ಚೀನದ ಹಿಡಿತ ತಪ್ಪಿಸುವ ಕೆಲಸ ಮಾಡಲಿ ಜಿ7


Team Udayavani, Jun 29, 2022, 6:00 AM IST

ಚೀನದ ಹಿಡಿತ ತಪ್ಪಿಸುವ ಕೆಲಸ ಮಾಡಲಿ ಜಿ7

ಇತ್ತೀಚಿನ ವರ್ಷಗಳಲ್ಲಿ ಜಾಗತಿಕ ಮಟ್ಟದಲ್ಲಿ ಚೀನದ ಹಿಡಿತ ಹೆಚ್ಚುತ್ತಲೇ ಇದ್ದು, ಒಂದು ರೀತಿಯಲ್ಲಿ ಒಂದಲ್ಲ ಒಂದು ದೇಶಗಳು ಸಾಲದ ಸುಳಿಗೆ ಸಿಲುಕಿವೆ. ಅದರಲ್ಲೂ 2013ರಲ್ಲಿ ಚೀನದ ಬೆಲ್ಟ್ ಆ್ಯಂಡ್‌ ರೋಡ್‌ ಯೋಜನೆ ಜಾರಿಯಾದ ಮೇಲೆ ಸುಮಾರು 100 ದೇಶಗಳು ಚೀನದ ಬಿಗಿಮುಷ್ಟಿಗೆ ಸಿಲುಕಿವೆ. ಸದ್ಯ ಈ ರಾಷ್ಟ್ರಗಳನ್ನು ಸಾಲದ ಸುಳಿಯಿಂದ ತಪ್ಪಿಸಬೇಕು ಮತ್ತು ತೃತೀಯ ಜಗತ್ತಿನ ದೇಶಗಳಿಗೆ ಅಗತ್ಯ ನೆರವು ನೀಡಬೇಕಾದ ಅನಿವಾರ್ಯತೆಯೂ ಇಂದು ಜಾಗತಿಕ ನಾಯಕರ ಮುಂದಿದೆ.

ಇದರ ಅಂಗವಾಗಿಯೇ ಈಗ ಜರ್ಮನಿಯಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ ಅಮೆರಿಕ ನೇತೃತ್ವದಲ್ಲಿ ಜಿ7 ದೇಶಗಳು ಚೀನದ ಬೆಲ್ಟ್ ಆ್ಯಂಡ್‌ ರೋಡ್‌ ಯೋಜನೆಗೆ ಪರ್ಯಾಯವಾಗಿ ಜಾಗತಿಕ ಮೂಲ ಸೌಕರ್ಯ ಮತ್ತು ಹೂಡಿಕೆಯ ಸಹಭಾಗಿತ್ವ (ಪಿಜಿಐಐ) ಎಂಬ ಯೋಜನೆಯನ್ನು ಘೋಷಿಸಿವೆ. ಕಳೆದ ವರ್ಷದ ಶೃಂಗಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಿದ್ದು, ಈ ಬಾರಿ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಇದು 600 ಬಿಲಿಯನ್‌ ಡಾಲರ್‌ ಮೌಲ್ಯದ ಯೋಜನೆಯಾಗಿದ್ದು ಅಮೆರಿಕವೇ 200 ಬಿಲಿಯನ್‌ ಡಾಲರ್‌ ಹಣ ನೀಡಲಿದೆ. ಉಳಿದ ಹಣವನ್ನು ಜಿ7ನ ಇತರ ದೇಶಗಳು ಮತ್ತು ಐರೋಪ್ಯ ದೇಶಗಳು ನೀಡಲಿವೆ. ಪ್ರಮುಖವಾಗಿ ಏಷ್ಯಾ ಮತ್ತು ಆಫ್ರಿಕಾ ದೇಶಗಳಿಗೆ ಇದರಿಂದ ಪ್ರಯೋಜನವಾಗಲಿದೆ.

ಈ ಯೋಜನೆಯಲ್ಲಿ ಪ್ರಮುಖವಾಗಿ ಅಂಗೋಲಾ ದೇಶಕ್ಕೆ ಸೋಲಾರ್‌ ಪವರ್‌ ಪ್ರಾಜೆಕ್ಟ್, ಸೆನೆಗಲ್‌ಗೆ ಲಸಿಕೆಯ ತಯಾರಿಕಾ ವ್ಯವಸ್ಥೆ ರೂಪಿಸುವುದು, ರೊಮೆನಿಯಾಗೆ ಮಾಡ್ಯುಲರ್‌ ರಿಯಾಕ್ಟರ್‌, ಸಿಂಗಾಪುರ-ಫ್ರಾನ್ಸ್‌ ನಡುವಿನ 1,000 ಮೈಲು ದೂರದಲ್ಲಿ ಸಬ್‌ಮರೀನ್‌ ಟೆಲಿಕಮ್ಯೂನಿಕೇಶನ್‌ ಕೇಬಲ್‌ ಅಳವಡಿಸಿ ಈಜಿಪ್ಟ್ ಮತ್ತು ಆಫ್ರಿಕಾ ದೇಶಗಳಿಗೆ ಅನುಕೂಲ ಮಾಡಿಕೊಡುವುದು ಸೇರಿದೆ.

