ಮದ್ಯಕ್ಕೆ ಮುಗಿಬಿದ್ದ ಜನ ಅಸಡ್ಡೆಯ ಪರಮಾವಧಿ


Team Udayavani, May 6, 2020, 5:08 AM IST

ಮದ್ಯಕ್ಕೆ ಮುಗಿಬಿದ್ದ ಜನ ಅಸಡ್ಡೆಯ ಪರಮಾವಧಿ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಕೇಂದ್ರ ಮತ್ತು ರಾಜ್ಯ ಸರಕಾರಗಳು ಪೂರ್ಣ ಲಾಕ್‌ ಡೌನ್‌ನಲ್ಲಿ ತುಸು ವಿನಾಯಿತಿ ನೀಡಿ ಸಾರ್ವಜನಕರಿಗೆ ಅನುಕೂಲ ಮಾಡಿಕೊಟ್ಟಿರುವುದು ಮೆಚ್ಚುವಂಥ ಸಂಗತಿಯೇ.

ಆದರೆ ಇದೇ ವೇಳೆಯಲ್ಲೇ ಅನೇಕ ರಾಜ್ಯಗಳಲ್ಲಿ ಕೋವಿಡ್ ಸೋಂಕಿತರ ಪ್ರಮಾಣವು ವೇಗವಾಗಿ ಬೆಳೆಯುತ್ತಿರುವ ರೀತಿ ಬೆಚ್ಚಿಬೀಳಿಸುವಂತಿದೆ.

ದೇಶಾದ್ಯಂತ ಕಳೆದ 5 ದಿನಗಳಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಜನರಲ್ಲಿ ಕೋವಿಡ್ ಸೋಂಕು ಪತ್ತೆಯಾಗಿರುವುದು, ಈ ರೋಗದ ವೇಗ ಕಡಿಮೆಯಾಗುತ್ತಿಲ್ಲ ಎನ್ನುವುದಕ್ಕೆ ಪುಷ್ಟಿಯಾಗಿದೆ.

ಇದು ಸಾಲದೆಂಬಂತೆ, ಸೋಮವಾರ ಮತ್ತು ಮಂಗಳವಾರ ದೇಶಾದ್ಯಂತ ಜನರು ಮದ್ಯಕ್ಕಾಗಿ ಎಲ್ಲಾ ಸುರಕ್ಷತಾ ನಿಯಮಗಳನ್ನು ಮರೆತು ಮುಗಿಬಿದ್ದ ರೀತಿ ನಿಜಕ್ಕೂ ಕಳವಳ ಹುಟ್ಟಿಸುವಂತಿತ್ತು. ಜನರ ವರ್ತನೆಯನ್ನು ಗಮನಿಸಿದರೆ, ಇಲ್ಲಿಯವರೆಗೂ ದೇಶವು ನಡೆಸಿದ ಪ್ರಯತ್ನಕ್ಕೆಲ್ಲ ದೊಡ್ಡ ಪೆಟ್ಟು ಬೀಳಲಿದೆಯೇನೋ ಎಂಬ ಆತಂಕ ಕಾಡುತ್ತಿದೆ.

ಇದನ್ನೆಲ್ಲ ಗಮನಿಸಿದಾಗ, ಮುಂಬರುವ ದಿನಗಳಲ್ಲಿ ಕೋವಿಡ್ ಸೋಂಕಿತರ ಅಂಕಿಸಂಖ್ಯೆ ಮತ್ತಷ್ಟು ವೇಗವಾಗಿ ಬೆಳೆಯಬಹುದು ಎನ್ನುವ ಮಾತನ್ನು ಅಲ್ಲಗಳೆಯುವುದಕ್ಕಂತೂ ಸಾಧ್ಯವಿಲ್ಲ. ಆದಾಗ್ಯೂ, ಗಮನಾರ್ಹ ಸಂಗತಿಯೆಂದರೆ, ಭಾರತದಲ್ಲಿ ಕೋವಿಡ್ ವೈರಸ್ ನ ಮೃತ್ಯುದರವು ಪ್ರಪಂಚದಲ್ಲಿ ಅತಿ ಕಡಿಮೆ ಇದೆ.

ಅಲ್ಲದೇ ಸೋಂಕಿತರ ಸಂಖ್ಯೆಯ ವಿಷಯದಲ್ಲೂ ಭಾರತದಲ್ಲಿ ಸ್ಥಿತಿ ಅಷ್ಟು ವಿಷಮವಾಗಿ ಬದಲಾಗಿಲ್ಲ. ಆದರೆ, ರೋಗ ನಿಯಂತ್ರಣಕ್ಕೆ ಆಡಳಿತಗಳಿಗೆ, ಸಾರ್ವಜನಿಕರ ಸಹಕಾರ ಅತ್ಯಗತ್ಯ. ತಿಳಿದೂ ತಿಳಿದೂ ಪರಿಸ್ಥಿತಿಯನ್ನು ಜನರೇ ವಿಷಮಗೊಳಿಸಿಬಿಡುತ್ತಾರೇನೋ ಎನಿಸುತ್ತಿದೆ.

