ಭೂಕಂಪನ ಆತಂಕ: ಸರಕಾರ ಈಗಲೇ ಎಚ್ಚೆತ್ತುಕೊಳ್ಳಲಿ


Team Udayavani, Jul 4, 2022, 6:00 AM IST

earth-quake

ಕೊಡಗು, ದಕ್ಷಿಣ ಕನ್ನ ಡ ಸೇರಿದಂತೆ ರಾಜ್ಯದ ವಿವಿಧೆಡೆ ಕಳೆದ ತಿಂಗಳ ಮೂರನೇ ವಾರದಿಂದಲೂ ಭೂಮಿ ಕಂಪಿಸುತ್ತಲೇ ಇದೆ. ಈ ಕಂಪನದ ಆತಂಕ ಇದುವರೆಗೂ ತಗ್ಗಿಲ್ಲ. ಕೊಡಗಿನ ಜನರಂತೂ ಜೀವಭಯದಿಂದಲೇ ಬದುಕುತ್ತಿದ್ದಾರೆ.

ಜೂ. 23ರಿಂದ ಈ ಕಂಪನ ಆರಂಭವಾಗಿದ್ದು, ಇದುವರೆಗೆ ಸುಮಾರು ಎಂಟಕ್ಕೂ ಹೆಚ್ಚು ಬಾರಿ ಭೂಮಿ ಕಂಪಿಸಿದೆ. ಇದು ಕೇವಲ ಕೊಡಗು ಜಿಲ್ಲೆಗೆ ಮಾತ್ರ ಅನುಭವವಾದದ್ದಲ್ಲ. ಇದರ ಜತೆಗೆ ಮೈಸೂರು, ಹಾಸನ ಜಿಲ್ಲೆಯ ಕೆಲವು ಭಾಗಗಳಿಗೂ ಇದರ ಅನುಭವ ಉಂಟಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಜೂ. 25ರಿಂದ ಈಚೆಗೆ ಎರಡು ಬಾರಿ ಕಂಪನದ ಅನುಭವವಾಗಿದೆ.

ಎಲ್ಲಕ್ಕಿಂತ ಪ್ರಮುಖವಾಗಿ ಕೊಡಗು ಜಿಲ್ಲೆಯಲ್ಲಿ ಹೆಚ್ಚು ಬಾರಿ ಭೂಮಿ ಕಂಪಿಸಿರುವುದು ಆತಂಕಕ್ಕೆ ಕಾರಣವಾಗಿದೆ. ಇಲ್ಲಿನ ರೇಂಜರ್‌ ಬ್ಲಾಕ್‌, ನೇಗಳ್ಳಿ, ಮಡಿಕೇರಿ ತಾಲೂಕಿನ ದೇವಸ್ತೂರು, ಕರಿಕೆ, ಚೆಂಬು, ಪೆರಾಜೆ, ಗೂನಡ್ಕ, ಸಂಪಾಜೆ ಸೇರಿದಂತೆ ಹಲವಡೆ ಕಂಪನವಾಗಿತ್ತು. ಪದೇ ಪದೆ ಭೂಕಂಪನದ ಅನುಭವವಾಗಿರು ವುದರಿಂದ ಬೆಂಗಳೂರಿನ ಭೂವಿಜ್ಞಾನಿ ತಜ್ಞರು ಕೊಡಗು ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ¨ªಾರೆ. ಇವರು, ಇದೊಂದು ಸಹಜ ಪ್ರಕ್ರಿಯೆಯಾಗಿದ್ದು, ಆತಂಕ ಪಡಬೇಕಾಗಿಲ್ಲ ಎಂಬ ಅಭಯವನ್ನೂ ನೀಡಿದ್ದಾರೆ. ಆದರೆ ಜನರ ಪಾಲಿಗೆ ಮಾತ್ರ ಕಂಪನವೊಂದು ಕೆಟ್ಟ ಕನಸಿನ ಅನುಭವವಾಗಿದೆ.

