ಹುಸಿ ಸುದ್ದಿಗಳ ಹರಿದಾಟ ಎಚ್ಚರಿಕೆ ಇರಲಿ


Team Udayavani, Apr 2, 2020, 7:20 PM IST

ಹುಸಿ ಸುದ್ದಿಗಳ ಹರಿದಾಟ ಎಚ್ಚರಿಕೆ ಇರಲಿ

ಜಗತ್ತಿನಾದ್ಯಂತ ಈಗ ಕೋವಿಡ್ 19 ವೈರಸ್‌ನದ್ದೇ ಸುದ್ದಿ. ಈ ಚಿಕ್ಕ ವೈರಸ್‌ ಜಗತ್ತಿನ ಆರ್ಥಿಕತೆಯ ಮೇಲೆ, ಜನಜೀವನದ ಮೇಲೆ ಬೀರಿರುವ ಪರಿಣಾಮ ಅಷ್ಟಿಷ್ಟಲ್ಲ. ಅತ್ಯಂತ ವೇಗವಾಗಿ ಹರಡಬಲ್ಲ ಈ ಸೋಂಕಿನ ಕುರಿತು ಮುಖ್ಯ ವಾಹಿನಿ ಮಾಧ್ಯಮಗಳಲ್ಲಷ್ಟೇ ಅಲ್ಲದೇ, ಸೋಷಿಯಲ್‌ ಮೀಡಿಯಾಗಳಲ್ಲೂ ಅತೀವ ಚರ್ಚೆಯಾಗುತ್ತಲೇ ಇದೆ. ಅದರಲ್ಲೂ 4ಜಿ ಫೋನ್‌ಗಳು-ಅಂತರ್ಜಾಲ ಸಂಪರ್ಕದ ನಿಲುಕು ಅಧಿಕವಿರುವ ಭಾರತದಂಥ ರಾಷ್ಟ್ರಗಳಲ್ಲಿ ಸಾಮಾಜಿಕ ಮಾಧ್ಯಮಗಳ ಬಳಕೆದಾರರ ಸಂಖ್ಯೆ ಅಧಿಕವಿದೆ. ಇದೊಂದು ರೀತಿಯಲ್ಲಿ ವರವೂ ಹೌದು – ಶಾಪವೂ ಹೌದು. ಇಂಥ ಆಪತ್ತಿನ ಸಮಯದಲ್ಲಿ ಜನರೆಡೆಗೆ ಬೇಗನೇ ಸಂದೇಶಗಳನ್ನು ತಲುಪಿಸಲು ಸರಕಾರಗಳಿಗೆ ಸುಲಭವಾಗುತ್ತಿದೆ.

ಆದರೆ ಇದೇ ವೇಳೆಯಲ್ಲೇ ಹುಸಿ ಸುದ್ದಿಗಳ ಹಾವಳಿಯೂ ವಿಪರೀತವಾಗುತ್ತಿದೆ. ಎಲ್ಲರೂ ಈಗ ಮನೆಯಲ್ಲೇ ಇರುವುದರಿಂದ ಹಾಗೂ ಅನಿಶ್ಚಿತತೆ ಎದುರಾಗಿರುವುದರಿಂದ ಆತಂಕ ಎದುರಾಗುವುದು ಸಹಜವೇ. ಜನರ ಈ ಆತಂಕ, ಅಸಹಾಯಕತೆಯನ್ನೇ ಕೆಲವು ಕಿಡಿಗೇಡಿಗಳು ದುರ್ಬಳಕೆ ಮಾಡಿ ಕೊಳ್ಳುತ್ತಿದ್ದಾರೆ.

ಅದರಲ್ಲೂ ಲಾಕ್‌ಡೌನ್‌ ಅನಂತರದಿಂದ ಭಾರತೀಯರ ಅಂತರ್ಜಾಲ ನಿತ್ಯ ಬಳಕೆ ಪ್ರಮಾಣ 3 ಗಂಟೆ ಅಧಿಕವಾಗಿದೆ ಎನ್ನುತ್ತಿವೆ ಕೆಲವು ವರದಿಗಳು. ಈಗಿನ ಸ್ಥಿತಿಯಲ್ಲಿ ಜನರು ಸಾಮಾಜಿಕ ಮಾಧ್ಯಮಗಳಿಗೆ ತೆರೆದುಕೊಳ್ಳುವುದು ಸಹಜವೇ ಆಗಿರುತ್ತದೆ. ಇದರಿಂದಾಗಿ ಪ್ರತಿಯೊಬ್ಬರ ಡಿವೈಸ್‌ಗಳಲ್ಲೂ ದಿನನಿತ್ಯ ಹಲವಾರು ವದಂತಿಗಳು, ಸುಳ್ಳು ಸುದ್ದಿಗಳು ಬಂದು ಕೂರಲಾರಂಭಿಸಿವೆ.

