ಪಂಚಾಯತ್‌ಗಳಲ್ಲಿ ಮಹಿಳಾ ಸದಸ್ಯರ ಸಶಕ್ತೀಕರಣಕ್ಕೆ ದಿಟ್ಟ ಹೆಜ್ಜೆ


Team Udayavani, Jun 18, 2022, 6:00 AM IST

ಪಂಚಾಯತ್‌ಗಳಲ್ಲಿ ಮಹಿಳಾ ಸದಸ್ಯರ ಸಶಕ್ತೀಕರಣಕ್ಕೆ ದಿಟ್ಟ ಹೆಜ್ಜೆ

ಪಂಚಾಯತ್‌ ರಾಜ್‌ ವ್ಯವಸ್ಥೆಯಡಿ ಬರುವ ಗ್ರಾಮ ಪಂಚಾಯತ್‌, ತಾಲೂಕು ಪಂಚಾಯತ್‌ ಮತ್ತು ಜಿಲ್ಲಾ ಪಂಚಾಯತ್‌ಗಳಲ್ಲಿ ಮಹಿಳೆ ಯರಿಗೆ ಶೇ. 50ರಷ್ಟು ಮೀಸಲಾತಿ ಕಲ್ಪಿಸಿ ದಶಕಗಳೇ ಕಳೆದಿವೆ. ಹಾಗೆಂದು ಪಂಚಾಯತ್‌ ರಾಜ್‌ ಸಂಸ್ಥೆಗಳಿಗೆ ಮೀಸಲಾತಿಯಡಿ ಆಯ್ಕೆಯಾಗಿ ಬರುವ ಮಹಿಳಾ ಸದಸ್ಯರು ತಮ್ಮ ಅಧಿಕಾರವನ್ನು ಸ್ವತಂತ್ರವಾಗಿ ನಿರ್ವಹಿಸುವ ವಾತಾವರಣ ಇತ್ತೇ ಎಂಬ ಪ್ರಶ್ನೆ ಕಾಡುತ್ತಿದ್ದುದು ಸಹಜ.

ಮಹಿಳೆಯರಿಗೆ ಆಡಳಿತದಲ್ಲಿ ಸಮಾನ ಪ್ರಾತಿನಿಧ್ಯ ನೀಡುವ ಉದ್ದೇ ಶದಿಂದ ಈ ಮೀಸಲಾತಿ ಕಲ್ಪಿಸಲಾಗಿದೆಯಾದರೂ ನಿಜಾರ್ಥದಲ್ಲಿ ಈ ಉದ್ದೇಶ ಈಡೇರಿರಲಿಲ್ಲ. ಕಾರಣ ಪಂಚಾಯತ್‌ ರಾಜ್‌ ಸಂಸ್ಥೆಗಳ ಚುನಾಯಿತ ಮಹಿಳಾ ಸದಸ್ಯರ ಅಧಿಕಾರವನ್ನು ಅವರ ಪತಿ ಅಥವಾ ಕುಟುಂಬದ ಪುರುಷ ಸದಸ್ಯರು ಹಿಂಬಾಗಿಲಿನಿಂದ ನಡೆಸುತ್ತಿದ್ದಾರೆ ಎಂದು ಬಹಳಷ್ಟು ದೂರುಗಳು ಕೇಳಿ ಬಂದಿದ್ದವಾದರೂ ಪಂಚಾಯತ್‌ ರಾಜ್‌ ಇಲಾಖೆಯಾಗಲಿ, ಸರಕಾರವಾಗಲಿ ತಲೆಕೆಡಿಸಿಕೊಂಡಿರಲಿಲ್ಲ.

ಮಹಿಳಾ ಸದಸ್ಯರ ಅಧಿಕಾರದಲ್ಲಿ ಪುರುಷರ ಹಸ್ತಕ್ಷೇಪ ಮಿತಿಮೀರುತ್ತಿ ರುವುದರಿಂದಾಗಿ ಈ ಮಹಿಳಾ ಮೀಸಲಾತಿ ಯಾವ ಪುರುಷಾರ್ಥಕ್ಕೆ ಎಂಬ ಪ್ರಶ್ನೆಯೂ ಸಾರ್ವಜನಿಕ ವಲಯದಿಂದ ಪದೇಪದೆ ಕೇಳಿಬರುತ್ತಿದೆ. ಗ್ರಾಮ ಪಂಚಾಯತ್‌ ಮಟ್ಟದಲ್ಲಂತೂ ಮಹಿಳಾ ಸದಸ್ಯರು ಕೇವಲ ನೆಪ ಮಾತ್ರಕ್ಕೆ ಎಂಬಂತಾಗಿದ್ದು ಅವೆಷ್ಟೋ ಕೆಲಸಕಾರ್ಯಗಳನ್ನು ಅವರ ಹೆಸರಿನಲ್ಲಿ ಅವರ ಪತಿಯೋ ಅಥವಾ ಕುಟುಂಬದ ಪುರುಷ ಸದಸ್ಯರು ನಡೆಸುತ್ತಿದ್ದಾರೆ. ಮಾತ್ರವಲ್ಲದೆ ಮಹಿಳಾ ಸದಸ್ಯರ ಪತಿ ಅಥವಾ ಅವರ ಕುಟುಂಬದ ಸದಸ್ಯರ ಮಿತಿ ಮೀರಿದ ಹಸ್ತಕ್ಷೇಪದ ಕಾರಣದಿಂದ ಅಧಿಕಾರಿ ಗಳು, ಸಿಬಂದಿಯ ಕರ್ತವ್ಯ ನಿರ್ವಹಣೆಗೂ ಅಡಚಣೆಯುಂಟಾಗುತ್ತಿದೆ. ಇದು ನೇರವಾಗಿ ಸಾರ್ವಜನಿಕರಿಗೂ ಇನ್ನಿಲ್ಲದ ಸಮಸ್ಯೆಗಳನ್ನು ತಂದೊಡ್ಡು ತ್ತಿದೆ. ಇವೆಲ್ಲದರ ಹಿನ್ನೆಲೆಯಲ್ಲಿ ಮಹಿಳಾ ಸದಸ್ಯರ ಅಧಿಕಾರ ನಿರ್ವಹಣೆಯಲ್ಲಿ ಹಸ್ತಕ್ಷೇಪ ನಡೆಸುವವರ ವಿರುದ್ಧ ಕಠಿನ ಕ್ರಮ ಕೈಗೊಳ್ಳುವುದರ ಜತೆಗೆ ಅಂಥ‌ ಮಹಿಳಾ ಸದಸ್ಯರ ಸದಸ್ಯತ್ವವನ್ನು ರದ್ದು ಮಾಡುವಂತೆಯೂ ಮುಖ್ಯಮಂತ್ರಿಗೆ ವಿವಿಧ ಸ್ವಯಂ ಸೇವಾ ಸಂಸ್ಥೆಗಳು ಮನವಿ ಸಲ್ಲಿಸುತ್ತಲೇ ಬಂದಿದ್ದವು.

