ಸ್ಥಳೀಯರಿಗೆ ನೌಕರಿ; ಚಿಂತನಾರ್ಹ ನಿರ್ಧಾರ


Team Udayavani, Feb 7, 2019, 12:30 AM IST

7.jpg

ಉದ್ದಿಮೆಗಳಲ್ಲಿ ಶೇ. 70 ನೌಕರಿಗಳನ್ನು ಸ್ಥಳೀಯರಿಗೆ ಮೀಸಲಿಡುವ ಮಧ್ಯಪ್ರದೇಶ ಸರಕಾರದ ಆದೇಶ ಚುನಾವಣಾ ಕಾಲದಲ್ಲಿ ಸಣ್ಣದೊಂದು ಸಂಚಲನಕ್ಕೆ ಕಾರಣವಾಗಿದೆ. ವಿಧಾನಸಭೆ ಚುನಾವಣೆಯ ಪ್ರಣಾಳಿಕೆಯಲ್ಲೇ ಕಾಂಗ್ರೆಸ್‌ ಸ್ಥಳೀಯರಿಗೆ ನೌಕರಿ ಮೀಸಲಿಡುವ ವಾಗ್ಧಾನ ಮಾಡಿತ್ತು. ಅದನ್ನೀಗ ಈಡೇರಿಸಿದ್ದೇವೆ ಎಂದು ಸರಕಾರ ಹೇಳುತ್ತಿದೆ. 

ಸ್ಥಳೀಯ ಯುವಕರಿಗೆ ಸಿಗಬೇಕಾಗಿದ್ದ ನೌಕರಿಯನ್ನು ಬಿಹಾರ ಮತ್ತು ಉತ್ತರ ಪ್ರದೇಶದವರು ಕಸಿದುಕೊಳ್ಳುತ್ತಿರುವುದರಿಂದ ಈ ಆದೇಶ ಹೊರಡಿಸಬೇಕಾಯಿತು ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್‌ನಾಥ್‌ ತನ್ನ ನಿರ್ಧಾರಕ್ಕೆ ಸಮರ್ಥನೆಯನ್ನೂ ನೀಡಿದ್ದಾರೆ. ಈ ಆದೇಶ ಅನ್ವಯಿಸುವುದು ಡಿ ದರ್ಜೆ ನೌಕರಿಗಳಿಗೆ. ಈ ನೌಕರಿಗಳನ್ನು ಅನ್ಯ ರಾಜ್ಯದವರೂ ಕಿತ್ತುಕೊಳ್ಳುತ್ತಿದ್ದಾರೆ ಎಂದಿರುವ ಕಮಲ್‌ನಾಥ್‌ ಆರೋಪ ನಿಜವೂ ಹೌದು. ಮಧ್ಯಪ್ರದೇಶ ಎಂದಲ್ಲ, ಈಗ ಬಹುತೇಕ ಎಲ್ಲ ರಾಜ್ಯಗಳು ಈ ಸಮಸ್ಯೆಯನ್ನು ಎದುರಿಸುತ್ತಿವೆ. ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ಹೆಚ್ಚಿನೆಲ್ಲ ರಾಜ್ಯಗಳಲ್ಲಿ ಉತ್ತರ ಭಾರತದ ಕಾರ್ಮಿಕರು ತುಂಬಿಕೊಂಡಿದ್ದು, ಇವರಲ್ಲಿ ಬಾಂಗ್ಲಾದೇಶದ ಅಕ್ರಮ ನುಸುಳುಕೋರರು ಇದ್ದಾರೆ ಎನ್ನುವ ಆರೋಪವೂ ಇದೆ. 

