ರೈತರ ಪ್ರತಿಭಟನೆ: ಸಮಸ್ಯೆ ನಿವಾರಣೆಯಾಗಲಿ


Team Udayavani, Dec 5, 2020, 5:44 AM IST

ರೈತರ ಪ್ರತಿಭಟನೆ: ಸಮಸ್ಯೆ ನಿವಾರಣೆಯಾಗಲಿ

ಸಾಂದರ್ಭಿಕ ಚಿತ್ರ

ಕೇಂದ್ರ ಸರಕಾರ ಇತ್ತೀಚೆಗೆ ತಂದಿರುವ ಮೂರು ಕೃಷಿ ಕಾಯ್ದೆಗಳ ವಿಚಾರದಲ್ಲೀಗ ಪ್ರತಿಭಟನೆಗಳು ಜೋರಾಗಿವೆ. ಕಾಯ್ದೆಗಳ ವಿರುದ್ಧ ರೈತ ಸಂಘಟನೆಗಳು ದಿಲ್ಲಿಯಲ್ಲಿ ಪ್ರತಿಭಟನೆಯಲ್ಲಿ ನಿರತವಾಗಿದ್ದು, ಕೇಂದ್ರ ಸರಕಾರದ ಜತೆಗೆ ಮಾತುಕತೆ ನಡೆದರೂ ಸದ್ಯಕ್ಕೆ ಫ‌ಲಪ್ರದವಾಗಿಲ್ಲ. 2022ರ ವೇಳೆಗೆ ರೈತರ ಆದಾಯವನ್ನು ದ್ವಿಗುಣಗೊಳಿಸುವ ಗುರಿ ಹೊಂದಿರುವ ಕೇಂದ್ರ ಸರಕಾರ, ಈ ಪ್ರಯತ್ನದ ಭಾಗವಾಗಿ ತಂದ ಕಾಯ್ದೆಗಳು ಕೃಷಿಯನ್ನು ಮಧ್ಯವರ್ತಿಗಳ ಹಾವಳಿಯಿಂದ ಮುಕ್ತಗೊಳಿಸುವ ಹಾಗೂ ಕೃಷಿ ಮಾರುಕಟ್ಟೆಗಳ ವ್ಯಾಪ್ತಿಯನ್ನು ವಿಸ್ತರಿಸುವ ಗುರಿಯನ್ನು ಹೊಂದಿವೆ. ಆದರೆ, ಇದರಲ್ಲಿನ ಕೆಲವು ಅಂಶಗಳ ಬಗ್ಗೆ ರೈತ ಸಂಘಟನೆಗಳಿಗೆ ಅಸಮಾಧಾನವಿದೆ. ಆದಾಗ್ಯೂ, ಈ ವಿಚಾರದಲ್ಲಿ ಪಂಜಾಬ್‌ ಮತ್ತು ಹರಿಯಾಣದ ರೈತರಿಂದ ಆರಂಭದಿಂದಲೂ ಜೋರು ಅಸಮಾಧಾನ ವ್ಯಕ್ತವಾಗುತ್ತಾ ಬಂದಿತ್ತಾದರೂ ಈಗ ಪ್ರತಿಭಟನೆಗಳಿಗೆ ದೇಶಾದ್ಯಂತ ರೈತ ಒಕ್ಕೂಟಗಳು ಕೈಜೋಡಿಸಿವೆ.

ಈ ಹಂತದಲ್ಲಿ ಎರಡೂ ಪಕ್ಷಗಳಿಂದ ಮಾತುಕತೆ ನಡೆದಿದೆಯಾದರೂ, ಗೊಂದಲ ಇನ್ನೂ ಪರಿಹಾರವಾಗಿಲ್ಲ ಎನ್ನುವುದು ವೇದ್ಯ. ಹೊಸ ಕಾಯ್ದೆಗಳು ಜಾರಿಯಾದರೂ ಕನಿಷ್ಠ ಬೆಂಬಲ ವ್ಯವಸ್ಥೆ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಮುಂದುವರಿಯಲಿದೆ ಎಂದು ಕೇಂದ್ರ ಸರಕಾರ ಸ್ಪಷ್ಟಪಡಿಸಿದೆ. ಅಲ್ಲದೇ, ಕೇಂದ್ರವು ಕಾಯ್ದೆಗಳಲ್ಲಿ ಕೆಲವು ಲೋಪಗಳಿರುವುದನ್ನು ಒಪ್ಪಿಕೊಂಡಿದೆ ಎಂದು ರೈತ ಮುಖಂಡರು ಮಾತುಕತೆಯ ಅನಂತರ ಹೇಳುತ್ತಿದ್ದಾರೆ.