ಫೇಸ್‌ಬುಕ್‌, ವಾಟ್ಸ್‌ ಆÂಪ್‌ ಮತ್ತು ಟ್ವಿಟರ್‌ಗಳಲ್ಲಿ ಕೋವಿಡ್ 19 ಹರಡುವಿಕೆಯ ಕುರಿತು ಕೆಲ ದಿನಗಳಿಂದ ಸುಳ್ಳು ಸಂಗತಿಗಳು ಹರಿದಾಡಲಾರಂಭಿಸಿವೆ. ಉದಾಹರಣೆ- ಈ ವೈರಾಣು ಸೊಳ್ಳೆಗಳಿಂದ ಹಾಗೂ ಸಾಕು ಪ್ರಾಣಿಗಳಿಂದ ಹರಡುತ್ತದೆ ಎನ್ನುವುದು. ಇದು ಶುದ್ಧ ಸುಳ್ಳು ಎಂದು ವಿಶ್ವ ಆರೋಗ್ಯ ಸಂಸ್ಥೆಯೇ ಸಾರಿ ಸಾರಿ ಹೇಳುತ್ತಿದೆ. ಗಮನಿಸಬೇಕಾದ ಸಂಗತಿಯೆಂದರೆ, ಈ ರೀತಿಯ ಸಂದೇಶಗಳ ಕೊನೆಗೆ ದೇಶದ ಹೆಸರಾಂತ ವೈದ್ಯರ, ತಜ್ಞರ, ಸಂಸ್ಥೆಗಳ, ರಾಜಕಾರಣಿಗಳ, ಸರಕಾರಗಳ ಹೆಸರುಗಳನ್ನು ಸೇರಿಸಲಾಗುತ್ತಿದೆ. ಈ ಕಾರಣಕ್ಕಾಗಿ ಜನ ಈ ಸುಳ್ಳನ್ನು ಸತ್ಯವೆಂದು ಭಾವಿಸುವ ಅಪಾಯವಿದೆ.

ಕೋವಿಡ್ 19 ಹೇಗೆ ಹರಡುತ್ತದೆ, ಅದನ್ನು ಹೇಗೆ ತಡೆಯಬೇಕು ಎನ್ನುವ ಬಗ್ಗೆ ಸರಕಾರ, ಆರೋಗ್ಯ ಇಲಾಖೆಗಳು, ಆರಂಭದಿಂದಲೇ ಜಾಗೃತಿ ಮೂಡಿಸುತ್ತಾ
ಬರುತ್ತಿವೆ. ಸ್ವ-ದಿಗ್ಬಂಧನ , ಆರೋಗ್ಯಯುತ ಜೀವನ ಶೈಲಿ, ಸ್ವತ್ಛತೆ ಕಾಪಾಡಿಕೊಳ್ಳುವುದಕ್ಕೆ ಆದ್ಯತೆ ನೀಡಬೇಕು. ಸದ್ಯಕ್ಕೆ ಈ ವೈರಸ್‌ ವಿರುದ್ಧ ಲಸಿಕೆ ಇಲ್ಲ, ಹೀಗಿದ್ದರೂ, ಮನೆಮದ್ದುಗಳಿಂದ ವೈರಸ್‌ ನಾಶವಾಗುತ್ತದೆ ಎಂಬ ಸುದ್ದಿ ಹರಡಲಾಗುತ್ತಿದೆ.

ನಿಮ್ಮಲ್ಲಿ ಚಿಂತೆ ಮೂಡಿಸುವ ಲಕ್ಷಣಗಳು ಕಾಣಿಸಿಕೊಂಡರೆ ವೈದ್ಯರೊಂದಿಗೆ
ಮಾತನಾಡಿ, ಅವರ ಸಲಹೆ ಪಡೆಯಿರಿ. ಅವರು ಹೇಳುವ ಕ್ರಮಗಳನ್ನು
ಪಾಲಿಸಿರಿ. ಎಲ್ಲಕ್ಕಿಂತ ಮುಖ್ಯವಾಗಿ, ಹೀಗೆ ಹರಿದಾಡುತ್ತಿರುವ ಸುಳ್ಳು
ಸುದ್ದಿಗಳು, ವದಂತಿಗಳ ಬಗ್ಗೆ ಪತ್ರಿಕೆಗಳು, ಸರಕಾರ, ವಿಶ್ವ ಆರೋಗ್ಯ ಸಂಸ್ಥೆ
ಹಾಗೂ ಹಲವಾರು ಫ್ಯಾಕ್ಟ್ ಚೆಕ್‌ ಜಾಲತಾಣಗಳು ನಿತ್ಯವೂ ಜಾಗೃತಿ
ಮೂಡಿಸುತ್ತಿದ್ದು, ಅವುಗಳ ಮೊರೆ ಹೋಗಿ. ವಾಟ್ಸ್‌ ಆಪ್‌, ಫೇಸ್‌ಬುಕ್‌ನ‌
ಸುಳ್ಳು ಸುದ್ದಿಗಳು ಸೃಷ್ಟಿಸುತ್ತಿರುವ ಆತಂಕವು ಅನಗತ್ಯ ಪ್ರಯೋಗಗಳಿಗೆ,
ತನ್ಮೂಲಕ ಅಪಾಯಕಾರಿ ಫ‌ಲಿತಾಂಶಗಳಿಗೆ ಕಾರಣವಾಗದಿರಲಿ.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.