ಹಾಗೆಂದು ಉದ್ದಿಮೆಗಳಲ್ಲಿ ಸ್ಥಳೀಯರಿಗೆ ನೌಕರಿ ಮೀಸಲಿಟ್ಟಿರುವ ರಾಜ್ಯಗಳಲ್ಲಿ ಮಧ್ಯಪ್ರದೇಶ ಮೊದಲೇನಲ್ಲ. ಈ ಹಿಂದೆಯೇ ಹಲವು ರಾಜ್ಯಗಳು ಈ ಪ್ರಯತ್ನವನ್ನು ಮಾಡಿವೆ.2008ರಲ್ಲೇ ಮಹಾರಾಷ್ಟ್ರದ ಕಾಂಗ್ರೆಸ್‌ ಸರಕಾರ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ತೀವ್ರ ಸ್ಥಳೀಯ ವಾದವನ್ನು ಎದುರಿಸುವ ಸಲುವಾಗಿ ಶೇ.80 ನೌಕರಿಯನ್ನು ಸ್ಥಳೀಯರಿಗೆ ಮೀಸಲಿಡುವ ಆದೇಶ ಹೊರಡಿಸಿತ್ತು. 2016ರಲ್ಲಿ ಕರ್ನಾಟಕ ಸರಕಾರವೂ ಈ ಮಾದರಿಯ ಪ್ರಯತ್ನ ಮಾಡಿದೆ. ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸರೋಜಿನಿ ಮಹಿಷಿ ವರದಿಯ ಆಧಾರದಲ್ಲಿ ಕನ್ನಡಿಗರಿಗೆ ಶೇ. 70 ನೌಕರಿ ಒದಗಿಸುವ ಪ್ರಸ್ತಾವ ಇಟ್ಟಿದ್ದರು. ಇದು ಆ ದಿನಗಳಲ್ಲಿ ಭಾರೀ ವಿವಾದಕ್ಕೊಳಗಾಗಿತ್ತು. ಅಲ್ಲದೆ ಕನ್ನಡಿಗರು ಯಾರು ಎಂಬ ಜಿಜ್ಞಾಸೆಗೂ ಕಾರಣವಾಗಿತ್ತು. ಕರ್ನಾಟಕ ಎಂದಲ್ಲ, ಪ್ರತಿ ರಾಜ್ಯದಲ್ಲೂ ಈಗ ಸ್ಥಳೀಯರು ಯಾರು ಎಂಬ ಜಿಜ್ಞಾಸೆ ಇದೆ. ಆ ರಾಜ್ಯದಲ್ಲೇ ಹುಟ್ಟಿದವರು ಮಾತ್ರ ಸ್ಥಳೀಯರಾಗುತ್ತಾರೆಯೇ ಅಥವಾ ಬೇರೆ ರಾಜ್ಯಗಳಿಂದ ಬಂದು ಹಲವಾರು ವರ್ಷಗಳಿಂದ ನೆಲೆಸಿದವರನ್ನೂ ಸ್ಥಳೀಯರೆಂದು ಪರಿಗಣಿಸಲು ಸಾಧ್ಯವೆ ಎಂಬ ಪ್ರಶ್ನೆಗೆ ಇನ್ನೂ ಸಮರ್ಪಕವಾದ ಉತ್ತರ ಸಿಕ್ಕಿಲ್ಲ. ಸ್ಥಳೀಯರಿಗೆ ನೌಕರಿ ಮೀಸಲಿಡುವಾಗ ಇಂಥ ಮೂಲಭೂತ ವಿಷಯಗಳತ್ತ ಗಮನ ಹರಿಸುವ ಅಗತ್ಯವೂ ಇದೆ. 

ಸಿಕ್ಕಿಂ, ತೆಲಂಗಾಣ ಮತ್ತಿತರ ರಾಜ್ಯಗಳೂ ನೌಕರಿಗಳನ್ನು ಸ್ಥಳೀಯರಿಗೆ ಮೀಸಲಿಡುವ ಪ್ರಯತ್ನಗಳನ್ನು ಮಾಡಿದ್ದವು. ಆದರೆ ಯಾವ ರಾಜ್ಯಕ್ಕೂ ಇದನ್ನು ಪರಿಪೂರ್ಣವಾಗಿ ಅನುಷ್ಠಾನಿಸಲು ಸಾಧ್ಯವಾಗಿಲ್ಲ ಎನ್ನುವುದು ವಾಸ್ತವ. ಇದಕ್ಕೆ ಹಲವಾರು ಕಾರಣಗಳಿರಬಹುದು. ಒಕ್ಕೂಟ ವ್ಯವಸ್ಥೆಯಲ್ಲಿ ಯಾರು ಯಾವ ರಾಜ್ಯದಲ್ಲೇ ಬೇಕಾದರೂ ಹೋಗಿ ನೌಕರಿ ಮಾಡುವ ಹಕ್ಕು ಹೊಂದಿರುವುದರಿಂದ ಈ ಮಾದರಿಯ ನಿರ್ಧಾರಗಳನ್ನು ಶೇ. 100ರಷ್ಟು ಕಟ್ಟುನಿಟ್ಟಾಗಿ ಜಾರಿಗೆ ತರುವುದು ಕಷ್ಟವೂ ಹೌದು. ಹೀಗೆ ಮಾಡಿದರೆ ಸಂವಿಧಾನ ಉಲ್ಲಂಘನೆಯ ಆರೋಪಕ್ಕೂ ಗುರಿಯಾಗಬೇಕಾಗುತ್ತದೆ. 

