ಇಂಧನ ಬೆಲೆ ಏರಿಕೆಯ ಪೆಟ್ಟು ಜನರ ಕಷ್ಟ ಕಾಣದೇ?


Team Udayavani, Jun 27, 2020, 5:59 AM IST

ಇಂಧನ ಬೆಲೆ ಏರಿಕೆಯ ಪೆಟ್ಟು ಜನರ ಕಷ್ಟ ಕಾಣದೇ?

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಕೋವಿಡ್‌-19ನ ನೇರ ಹಾಗೂ ಪರೋಕ್ಷ ಪರಿಣಾಮಗಳು ದೇಶವಾಸಿಗಳನ್ನು ಕಂಗೆಡಿಸಿವೆ. ಅದರಲ್ಲೂ ಲಾಕ್‌ಡೌನ್‌  ಸಮಯದಲ್ಲಿ ಆರ್ಥಿಕತೆಯ ಮೇಲೆ ಬಿದ್ದ ಹೊರೆಯು ಅಪಾರವಾದದ್ದು.

ಈ ಪೆಟ್ಟಿನಿಂದ ದೇಶವು ಚೇತರಿಸಿಕೊಳ್ಳಲು ಸಿದ್ಧವಾಗುತ್ತಿರುವ ವೇಳೆಯಲ್ಲೇ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಗಳಲ್ಲಿ ಆಗುತ್ತಿರುವ ಹೆಚ್ಚಳವು ಸಾರ್ವಜನಿಕರನ್ನು ಮತ್ತಷ್ಟು ಹೈರಾಣಾಗಿಸುತ್ತಿದೆ.

ಕಳೆದ 20 ದಿನಗಳಿಂದಲೂ ಪೆಟ್ರೋಲ್‌ ಹಾಗೂ ಡೀಸೆಲ್‌ನ ಬೆಲೆಯಲ್ಲಿ ಹೆಚ್ಚಳ­ವಾಗುತ್ತಿದ್ದು, ಆತಂಕ ಹುಟ್ಟಿಸುತ್ತಿರುವ ಸಂಗತಿಯೆಂದರೆ, ಕೆಲವು ರಾಜ್ಯಗಳಲ್ಲಂತೂ ಡೀಸೆಲ್‌ನ ಬೆಲೆ ಪೆಟ್ರೋಲನ್ನೂ ಹಿಂದಿಕ್ಕಿರುವುದು! ಹಾಗೆ ನೋಡಿದರೆ, ಜಾಗತಿಕ ಮಾರುಕಟ್ಟೆಯಲ್ಲೇನೂ ಕಚ್ಚಾ ತೈಲದ ಬೆಲೆಯಲ್ಲಿ ಏರಿಕೆಯಾಗಿಲ್ಲ. ಹೀಗಿರುವಾಗ, ದೇಶೀಯ ಮಾರುಕಟ್ಟೆಯಲ್ಲೇಕೆ ಇಂಧನ ಬೆಲೆ ಏರಿಕೆಯಾಗುತ್ತಲೇ ಇದೆ ಎನ್ನುವ ಪ್ರಶ್ನೆ ಸಾರ್ವಜನಿಕರದ್ದು.

ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆ ಏರಿಕೆಯ ಪರಿಣಾಮವು ಏಕ ಆಯಾಮ ದಲ್ಲಷ್ಟೇ ಇರುವುದಿಲ್ಲ. ಇಂಧನ ಬೆಲೆ ಏರಿಕೆಯು ಸಹಜವಾಗಿಯೇ ಸಾರಿಗೆ ವ್ಯವಸ್ಥೆಗೆ, ಮುಖ್ಯವಾಗಿ ಸರಕು-ಸಾಗಣೆ ವಲಯಕ್ಕೆ ಪೆಟ್ಟು ನೀಡುತ್ತದೆ. ತತ್ಪರಿಣಾಮವಾಗಿ ಅಗತ್ಯವಸ್ತುಗಳು ಸೇರಿದಂತೆ ಸರಿಸುಮಾರು ಎಲ್ಲದರ ಬೆಲೆ ಏರಿಕೆಗೂ ಇದು ಕಾರಣವಾಗುತ್ತದೆ.

ಅದರಲ್ಲೂ ಕೃಷಿ ವಲಯವೂ ಒಂದಲ್ಲ ಒಂದು ರೀತಿಯಲ್ಲಿ ಡೀಸೆಲ್‌ನ ಮೇಲೆ ಅವಲಂಬಿತವಾಗಿದೆ. ಆದರೆ, ಹೀಗೆ ಡೀಸೆಲ್‌ ಬೆಲೆಯು ಪೆಟ್ರೋಲ್‌ಗೆ ಸರಿಸಮನಾಗಿ ಓಡುತ್ತಿರುವುದರಿಂದ, ಈ ವಲಯಗಳಲ್ಲಿ ಬೆಲೆ ಏರಿಕೆ ಅನಿವಾರ್ಯವಾಗಿ ಬದಲಾಗುತ್ತದೆ. ಇದರ ಪರಿಣಾವನ್ನು ಎಲ್ಲರೂ ಎದುರಿಸಲೇಬೇಕಾಗುತ್ತದೆ.

ಲಾಕ್‌ಡೌನ್‌ ನಂತರದಿಂದ ಅನೇಕರ ಆರ್ಥಿಕ ಸ್ಥಿತಿ ಹದಗೆಟ್ಟಿದೆ. ದಿನ ಬೆಳಗಾ ಗುವುದರಲ್ಲಿ ನಿರುದ್ಯೋಗಿಗಳಾದವರೆಷ್ಟೋ ತಿಳಿಯದು. ಉದ್ಯೋಗ ವಲಯ ತತ್ತರಿಸಿದೆ, ಎಂಎಸ್‌ಎಂಇಗಳೂ ಚೇತರಿಸಿಕೊಳ್ಳಲು ಸಮಯ ಹಿಡಿಯಲಿದೆ. ಜನರ ಖರೀದಿ ಸಾಮರ್ಥ್ಯದಲ್ಲಿ ಭಾರೀ ಕುಸಿತ ಕಾಣಿಸಿಕೊಂಡಿದೆ.

ಈ ಹಿಂದೆ, ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಯನ್ನು ನಿಯಂತ್ರಣ ಮುಕ್ತ ಗೊಳಿಸುವಾಗ ಸರಕಾರ, ಇದರ ಒಟ್ಟಾರೆ ಪ್ರಯೋಜನವು ಗ್ರಾಹಕರಿಗೇ ಸಿಗಲಿದೆ ಎಂದು ಹೇಳಿತ್ತು. ಆದರೆ, ಅಂತಾರಾಷ್ಟ್ರೀಯ ಸ್ತರದಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಕುಸಿತವಾದರೂ ಸಹ, ಸಾರ್ವಜನಿಕರಿಗೆ ಇದರ ಪ್ರಯೋಜನವೇನೂ ಸಿಗುತ್ತಲೇ ಇಲ್ಲ. ನಿರುದ್ಯೋಗ, ಆರ್ಥಿಕ ಬಿಕ್ಕಟ್ಟಿನ ಈ ಸಮಯದಲ್ಲಿ ಬೆಲೆ ಏರಿಕೆಯೂ ಜತೆಯಾದರೆ, ಜನಸಾಮಾನ್ಯರ ಪರಿಸ್ಥಿತಿ ಚಿಂತಾಜನಕವಾಗುತ್ತದೆ ಎನ್ನುವುದು ಆಳುವವರು ಮರೆಯಬಾರದು.

ಟಾಪ್ ನ್ಯೂಸ್

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.