ಚುನಾವಣ ಸುಧಾರಣ ಚರ್ಚೆ: ಹೊಸ ಹೊಳಹು ಮೂಡಲಿ


Team Udayavani, Mar 30, 2022, 6:00 AM IST

ಚುನಾವಣ ಸುಧಾರಣ ಚರ್ಚೆ: ಹೊಸ ಹೊಳಹು ಮೂಡಲಿ

ಚುನಾವಣೆಗಳಲ್ಲಿ ಭ್ರಷ್ಟಾಚಾರ ರಹಿತ, ಸಚ್ಛಾರಿತ್ರ್ಯ ಉಳ್ಳವರೇ ಆಯ್ಕೆಯಾಗಲಿ, ಪಕ್ಷಾಂತರ ನಿಲ್ಲಲಿ, ಚುನಾವಣೆ ಪ್ರಚಾರಕ್ಕಾಗಿ ಮಾಡಲಾಗುತ್ತಿರುವ ಖರ್ಚು ವೆಚ್ಚಗಳು ನಿಲ್ಲಲಿ, ಯಾವುದೇ ಕಾರಣಕ್ಕೂ ಚುನಾವಣೆಗಳಲ್ಲಿ ಮದ್ಯದ ಹಾವಳಿ ನುಸುಳದಂತಿರಲಿ, ಅಭ್ಯರ್ಥಿಗಳು ಪಾರದರ್ಶಕವಾಗಿರಲಿ, ಮತಕ್ಕಾಗಿ ನೋಟು ನೀಡುವ ಸಂಪ್ರದಾಯಗಳು ಕೊನೆಗೊಳ್ಳಲಿ ಎಂಬಿತ್ಯಾದಿ ವಿಚಾರಗಳು ಬಹು ಹಿಂದಿನಿಂದಲೂ ಕೇಳಿಬರುತ್ತಿದ್ದು, ಇಲ್ಲಿಯವರೆಗೆ ಇದಕ್ಕೊಂದು ತಾರ್ಕಿಕ ಅಂತ್ಯ ಸಿಕ್ಕಿಲ್ಲ.

ಈಗಲೂ ಚುನಾವಣೆಗಳಲ್ಲಿ ಹಣ ಮತ್ತು ಮದ್ಯದ ಬಲ ತುಸು ಹೆಚ್ಚಾಗಿಯೇ ಕಂಡುಬರುತ್ತಿದ್ದು, ಇದಕ್ಕೆ ಕಡಿವಾಣ ಹಾಕುವಲ್ಲಿ ನಾವೆಲ್ಲರೂ ಸೋತಿದ್ದೇವೆ ಎಂಬುದು ನಿಜಕ್ಕೂ ಬೇಸರದ ವಿಚಾರವೇ. ಈಗ ಕರ್ನಾಟಕ ವಿಧಾನಮಂಡಲದಲ್ಲಿ ಚುನಾವಣೆ ಸುಧಾರಣೆಗಾಗಿ ಸೋಮವಾರ ವಿಶೆೇಷ ಚರ್ಚೆ ಆರಂಭವಾಗಿದ್ದು, ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕೆಲವೊಂದು ಅಂಶಗಳನ್ನು ಪ್ರಸ್ತಾವಿಸಿದ್ದಾರೆ. ವಿಧಾನಸಭೆಯಲ್ಲಿ ಕಾಗೇರಿ ಅವರು ಪ್ರಸ್ತಾವಿಸಿರುವ ಅಂಶಗಳು ಈಗಿನ ಕಾಲಘಟ್ಟಕ್ಕೆ ಉಚಿತವೇ ಆಗಿವೆ. ಈ ಬಗ್ಗೆ ಎಲ್ಲ ರಾಜಕೀಯ ಪಕ್ಷಗಳು ಗಮನಹರಿಸಬೇಕು ಎಂಬುದು ಎಲ್ಲರ ಕಳಕಳಿ. ಇಂಥದ್ದೊಂದು ಗಂಭೀರ ಹಾಗೂ ಅಗತ್ಯ ವಿಚಾರದ ಬಗ್ಗೆ ಚರ್ಚೆಗೆ ನಾಂದಿ ಹಾಡಿರುವುದು ಸ್ವಾಗತಾರ್ಹ.

