Editorial: ರೆಪೊ ದರದಲ್ಲಿ ಯಥಾಸ್ಥಿತಿ: ಆರ್‌ಬಿಐ ಜಾಣ್ಮೆಯ ನಡೆ


Team Udayavani, Apr 6, 2024, 12:34 PM IST

7-rbi

ಭಾರತೀಯ ರಿಸರ್ವ್‌ ಬ್ಯಾಂಕ್‌ನ ಪ್ರಸಕ್ತ ಆರ್ಥಿಕ ಸಾಲಿನ ಮೊದಲ ಹಣ ಕಾಸು ನೀತಿಯನ್ನು ಶುಕ್ರವಾರ ಪ್ರಕಟಿಸಿದ್ದು, ರೆಪೊ ದರದಲ್ಲಿ ಯಾವುದೇ ಬದಲಾವಣೆ ಮಾಡದೆ ಯಥಾಸ್ಥಿತಿಯನ್ನು ಕಾಯ್ದುಕೊಂಡಿದೆ. ಸತತ ಏಳನೇ ಬಾರಿಗೆ ಆರ್‌ಬಿಐ ರೆಪೊ ದರವನ್ನು ಶೇ. 6.5ರಲ್ಲಿಯೇ ಮುಂದುವರಿಸುವ ಮೂಲಕ ಎಚ್ಚರಿಕೆಯ ನಡೆಯನ್ನು ಇರಿಸಿದೆ. 2023ರ ಫೆಬ್ರವರಿಯಲ್ಲಿ ಆರ್‌ ಬಿಐ ರೆಪೊ ದರದಲ್ಲಿ ಬದಲಾವಣೆ ಮಾಡಿತ್ತು.

ಚಿಲ್ಲರೆ ಹಣದುಬ್ಬರವನ್ನು ಶೇ. 4ರ ಗಡಿಯಲ್ಲಿರಿಸುವ ಗುರಿಯನ್ನು ಆರ್‌ ಬಿಐ ಹಾಕಿಕೊಂಡಿದ್ದು ಫೆಬ್ರವರಿಯಲ್ಲಿ ಆಹಾರ ವಸ್ತುಗಳ ಬೆಲೆಯಲ್ಲಿನ ಹೆಚ್ಚಳದಿಂದಾಗಿ ಹಣದುಬ್ಬರ ದರ ಶೇ. 5.1ರಷ್ಟಾಗಿತ್ತು. ಇನ್ನು ಜೂನ್‌ವರೆಗೆ ದೇಶದೆಲ್ಲೆಡೆ ತಾಪಮಾನ ಅಧಿಕವಾಗಿರುವುದರಿಂದ ತರಕಾರಿ ಸಹಿತ ಆಹಾರ ಪದಾರ್ಥಗಳ ಬೆಲೆ ಏರುಗತಿಯಲ್ಲಿರುವ ಸಾಧ್ಯತೆಗಳು ದಟ್ಟವಾಗಿರುವುದು ಮತ್ತು ಜಾಗತಿಕ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿರಿಸಿ ಆರ್‌ಬಿಐನ ಹಣ ಕಾಸು ನೀತಿ ಪರಾಮರ್ಶೆ ಸಮಿತಿ(ಎಂಪಿಸಿ) ಈ ನಿರ್ಧಾರವನ್ನು ಕೈಗೊಂಡಿದೆ. ತನ್ಮೂಲಕ ದೇಶದ ಆರ್ಥಿಕ ಪ್ರಗತಿ ಮತ್ತು ಸ್ಥಿರತೆಗೆ ಹೆಚ್ಚಿನ ಒತ್ತನ್ನು ನೀಡಿದೆ.

ವಿಶ್ವದ ಇತರ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತದ ಆರ್ಥಿಕತೆ ಪ್ರಗತಿ ಪಥದಲ್ಲಿ ಮುನ್ನಡೆದಿದೆಯಾದರೂ ಸದ್ಯದ ಸ್ಥಿತಿಯಲ್ಲಿ ಬಡ್ಡಿ ದರಗಳಲ್ಲಿ ಬದಲಾವಣೆ ಮಾಡಿದಲ್ಲಿ ಆರ್ಥಿಕ ಪ್ರಗತಿಯ ನಾಗಾಲೋಟಕ್ಕೆ ತಡೆಯಾಗಿ ಪರಿಣಮಿಸುವ ಸಾಧ್ಯತೆಗಳಿವೆ ಎಂಬ ತೀರ್ಮಾನಕ್ಕೆ ಎಂಪಿಸಿ ಬಂದಿದೆ. ಆರ್ಥಿಕ ತಜ್ಞರು ಮತ್ತು ಮಾರುಕಟ್ಟೆ ವಿಶ್ಲೇಷಕರ ನಿರೀಕ್ಷೆ ಕೂಡ ಇದೇ ಆಗಿತ್ತು.