ಇಲ್ಲಿಯವರೆಗೂ ರೈತರು ತಮ್ಮ ಉತ್ಪನ್ನಗಳನ್ನು ಎಪಿಎಂಸಿಗಳ ಮೂಲಕವೇ ಮಾರಾಟ ಮಾಡುತ್ತಿದ್ದರಾದರೂ ಮಧ್ಯವರ್ತಿಗಳ ಹಾವಳಿಯೂ ಅವರಿಗೆ ಬಾಧಕವಾಗಿದೆ ಎನ್ನುವುದೂ ಸತ್ಯ. ಈ ನಿಟ್ಟಿನಲ್ಲಿ ಜಾರಿಯಾಗಿರುವ ರೈತರ ಉತ್ಪನ್ನ ಮಾರಾಟ ಮತ್ತು ವಾಣಿಜ್ಯ (ನೆರವು-ಬೆಂಬಲ) ಕಾಯ್ದೆಯು, ಮಾರುಕಟ್ಟೆಯ ವ್ಯಾಪ್ತಿಯನ್ನು ವಿಸ್ತರಿಸಿದೆ. ಅಂದರೆ ಇನ್ನು ಮುಂದೆ, ರೈತರು ತಮ್ಮ ಬೆಳೆಗಳನ್ನು ಎಪಿಎಂಸಿಯಷ್ಟೇ ಅಲ್ಲದೇ, ತಮಗಿಷ್ಟವಾದೆಡೆಯಲ್ಲಿ ಮಾರಾಟ ಮಾಡುವ ಹಕ್ಕು ಪಡೆದಿದ್ದಾರೆ. ಆದರೆ, ರೈತರು ಕಾರ್ಪೋರೆಟ್‌ ಒಂದರ ಜತೆ ಒಪ್ಪಂದ ಮಾಡಿಕೊಂಡರೆ ನಿರ್ದಿಷ್ಟ ಗುಣಮಟ್ಟದ ಉತ್ಪನ್ನವನ್ನೇ ಖರೀದಿಸುತ್ತೇವೆ ಎಂಬ ನಿಯಮವೂ ಅದರಲ್ಲಿ ಇರಬಹುದು. ಒಂದು ವೇಳೆ ಆ ಬೆಳೆ ತಾನು ನಿಗದಿಪಡಿಸಿದ ಗುಣಮಟ್ಟ ಹೊಂದಿಲ್ಲ ಎಂದು ಖರೀದಿ ಸಂಸ್ಥೆಯು ನಿರಾಕರಿಸಿತೆಂದರೆ, ರೈತರು ಸಂಕಷ್ಟಕ್ಕೆ ಸಿಲುಕುತ್ತಾರೆ. ಅಂಥ ಸಂದರ್ಭಗಳಲ್ಲಿ ರೈತರ ಸಹಾ ಯಕ್ಕೆ ಏನು ದಾರಿಗಳಿವೆ ಎನ್ನುವುದರಲ್ಲಿ ಗೊಂದಲ ಇರಬಾರದು. ಈ ನಿಟ್ಟಿನಲ್ಲಿ ಸರಕಾರ ಈಗಾಗಲೇ ಮಾತುಕತೆಯಲ್ಲಿ ಈ ವಿಷಯಗಳಿಗೆ ಉತ್ತರಿಸುವ ಪ್ರಯತ್ನ ಮಾಡಿದೆಯೇ ಇಲ್ಲವೇ ಎನ್ನುವುದು ತಿಳಿದಿಲ್ಲ. ಗುರುವಾರ ನಡೆಸಿದ ಮಾತುಕತೆ ಅಪೂರ್ಣವಾಗಿದೆ. ಶನಿವಾರವೂ ಈ ನಿಟ್ಟಿನಲ್ಲಿ ಮತ್ತೂಂದು ಸಭೆ ನಡೆಯಲಿದ್ದು ಭಿನ್ನಾಭಿಪ್ರಾಯಗಳು, ಗೊಂದಲಗಳು ಬಗೆಹರಿಯುವಂತಾಗಲಿ.

ಸಹಜವಾಗಿಯೇ ಕಾಯ್ದೆಗಳ ರೂಪದಲ್ಲಿ ಬೃಹತ್‌ ಬದಲಾವಣೆಗಳನ್ನು ತಂದಾಗ ಕೆಲವು ಅಡ್ಡಿಗಳು ಎದುರಾಗುತ್ತವೆ. ಆದರೆ ಆರೋಪ-ಪ್ರತ್ಯಾರೋಪಗಳಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಮಾತುಕತೆಯ ಮೂಲಕ ಅಡ್ಡಿಗಳನ್ನು ಸರಿಪಡಿಸಿಕೊಳ್ಳುವುದೇ ಇದಕ್ಕೆ ಪರಿಹಾರ. ಇನ್ನು ಇದೇ ವೇಳೆಯಲ್ಲೇ ಈ ಗೊಂದಲಕ್ಕೆ ವಿಪಕ್ಷಗಳೂ ತುಪ್ಪ ಸುರಿಯುವ ಕೆಲಸ ಮಾಡುತ್ತಿರುವುದು ಬೇಸರದ ಸಂಗತಿ. ಅನ್ನದಾತನ ಸಮಸ್ಯೆಗಳು, ಆತಂಕಗಳು ನಿವಾರಣೆಯಾಗುವ ನಿಟ್ಟಿನಲ್ಲಿ ಎಲ್ಲರೂ ಒಟ್ಟಾಗಿ ಚಿಂತಿಸಿ, ಮುನ್ನಡೆಯುವುದು ಅತ್ಯಗತ್ಯ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.