ಈ ಮನವಿಗಳನ್ನು ಗಂಭೀರವಾಗಿ ಪರಿಗಣಿಸಿರುವ ಸರಕಾರ ಪುರುಷರ ಈ ಹಿಂಬಾಗಿಲ ರಾಜಕಾರಣಕ್ಕೆ ಕಡಿವಾಣ ಹಾಕಲು ಮುಂದಾ ಗಿದೆ. ಹಾಲಿ ಜಾರಿಯಲ್ಲಿರುವ ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಮತ್ತು ಪಂಚಾಯತ್‌ ರಾಜ್‌ ಅಧಿನಿಯಮ 1993ರ ಪ್ರಕರಣ 110(ಎ)ಯಂತೆ ಪಂಚಾಯತ್‌ ರಾಜ್‌ ಸಂಸ್ಥೆಗಳಿಗೆ ಆಯ್ಕೆಯಾದ ಮಹಿಳಾ ಸದಸ್ಯರು ಸ್ವತಂತ್ರವಾಗಿ ಅಧಿಕಾರವನ್ನು ಚಲಾಯಿಸಲು ಅವಕಾಶ ಮಾಡಿಕೊಡಲು ನಿರ್ಧರಿಸಿದೆ. ಚುನಾಯಿತ ಮಹಿಳಾ ಸದಸ್ಯರ ಅಧಿಕಾರ ನಿರ್ವಹಣೆಯಲ್ಲಿ ಪತಿ ಅಥವಾ ಕುಟುಂಬ ಸದಸ್ಯರ ಹಸ್ತಕ್ಷೇಪದ ಆರೋಪಗಳು ಕೇಳಿಬಂದಲ್ಲಿ ಸೂಕ್ತ ತನಿಖೆ ನಡೆಸಿ, ಆರೋಪ ಸಾಬೀತಾದಲ್ಲಿ ಆ ಮಹಿಳಾ ಸದಸ್ಯರ ಸದಸ್ಯತ್ವ ರದ್ದು ಮಾಡಲು ಪಂಚಾಯತ್‌ ರಾಜ್‌ ಇಲಾಖೆ ಆದೇಶ ಹೊರಡಿಸಿದೆ. ಈ ಮೂಲಕ ಮಹಿಳಾ ಮೀಸಲಾತಿಯ ನೈಜ ಉದ್ದೇಶವನ್ನು ಸಾಕಾರಗೊಳಿಸಲು ಸರಕಾರ ಮುಂದಡಿ ಇಟ್ಟಿದೆ.

ಸರಕಾರದ ಈ ಆದೇಶ ಅಕ್ಷರಶಃ ಜಾರಿಯಾದಲ್ಲಿ ಮಹಿಳಾ ಸದಸ್ಯರ ಘನತೆ, ಗೌರವ ಮತ್ತಷ್ಟು ಹೆಚ್ಚಲಿದೆ. ಆಡಳಿತ ವ್ಯವಸ್ಥೆಯಲ್ಲಿ ಲಿಂಗ ತಾರ ತಮ್ಯ ಹೋಗಲಾಡಿಸಿ ಸಮಾನತೆಯನ್ನು ತರುವ ಸರಕಾರದ ಆಶಯವೂ ಈಡೇರಿದಂತಾಗಲಿದೆ. ತನ್ಮೂಲಕ ಸ್ವತಂತ್ರವಾಗಿ ಅಧಿಕಾರ ಚಲಾಯಿಸುವ ಮೂಲಕ ನಿಜಾರ್ಥದಲ್ಲಿ ಮಹಿಳೆಯರ ಸಶಕ್ತೀಕರಣ ಸಾಧ್ಯವಾಗಲಿದೆ.

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.