ಕೋವಿಡ್ ಹೋರಾಟದಲ್ಲಿ ಜನಪ್ರತಿನಿಧಿಗಳೂ ಜವಾಬ್ದಾರಿ ತೋರಲಿ


Team Udayavani, May 6, 2021, 6:00 AM IST

ಕೋವಿಡ್ ಹೋರಾಟದಲ್ಲಿ ಜನಪ್ರತಿನಿಧಿಗಳೂ ಜವಾಬ್ದಾರಿ ತೋರಲಿ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಹೆಚ್ಚಳವಾಗುತ್ತಿರುವ ಮಧ್ಯೆಯೇ ಬೆಡ್‌ ಬ್ಲಾಕಿಂಗ್‌ ಹಗರಣ ಅನಾವರಣವಾಗಿದೆ. ಅದರಲ್ಲೂ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ, ಬಿಜೆಪಿ ಶಾಸಕರಾದ ರವಿಸುಬ್ರಹ್ಮಣ್ಯ, ಸತೀಶ್‌ ರೆಡ್ಡಿ ಅವರು, ಕೊರೊನಾ ವಾರ್‌ ರೂಂಗಳ ಮೇಲೆ ದಾಳಿ ಮಾಡಿ ಬೆಡ್‌ ಬ್ಲಾಕಿಂಗ್‌ ದಂಧೆ ಅನಾವರಣ ಮಾಡಿದ್ದಾರೆ. ಒಂದು ರೀತಿಯಲ್ಲಿ ಜನಪ್ರತಿನಿಧಿಗಳು ಮಾಡಬಹುದಾದ ಒಳ್ಳೆಯ ಕೆಲಸವಿದು.

ಬೆಂಗಳೂರಿನಲ್ಲಂತೂ ಇತ್ತೀಚಿನ ದಿನಗಳಲ್ಲಿ ಕೋವಿಡ್ ರೋಗಿಗಳಿಗೆ ಬೆಡ್‌ಗಳು ಸಿಗುತ್ತಲೇ ಇಲ್ಲ. ಸ್ವತಃ ಸಚಿವರು, ಶಾಸಕರು, ಸಂಸದರು ಕರೆ ಮಾಡಿ ಬೆಡ್‌ಗಾಗಿ ಮನವಿ ಸಲ್ಲಿಸಿದರೂ ಯಾವುದೇ ಉಪಯೋಗವಾಗುತ್ತಿರಲಿಲ್ಲ. ಬೆಡ್‌ ಸಿಗದೇ, ವೆಂಟಿಲೇಟರ್‌, ಹಾಸಿಗೆ ಸಿಗದೇ ಅದೆಷ್ಟೋ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಆಸ್ಪತ್ರೆಗಳಲ್ಲಿ ನಿಜಕ್ಕೂ ಇಂಥ ಸಮಸ್ಯೆ ಇದೆಯೇ ಎಂಬುದನ್ನು ಪರಿಶೀಲನೆ ಮಾಡುವ ಸಲುವಾಗಿಯೇ ತೇಜಸ್ವಿ ಸೂರ್ಯ ಮತ್ತವರ ಟೀಂ ಕೆಲಸ ಮಾಡಿತ್ತು. ಇದರಲ್ಲಿ ಬೆಡ್‌ ಬ್ಲಾಕಿಂಗ್‌ ದಂಧೆ ಕಂಡು ಬಂದಿತ್ತು. ಹೀಗಾಗಿ ದಿಢೀರನೇ ಕೋವಿಡ್ ವಾರ್‌ ರೂಂಗಳ ಮೇಲೆ ದಾಳಿ ಮಾಡಿ, ಬ್ಲಾಕ್‌ ಮಾಡಲಾಗಿದ್ದ ಬೆಡ್‌ಗಳನ್ನು ತೆರವು ಮಾಡಲಾಗಿತ್ತು.

ಈ ಘಟನೆಯ ಅನಂತರ ಇಡೀ ಪ್ರಕರಣದ ಬಗ್ಗೆ ಸಿಸಿಬಿ ತನಿಖೆ ನಡೆಸುತ್ತಿದೆ. ಆಗಲೇ ಇಬ್ಬರನ್ನು ಬಂಧಿಸಿ ವಿಚಾರಣೆಯನ್ನೂ ನಡೆಸಲಾಗಿದೆ. ಈ ಎಲ್ಲ ಘಟನಾವಳಿಗಳು ಒಂದು ರೀತಿಯಲ್ಲಿ ಸಾರ್ವಜನಿಕರಿಗೆ ಉಪಯೋಗಕ್ಕೆ ಬರುವಂಥವೇ ಆಗಿವೆ.

