ಕೋವಿಡ್ ಸಂಕಷ್ಟ: ಆರ್ಥಿಕತೆಗೆ ಬಲ ತುಂಬುವ ಪ್ರಯತ್ನ


Team Udayavani, May 16, 2020, 1:44 AM IST

ಕೋವಿಡ್ ಸಂಕಷ್ಟ: ಆರ್ಥಿಕತೆಗೆ ಬಲ ತುಂಬುವ ಪ್ರಯತ್ನ

ರಾಷ್ಟ್ರವನ್ನುದ್ದೇಶಿಸಿ ಮಂಗಳವಾರ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಾತನಾಡುತ್ತಾ ಲಾಕ್‌ಡೌನ್‌ ಅನ್ನು ಪೂರ್ಣವಾಗಿ ಸಮಾಪ್ತಿಗೊಳಿಸುವುದಿಲ್ಲ, ಇದರ ಮುಂದಿನ ಚರಣವೂ ಆರಂಭವಾಗಲಿದ್ದು, ಅದರ ರೂಪ ಈಗಿನದ್ದಕ್ಕಿಂತ ಭಿನ್ನವಾಗಿರಲಿದೆ ಎನ್ನುವ ಸೂಚನೆ ನೀಡಿದ್ದಾರೆ.

ಅದರ ಅವಧಿ ಎಷ್ಟು ದೀರ್ಘ‌ವಾಗಲಿದೆ ಎನ್ನುವುದು ಸ್ಪಷ್ಟವಿಲ್ಲವಾದರೂ, ಒಟ್ಟಲ್ಲಿ ಕೋವಿಡ್ ವಿರುದ್ಧದ ಹೋರಾಟದ ನಡುವೆಯೇ ದೇಶದ ಆರ್ಥಿಕತೆಯನ್ನೂ ಎತ್ತಿ ನಿಲ್ಲಿಸುವ ಪ್ರಯತ್ನಕ್ಕೆ ವೇಗ ನೀಡಲಾಗುತ್ತದೆ ಎಂದಾಯಿತು.

ಇದೇ ವೇಳೆಯಲ್ಲೇ, ಕೋವಿಡ್ ಸಂಕಷ್ಟದಿಂದ ತತ್ತರಿಸಿರುವ ದೇಶದ ಆರ್ಥಿಕತೆಗೆ ಬಲ ತುಂಬಲು ಕೇಂದ್ರ ಸರ್ಕಾರ ಆತ್ಮನಿರ್ಭರ ಭಾರತ ಮಿಷನ್‌ನಡಿಯಲ್ಲಿ 20 ಲಕ್ಷ ಕೋಟಿ ರೂಪಾಯಿಗಳ ವಿಶೇಷ ಆರ್ಥಿಕ ಪ್ಯಾಕೇಜ್‌ ಘೋಷಿಸಿರುವುದು ಸ್ವಾಗತಾರ್ಹ. ಅದರಲ್ಲೂ ಲಾಕ್‌ಡೌನ್‌ ನಿಂದಾಗಿ ದೇಶದ ಅನೇಕ ಆರ್ಥಿಕ ಗತಿ ವಿಧಿಗಳೇ ನಿಂತುಹೋಗಿರುವಾಗ ಅಭಿವೃದ್ಧಿ ಚಕ್ರಕ್ಕೆ ಚಾಲನೆ ನೀಡಲು ಇಂಥ ಕ್ರಮ ಅಗತ್ಯವಾಗಿತ್ತು.

ಆದರೆ, ಇದರ ಅನುಷ್ಠಾನ ಅತ್ಯಂತ ತುರ್ತಾಗಿ, ಸಕ್ಷಮವಾಗಿ ಆಗಬೇಕಿದೆ. ಲಾಕ್‌ಡೌನ್‌ ನಿಂದಾಗಿ ದೇಶದ ವ್ಯಾಪಾರ-ಉದ್ಯೋಗ ವಲಯಕ್ಕೆ ಬಹುದೊಡ್ಡ ಪೆಟ್ಟು ಬಿದ್ದಿದೆ. ಹೀಗಾಗಿ, ಆರ್ಥಿಕತೆಗೆ ಬಲ ತುಂಬುವ ತುರ್ತು ಎದುರಾಗಿರುವುದು ಸಹಜವೇ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಘೋಷಿಸಿರುವ ಪ್ಯಾಕೇಜು ಹೇಗೆ ವಿನಿಯೋಗವಾಗಲಿದೆ ಎನ್ನುವುದನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ವಿವರಿಸಿದ್ದಾರೆ.

ಎಂಎಸ್‌ಎಂಇಗಳಿಗೆ ಬಲ ತುಂಬುವುದು, ಸ್ಥಳೀಯ ಬ್ರಾಂಡ್‌ಗಳನ್ನು ಬೆಳೆಸುವುದು, ಅವನ್ನು ಜಾಗತಿಕ ಮಟ್ಟಕ್ಕೆ ಬೆಳೆಸುವುದು, ದೇಶವನ್ನು ಸ್ವಾವಲಂಬಿಯಾಗಿಸುವ ಪರಿಕಲ್ಪನೆ ಅತ್ಯುತ್ತಮವಾದದ್ದು.

