ವಿಶ್ವ ಆರೋಗ್ಯ ಸಂಸ್ಥೆಯ ಮೇಲೆ ಅಮೆರಿಕ ಚಾಟಿ


Team Udayavani, Apr 18, 2020, 2:06 AM IST

ವಿಶ್ವ ಆರೋಗ್ಯ ಸಂಸ್ಥೆಯ ಮೇಲೆ ಅಮೆರಿಕ ಚಾಟಿ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಚೀನ ಹಾಗೂ ಅದರ ಕುಮ್ಮಕ್ಕಿನಿಂದ ವಿಶ್ವ ಆರೋಗ್ಯ ಸಂಸ್ಥೆಯು ಕೋವಿಡ್ 19 ವೈರಸ್ ಮಹಾಮಾರಿಯ ಅಪಾಯವನ್ನು ಮುಚ್ಚಿಟ್ಟಿದ್ದರಿಂದಲೇ ಇಂದು ಪ್ರಪಂಚ ಆಪತ್ತಿಗೆ ಸಿಲುಕಿದೆ ಎಂದು ಆರಂಭದಿಂದಲೂ ಅಮೆರಿಕ ಸೇರಿದಂತೆ ಅನೇಕ ರಾಷ್ಟ್ರಗಳು ಆರೋಪಿಸುತ್ತಲೇ ಬಂದಿದ್ದವು.

ಈ ವಿಚಾರವಾಗಿ ಅಮೆರಿಕ ಅಧ್ಯಕ್ಷ ಟ್ರಂಪ್‌ ಆರೋಗ್ಯ ಸಂಸ್ಥೆಯ ಮೇಲೆ ಕೆಲ ದಿನಗಳಿಂದ ಆರೋಪ ಮಾಡುತ್ತಾ ಬಂದಿದ್ದರು. ಈಗ ಟ್ರಂಪ್‌, ಕೊರೊನಾ ಸಾಂಕ್ರಾಮಿಕ ಹರಡುವಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಪಾತ್ರದ ಬಗ್ಗೆ ತನಿಖೆಯಾಗುವವರೆಗೂ ಅಮೆರಿಕ ಈ ಸಂಸ್ಥೆಗೆ ಹಣ ಸಹಾಯ ಮಾಡುವುದಿಲ್ಲ(ತಡೆಹಿಡಿದಿದ್ದಾರೆ) ಎಂಬ ನಿರ್ಧಾರಕ್ಕೆ ಬಂದಿದ್ದಾರೆ.

ಗಮನಿಸಬೇಕಾದ ಸಂಗತಿಯೆಂದರೆ, ಆರಂಭದಿಂದಲೂ ಅಮೆರಿಕವೇ ವಿಶ್ವ ಆರೋಗ್ಯ ಸಂಸ್ಥೆಗೆ ಅತ್ಯಧಿಕ ಧನಸಹಾಯ ಮಾಡುತ್ತಾ ಬಂದಿತ್ತು. ಆದರೂ ವಿಶ್ವ ಆರೋಗ್ಯ ಸಂಸ್ಥೆ ಕಡಿಮೆ ದೇಣಿಗೆ ನೀಡುತ್ತಿದ್ದ ಚೀನ ಪರ ಇದೆ, ಅದರ ತಪ್ಪುಗಳನ್ನು ಮುಚ್ಚಿಡುತ್ತಿದೆ ಎಂಬುದು ಟ್ರಂಪ್‌ ಅವರ ಆರೋಪ.

ಆದರೆ ಈ ವೇಳೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆಗೆ ಹಣ ಸಹಾಯವನ್ನು ನಿಲ್ಲಿಸುವುದು ಅಪಾಯಕಾರಿಯಾಗಿ ಪರಿಣಮಿಸಬಹುದು ಎಂದೂ ಎಚ್ಚರಿಸಲಾಗುತ್ತಿದೆ. ಮೈಕ್ರೊಸಾಫ್ಟ್ ಸ್ಥಾಪಕ ಬಿಲ್‌ಗೇಟ್ಸ್‌ ಕೂಡ ಹೀಗೆಯೇ ಎಚ್ಚರಿಸಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆಯ ಅಗತ್ಯ ಹಿಂದೆಂದಿಗಿಂತಲೂ ಈಗ ಅಧಿಕವಿದೆ, ಡಬ್ಲೂಎಚ್‌ಓ ಪ್ರಯತ್ನದಿಂದಾಗಿ ಕೋವಿಡ್‌-19 ಹರಡುವಿಕೆ ತಗ್ಗುತ್ತಿದೆ ಎಂದು ಗೇಟ್ಸ್‌ ಹೇಳುತ್ತಾರೆ.

