ಕೋವಿಡ್‌-19 ಹಾವಳಿ : ವೇಗ ಪಡೆಯಲಿ ಹೋರಾಟ


Team Udayavani, Jul 7, 2020, 5:45 AM IST

Sample-Collection-Covid-2

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಕೋವಿಡ್ 19 ಸೋಂಕಿನಿಂದಾಗಿ ಅತಿಹೆಚ್ಚು ಪೀಡಿತವಾಗಿರುವ ಜಾಗತಿಕ ಹಾಟ್‌ಸ್ಪಾಟ್‌ಗಳಲ್ಲಿ ಭಾರತವೀಗ ಮೂರನೇ ಸ್ಥಾನ ತಲುಪಿರುವುದು ಆತಂಕದ ವಿಷಯವೇ ಸರಿ.

ಅದರಲ್ಲೂ ನಿತ್ಯ ಸೋಂಕಿತರ ಸಂಖ್ಯೆಯಂತೂ ಏರುತ್ತಲೇ ಸಾಗಿದೆ. ಜುಲೈ 2ರಿಂದ ದೇಶದಲ್ಲಿ ನಿತ್ಯ ಸೋಂಕಿತರ ಸಂಖ್ಯೆ 20 ಸಾವಿರಕ್ಕಿಂತಲೂ ಅಧಿಕ ದಾಖಲಾಗುತ್ತಿದೆ.

ಭಾರತದ ಅನಂತರದಲ್ಲಿ ರಷ್ಯಾದಲ್ಲಿ ಹೆಚ್ಚು ಪ್ರಕರಣಗಳು ದಾಖಲಾಗಿವೆಯಾದರೂ ಅಲ್ಲಿ ಮರಣ ಪ್ರಮಾಣ ಭಾರತಕ್ಕಿಂತಲೂ ಕಡಿಮೆಯೇ ಇದೆ. ಹಾಗೆಂದು ಭಾರತದಲ್ಲಿ ಮರಣ ಪ್ರಮಾಣ ಅತ್ಯಧಿಕವಿದೆಯೆಂದೇನೂ ಅಲ್ಲ.

ಭಾರತದಲ್ಲಿ ಸೋಮವಾರದ ವೇಳೆಗೆ ಕೋವಿಡ್‌-19ರಿಂದಾಗಿ ಮರಣ ದರ ಶೇ.2.81 ದಾಖಲಾಗಿದೆ. ಇನ್ನೊಂದೆಡೆ ಕೋವಿಡ್ 19ನಿಂದಾಗಿ ಅತಿಹೆಚ್ಚು ಪೀಡಿತವಾಗಿರುವ ಅಮೆರಿಕ ಮತ್ತು ಬ್ರೆಜಿಲ್‌ನಲ್ಲಿ ಕ್ರಮವಾಗಿ ಶೇ. 4.44 ಮತ್ತು ಶೇ. 4.04 ದಾಖಲಾಗಿದೆ.

ಹಾಗೆಂದು ಇದು ಸಮಾಧಾನಪಡಬೇಕಾದ ಸಂಗತಿಯೇನೂ ಅಲ್ಲ. ಆದಾಗ್ಯೂ, ಈ ವೇಳೆಯಲ್ಲೇ ದೇಶದಲ್ಲಿ ಚೇತರಿಸಿಕೊಂಡವರ ಸಂಖ್ಯೆಯಲ್ಲಿ ಹೆಚ್ಚಳವಾಗಿರುವುದು ಸಮಾಧಾನದ ವಿಷಯವಾದರೂ ಕೋವಿಡ್‌-19 ನಿತ್ಯ ಪ್ರಕರಣಗಳ ಸಂಖ್ಯೆಯಲ್ಲಿ ಮುಂದಿನ ದಿನಗಳಲ್ಲಿ ಗಮನಾರ್ಹ ಇಳಿಕೆ ಕಾಣಿಸಿಕೊಳ್ಳದಿದ್ದರೆ, ಇದರ ಪರಿಣಾಮ ಏನಾಗಬಹುದೋ ಎಂಬ ಆತಂಕವಂತೂ ಕಾಡಲಾರಂಭಿಸಿದೆ.