ಈ ರೀತಿಯ ಪ್ಯಾಕೇಜ್‌ ಘೋಷಿಸಬೇಕೆಂದು ವಿಶೇಷಜ್ಞರು ಆರಂಭದಿಂದಲೇ ಸಲಹೆ ನೀಡುತ್ತಾ ಬಂದಿದ್ದರು. ಯಾವಾಗ ವ್ಯಾಪಾರ-ವಹಿವಾಟು ಎಂದಿನ ರೂಪಕ್ಕೆ ಮರಳುತ್ತದೋ ತಿಳಿಯದು, ಆದರೆ ಅಲ್ಲಿಯವರೆಗೂ ಆರ್ಥಿಕತೆಯು ಕುಸಿದುಬೀಳದಂತೆ ನೋಡಿಕೊಳ್ಳಲು ಈ ಪ್ಯಾಕೇಜ್‌ ಸಹಾಯ ಮಾಡಬಹುದು.

ಸರ್ಕಾರ ಈಗಾಗಲೇ ಹಲವು ಕ್ಷೇತ್ರಗಳಲ್ಲಿ ಉದ್ಯೋಗದ ದಾರಿಗಳನ್ನು ತೆರೆದಿದೆ. ಲಾಕ್‌ ಡೌನ್‌ನ ಮುಂದಿನ ಚರಣದಲ್ಲಿ ಯಾವ ಪ್ರದೇಶಗಳಲ್ಲಿ ಸಾಂಕ್ರಾಮಿಕ ಹರಡುವ ಅಪಾಯ ಕಡಿಮೆ ಇದೆಯೋ ಅಲ್ಲೆಲ್ಲ ಇನ್ನೂ ಅನ್ಯ ಕ್ಷೇತ್ರಗಳೂ ಹಳಿಯೇರಬಹುದು. ಆದರೆ, ಕೋವಿಡ್ ವಿರುದ್ಧದ ಸಾಂಘಿಕ ಹೋರಾಟವಂತೂ ನಿಲ್ಲುವಂತಿಲ್ಲ.

ಕೆಲವೇ ದಿನಗಳ ಹಿಂದಷ್ಟೇ ಕೇಂದ್ರ ಸರ್ಕಾರ ಹಾಗೂ ಕೇಂದ್ರ ಆರೋಗ್ಯ ಸಚಿವಾಲಯವು, ಇನ್ಮುಂದೆ ನಾವು ಕೋವಿಡ್ ನೊಂದಿಗೆ ಬದುಕುವುದನ್ನು ಕಲಿಯಬೇಕು ಎಂದು ಹೇಳಿದ್ದವು. ಇದು ಸತ್ಯವೂ ಹೌದು. ಇಂದು ವಿಶ್ವಆರೋಗ್ಯ ಸಂಸ್ಥೆಯೂ ಕೂಡ ಇದೇ ಧಾಟಿಯಲ್ಲೇ ಮಾತನಾಡಲಾರಂಭಿಸಿದೆ. ಲಸಿಕೆ ಸದ್ಯಕ್ಕೆ ದೊರೆಯುವ ಬಗ್ಗೆ ವೈಜ್ಞಾನಿಕ ವಲಯವೂ ಅನುಮಾನ ವ್ಯಕ್ತಪಡಿಸುತ್ತಿದೆ.

ಈ ಹೋರಾಟದಲ್ಲಿ ಸರ್ಕಾರ, ಆರೋಗ್ಯ ಇಲಾಖೆಗಳಷ್ಟೇ ಅಲ್ಲದೇ, ಕಂಪೆನಿಗಳು, ಉದ್ಯೋಗದಾತರೂ ಕೈಜೋಡಿಸಬೇಕಿದೆ. ಎಲ್ಲಕ್ಕಿಂತ ಮುಖ್ಯವಾಗಿ ಸಾಮಾನ್ಯ ಜನರೂ ಸುರಕ್ಷತಾ ಕ್ರಮಗಳನ್ನು ದೈನಂದಿನ ಅಂಗವಾಗಿ ರೂಢಿಸಿಕೊಳ್ಳಲೇಬೇಕಿದೆ.

ಟಾಪ್ ನ್ಯೂಸ್

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

Wild Elephant ದಾಳಿ ಸಮಸ್ಯೆ: ವೈಜ್ಞಾನಿಕ ಪರಿಹಾರ ಅಗತ್ಯ

Wild Elephant ದಾಳಿ ಸಮಸ್ಯೆ: ವೈಜ್ಞಾನಿಕ ಪರಿಹಾರ ಅಗತ್ಯ

Terror 2

Terrorism ನಿಗ್ರಹ ಎಲ್ಲ ದೇಶಗಳ ಧ್ಯೇಯವಾಗಲಿ

1-aww

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಸರಕಾರ ತುರ್ತು ಗಮನ ನೀಡಲಿ

14-editorial

Campaigns: ಪ್ರಚಾರದಲ್ಲಿ ದ್ವೇಷ ಭಾಷಣ: ಸ್ವಯಂ ನಿಯಂತ್ರಣ ಅಗತ್ಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.