ಇತ್ತೀಚಿನ ದಿನಗಳಲ್ಲಿ ಚುನಾವಣೆಗಳೆಂದರೆ, ಅವು ದುಡ್ಡು ಮಾಡಿಕೊಳ್ಳುವ, ಹಂಚುವ ಮತ್ತು ಹಿಂಸಾಚಾರಕ್ಕೆ ಕಾರಣವಾಗುವ ಸಂಗತಿಗಳಾಗಿವೆ. ದೇಶದ ಕೆಲವು ರಾಜ್ಯಗಳಲ್ಲಿ ಹಿಂಸಾಚಾರವಿಲ್ಲದೇ ಚುನಾವಣೆ ನಡೆಯುವುದಿಲ್ಲ ಅನ್ನುವಷ್ಟರ ಮಟ್ಟಿಗೆ ಇವು ಹಾಸುಹೊಕ್ಕಾಗಿವೆ. ಚುನಾವಣೆಯಲ್ಲಿ ಒಂದು ಪಕ್ಷವನ್ನು ಬಿಟ್ಟು, ಬೇರೊಂದು ಪಕ್ಷಕ್ಕೆ ಬೆಂಬಲ ನೀಡಿದರೆ, ಅವರನ್ನು ಕೊಲ್ಲುವುದು, ಅವರ ಮೇಲೆ ದಾಳಿ ಮಾಡುವಂಥ ಘಟನೆಗಳು ನಡೆಯುತ್ತಲೇ ಇವೆ. ಹೀಗಾಗಿ ಕೇಂದ್ರ ಚುನಾವಣ ಆಯೋಗಕ್ಕೆ ಶಾಂತ ರೀತಿಯಲ್ಲಿ ಚುನಾವಣೆಗಳನ್ನು ಮಾಡಿ ಮುಗಿಸುವುದೇ ದೊಡ್ಡ ತ್ರಾಸದಾಯಕ ಕೆಲಸವಾಗಿಬಿಟ್ಟಿದೆ. 50 ವರ್ಷಗಳ ಹಿಂದಿನ ವಾತಾವರಣಕ್ಕೂ, ಈಗಿನ ವಾತಾವರಣಕ್ಕೂ ಅಜಗಜಾಂತರವಿದೆ. ಆಗ ದೇಶದಲ್ಲಿ ಕಲಿಕೆ ಇಲ್ಲದವರೇ ಹೆಚ್ಚಾಗಿದ್ದರು. ಆದರೆ, ಈಗ ಪರಿಸ್ಥಿತಿ ಬದಲಾಗಿದೆ.

ದೇಶದಲ್ಲಿ ಅನಕ್ಷರಸ್ಥರಿಗಿಂತ ಅಕ್ಷರಸ್ಥರೇ ಹೆಚ್ಚಾಗಿದ್ದಾರೆ. ಯಾರಿಗೆ ಮತ ಹಾಕಬೇಕು, ಯಾರಿಗೆ ಹಾಕುವುದು ಬೇಡ ಎಂಬ ಜ್ಞಾನವೂ ಜನರಲ್ಲಿ ಹೆಚ್ಚಾಗಿದೆ. ಉತ್ತಮ ಆಡಳಿತ ಕೊಡುವವರಿಗೆ ಮತ ಹಾಕಬೇಕು ಎಂಬ ಅರಿವೂ ಹೆಚ್ಚಾಗಿದೆ. ಇಷ್ಟೆಲ್ಲ ಆದರೂ, ಇನ್ನೂ ಚುನಾವಣೆಗಳೆಂದರೆ, ಕಾಸು ಮಾಡಿಕೊಳ್ಳುವ ಅವಕಾಶಗಳು ಎಂಬ ಅಭಿಪ್ರಾಯ ಜನರಲ್ಲಿ ಇರುವುದು ದುರದೃಷ್ಟಕರ. ಇಂಥ ಸಂದರ್ಭದಲ್ಲಿ ಇಡೀ ಚುನಾವಣೆ ವ್ಯವಸ್ಥೆಗೆ ತಕ್ಕ ಮಾರ್ಪಾಡು ಮಾಡಬೇಕಾಗಿರುವುದು ಅನಿವಾರ್ಯವೇ ಆಗಿದೆ. ಚುನಾವಣೆಗಳು ಧನಾದೇಶಗಳಾಗದೇ ಜನಾದೇಶಗಳಾಗಬೇಕು.

ಅಭ್ಯರ್ಥಿಗಳು ಕೋಟಿ ಕೋಟಿಗಳ ಲೆಕ್ಕಾಚಾರದಲ್ಲಿ ಹಣ ವೆಚ್ಚ ಮಾಡದೇ ಚುನಾವಣೆ ಎದುರಿಸುವ ವಾತಾವರಣ ಸೃಷ್ಟಿಯಾಗಬೇಕು. ಚುನಾವಣ ವಿಧಾನ ಮತ್ತು ಅಭ್ಯರ್ಥಿಗಳ ಎಲ್ಲ ವಿವರಗಳು ಪಾರದರ್ಶಕವಾಗಿ ಜನರಿಗೆ ಸಿಗುವಂತಿರಬೇಕು. ಚುನಾವಣ ವೆಚ್ಚ ಮಿತಿ ವಿಚಾರದಲ್ಲಿ ಅಭ್ಯರ್ಥಿಗಳು ಬದಲಿ ಮಾರ್ಗ ಹಿಡಿಯದಂತೆ ನೋಡಿಕೊಳ್ಳುವ ದೃಢ ಕಾನೂನುಗಳು ಜಾರಿಗೆ ಬರಬೇಕು.  ಈ ನಿಟ್ಟಿನಲ್ಲಿ ವಿಧಾನಸಭೆಯಲ್ಲಿ ನಡೆಯುತ್ತಿರುವ ಚರ್ಚೆ ಹೊಸ ಹೊಳಹುಗಳನ್ನು ನೀಡಿ, ಸುಧಾರಣ ಕ್ರಮದಲ್ಲಿ ಇಡೀ ದೇಶಕ್ಕೆ ಅನುಕೂಲವಾಗುವ ಮಾರ್ಗದರ್ಶನವನ್ನು ಸದನ ನೀಡಲಿ ಎನ್ನುವುದು ಎಲ್ಲರ ಆಶಯ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.