ದೇಶದಲ್ಲಿ ಅರಣ್ಯ ಪ್ರಮಾಣ ಹೆಚ್ಚಳ ಉತ್ತಮ ಬೆಳವಣಿಗೆ


Team Udayavani, Jun 7, 2022, 6:00 AM IST

ದೇಶದಲ್ಲಿ ಅರಣ್ಯ ಪ್ರಮಾಣ ಹೆಚ್ಚಳ ಉತ್ತಮ ಬೆಳವಣಿಗೆ

ಜಗತ್ತಿನಾದ್ಯಂತ ಮಾಲಿನ್ಯ ಪ್ರಮಾಣ ಹೆಚ್ಚಳವಾಗುತ್ತಲೇ ಇದ್ದು, ಇದು ಮನುಷ್ಯ ಕುಲಕ್ಕೇ ಅಪಾಯ ತಂದೊಡ್ಡುವ ಎಲ್ಲ ಸಾಧ್ಯತೆಗಳನ್ನು ತೆರೆದಿಟ್ಟಿದೆ. ಪ್ರತಿಯೊಂದು ದೇಶವು ತನ್ನಿಂದ ಉತ್ಪತ್ತಿಯಾಗುವ ಮಾಲಿನ್ಯ ಪ್ರಮಾಣವನ್ನು ಕಡಿಮೆ ಮಾಡಬೇಕು ಎಂಬುದು ಜಾಗತಿಕ ಸಮುದಾಯದ ಒತ್ತಾಸೆ. ಆದರೆ, ಇಲ್ಲಿ ಅಭಿವೃದ್ಧಿ ಹೊಂದಿದ ಮತ್ತು ಅಭಿವೃದ್ಧಿಶೀಲ ದೇಶಗಳ ನಡುವಿನ ಜಗಳದಿಂದಾಗಿ ಈ ಮಾಲಿನ್ಯ ಕಡಿಮೆ ಮಾಡಬೇಕು ಎಂಬ ಆಶಯ ನನೆಗುದಿಗೆ ಬಿದ್ದಿದೆ.

ಇದರ ಮಧ್ಯೆಯೇ ಕಳೆದ ಎಂಟು ವರ್ಷಗಳಲ್ಲಿ ದೇಶದಲ್ಲಿ ಅರಣ್ಯ ಪ್ರಮಾಣ 20 ಸಾವಿರ ಚದರ ಕಿಲೋ ಮೀಟರ್‌ ಹೆಚ್ಚಳವಾಗಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ಸ್ವಾಗತಾರ್ಹವಾದದ್ದೇ ಆಗಿದೆ. ಈ ಮೂಲಕ ದೇಶದಲ್ಲಿ ಕೇಂದ್ರದ ಜತೆಗೆ ರಾಜ್ಯ ಸರಕಾರಗಳೂ ಅರಣ್ಯ ಹೆಚ್ಚಳ ಮಾಡುವ ಪ್ರಯತ್ನ ನಡೆಸುತ್ತಿವೆ ಎಂಬುದು ಸ್ಪಷ್ಟವಾಗಿದೆ.

ಕಳೆದ ಎರಡು ವರ್ಷಗಳ ಲೆಕ್ಕಾಚಾರ ನೋಡುವುದಾದರೆ, 2,261 ಚದರ ಕಿ.ಮೀ. ಅರಣ್ಯ ಹೆಚ್ಚಳವಾಗಿರುವುದು ಕಂಡು ಬಂದಿದೆ. ಇದರಲ್ಲಿ ಆಂಧ್ರ ಪ್ರದೇಶವೇ ಮೊದಲ ಸ್ಥಾನದಲ್ಲಿದ್ದು, ಇಲ್ಲಿ 647 ಚದರ ಕಿ.ಮೀ. ಅರಣ್ಯ ಹೆಚ್ಚಳವಾಗಿದೆ. ಅನಂತರದ ಸ್ಥಾನಗಳಲ್ಲಿ ತೆಲಂಗಾಣ (632 ಚ.ಕಿ.ಮೀ.), ಒಡಿಶಾ (537 ಚ.ಕಿ.ಮೀ.), ಕರ್ನಾಟಕ (155 ಚ.ಕಿ.ಮೀ.) ಮತ್ತು ಝೂರ್ಖಂಡ್‌(110 ಚ.ಕಿ.ಮೀ.) ಇವೆ.

ಸದ್ಯ ದೇಶದಲ್ಲಿ 80.9 ಮಿಲಿಯನ್‌ ಹೆಕ್ಟೇರ್‌ ಅರಣ್ಯ ಪ್ರದೇಶವಿದ್ದು, ಭಾರತ ಭೂಭಾಗದ ಶೇ. 24.62ರಷ್ಟು ವ್ಯಾಪ್ತಿಯಲ್ಲಿದೆ. ಪ್ರದೇಶಾವಾರು ಲೆಕ್ಕಾಚಾರದಲ್ಲಿ ನೋಡುವುದಾದರೆ, ಮಧ್ಯ ಪ್ರದೇಶದಲ್ಲೇ ಹೆಚ್ಚು ಅರಣ್ಯ ಪ್ರದೇಶವಿದೆ. ಅನಂತರದ ಸ್ಥಾನಗಳಲ್ಲಿ ಅರುಣಾಚಲ ಪ್ರದೇಶ, ಛತ್ತೀಸ್‌ಗಢ, ಒಡಿಶಾ ಮತ್ತು ಮಹಾರಾಷ್ಟ್ರ ರಾಜ್ಯಗಳಿವೆ.