ರಾಜ್ಯದಲ್ಲಿ 28 ಸಂಸದರು ಮತ್ತು 224 ಮಂದಿ ಶಾಸಕರಿದ್ದಾರೆ. ಸಂಸದರು ತಮ್ಮ ಜಿಲ್ಲೆಗಳಲ್ಲಿನ ಕೊರೊನಾ ಸ್ಥಿತಿಗತಿ ಬಗ್ಗೆ ಮತ್ತು ಆಸ್ಪತ್ರೆಗಳಲ್ಲಿನ ವ್ಯವಸ್ಥೆ ಬಗ್ಗೆ ಕಣ್ಣು ಆಡಿಸಿದರೆ ಸಾಕು. ಹಾಗೆಯೇ ತಾಲೂಕುಗಳ 224 ಶಾಸಕರು ಕೂಡ ತಮ್ಮ ವ್ಯಾಪ್ತಿಯಲ್ಲಿ ಆಸ್ಪತ್ರೆಗಳು, ಬೆಡ್‌ಗಳ ಬಗ್ಗೆ ಆಗಾಗ ಪರಿಶೀಲನೆ ನಡೆಸಬೇಕು. ಜನಪ್ರತಿನಿಧಿಗಳು ತಮ್ಮ ಮೇಲೆ ಕಣ್ಣಿಟ್ಟಿದ್ದಾರೆ ಎಂಬುದು ಆಸ್ಪತ್ರೆಗಳಿಗೆ ಮತ್ತು ಹಾಸಿಗೆ ಹಂಚಿಕೆ ಮಾಡುವ ಕೊರೊನಾ ವಾರ್‌ ರೂಂ ಸಿಬಂದಿ ಗಮನಕ್ಕೆ ಹೋದರೆ, ಅವರು ತಪ್ಪು ಮಾಡಲಾರರು. ಇದರಿಂದ ಜನರಿಗೂ ಅನುಕೂಲವಾಗುತ್ತದೆ, ಹಾಗೆಯೇ ಜನಪ್ರತಿನಿಧಿಗಳು ನಮ್ಮೊಂದಿಗಿದ್ದಾರೆ ಎಂಬ ಭಾವನೆಯೂ ಜನರಲ್ಲಿ ಮೂಡುತ್ತದೆ.

ಇನ್ನು ಬೆಡ್‌ಬ್ಲಾಕಿಂಗ್‌ ದಂಧೆ ಅನಂತರ ರಾಜಕೀಯ ವಾಕ್ಸಮರವೂ ಜೋರಾಗಿದೆ. ಕೋವಿಡ್ ಸಂದರ್ಭದಲ್ಲಿ ಇಂಥ ರಾಜಕೀಯಗಳು ಯಾರಿಗೂ ಶೋಭೆ ತರುವಂಥದ್ದಲ್ಲ. ಹಾಗೆಯೇ ಸಮುದಾಯಗಳನ್ನು ಗುರಿಯಾಗಿಸಿ, ಇಂಥವರಿಂದಲೇ ಸಮಸ್ಯೆಯಾಗುತ್ತಿದೆ ಎಂದು ದೂರುವುದರಲ್ಲೂ ಅರ್ಥವಿಲ್ಲ. ಒಂದು ಜನಪ್ರತಿನಿಧಿಗಳು ಮಾಡುವ ಕೆಲಸದಿಂದ ಜನರಿಗೆ ಅನುಕೂಲವಾಗಬೇಕೇ ಹೊರತು, ಇಂಥ ಕಷ್ಟಕಾಲದಲ್ಲೂ ರಾಜಕೀಯ ಮಾಡುತ್ತಿದ್ದಾರಲ್ಲಪ್ಪ ಎಂದು ಅಸಹ್ಯ ಮೂಡಬಾರದು. ಈ ನಿಟ್ಟಿನಲ್ಲಿ ಎಲ್ಲರೂ ಜವಾಬ್ದಾರಿಯಿಂದ ಕೆಲಸ ಮಾಡಬೇಕಾದದ್ದು ಮುಖ್ಯ.

ಒಟ್ಟಾರೆಯಾಗಿ ಯಾರೇ ಒಳ್ಳೆಯ ಕೆಲಸ ಮಾಡಲಿ, ಅವರ ಬೆನ್ನು ತಟ್ಟುವ ಕೆಲಸವಾಗಬೇಕು. ಅದು ಆಡಳಿತ ಪಕ್ಷವಾಗಲಿ ಅಥವಾ ವಿಪಕ್ಷವಾಗಲಿ, ಯಾರೇ ಮಾಡಿದರೂ ಅವರಿಗೆ ಬೆಂಬಲ ನೀಡುವ ಕೆಲಸವನ್ನು ಮಾಡಬೇಕು ಅಷ್ಟೇ.

ಟಾಪ್ ನ್ಯೂಸ್

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

7-rbi

Editorial: ರೆಪೊ ದರದಲ್ಲಿ ಯಥಾಸ್ಥಿತಿ: ಆರ್‌ಬಿಐ ಜಾಣ್ಮೆಯ ನಡೆ

Climate Change: ಹವಾಮಾನ ವೈಪರೀತ್ಯ… ಆರೋಗ್ಯದ ಮೇಲಿರಲಿ ಕಾಳಜಿ

Climate Change: ಹವಾಮಾನ ವೈಪರೀತ್ಯ… ಆರೋಗ್ಯದ ಮೇಲಿರಲಿ ಕಾಳಜಿ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.