ಉತ್ತರದ ಕೆಲವು ರಾಜ್ಯಗಳಿಗೆ ಹೋಲಿಸಿದರೆ, ದಕ್ಷಿಣದಲ್ಲಿ; ಮುಖ್ಯವಾಗಿ ಕೇರಳ ಮತ್ತು ಕರ್ನಾಟಕದಲ್ಲಿ ಪರಿಸ್ಥಿತಿ ಕೈಮೀರದೇ ನಿಯಂತ್ರಣದಲ್ಲಿದೆ. ಇನ್ನೊಂದೆಡೆ ದಿಲ್ಲಿ, ಮಹಾರಾಷ್ಟ್ರ, ಗುಜರಾತ್‌, ಪಂಜಾಬ್‌, ಉತ್ತರಪ್ರದೇಶ ಹಾಗೂ ತಮಿಳುನಾಡಲ್ಲಿ ಪರಿಸ್ಥಿತಿ ಹದಗೆಡುತ್ತಲೇ ಸಾಗುತ್ತಿದೆ.

ಈ ರಾಜ್ಯಗಳಲ್ಲಿನ ಆಡಳಿತ ಪಕ್ಷಗಳೂ ಪರಿಸ್ಥಿತಿ ನಿಭಾಯಿಸಲು ಶತಪ್ರಯತ್ನ ನಡೆಸಿರುವುದು ದಿಟವಾದರೂ, ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಸಾಗಿದೆ. ಅದರಲ್ಲೂ ಮಹಾರಾಷ್ಟ್ರದ ಪರಿಸ್ಥಿತಿಯಂತೂ ಕಳವಳಗೊಳಿಸುವಂತಿದೆ.

ಮಂಗಳವಾರದ ಹೊತ್ತಿಗೆ ಅಲ್ಲಿ ಸೋಂಕಿತರ ಸಂಖ್ಯೆ 14 ಸಾವಿರ ದಾಟಿದ್ದರೆ, ಮೃತಪಟ್ಟವರ ಸಂಖ್ಯೆ 580ಕ್ಕೂ ಅಧಿಕವಾಗಿದೆ. ಒಂದೇ ದಿನದಲ್ಲೇ 771 ಕೋವಿಡ್‌-19 ಪ್ರಕರಣಗಳು ಪತ್ತೆಯಾಗಿವೆ.

ಪರಿಸ್ಥಿತಿಯ ಗಂಭೀರತೆಯನ್ನು ಪರಿಗಣಿಸಿ ದೇಶದಲ್ಲಿ ಕೋವಿಡ್ ಸೋಂಕಿತ ಪ್ರದೇಶಗಳನ್ನು ಮೂರು ಭಾಗಗಳಾಗಿ ವಿಂಗಡಿಸಿ, ಅದಕ್ಕೆ ತಕ್ಕಂತೆ ವಿನಾಯಿತಿ ನೀಡಲಾಗಿದೆಯಾದರೂ, ಸೋಮವಾರ ಮತ್ತು ಮಂಗಳವಾರವೊಂದೇ ದಿನ ಜನ ತೋರಿಸಿದ ಅಸಡ್ಡೆಯು ಗಾಬರಿಗೊಳಿಸುವಂತಿದೆ.

ಅದರಲ್ಲೂ ಮದ್ಯ ಖರೀದಿಗಾಗಿ ದೇಶಾದ್ಯಂತ ಜನರು ಮುಗಿಬಿದ್ದ ರೀತಿಯಂತೂ ಚಿಂತೆಯ ಗೆರೆ ಹುಟ್ಟುಹಾಕಿದೆ. ಮಾಸ್ಕ್ ಧರಿಸುವ, ಸಾಮಾಜಿಕ ಅಂತರ ಪಾಲಿಸುವ ನಿಯಮಗಳನ್ನೆಲ್ಲ ಜನ ಕಡೆಗಣಿಸಿದ್ದಾರೆ. ಪರಿಸ್ಥಿತಿ ಹೀಗೇ ಮುಂದುವರಿದರೆ ಮುಂದಿನ ದಿನಗಳಲ್ಲಿ ಅಪಾಯ ಎಷ್ಟೋ ಪಟ್ಟು ಹೆಚ್ಚಾಗಲಿದೆ. ಜನರು ಹೀಗೆ ಬೇಜವಾಬ್ದಾರಿ ಮೆರೆಯುತ್ತಾ ಹೋದರೆ, ಆಡಳಿತಗಳು ಮತ್ತಷ್ಟು ಅಸಹಾಯಕವಾಗುತ್ತವಷ್ಟೆ. ಅಲ್ಲದೇ, ಇಲ್ಲಿಯವರೆಗಿನ ಪ್ರಯತ್ನವೆಲ್ಲವೂ ಹೊಳೆಯಲ್ಲಿ ಹುಣಸೆಹಣ್ಣು ತೊಳೆದಂತಾಗುತ್ತದೆ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.