ರಾಜ್ಯವೂ ಸೇರಿದಂತೆ ದೇಶಾದ್ಯಂತ ಪ್ರಕರಣಗಳ ಸಂಖ್ಯೆಯಲ್ಲಿ ಹಠಾತ್ತನೆ ಏರಿಕೆ ಕಂಡುಬರುತ್ತಿರುವುದರಿಂದಾಗಿ, ಆರೋಗ್ಯ ವ್ಯವಸ್ಥೆಯ ಮೇಲೂ ಅಪಾರ ಒತ್ತಡ ಬೀಳುತ್ತಿದೆ. ಕರ್ನಾಟಕದ ವಿಚಾರಕ್ಕೆ ಬರುವುದಾದರೆ, ಈ ಮೊದಲು ಕಾಂಟ್ಯಾಕ್ಟ್ ಟ್ರೇಸಿಂಗ್‌ನಲ್ಲಿ (ಸೋಂಕಿತರ ಸಂಪರ್ಕಕ್ಕೆ ಬಂದವರನ್ನು ಪತ್ತೆಹಚ್ಚುವುದು), ರೋಗ ಪ್ರಸರಣ ನಿಯಂತ್ರಣದಲ್ಲಿ ದೇಶಕ್ಕೆ ಮಾದರಿಯಾಗಿದ್ದ ರಾಜಧಾನಿ ಬೆಂಗಳೂರಲ್ಲಿ ಕೆಲವು ಸಮಯದಿಂದ ಕೋವಿಡ್‌-19 ಹಾವಳಿ ಅಧಿಕವಾಗುತ್ತಿದೆ. ಜೂನ್‌ 29ರಿಂದ ಜುಲೈ 6ರವರೆಗೆ ಹೊಸ ಪ್ರಕರಣಗಳ ಸಂಖ್ಯೆ ನಿತ್ಯ ಸರಾಸರಿ 9 ಪ್ರತಿಶತ ವೇಗದಲ್ಲಿ ದಾಖಲಾಗುತ್ತಿದೆ.

ದುರಂತವೆಂದರೆ, ಪರಿಸ್ಥಿತಿ ವಿಷಮಿಸುವಲ್ಲಿ ಸಾರ್ವಜನಿಕರ ನಿಷ್ಕಾಳಜಿಯೂ ಕಾರಣವಾಗುತ್ತಿರುವುದು. ಈಗಲೂ ಸಹ, ಸಾಮಾಜಿಕ ಅಂತರ ಪರಿಪಾಲನೆ ಎನ್ನುವುದು ನೆಪ ಮಾತ್ರಕ್ಕೆ ಎಂಬಂತೆ ನಡೆಯುತ್ತಿದ್ದು, ರಾಜಧಾನಿ ಸೇರಿದಂತೆ ರಾಜ್ಯದ ವಿವಿಧ ನಗರಗಳಲ್ಲಿ ಇದೇ ರೀತಿಯ ಬೇಜವಾಬ್ದಾರಿ ವರ್ತನೆ ಜನರಿಂದ ಕಂಡುಬರುತ್ತಿದೆ.

ನೆನಪಿರಲಿ, ಅತೀ ಹೆಚ್ಚು ಸಕ್ರಿಯ ಸೋಂಕಿತರಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಈಗ ನಾಲ್ಕನೇ ಸ್ಥಾನದಲ್ಲಿದೆ. ಆದಾಗ್ಯೂ ಟಾಪ್‌ 3 ಸೋಂಕಿತ ರಾಜ್ಯಗಳಿಗೆ ಹೋಲಿಸಿದರೆ, ನಮ್ಮಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ ಹಾಗೂ ಮರಣದರ ಕಡಿಮೆ ಇದೆಯಾದರೂ ಅಪಾಯವನ್ನು ಕಡೆಗಣಿಸಲೇಬಾರದು.

ಇದೇ ವೇಳೆಯಲ್ಲೇ  ಆಸ್ಪತ್ರೆಗಳು, ಆರೋಗ್ಯ ಇಲಾಖೆ ಹಾಗೂ ಸರಕಾರ ಕೋವಿಡ್‌ ಸೋಂಕಿತರಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗುವಂತೆ ನೋಡಿಕೊಳ್ಳಲು ಎಲ್ಲ ರೀತಿಯಿಂದಲೂ ಪ್ರಯತ್ನಿಸಬೇಕು.

ಟಾಪ್ ನ್ಯೂಸ್

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.