ಆರ್‌ಬಿಐ ಗವರ್ನರ್‌ ಈ ನಿರ್ಧಾರ ಪ್ರಕಟಿಸಿದ ಬಳಿಕ ಷೇರು ಮಾರುಕಟ್ಟೆಯಲ್ಲಿ ಚೇತರಿಕೆ ಕಂಡುಬಂದಿದ್ದು, ರೂಪಾಯಿ ಮೌಲ್ಯವೂ ಏರಿಕೆಯಾಗಿದೆ. ದೇಶದ ಆರ್ಥಿಕ ವ್ಯವಸ್ಥೆ, ಪ್ರಗತಿ, ಎಲ್ಲ ಕ್ಷೇತ್ರಗಳಲ್ಲೂ ಕಂಡುಬರುತ್ತಿರುವ ಚೇತರಿಕೆಯ ವಾತಾವರಣ, ಹಣದುಬ್ಬರ ನಿಯಂತ್ರಣದಲ್ಲಿರುವುದು ಸಹಿತ ಎಲ್ಲ ಸಕಾರಾತ್ಮಕ ಬೆಳವಣಿಗೆಗಳ ಕಾರಣದಿಂದಾಗಿ ಆರ್‌ಬಿಐ ಈ ಬಾರಿಯಾದರೂ ರೆಪೊ ದರದಲ್ಲಿ ಒಂದಿಷ್ಟು ಇಳಿಕೆ ಮಾಡುವ ಮೂಲಕ ಸಾಲಗಾರರಿಗೆ ಅದರಲ್ಲೂ ಮುಖ್ಯವಾಗಿ ಗೃಹ ಸಾಲಗಾರರ ನೆರವಿಗೆ ಬಂದೀತು ಎಂಬ ನಿರೀಕ್ಷೆ ಮತ್ತೆ ಹುಸಿಯಾಗಿದೆ. ರೆಪೊ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿರುವುದರಿಂದಾಗಿ ಸಾಲದ ಕಂತು ಮತ್ತು ಬಡ್ಡಿದರದಲ್ಲಿ ಯಾವುದೇ ಬದಲಾವಣೆಯಾಗದು.

ಏತನ್ಮಧ್ಯೆ ಎಂಪಿಸಿ ಹಾಲಿ ಸಭೆಯಲ್ಲಿ ದೇಶೀಯ ಮತ್ತು ಜಾಗತಿಕ ಆರ್ಥಿಕ ಪರಿ ಸ್ಥಿತಿ ಕುರಿತಂತೆಯೂ ಚರ್ಚೆ ನಡೆಸಿದ್ದು, ಆ ಬಳಿಕವೇ ಈ ಎಚ್ಚರಿಕೆಯ ಮತ್ತು ಚಾಣಾಕ್ಷ ನಡೆಯನ್ನು ಇರಿಸಿದೆ. ಇದೇ ವೇಳೆ ಆರ್‌ಬಿಐ ಕೆಲವೊಂದು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದ್ದು, ಡಿಜಿಟಲ್‌ ವ್ಯವಹಾರಕ್ಕೆ ಇನ್ನಷ್ಟು ಉತ್ತೇಜನ ನೀಡಲು ಮುಂದಾಗಿದೆ.

ಚಿಲ್ಲರೆ ನೇರ ಹೂಡಿಕೆದಾರರಿಗೆ ಹೊಸ ಮೊಬೈಲ್‌ ಆ್ಯಪ್‌, ನಗದು ಠೇವಣಿಗಾಗಿ ಯುಪಿಐ ಬಳಕೆ ಮತ್ತಿತರ ಯೋಜನೆಗಳನ್ನು ಪ್ರಕಟಿಸಿದೆ. ಒಟ್ಟಿನಲ್ಲಿ ಆರ್‌ಬಿಐ ದೇಶ ಮತ್ತು ಜಾಗತಿಕ ಆರ್ಥಿಕ ದಿಗ್ಗಜ ರಾಷ್ಟ್ರಗಳ ಹಣಕಾಸು ವ್ಯವಸ್ಥೆ, ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಪರಾಮರ್ಶಿಸಿ ಯಾವುದೇ ದಿಢೀರ್‌ ಲಾಭದಾಯಕವಾದ ನಿರ್ಧಾರಕ್ಕೆ ಶರಣಾಗದೆ ದೇಶದ ಆರ್ಥಿಕ ಭವಿಷ್ಯವನ್ನು ಗಮನದಲ್ಲಿರಿಸಿ ಈ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಂದಿನ ಮುಂಗಾರು ಋತುವಿನಲ್ಲಿನ ವಿದ್ಯಮಾನಗಳನ್ನು ಅವಲೋಕಿಸಿ ಆಗಸ್ಟ್‌ ವೇಳೆಗಷ್ಟೇ ರೆಪೊ ದರದಲ್ಲಿ ಬದಲಾವಣೆಯನ್ನು ಮಾಡಲು ಚಿಂತನೆ ನಡೆಸಿರುವುದು ಸುಸ್ಪಷ್ಟ.

ಟಾಪ್ ನ್ಯೂಸ್

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.