ಸ್ಥಳೀಯರಿಗೆ ನೌಕರಿ ಮೀಸಲಿಡುವ ಕುರಿತಾದ ಕಾನೂನಿನ ಅಂಶಗಳು ಮತ್ತು ಪರ ಹಾಗೂ ವಿರುದ್ಧವಾದ ನಿಲುಗಳೇನೇ ಇರಲಿ ಸದ್ಯದ ಪರಿಸ್ಥಿತಿಯಲ್ಲಿ ಹೀಗೊಂದು ನಿಯಮದ ಅಗತ್ಯ ಇದೆ ಎನ್ನುವುದರಲ್ಲಿ ತಕರಾರಿಲ್ಲ. ನಿರುದ್ಯೋಗವೇ ಈಗ ದೇಶ ಎದುರಿಸುತ್ತಿರುವ ಜ್ವಲಂತ ಸಮಸ್ಯೆ. ಹೀಗಿರುವಾಗ ಇರುವ ಒಂದಷ್ಟು ನೌಕರಿಯನ್ನು ಬೇರೆ ರಾಜ್ಯದವರು ಕಿತ್ತುಕೊಂಡರೆ ಸ್ಥಳೀಯರು ಏನು ಮಾಡಬೇಕು? ಉದ್ದಿಮೆಗಳಲ್ಲಿ ಅನ್ಯ ರಾಜ್ಯದವರೆ ತುಂಬಿಕೊಂಡರೆ ಏನಾಗಬಹುದು ಎನ್ನುವುದಕ್ಕೆ ಬೆಂಗಳೂರಿನ ಉದಾಹರಣೆಯೊಂದೇ ಸಾಕು. ಕ್ರಮೇಣ ಇದು ಸ್ಥಳೀಯ ಭಾಷೆ, ಸಂಸ್ಕೃತಿ, ಆಚಾರವಿಚಾರಗಳ ಮೇಲೂ ಪ್ರಭಾವ ಬೀರುತ್ತದೆ. ಈ ಪರಿಣಾಮವಾಗಿಯೇ ಬೆಂಗಳೂರಿನಲ್ಲಿ ಇಂದು ಕನ್ನಡಕ್ಕಿಂತ ಅನ್ಯಭಾಷೆಗಳ ಕಾರುಬಾರು ಜೋರಾಗಿದೆ.  ಕನ್ನಡಿಗರು ಅಸಮಾಧಾನದಿಂದ ಕುದಿಯುತ್ತಿದ್ದಾರೆ. ಆಗಾಗ ಈ ಅಸಮಾಧಾನ ಸಿಡಿಯುತ್ತಲೂ ಇದೆ. ಕ್ರಮೇಣ ಈ ರೀತಿಯ ಅಸಮಾಧಾನ ಅಸ್ಮಿತೆಯ ಪ್ರಶ್ನೆಯಾಗಿ ಬದಲಾಗುತ್ತದೆ. ರಾಜಕಾರಣಿಗಳು ಈ ಅಸ್ಮಿತೆಯನ್ನು ಹಿಡಿದುಕೊಂಡು ತಮ್ಮ ಬೇಲೆ ಬೇಯಿಸಿಕೊಳ್ಳುತ್ತಾರೆ. ಮಹಾರಾಷ್ಟ್ರದಲ್ಲಿ, ಕೆಲ ಸಮಯದ ಹಿಂದೆ ಬೆಂಗಳೂರಿನಲ್ಲಿ ಆದದ್ದು ಇದೇ. ಈ ಕಾರಣಕ್ಕಾದರೂ ಮಧ್ಯಪ್ರದೇಶದ ಮಾದರಿಯಲ್ಲಿ ಇತರ ರಾಜ್ಯಗಳು ಚಿಂತಿಸುವ ಅಗತ್ಯವಿದೆ. 

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.