ಕೋವಿಡ್ ನ ಕಠಿನ ಸವಾಲು ಸರಕಾರಗಳ ಶ್ರಮ ಫ‌ಲಕೊಡಲಿ


Team Udayavani, May 30, 2020, 8:47 AM IST

Narendra-Modi-5

ಇಡೀ ದೇಶ ಹಿಂದೆಂದೂ ಕಂಡರಿಯದಂಥ ಸಂಕಷ್ಟದಲ್ಲಿ ಹೆಜ್ಜೆ ಹಾಕುತ್ತಿರುವ ಹೊತ್ತಲ್ಲೇ ಮೋದಿ 2.0 ಸರಕಾರ ಒಂದು ವರ್ಷ ಪೂರೈಸಿದೆ. ನಿಸ್ಸಂಶಯವಾಗಿಯೂ ಇದು ಮೋದಿ ಸರಕಾರ ಎದುರಿಸುತ್ತಿರುವ ಅತಿ ಕ್ಲಿಷ್ಟ ಗಳಿಗೆಯೇ ಸರಿ.

ಈಗಾಗಲೇ ದೇಶದಲ್ಲಿ ಸೋಂಕಿತರ ಸಂಖ್ಯೆ 1.68 ಲಕ್ಷ ದಾಟಿದೆ. ಮುಂದಿನ ತಿಂಗಳುಗಳಲ್ಲಿ ರೋಗ ಉತ್ತುಂಗಕ್ಕೇರಲಿದೆ ಎಂದು ಭಯಾನಕ ಭವಿಷ್ಯ ನುಡಿಯಲಾಗುತ್ತಿದೆ. ಈ ಸಂಗತಿಯು  ಆತಂಕ ಹೆಚ್ಚಲು ಕಾರಣವಾಗಿದೆ.

ಏಕೆಂದರೆ ಕೋವಿಡ್ ದೇಶವಾಸಿಗಳ ದೈಹಿಕ ಸ್ವಾಸ್ಥ್ಯವಷ್ಟೇ ಅಲ್ಲದೇ, ದೇಶದ ಆರ್ಥಿಕ ಸ್ವಾಸ್ಥ್ಯಕ್ಕೂ ಹಾನಿಮಾಡುತ್ತಿದೆ. ಈಗಾಗಲೇ ಲಾಕ್‌ಡೌನ್‌ ಪರಿಣಾಮದಿಂದಾಗಿ, ದೇಶದ ಆರ್ಥಿಕತೆಗೆ 30.3 ಲಕ್ಷ ಕೋಟಿ ರೂಪಾಯಿ ನಷ್ಟವಾಗಿದೆ ಎನ್ನಲಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಪರಿಸ್ಥಿತಿ ಏನಾಗಲಿದೆಯೊ ಎಂಬ ಆತಂಕವೂ ಜನಸಾಮಾನ್ಯರಲ್ಲಿ ಮಡುಗಟ್ಟಿದೆ.

ದೇಶವೊಂದರ ನೈಜ ಶಕ್ತಿ – ಸಾಮರ್ಥ್ಯದ ಅನಾವರಣವಾಗುವುದು ಅದು ಇನ್ನೊಂದು ದೇಶದ ವಿರುದ್ಧ ಗೆಲ್ಲುವ ಯುದ್ಧಗಳಲ್ಲಲ್ಲ, ಬದಲಾಗಿ ಅದು ಮಹಾಮಾರಿಗಳನ್ನು ಎದುರಿಸುವ ರೀತಿಯಲ್ಲಿ ಎನ್ನುವ ಮಾತಿದೆ, ಈ ಮಾತು ಅಕ್ಷರಶಃ ಸತ್ಯ.

ಕೋವಿಡ್ ಎಂಬ ಪುಟ್ಟ ವೈರಸ್‌ ಇಂದು ದೇಶ ಗಳನ್ನು ನಾನಾ ಆಯಾಮಗಳಿಂದ ಪರೀಕ್ಷಿಸುತ್ತಿದೆ. ತನ್ನ ಸೇನೆ ಹಾಗೂ ಆರ್ಥಿಕ ಶಕ್ತಿಯಿಂದ ದೊಡ್ಡಣ್ಣ ಎಂದು ಕರೆಸಿಕೊಳ್ಳುವ ಅಮೆರಿಕ, ಬ್ರಿಟನ್‌ನ ದಡ್ಡತನವನ್ನು ಕೋವಿಡ್ ಅನಾವರಣಗೊಳಿಸಿದೆ.