ಗಮನಿಸಬೇಕಾದ ಸಂಗತಿಯೆಂದರೆ, ಆಫ್ರಿಕನ್‌ ರಾಷ್ಟ್ರಗಳಲ್ಲಿ ಮಹಾರೋಗಗಳ ವಿರುದ್ಧ ಹೋರಾಟ ನಡೆಸಿರುವ ಗೇಟ್ಸ್‌ ಫೌಂಡೇಷನ್‌ ಕೂಡ ಪ್ರತಿವರ್ಷ ವಿಶ್ವ ಆರೋಗ್ಯ ಸಂಸ್ಥೆಗೆ ಭಾರೀ ಪ್ರಮಾಣದಲ್ಲಿ ಹಣ ಸಹಾಯ ಮಾಡುತ್ತಾ ಬಂದಿದೆ. ಒಂದಂತೂ ನಿಜ.

ಅಮೆರಿಕದಿಂದ ಹಣ ಸಹಾಯ ನಿಂತಿತು ಎಂದರೆ ನಿಸ್ಸಂಶಯವಾಗಿಯೇ ಕೋವಿಡ್ 19 ವೈರಸ್ ವಿರುದ್ಧದ ಹೋರಾಟಕ್ಕೆ ದೊಡ್ಡ ಅಡಚಣೆ ಎದುರಾಗಲಿದೆ. ಆದರೆ ಇದೇ ವೇಳೆಯಲ್ಲೇ, ವಿಶ್ವ ಆರೋಗ್ಯ ಸಂಸ್ಥೆಯಷ್ಟೇ ಅಲ್ಲದೇ, ವಿಶ್ವಸಂಸ್ಥೆಯ ವಿವಿಧ ಅಂಗಗಳಲ್ಲಿಯೂ ಚೀನದ ಅಧಿಪತ್ಯ ಅಧಿಕವಾಗುತ್ತಿದ್ದು, ಈಗಲಾದರೂ ವಿಶ್ವಸಮುದಾಯ ಒಕ್ಕೊರಲಲ್ಲಿ ಈ ಸಂಸ್ಥೆಗಳಿಗೆ ಎಚ್ಚರಿಸಲೇಬೇಕಿದೆ. ಇನ್ನು ವಿಶ್ವ ಆರೋಗ್ಯ ಸಂಸ್ಥೆ ತಿಳಿದೂ ತಿಳಿದೂ ಚೀನದ ಎಡವಟ್ಟುಗಳಿಗೆ ಪರದೆ ಎಳೆಯುವ ಕೆಲಸ ಮಾಡಿದೆಯೇ ಎನ್ನುವ ಬಗ್ಗೆಯೂ ತನಿಖೆಯಾಗಬೇಕಿದೆ.

ಇಂದು ಪ್ರಪಂಚದಾದ್ಯಂತ ಕೋವಿಡ್ 19 ವೈರಸ್ ಸೋಂಕಿತರ ಸಂಖ್ಯೆ 20ಲಕ್ಷಕ್ಕೂ ಅಧಿಕವಾಗಿದೆ. 1 ಲಕ್ಷಕ್ಕೂ ಅಧಿಕ ಜನ ಮೃತಪಟ್ಟಿದ್ದಾರೆ. ಈ ಸಾಂಕ್ರಾಮಿಕವನ್ನು ಸೋಲಿಸುವಂಥ ಪರಿಣಾಮಕಾರಿ ದಾರಿ ಈಗಲೂ ಗೋಚರಿಸುತ್ತಿಲ್ಲ. ಅದರಲ್ಲೂ ದೊಡ್ಡಣ್ಣ ಅಮೆರಿಕದ ಪರಿಸ್ಥಿತಿಯಂತೂ ಹೀನಾಯವಾಗಿದೆ. ಅಲ್ಲಿನ ಆರ್ಥಿಕತೆ ನೆಲಕಚ್ಚುವ ಹಂತದಲ್ಲಿದೆ. ಅಲ್ಲದೇ, ಈ ವರ್ಷದಲ್ಲಿ ಅಲ್ಲಿ ಅಧ್ಯಕ್ಷೀಯ ಚುನಾವಣೆಗಳೂ ನಡೆಯಬೇಕಿದೆ.

