ಸಾರ್ವಜನಿಕ ಗಣೇಶೋತ್ಸವ ನಿರ್ಧಾರ ತಡವೇಕೆ?


Team Udayavani, Aug 31, 2021, 6:00 AM IST

ಸಾರ್ವಜನಿಕ ಗಣೇಶೋತ್ಸವ ನಿರ್ಧಾರ ತಡವೇಕೆ?

ಕೊರೊನಾ ಕಾರಣದಿಂದಾಗಿ ಕಳೆದ ಒಂದೂವರೆ ವರ್ಷದಿಂದ ಜನ ಸಂಕಷ್ಟದಲ್ಲೇ ಕಾಲ ಕಳೆಯುತ್ತಿದ್ದಾರೆ. ಈಗ ಜನರಲ್ಲಿ ಅರಿವು ಮೂಡಿಸುವುದರ ಜತೆಗೆ ಅವರಲ್ಲಿ ಮಾನಸಿಕವಾಗಿಯೂ ಧೈರ್ಯ ತುಂಬ

ಬೇಕಾದ ಕೆಲಸವೂ ಸರಕಾರದ ಮುಂದೆಯೇ ಇದೆ. ಕೊರೊನಾ ಬಗ್ಗೆ ಹೆದರಿಕೆ ಬೇಡ, ಮುನ್ನೆಚ್ಚರಿಕೆ ಅಗತ್ಯ ಎಂದು ಎಷ್ಟು ಬಾರಿ ಹೇಳಿದರೂ, ಕೇಳುವ ಸ್ಥಿತಿಯಲ್ಲಿ ಜನರೂ ಇಲ್ಲ. ಇದಕ್ಕೆ ಕಾರಣ ಮೊದಲ ಎರಡು ಅಲೆಗಳು. ಅದರಲ್ಲೂ ಎರಡನೇ ಅಲೆ ಸಂದರ್ಭದಲ್ಲಂತೂ ಜನ ಕೊರೊನಾದಿಂದಾಗಿ ಅತೀ ಹೆಚ್ಚು ಭಯಭೀತರಾಗಿದ್ದರು.

ಸದ್ಯ ಜನರ ಭೀತಿ ಹೋಗಲಾಡಿಸಲು ಅದೆಷ್ಟೇ ಮಾನಸಿಕ ವೈದ್ಯರ ಬಳಿ ಸಮಾಲೋಚನೆ ನಡೆಸಿದರೂ ಒಂದೇ ಬಾರಿಗೆ ಧೈರ್ಯ ಬರಲು ಸಾಧ್ಯವಿಲ್ಲ. ಇದರ ಬದಲಾಗಿ ಜನ ನಂಬುವಂಥ ಆಚರಣೆಗಳನ್ನು ಮಾಡಿಕೊಂಡು, ದೇವರ ಪೂಜೆಯಲ್ಲೋ ಅಥವಾ ಇನ್ನಿತರ ಹಬ್ಬಗಳಲ್ಲೋ ಕಾಲ ಕಳೆಯುವಂತೆ ಮಾಡಬೇಕು. ಅದು ಯಾವ ಧರ್ಮದವರೇ ಆಗಿರಲಿ, ದೇವರ ಮೇಲಿನ ಒಂದು ನಂಬುಗೆ ಮಾನಸಿಕವಾಗಿ ಜನರನ್ನು ಮತ್ತಷ್ಟು ಗಟ್ಟಿಗೊಳಿಸಲು ಸಾಧ್ಯವಿದೆ.

ರಾಜ್ಯ ಸರಕಾರದ ಅಂಕಿ ಅಂಶಗಳೇ ಹೇಳುವ ಲೆಕ್ಕದಲ್ಲಿ ರಾಜ್ಯದಲ್ಲಿ ಕೊರೊನಾ ಸ್ಥಿತಿ ಒಂದಷ್ಟು ಸ್ಥಿರವಾಗಿದೆ. ಕೇರಳದಂತೆ ಅಥವಾ ಮಹಾರಾಷ್ಟ್ರದಂತೆ ಹೆಚ್ಚಾಗಿಲ್ಲ. ಇತ್ತೀಚೆಗಷ್ಟೇ ನಡೆದ ವರಮಹಾಲಕ್ಷ್ಮೀ ಹಬ್ಬದ ವೇಳೆ ಕೊರೊನಾ ಹೆಚ್ಚಾಗುವ ಭೀತಿ ಇತ್ತು. ಆದರೆ ಈಗ ಆ ಭೀತಿಯೂ ಕಳೆದಿದೆ. ಇಂಥ ಸಂದರ್ಭದಲ್ಲಿ ಜನರ ಬೇಡಿಕೆಯಂತೆ ಗಣೇಶೋತ್ಸವಕ್ಕೆ ಒಪ್ಪಿಗೆ ನೀಡಬಹುದಾಗಿತ್ತು. ಸೋಮವಾರ ಈ ಸಂಬಂಧವೇ ಚರ್ಚೆ ನಡೆಸುವ ಸಲುವಾಗಿ ಸಭೆ ಕರೆದು, ಕಡೆಗೆ ಗಣೇಶೋತ್ಸವದ ಬಗ್ಗೆ ನಿರ್ಧಾರ ತೆಗೆದುಕೊಳ್ಳದೇ ದಿನವನ್ನು ಮುಂದಕ್ಕೆ ಹಾಕಿದ್ದು ಸರಿಯಲ್ಲ. ಗಣೇಶೋತ್ಸವಕ್ಕೆ ಇನ್ನು ಐದು ದಿನ ಇರುವಾಗ ನಾವು ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೇಳಿ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಮಾತನಾಡುವುದು ತಕ್ಕುದಲ್ಲ.

