ಚೀನ ಬಗ್ಗೆ ಎಚ್ಚರಿಕೆಯಿರಲಿ


Team Udayavani, Jun 9, 2020, 5:40 AM IST

ಚೀನ ಬಗ್ಗೆ ಎಚ್ಚರಿಕೆಯಿರಲಿ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಭಾರತೀಯ ಪ್ರದೇಶಗಳಲ್ಲಿ ಚೀನ ಸೈನಿಕರ ಒಳನುಸುಳುವಿಕೆ ಘಟನೆಗಳು ಆಗಾಗ ನಡೆಯುತ್ತಲೇ ಇರುತ್ತವೆ. ಆದರೆ ಕಳೆದೊಂದು ತಿಂಗಳಿಂದ ಚೀನಿ ಸೈನಿಕರ ವರ್ತನೆಯನ್ನು ನೋಡಿ ಇಡೀ ಜಗತ್ತು ಅಸಹ್ಯ ಪಡುತ್ತಿದೆ.

ಕಳೆದೊಂದು ತಿಂಗಳಿಂದ ಪೂರ್ವ ಲಡಾಖ್‌ ಪ್ರಾಂತ್ಯಗಳ ಬಳಿ ಚೀನಿ ಸೇನೆ ತೋರುತ್ತಾ ಬಂದ ಆಕ್ರಮಣಕಾರಿ ವರ್ತನೆ ಒಂದು ಹಂತಕ್ಕೆ ಶಾಂತವಾಗುವ ಲಕ್ಷಣಗಳು ಗೋಚರಿಸಿವೆ.

ಚೀನ ಮತ್ತು ಭಾರತೀಯ ಮಿಲಿಟರಿಯ ಉನ್ನತಾಧಿಕಾರಿಗಳ ನಡುವೆ ಶನಿವಾರ ಮಾತುಕತೆಯಾಗಿರುವುದು ಈ ಬೆಳವಣಿಗೆಗೆ ಕಾರಣ.

ಹಾಗೆಂದು, ಚೀನ ನಿಜಕ್ಕೂ ಶಾಂತವಾಗಿಬಿಡುತ್ತದೆ ಎಂದು ನಾವು ನಿರೀಕ್ಷಿಸುವಂತಿಲ್ಲ. ತನ್ನ ನೆಲದಲ್ಲೀಗ ಅದು ಮಿಲಿಟರಿ ಚಟುವಟಿಕೆಗಳಿಗೆ ವೇಗ ಕೊಡಲಾರಂಭಿಸಿದೆ. ಭಾರತೀಯ ಪ್ರದೇಶಗಳಲ್ಲಿ ಚೀನ ಸೈನಿಕರ ಒಳನುಸುಳುವಿಕೆ ಘಟನೆಗಳು ಆಗಾಗ ನಡೆಯುತ್ತಲೇ ಇರುತ್ತವೆ.

ಆದರೆ ಕಳೆದೊಂದು ತಿಂಗಳಿಂದ ಚೀನಿ ಸೈನಿಕರ ವರ್ತನೆಯನ್ನು ನೋಡಿ ಇಡೀ ವಿಶ್ವ ಅಸಹ್ಯ ಪಡುತ್ತಿದೆ. ಜಗತ್ತು ಕೋವಿಡ್ ವಿರುದ್ಧ ಹೋರಾಡುವಲ್ಲಿ ನಿರತವಾಗಿರುವಾಗ ಚೀನಿಯರು ಈ ಅನಿಶ್ಚಿತತೆಯನ್ನು ದುರ್ಬಳಕೆ ಮಾಡಿಕೊಳ್ಳಲು ಪ್ರಯತ್ನಿಸುತ್ತಿರುವುದು ಖಂಡನೆಗೆ ಗುರಿಯಾಗುತ್ತಿದೆ.