ಹಾಗೆಯೇ ಅಭಿವೃದ್ಧಿಶೀಲ ದೇಶಗಳಲ್ಲಿ ಕಲ್ಲಿದ್ದಲು ಬಳಕೆ ಕಡಿಮೆ ಮಾಡುವುದು, ದಕ್ಷಿಣ ಆಫ್ರಿಕಾ, ಭಾರತ, ಇಂಡೋನೇಷ್ಯಾ, ವಿಯೆಟ್ನಾಂ, ಸೆನೆಗಲ್‌ನಲ್ಲಿ ಎನರ್ಜಿ ಟ್ರಾನ್ಸಿಷನ್‌ ಪಾಟ್ನìರ್‌ಶಿಪ್‌ ಅನ್ನು ಜಾರಿ ಮಾಡುವುದು ಸೇರಿದೆ. ಇವೆಲ್ಲವುಗಳನ್ನು ಜಾರಿ ಮಾಡಿದರೆ ಜಾಗತಿಕವಾಗಿ ತಾಪಮಾನ ಏರಿಕೆ ಸಮಸ್ಯೆಯೂ ನಿವಾರಣೆಯಾಗುತ್ತದೆ ಎಂಬುದು ಜಿ7 ದೇಶಗಳ ಆಶಯವೂ ಆಗಿದೆ.

ಏನೇ ಆಗಲಿ, ತೃತೀಯ ಜಗತ್ತಿನ ದೇಶಗಳಿಗೆ ಸಹಕಾರ ನೀಡಲು ಹೊರಟಿರುವ ಈ ಯೋಜನೆ ಉತ್ತಮವೇ. ಆದರೆ ಇದು ಚೀನದ ಪ್ರತಿಸ್ಪರ್ಧಿಯಾಗಿ ಅಥವಾ ಚೀನವನ್ನು ಹಣಿಯಲಷ್ಟೇ ಸೀಮಿತವಾಗ ಬಾರದು. ಇದಕ್ಕೆ ಬದಲಾಗಿ ಚೀನದಿಂದ ಸಾಲ ಪಡೆದು ನರಳುತ್ತಿರುವ ಆಫ್ರಿಕಾ ದೇಶಗಳಿಗೆ ಸಹಾಯವಾಗುವಂತಾಗಬೇಕು.

ಸದ್ಯ ಜಗತ್ತಿನ ಬಹುತೇಕ ದೇಶಗಳು, ಚೀನದ ಸಾಲದ ಹಿಡಿತದಲ್ಲಿವೆ ಎಂದರೆ ತಪ್ಪಾಗಲಾರದು. ಇದಕ್ಕೆ ಉದಾಹರಣೆ ಎಂದರೆ ನಮ್ಮ ನೆರೆಯ ಪಾಕಿಸ್ಥಾನ, ಶ್ರೀಲಂಕಾ, ನೇಪಾಲ, ಮಾಲ್ಡೀವ್ಸ್‌ ದೇಶಗಳು. ಈಗಾಗಲೇ ಈ ದೇಶಗಳ ಹಣಕಾಸು ಸ್ಥಿತಿ ಹಳಿತಪ್ಪಿದೆ. ಸದ್ಯಕ್ಕಂತೂ ಇವು ಚೇತರಿಸಿ ಕೊಳ್ಳುವ ಸಾಧ್ಯತೆ ತೀರಾ ಕಡಿಮೆ ಇದೆ. ಮೊದಲಿಗೆ ಚೀನದ ಹಿಡಿತಕ್ಕೆ ಒಳಗಾಗಿರುವ ಇಂಥ ದೇಶಗಳ ನೆರವಿಗೆ ನಿಲ್ಲಬೇಕಾದ ಆವಶ್ಯಕತೆ ಜಿ7 ದೇಶಗಳ ಮುಂದಿದೆ. ಆಗಷ್ಟೇ ಬೇರೆ ದೇಶಗಳು ಜಿ7ನ ಈ ಉದ್ದೇಶದ ಮೇಲೆ ನಂಬಿಕೆ ಇರಿಸಲಿವೆ.

ಟಾಪ್ ನ್ಯೂಸ್

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.