ಇದಕ್ಕಿಂತ ಹೆಚ್ಚಾಗಿ, ಪ್ರತಿಯೊಬ್ಬ ಮನುಷ್ಯನಿಗೆ ಸರಿಯಾದ ಪ್ರಮಾಣದಲ್ಲಿ ಆಮ್ಲಜನಕ ಪೂರೈಕೆಯಾಗಬೇಕಾದರೆ ಒಂದು ದೊಡ್ಡ ಮರ ಅಥವಾ ನಾಲ್ಕು ಪುಟ್ಟ ಮರಗಳು ಇರಬೇಕು. ಆದರೆ, ಭಾರತದಲ್ಲಿ ಕೇವಲ 35 ಬಿಲಿಯನ್‌ ಮರಗಳಿವೆ. ಭಾರತದ ಜನಸಂಖ್ಯೆ ಮಾತ್ರ ಸುಮಾರು 130 ಕೋಟಿ ಇದೆ. ಹೀಗಾಗಿ, ಭಾರತದಲ್ಲಿ ಪ್ರತೀ 25-26 ಮರಗಳಿಗೆ ಒಬ್ಬ ವ್ಯಕ್ತಿ ಇದ್ದಾನೆ. ಅಂದರೆ ಈಗಿರುವ ಮರಗಳ ಸಂಖ್ಯೆ ಲೆಕ್ಕಾಚಾರದಲ್ಲಿ ಭಾರತದಲ್ಲಿ ಸರಿಯಾದ ಆಮ್ಲಜನಕ ಸಿಗುತ್ತಿಲ್ಲ.

ಹಾಗೆಯೇ ಪರಿಸರ ರಕ್ಷಣೆ ಎಂದರೆ ಕೇವಲ ಗಿಡಗಳನ್ನು ನೆಡುವುದು ಎಂದಲ್ಲ. ಇದರ ಜತೆಗೆ, ಮಾಲಿನ್ಯ ನಿಯಂತ್ರಣ, ನೀರಿನ ಸಂರಕ್ಷಣೆ, ಸರಿಯಾಗಿ ಇಂಧನ ಬಳಕೆ, ನಾಗರಿಕ ಜಾಗೃತಿಯ ಜತೆಗೆ ಪ್ರತಿಯೊಬ್ಬ ವ್ಯಕ್ತಿಯೂ ತಲಾ ಒಂದೊಂದು ಗಿಡವನ್ನು ನೆಟ್ಟು ಪರಿಸರ ಸಂರಕ್ಷಣೆ ಮಾಡುತ್ತೇನೆ ಎಂಬ ಪಣತೊಡಬೇಕು. ಆಗಷ್ಟೇ ಪರಿಸರ ನಿಜವಾಗಿಯೂ ಉಳಿಯಲು ಸಾಧ್ಯ.

ಏನೇ ಆಗಲಿ ಕಳೆದ ಎಂಟು ವರ್ಷಗಳಲ್ಲಿ 20 ಸಾವಿರ ಚ.ಕಿ.ಮೀ. ಅರಣ್ಯ ಹೆಚ್ಚಾಗಿರುವುದು ಕಡಿಮೆ ಮಾತಲ್ಲ. ಇದಕ್ಕಾಗಿ ಸರಕಾರಗಳಿಗೆ ಮತ್ತು ಅರಣ್ಯ ಹೆಚ್ಚುವಲ್ಲಿ ಕಾರಣರಾದ ಎಲ್ಲರಿಗೂ ಅಭಿನಂದನೆ ಸಲ್ಲಿಸಲೇಬೇಕು. ಮೊದಲೇ ಹೇಳಿದ ಹಾಗೆ ಸದ್ಯ ಇಡೀ ಜಗತ್ತು ಮಾಲಿನ್ಯದಿಂದ ನಲುಗುತ್ತಿದೆ. ವಾತಾವರಣದಲ್ಲಿ ಕಾರ್ಬನ್‌ ಡೈ ಆಕ್ಸೆ„ಡ್‌ ಹೆಚ್ಚಾಗುತ್ತಿದೆ. ನಗರೀಕರಣದ ಪ್ರಭಾವ ಎಲ್ಲೆಡೆ ಕಾಣಿಸಿಕೊಂಡು ಕಾಂಕ್ರೀಟ್‌ ಕಾಡುಗಳೇ ಸೃಷ್ಟಿಯಾಗುತ್ತಿವೆ. ಇದನ್ನು ಸರಿಪಡಿಸಿಕೊಳ್ಳದೆ ಹೋದರೆ ಮುಂದಿನ ಪೀಳಿಗೆಗೆ ನಾವು ಕೆಟ್ಟ ಭವಿಷ್ಯ ನೀಡಿದಂತಾಗುತ್ತದೆ.

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.