುವ ಕಾಯ್ದೆಯ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸಂಬಂಧ ಪಟ್ಟ ಇಲಾಖೆಗಳು ಹೆಣಗಾಡುತ್ತಿರುವಾಗ ಹೊಸ ನೀತಿಯ ಅಗತ್ಯ ವಾದರೂ ಏನು? ಎಂಬ ಪ್ರಶ್ನೆ ಮೂಡುವುದು ಸಹಜ.

ಈ ಗೊಂದಲ, ವೈರುಧ್ಯಗಳೇನೇ ಇರಲಿ, ಸರಕಾರ ಜಾರಿಗೆ ತರಲು ದ್ದೇಶಿಸಿರುವ ಸಮಗ್ರ ಡ್ರಗ್ಸ್‌ ವಿರೋಧಿ ನೀತಿ ಕೂಡ ಹತ್ತರಲ್ಲಿ ಹನ್ನೊಂದು ಎಂಬಂತಾಗದಿರಲಿ. ಮಾದಕ ವಸ್ತು ಮತ್ತು ಅಮಲು ಪದಾರ್ಥಗಳ ದಂಧೆಯ ಮೂಲೋತ್ಪಾಟನೆಯನ್ನೇ ಗುರಿಯಾಗಿಸಿಕೊಂಡು ಹೊಸ ನೀತಿಯನ್ನು ರೂಪಿಸುವುದರ ಜತೆಯಲ್ಲಿ ಅದನ್ನು ಅಕ್ಷರಶಃ ಜಾರಿಗೆ ತರುವುದು ಇಂದಿನ ತುರ್ತು ಅನಿವಾರ್ಯ ಕೂಡ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.