ಮೊದಲ ಜಂಟಿ ಅಧಿವೇಶನ ಜನರತ್ತ ಗಮನಹರಿಸಿ


Team Udayavani, Feb 6, 2019, 12:30 AM IST

s-12.jpg

ರಾಜ್ಯದಲ್ಲಿ ಎಂಟು ತಿಂಗಳ ಹಿಂದೆ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್‌ – ಜೆಡಿಎಸ್‌ ಸಮ್ಮಿಶ್ರ ಸರ್ಕಾರದ ಮೊದಲ ಜಂಟಿ ಅಧಿವೇಶನ ಮಂಗಳವಾರ ನಡೆಯಲಿದೆ. ಜತೆಗೆ ಶುಕ್ರವಾರ ಬಜೆಟ್‌ ಸಹ ಮಂಡನೆಯಾಗಲಿದೆ. ಸರ್ಕಾರ ರಚನೆಯಾದಾಗಿನಿಂದಲೇ “ಸ್ಥಿರತೆ’ ಬಗ್ಗೆ ಅನುಮಾನವಂತೂ ಇದ್ದೇ ಇದೆ. ಆಪರೇಷನ್‌ ಕಮಲ, ಕಾಂಗ್ರೆಸ್‌ ಪಕ್ಷದಲ್ಲಿನ ಆಂತರಿಕ ಕಚ್ಚಾಟ, ಸಚಿವ ಸ್ಥಾನ ಸಿಗದ ಅತೃಪ್ತರ ಕಣ್ಣಾ ಮುಚ್ಚಾಲೆ ನಡುವೆಯೇ ಎಂಟು ತಿಂಗಳು ಸರ್ಕಾರ ಪೂರೈಸಿದ್ದೇ ಸಾಧನೆ ಎಂದರೂ ಅತಿಶಯೋಕ್ತಿಯೇನಲ್ಲ. ಮಂಗಳವಾರದಿಂದ ಆರಂಭವಾಗಲಿರುವ ಆಧಿವೇಶನವೂ ಒಂದು ರೀತಿಯಲ್ಲಿ ಸಮ್ಮಿಶ್ರ ಸರ್ಕಾರಕ್ಕೆ ಅಗ್ನಿ ಪರೀಕ್ಷೆಯೇ. 

ಕಾಂಗ್ರೆಸ್‌ನ ಆರು ಶಾಸಕರು ಇದೇ ಸಂದರ್ಭದಲ್ಲಿ ರಾಜೀನಾಮೆ ನೀಡುತ್ತಾರಂತೆ, ಬಜೆಟ್‌ ಅನುಮೋದನೆ ಸಮಯದಲ್ಲಿ ಕೆಲವರು ಕೈ ಕೊಡುತ್ತಾರಂತೆ. ಸರ್ಕಾರದ ಪತನಕ್ಕೆ ಬಿಜೆಪಿ ಕಾರ್ಯತಂತ್ರ ರೂಪಿಸಿದೆಯಂತೆ ಎಂಬ ಅಂತೆ ಕಂತೆಗಳೇ ಕೇಳಿಬರುತ್ತಿವೆ. ಕಳೆದ ಒಂದೂವರೆ ತಿಂಗಳಿನಿಂದ ನಿತ್ಯ ಈ ರೀತಿಯ  ಊಹಾಪೋಹಗಳಿಗಂತೂ ಬರ ಇಲ್ಲದಂತಾಗಿದೆ.

ರಾಷ್ಟ್ರೀಯ ಕಾರ್ಯಕಾರಿಣಿ ನೆಪದಲ್ಲಿ ಬಿಜೆಪಿ ಶಾಸಕರನ್ನು ಗುರುಗ್ರಾಮದ ಹೋಟೆಲ್‌ನಲ್ಲಿ ವಾರಗಟ್ಟಲೆ ಕೂಡಿಹಾಕಿಕೊಂಡಿದ್ದು, ಇದನ್ನು ನೋಡಿ ಕಾಂಗ್ರೆಸ್‌ನವರು  ಈಗಲ್‌ಟನ್‌ ರೆಸಾರ್ಟ್‌ನಲ್ಲಿ ತಮ್ಮ ಶಾಸಕರನ್ನು ಕಾಯ್ದಿಟ್ಟುಕೊಂಡಿದ್ದು, ಅಲ್ಲೇ ಇಬ್ಬರು ಶಾಸಕರ ನಡುವೆ ಮಾರಾಮಾರಿ ನಡೆದು ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದು ರಾಜ್ಯದ ರಾಜಕೀಯ ಇತಿಹಾಸದಲ್ಲಿ ಒಂದು ರೀತಿಯಲ್ಲಿ ಕಪ್ಪು ಚುಕ್ಕೆಯೇ ಸರಿ.