ಗಣೇಶೋತ್ಸವ ಕೇವಲ ಆಚರಣೆಯಲ್ಲ ಅಥವಾ ಹಬ್ಬ ಅಲ್ಲ. ಈ ಸಂದರ್ಭದಲ್ಲಿ ಆರ್ಥಿಕತೆಗೆ ಚೇತರಿಕೆ ಮಾಡುವಂಥ ಬೆಳವಣಿಗೆಗಳೂ ನಡೆಯುತ್ತವೆ. ಈಗಾಗಲೇ ಕೊರೊನಾ ಲಾಕ್‌ಡೌನ್‌ಗೆ ಸಿಲುಕಿ ವ್ಯಾಪಾರಸ್ಥರು ನಲುಗಿದ್ದಾರೆ. ಈ ವೇಳೆಯಲ್ಲಾದರೂ ಒಂದಷ್ಟು ವ್ಯಾಪಾರ- ವಹಿವಾಟು ಮಾಡಿಕೊಳ್ಳುತ್ತಿದ್ದರು. ಈಗ ಸೆ.5ನೇ ತಾರೀಕು ಸಾರ್ವಜನಿಕ ಗಣೇಶೋತ್ಸವ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೇಳಿ ವ್ಯಾಪಾರಸ್ಥರಿಗೆ ದೃಢವಾದ ನಿರ್ಧಾರ ತೆಗೆದುಕೊಳ್ಳದಂತೆ ಮಾಡಲಾಗಿದೆ. ಈಗಲೇ ನಿರ್ಧಾರ ತೆಗೆದುಕೊಂಡಿದ್ದರೆ ಸಮಂಜಸವಾಗಿರುತ್ತಿತ್ತು.

ಇನ್ನು ಕೇರಳದಿಂದ ಬರುವ ವಿದ್ಯಾರ್ಥಿಗಳಿಗೆ ಮತ್ತು ಜನರಿಗೆ ಕಡ್ಡಾಯ ಕ್ವಾರಂಟೈನ್‌ ಮತ್ತು ಪರೀಕ್ಷೆಯಂಥ ನಿರ್ಧಾರವನ್ನು ಈಗ ತೆಗೆದುಕೊಳ್ಳಲಾಗಿದೆ. ಇದೂ ತೀರಾ ತಡವಾದ ನಿರ್ಧಾರ. ಈಗಾಗಲೇ ಹಾಸನ ಮತ್ತು ಕೋಲಾರದಲ್ಲಿ ಕೇರಳದಿಂದ ಬಂದ ವಿದ್ಯಾರ್ಥಿಗಳಲ್ಲಿ ಹೆಚ್ಚು ಕೊರೊನಾ ಕಾಣಿಸಿಕೊಂಡಿದೆ. ಮೊದಲೇ ಕಠಿನವಾದ ನಿರ್ಧಾರ ತೆಗೆದುಕೊಂಡಿದ್ದರೆ ಸೋಂಕು ಹರಡುವುದನ್ನಾದರೂ ತಪ್ಪಿಸಬಹುದಾಗಿತ್ತು.

ಇದರ ನಡುವೆಯೇ ದಿನ ಬಿಟ್ಟು ದಿನ 6ರಿಂದ 8ನೇ ತರಗತಿ ಶಾಲೆ ತೆರೆಯಲು ಒಪ್ಪಿಗೆ ಕೊಟ್ಟಿರುವುದು ಸರಿಯಾದ ನಿರ್ಧಾರ. ಆದರೆ ಎಲ್ಲ ಕೊರೊನಾ ನಿಯಮಾವಳಿಗಳನ್ನು ಪಾಲಿಸಬೇಕಾದುದು ಸರಕಾರದ ಮತ್ತು ಜನರ ಆದ್ಯ ಕರ್ತವ್ಯವಾಗಿದೆ.

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.