ಇದಕ್ಕೆ ಕಾರಣವೂ ಇದೆ. 2018ರಲ್ಲಿ ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಆದ ಅನಾಹುತದ ಬಗ್ಗೆ ಎಲ್ಲರಿಗೂ ಅರಿವು ಇದ್ದೇ ಇದೆ. ವಿಚಿತ್ರವೆಂದರೆ ಈ ಅನಾಹುತವಾಗುವವರೆಗೆ, ಜಿಲ್ಲೆಯ ಕೆಲವು ಭಾಗಗಳಲ್ಲಿ ಇಂಥದ್ದೇ ಕಂಪನದ ಅನುಭವವಾಗಿತ್ತು. ಆಗ ಕಂಪನದ ಬಗ್ಗೆ ಜನ ಅಷ್ಟೇನೂ ಭಯಬಿದ್ದಿರಲಿಲ್ಲ. ಆದರೆ ಅನಂತರದಲ್ಲಿ ಬಿದ್ದ ಭಾರೀ ಮಳೆಯಿಂದಾಗಿ ಭಾರೀ ಭೂಕುಸಿತಗಳು ಸಂಭವಿಸಿ ಅಸಂಖ್ಯಾಕ ಮನೆಗಳು ಬಿದ್ದುಹೋಗಿದ್ದವು. ಹಲವಾರು ಮಂದಿ ಸಾವನ್ನಪ್ಪಿದ್ದರು. ತಮ್ಮ ಹೊಲ, ಮನೆಗಳೆಲ್ಲ ಭೂಮಿ ಪಾಲಾಗಿದ್ದವು. ಈಗಲೂ ಕೊಡಗು ಜನರಲ್ಲಿ ಇದೇ ಭಯ ಇದೆ. 2018ರಂತೆಯೇ ಮತ್ತೆ ಆಗಬಹುದೇ ಎಂಬ ಆತಂಕವೂ ಎದುರಾಗಿದೆ.

ಈ ಎಲ್ಲ ಅಂಶಗಳನ್ನು ಗಮನದಲ್ಲಿ ಇರಿಸಿಕೊಂಡು, ರಾಜ್ಯ ಸರಕಾರ ಜನರಿಗೆ ಅಭಯ ನೀಡುವ ಕೆಲಸ ಮಾಡಬೇಕು. ಇದು ಕೇವಲ ಕೊಡಗು ಜಿಲ್ಲೆಗೆ ಮಾತ್ರ ಅನ್ವಯವಾಗುವುದಿಲ್ಲ. ಈಗ ಎಲ್ಲೆಲ್ಲಿ ಕಂಪನದ ಅನುಭವವಾಗಿದೆಯೋ ಅಲ್ಲಿ ಸೂಕ್ತ ರೀತಿಯ ಕ್ರಮ ಕೈಗೊಳ್ಳಬೇಕು. ಅಂದರೆ ಭೂಕಂಪನವಾಗಿರುವ ಸ್ಥಳಗಳಲ್ಲಿರುವ ಜನರನ್ನು ಬೇರೆಡೆಗೆ ಸ್ಥಳಾಂತರಿಸುವ ಕೆಲಸವನ್ನು ಮಾಡಬೇಕಾಗಿದೆ. ಜತೆಗೆ ಭೂ ವಿಜ್ಞಾನಿಗಳಿಂದ ಪರೀಕ್ಷೆ ನಡೆಸಿ, ಮಣ್ಣು ಸಡಿಲವಾಗುತ್ತಿದೆಯೇ ಎಂಬ ಬಗ್ಗೆಯೂ ಪರಿಶೀಲನೆ ನಡೆಸಬೇಕು.

ಈಗಾಗಲೇ ಮಡಿಕೇರಿ ಸುತ್ತಮುತ್ತ ಭಾರೀ ಮಳೆಯಾಗುತ್ತಿದ್ದು, ಕಂಪನದ ಜತೆಗೆ ಇದೂ ಜನರನ್ನು ಆತಂಕಕ್ಕೀಡುಮಾಡಿದೆ. ಕಾಲ ಮೀರಿದ ಮೇಲೆ ಕ್ರಮಕ್ಕೆ ಮುಂದಾಗುವುದಕ್ಕಿಂತ, ಈಗಲೇ ಎಚ್ಚೆತ್ತು ಇಲ್ಲಿನ ಸ್ಥಿತಿ ಅವಲೋಕಿಸಿದರೆ ಉತ್ತಮ. ಇದರಿಂದ ಅಲ್ಲಿನ ಜನರಿಗೆ ಒಂದಷ್ಟು ನಿರ್ಲಿಪ್ತತೆಯಾದರೂ ಸಿಕ್ಕಂತೆ ಆಗುತ್ತದೆ.

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.