ಈ ಎಲ್ಲ ಬೆಳವಣಿಗೆಗಳ ನಡುವೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಮಾತ್ರ ನಿರಮ್ಮಳರಾಗಿದ್ದು  ಒಳ್ಳೆಯ ಬಜೆಟ್‌ ಮಂಡಿಸಲಿದ್ದೇನೆ. ಕಾಂಗ್ರೆಸ್‌ನ ಅತೃಪ್ತರು ನಿರಂತರವಾಗಿ ನನ್ನ ಸಂಪರ್ಕದಲ್ಲಿದ್ದಾರೆ. ನನಗೇನೂ ಸರ್ಕಾರ ಪತನದ ಆತಂಕವಿಲ್ಲ ಎಂದು ಹೇಳುತ್ತಿದ್ದಾರೆ. ಆದರೆ, ಕಾಂಗ್ರೆಸ್‌ ನಾಯಕರಿಗೆ ಆಪರೇಷನ್‌ ಕಮಲ ಆತಂಕ ಮಾತ್ರ ದೂರವಾಗಿಲ್ಲ. ಕೊನೇ ಕ್ಷಣದವರೆಗೂ ತನ್ನ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಕಸರತ್ತು ನಡೆಸುತ್ತಲೇ ಇದೆ. ವಿಪ್‌ ಅಸ್ತ್ರವನ್ನೂ ಪ್ರಯೋಗಿಸಿದೆ.

ಹೀಗಾಗಿ, ಸಹಜವಾಗಿ ಏನಾದರೂ ಆಗಲಿದೆಯಾ ಎಂಬ ಕುತೂಹಲವೂ ರಾಜಕೀಯ ವಲಯದಲ್ಲಿ ಇದೆ. 104 ಶಾಸಕರನ್ನು ಹೊಂದಿರುವ ಹಾಗೂ ಇತ್ತೀಚೆಗಷ್ಟೇ ಇಬ್ಬರು ಪಕ್ಷೇತರ ಶಾಸಕರನ್ನು ತನ್ನತ್ತ ಸೆಳೆದಿರುವ ಬಿಜೆಪಿಗೆ 106 ಶಾಸಕರಿದ್ದರೂ ಪ್ರತಿಪಕ್ಷದಲ್ಲಿ ಕೂರುವುದು ಒಂದು ರೀತಿಯಲ್ಲಿ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಸಮ್ಮಿಶ್ರ ಸರ್ಕಾರದ ಸಂಖ್ಯಾಬಲ 118 ರಿಂದ 110ಕ್ಕೆ ಇಳಿದರೂ ಸರ್ಕಾರ ಪತನಗೊಂಡು ನಮ್ಮ ಸರ್ಕಾರ ಬರಬಹುದು ಎಂಬ ಕನಸು ಕಾಣುತ್ತಿದೆ.

ಆದರೆ, ರಾಜಕೀಯದಲ್ಲಿ ಎಲ್ಲ ರೀತಿಯ ಪಟ್ಟು ಕಲಿತಿರುವ ಹಾಗೂ ರಾಜಕಾರಣ ಚೆನ್ನಾಗಿಬಲ್ಲ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರೂ ಕಡಿಮೆಯೇನಲ್ಲ. ಲೋಕಸಭೆ ಚುನಾವಣೆವರೆಗಾದರೂ ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳಬೇಕು ಎಂಬ ಹೈಕಮಾಂಡ್‌ ಸೂಚನೆಯೂ ಇರುವುದರಿಂದ ಕಾಂಗ್ರೆಸ್‌ನ ಕೆಲವು ನಾಯಕರಿಗೆ ಮನಸ್ಸಿಲ್ಲದಿದ್ದರೂ ಸರ್ಕಾರ ರಕ್ಷಣೆ ಮಾಡಲೇ