‘ಹೀಗಾಗಿ, ಟ್ರಂಪ್‌ ತಮ್ಮ ವೈಫ‌ಲ್ಯವನ್ನು ಮುಚ್ಚಿಕೊಳ್ಳಲು ಎಲ್ಲರತ್ತಲೂ ಬೆರಳು ತೋರಿಸುತ್ತಾ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ, ವಿಶ್ವ ಆರೋಗ್ಯ ಸಂಸ್ಥೆ-ಚೀನವನ್ನು ಕಟಕಟೆಯಲ್ಲಿ ನಿಲ್ಲಿಸುತ್ತಿದ್ದಾರೆ’ ಎನ್ನುವ ಆರೋಪವೂ ಇದೆ.

ಆದರೆ, ಈ ಜಾಗತಿಕ ಸಂಸ್ಥೆಯೇನಾದರೂ ಆರಂಭದಲ್ಲೇ ಚೀನದಲ್ಲಿನ ನಿಜ ಸ್ಥಿತಿಯನ್ನು ಅವಲೋಕಿಸಿ ಜಗತ್ತಿಗೆ ಎಚ್ಚರಿಸಿದ್ದರೆ, ಇಂದು ರೋಗ ಇಷ್ಟು ತೀವ್ರತೆ ಪಡೆಯುತ್ತಿರಲಿಲ್ಲವೇನೋ. ಸತ್ಯವೇನೆಂದರೆ, ಆರಂಭಿಕ ಕೆಲವು ತಪ್ಪುಗಳ ನಂತರ ವಿಶ್ವ ಆರೋಗ್ಯ ಸಂಸ್ಥೆ ಎಚ್ಚೆತ್ತು ಈಗ ರೋಗ ನಿಯಂತ್ರಣಕ್ಕೆ ಬಹಳ ಯತ್ನಿಸುತ್ತಿದೆ.

ಹೀಗಾಗಿ, ವಿಶ್ವ ಆರೋಗ್ಯ ಸಂಸ್ಥೆಗೆ ದೇಣಿಗೆಯನ್ನು ನಿಲ್ಲಿಸುವುದರಿಂದ ಅಮೆರಿಕಕ್ಕೆ ತಾತ್ಕಾಲಿಕವಾಗಿ ಸಿಟ್ಟು ಕಡಿಮೆಯಾಗಬಹುದೇನೋ, ಆದರೆ, ಇದರಿಂದಾಗಿ ಪ್ರಪಂಚದ ಮೇಲಂತೂ ಭಾರೀ ಒತ್ತಡ ಬೀಳಲಿದೆ. ಸದ್ಯಕ್ಕೆ ಅಮೆರಿಕ ಈ ವಿಚಾರದಲ್ಲಿ ತನ್ನ ಮನಸ್ಸು ಬದಲಿಸಿಕೊಳ್ಳುವುದು ಒಳಿತು.

ಟಾಪ್ ನ್ಯೂಸ್

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

Wild Elephant ದಾಳಿ ಸಮಸ್ಯೆ: ವೈಜ್ಞಾನಿಕ ಪರಿಹಾರ ಅಗತ್ಯ

Wild Elephant ದಾಳಿ ಸಮಸ್ಯೆ: ವೈಜ್ಞಾನಿಕ ಪರಿಹಾರ ಅಗತ್ಯ

Terror 2

Terrorism ನಿಗ್ರಹ ಎಲ್ಲ ದೇಶಗಳ ಧ್ಯೇಯವಾಗಲಿ

1-aww

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಸರಕಾರ ತುರ್ತು ಗಮನ ನೀಡಲಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.