ಹಾಗೆಂದು, ಸಂತ್ರಸ್ತ ರಾಷ್ಟ್ರಗಳ್ಯಾವುವು ಕೈಕಟ್ಟಿ ಕುಳಿತಿಲ್ಲ ಎನ್ನುವುದನ್ನು ಒಪ್ಪಿಕೊಳ್ಳಲೇಬೇಕು. ಇಂದು ಬಹುತೇಕ ರಾಷ್ಟ್ರಗಳು ಕೋವಿಡ್ ವಿರುದ್ಧ ಲಸಿಕೆ ಸಂಶೋಧನೆಯಲ್ಲಿ ತೊಡಗಿವೆ. ಒಂದಕ್ಕೊಂದು ತಮಗಾದ ಮಟ್ಟಿಗೆ ಸಹಾಯ ಮಾಡುತ್ತಿವೆ.

ಗಮನಾರ್ಹ ಸಂಗತಿಯೆಂದರೆ ಭಾರತ ಕೋವಿಡ್ ವಿರುದ್ಧದ ಹೋರಾಟದಲ್ಲಿ ಶ್ಲಾಘನೀಯ ಹೆಜ್ಜೆಯನ್ನೇ ಇಡುತ್ತಿದೆ. ಕಡಿಮೆ ಜನಸಂಖ್ಯೆಯಿರುವ ಸಿರಿವಂತ ದೇಶಗಳು ನಿಷ್ಕಾಳಜಿ ಮಾಡಿದ ವೇಳೆಯಲ್ಲೇ ಭಾರತದಂಥ 137 ಕೋಟಿ ಜನಸಂಖ್ಯೆಯ ರಾಷ್ಟ್ರದಲ್ಲಿ ಸರಕಾರ ಕಟ್ಟುನಿಟ್ಟಿನ ಲಾಕ್‌ಡೌನ್‌ ಜಾರಿಮಾಡಿತು.

ನಮ್ಮಲ್ಲಿನ ಅಪಾರ ಜನಸಂಖ್ಯೆ, ದುರ್ಬಲ ಆರೋಗ್ಯ ವ್ಯವಸ್ಥೆಯನ್ನು ಪರಿಗಣಿಸಿದರೆ, ಲಾಕ್‌ಡೌನ್‌ ಜಾರಿಗೊಳಿಸದೇ ಅನ್ಯ ದಾರಿ ಇರಲಿಲ್ಲ. ಇದರಿಂದಾಗಿ ದೇಶವಾಸಿಗಳು, ಅದರಲ್ಲೂ ಅನ್ಯ ರಾಜ್ಯಗಳಲ್ಲಿ, ಊರುಗಳಲ್ಲಿ ಸಿಲುಕಿದ್ದ ವಲಸೆ ಕಾರ್ಮಿಕರು, ಬಡವರು ಪಟ್ಟ ಪಡಿಪಾಟಲು ಕಡಿಮೆಯೇನಿಲ್ಲ. ಆದರೂ ಮೇ ತಿಂಗಳ ಆರಂಭದಿಂದ ಅನ್ಯ ರಾಜ್ಯಗಳಲ್ಲಿ ಸಿಲುಕಿದವರನ್ನು ಅವರವರ ಊರುಗಳಿಗೆ ತಲುಪಿಸಲಾಗುತ್ತಿರುವುದು ಒಳ್ಳೆಯ ನಡೆ.

ಆದರೆ ಸವಾಲು ಇನ್ನೂ ಇದೆ. ಕೋವಿಡ್ ನಿಂದಾಗಿ ದುರ್ಬಲವಾಗಿರುವ ಆರ್ಥಿಕತೆಗೆ ವೇಗ ಕೊಡುವುದು ಈಗ ಅನಿವಾರ್ಯವಾಗಿದ್ದು, ಜನರ ಆರೋಗ್ಯವನ್ನು ಕಾಪಾಡುತ್ತಲೇ, ದೇಶದ ಆರ್ಥಿಕ ಸ್ವಾಸ್ಥ್ಯವನ್ನು ಸುಧಾರಿಸುವ ಸವಾಲು ರಾಜ್ಯಗಳು ಹಾಗೂ ಕೇಂದ್ರ ಸರಕಾರದ ಎದುರಿದೆ.

ಈಗಾಗಲೇ ಈ ನಿಟ್ಟಿನಲ್ಲಿ 20 ಲಕ್ಷ ಕೋಟಿ ರೂ.ಗಳ ಆರ್ಥಿಕ ಪ್ಯಾಕೇಜನ್ನು ಕೇಂದ್ರ ಸರಕಾರ ಪ್ರಕಟಿಸಿದೆ. ದೇಶವನ್ನು ಸ್ವಾಭಿಮಾನ ರಾಷ್ಟ್ರವಾಗಿ ಕಟ್ಟಲು ದೇಶವಾಸಿಗಳಲ್ಲಿ ಪ್ರಧಾನಿ ಮೋದಿಯವರು ಮನವಿ ಮಾಡಿದ್ದಾರೆ. ಈ ‘ಆತ್ಮನಿರ್ಭರ’ ಹೋರಾಟದಲ್ಲಿ ಶೀಘ್ರವೇ ಗೆಲುವು ಸಿಗಲಿ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.