ಬೇಕಾಗಿದೆ. ಇದರ ನಡುವೆಯೂ ಬಿಜೆಪಿಗೆ ಎಲ್ಲೋ ಒಂದು ಸಣ್ಣ ಭರವಸೆಯೂ ಇದೆ. ಹೀಗಾಗಿ, ಫೆ.15 ರವರೆಗೆ ಸಮ್ಮಿಶ್ರ ಸರ್ಕಾರಕ್ಕೆ ಅಗ್ನಿಪರೀಕ್ಷೆಯಂತಾಗಿದೆ. ಆದರೆ ಪಕ್ಷಗಳ ಸಮಸ್ಯೆಗಳೇ ಜನರ ಸಮಸ್ಯೆಗಳಲ್ಲ ಎನ್ನುವುದನ್ನು ಕಾಂಗ್ರೆಸ್‌, ಜೆಡಿಎಸ್‌ ಮತ್ತು ಬಿಜೆಪಿ ನಾಯಕರು ಅರ್ಥಮಾಡಿಕೊಳ್ಳಬೇಕು. ಜನರಿಗೆ ಬೇಕಾಗಿರುವುದು ಉತ್ತಮ ಆಡಳಿತ- ಜನಸ್ನೇಹಿ ನೀತಿಗಳೇ ಹೊರತು ಇವರ ರಾಜಕೀಯ ತಂತ್ರಗಾರಿಕೆಗಳಲ್ಲ. ಸಮ್ಮಿಶ್ರ ಸರ್ಕಾರದ ಮೊದಲ ಜಂಟಿ ಅಧಿವೇಶನ ನಡೆಯಲಿದೆ. 

ಈ ಅಧಿವೇಶನ ಸುಸೂತ್ರವಾಗಿ ನಡೆಯಲಿ. ರಾಜ್ಯದ ಜನರನ್ನು ಕಾಡುತ್ತಿರುವ ಸಮಸ್ಯೆಗಳು ಇಲ್ಲಿ ಚರ್ಚೆಯಾಗಲಿ. ಪಕ್ಷಗಳೆಲ್ಲ ಈಗಲಾದರೂ ಸ್ವಹಿತಾಸಕ್ತಿಯನ್ನು ಬಿಟ್ಟು ರಾಜ್ಯದ ಸಮಸ್ಯೆಗಳತ್ತ ನೋಡಲಿ. ಬರದಿಂದ ನಾಡು ಕಂಗೆಟ್ಟಿದೆ, ಜನರು ಗುಳೆ ಹೋಗುತ್ತಿದ್ದಾರೆ, ಸರ್ಕಾರಿ ಶಾಲೆಗಳು ಬಾಗಿಲು ಹಾಕುತ್ತಿವೆ, ಹಲವು ರೋಗಗಳು ಜನಸಾಮಾನ್ಯರನ್ನು ಕಾಡುತ್ತಿವೆ…ಈ ಎಲ್ಲಾ ವಿಷಯಗಳಿಗೆ ಪರಿಹಾರ ಹುಡುಕುವ ಪ್ರಯತ್ನವನ್ನು ಜನನಾಯಕರು ಮಾಡಲಿ ಎನ್ನುವುದೇ ಆಶಯ. 
 

ಟಾಪ್ ನ್ಯೂಸ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

7-rbi

Editorial: ರೆಪೊ ದರದಲ್ಲಿ ಯಥಾಸ್ಥಿತಿ: ಆರ್‌ಬಿಐ ಜಾಣ್ಮೆಯ ನಡೆ

Climate Change: ಹವಾಮಾನ ವೈಪರೀತ್ಯ… ಆರೋಗ್ಯದ ಮೇಲಿರಲಿ ಕಾಳಜಿ

Climate Change: ಹವಾಮಾನ ವೈಪರೀತ್ಯ… ಆರೋಗ್ಯದ ಮೇಲಿರಲಿ ಕಾಳಜಿ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.