ಭಾರತದ ಪ್ರದೇಶಗಳಲ್ಲಿ ಬಿಕ್ಕಟ್ಟು ಸೃಷ್ಟಿಸುವುದು ಹಾಗೂ ಇದರ ಜಾಡಲ್ಲಿ ಭಾರತದ ಮೇಲೆ ಒತ್ತಡ ಹೇರುವುದು ಚೀನದ ಹಳೆಯ ರಣನೀತಿಯಾಗಿದೆ. ಆದರೆ ಈಗ ಭಾರತದ ಯಾವುದೇ ಪ್ರದೇಶವನ್ನೂ ಕೈವಶ ಮಾಡಿಕೊಳ್ಳುವುದು ಸುಲಭವಲ್ಲ ಎನ್ನುವುದನ್ನು ಚೀನಿ ಆಡಳಿತ ಹಾಗೂ ಸೇನೆ ಸ್ಪಷ್ಟವಾಗಿ ಅರಿತಿವೆ. ಭಾರತವೀಗ 1962ರ ದೇಶವಾಗಿ ಉಳಿದಿಲ್ಲ.

ಸತ್ಯವೇನೆಂದರೆ, ಈ ಬಾರಿ ಚೀನದ ದುರ್ವರ್ತನೆಯ ಹಿಂದೆ ಅನ್ಯ ಕಾರಣವೂ ಇದೆ. ಭಾರತವು ಗಡಿ ಭಾಗದಲ್ಲಿ ಅಭಿವೃದ್ಧಿ ಕೆಲಸಗಳನ್ನು ಕೈಗೊಂಡಿರು ವುದು ಚೀನದ ನಿದ್ದೆಗೆಡಿಸಿದೆ. ಪ್ಯಾಂಗಾಂಗ್‌ ತ್ಸೋ ಲೇಕ್‌ ಸನಿಹದ ಪ್ರದೇಶದಲ್ಲಿ ಭಾರತವು ರಣಾಂಗಣ ದೃಷ್ಟಿಯಿಂದ ಮಹತ್ವ ಪೂರ್ಣ ರಸ್ತೆಯನ್ನು ನಿರ್ಮಿ ಸಿರುವುದು ಚೀನವನ್ನು ಹೆಚ್ಚು ಕಾಡುತ್ತಿರುವ ವಿಷಯ. ಇನ್ನು ಗಲವಾನ್‌ ಕಣಿವೆಯಲ್ಲಿ ಭಾರತ ನಿರ್ಮಿಸುತ್ತಿರುವ ರಸ್ತೆಯ ಬಗ್ಗೆಯೂ ಚೀನ ಅಪಸ್ವರವೆತ್ತುತ್ತಿದೆ.

ನಿಸ್ಸಂದೇಹವಾಗಿಯೂ ಭಾರತ ನಿರ್ಮಿಸುತ್ತಿರುವ ರಸ್ತೆಯ ಇಂಚಿಂಚೂ ಕೂಡ ಚೀನಕ್ಕೆ ಬೆಟ್ಟದಷ್ಟು ಚಿಂತೆ ಹೆಚ್ಚಿಸುತ್ತಲೇ ಇದೆ. ಗಲವಾನ್‌ ಕಣಿವೆಯಲ್ಲಿ ಭಾರತೀಯ ಸೈನ್ಯದ ಉಪಸ್ಥಿತಿಯು ಹೆಚ್ಚಾದರೆ, ಚೀನಿ ಸೈನಿಕರ ಚಲನವಲನಗಳ ಮೇಲೆ ಹದ್ದಿನಗಣ್ಣಿಡಲು ಸುಲಭವಾಗುತ್ತದೆ. ಚೀನ ಎಷ್ಟೇ ಅಸಮಾಧಾನ ವ್ಯಕ್ತಪಡಿಸಿದರೂ ಭಾರತ ತಾನಿಡುತ್ತಿರುವ ಹೆಜ್ಜೆಯಿಂದ ಹಿಂದೆ ಸರಿಯುತ್ತಿಲ್ಲ. ಈ ಕಾರಣಕ್ಕಾಗಿಯೇ, ಚೀನ ಸದ್ಯಕ್ಕೆ ಸುಮ್ಮನಾದರೂ, ಮುಂದಿನ ದಿನಗಳಲ್ಲಿ ಮತ್ತಷ್ಟು ಬಿಕ್ಕಟ್ಟನ್ನಂತೂ ಸೃಷ್ಟಿಸಲಿದೆ. ಈ ಬಗ್ಗೆ ಭಾರತ ಜಾಗರೂಕತೆಯಿಂದಿರಬೇಕು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.