ಭಾರತದ ಜಿಡಿಪಿ ಬೆಳವಣಿಗೆ ದರ ಆಶಾದಾಯಕ


Team Udayavani, Jun 2, 2022, 6:00 AM IST

ಭಾರತದ ಜಿಡಿಪಿ ಬೆಳವಣಿಗೆ ದರ ಆಶಾದಾಯಕ

ಕೊರೊನಾ ವೇಳೆಯಲ್ಲಿ ತೀವ್ರ ಕುಸಿತ ಕಂಡು, ನೇತ್ಯಾತ್ಮಕ ಮಟ್ಟಕ್ಕೆ ತಲುಪಿದ್ದ ಭಾರತದ ಜಿಡಿಪಿ ದರ ಈಗ ಸುಧಾರಿಸಿಕೊಂಡು ಮತ್ತೆ ಉತ್ತಮ ಹಾದಿಯಲ್ಲಿದೆ. ಮಂಗಳವಾರವಷ್ಟೇ ಕೇಂದ್ರ ಸಾಂಖೀಕ ಇಲಾಖೆ ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ, 2021-22ರಲ್ಲಿ ಭಾರತದ ಜಿಡಿಪಿ ದರ ಶೇ. 8.7 ಆಗಿದೆ. ಆದರೆ ಮೂರನೇ ತ್ತೈಮಾಸಿಕಕ್ಕೆ ಹೋಲಿಕೆ ಮಾಡಿದರೆ, ರಷ್ಯಾ ಮತ್ತು ಉಕ್ರೇನ್‌ ನಡುವಿನ ಯುದ್ಧದಿಂದಾಗಿ ನಾಲ್ಕನೇ ತ್ತೈಮಾಸಿಕದಲ್ಲಿ ಜಿಡಿಪಿ ದರ ಇಳಿಕೆಯಾಗಿದೆ. ಅಂದರೆ ಶೇ. 4.1ರಷ್ಟು ದಾಖಲಾಗಿದೆ.

ಪ್ರತೀ ಬಾರಿಯೂ ಭಾರತದ ಆರ್ಥಿಕತೆ ಸುಧಾರಿಸಿಕೊಳ್ಳುತ್ತಿದೆ ಎನ್ನುವಾಗ, ಒಂದಿಲ್ಲೊಂದು ಕಾರಣಗಳಿಂದಾಗಿ ಪೆಟ್ಟು ಬೀಳುತ್ತದೆ. ಮೋದಿ ಸರಕಾರದ ಎರಡನೇ ಅವಧಿ ಶುರುವಾದಾಗ, ಭಾರತದ ಅಭಿವೃದ್ಧಿ ದರ ಏರಿಕೆಯ ಬಗ್ಗೆ ಭಾರೀ ನಿರೀಕ್ಷೆ ಇರಿಸಿಕೊಳ್ಳಲಾಗಿತ್ತು. ಆದರೆ, 2019ರ ಅಂತ್ಯ ಮತ್ತು 2020ರ ಆರಂಭದಲ್ಲಿ ಜಗತ್ತಿನಾದ್ಯಂತ ಕಾಣಿಸಿಕೊಂಡ ಕೊರೊನಾ ಮಹಾಮಾರಿ, ಜನರಿಗಷ್ಟೇ ಅಲ್ಲ, ಎಲ್ಲಾ ದೇಶಗಳ ಆರ್ಥಿಕತೆಗೂ ದೊಡ್ಡ ಪೆಟ್ಟು ನೀಡಿತು. ಆರ್ಥಿಕ ತಜ್ಞರ ಪ್ರಕಾರ, ಕೊರೊನಾ ವೇಳೆಯಲ್ಲಿ ಆಗಿರುವ ಹೊಡೆತ ಸರಿಯಾಗಬೇಕು ಎಂದರೆ, ಇನ್ನೂ ಹತ್ತಾರು ವರ್ಷಗಳು ಬೇಕು. ಅಂದರೆ, 2035ರ ವೇಳೆಗೆ ಜಗತ್ತಿನ ಆರ್ಥಿಕತೆ ಸುಧಾರಿಸಿಕೊಳ್ಳುವ ಸಾಧ್ಯತೆ ಇದೆ.

ಈ ಎಲ್ಲ ಅಡ್ಡಿ ಆತಂಕಗಳ ನಡುವೆ 2021-22ರ ಭಾರತದ ಆರ್ಥಿಕತೆ ವರ್ಲ್ಡ್ ಬ್ಯಾಂಕ್‌, ಐಎಂಎಫ್ ಸೇರಿದಂತೆ ಎಲ್ಲ ಜಾಗತಿಕ ಆರ್ಥಿಕ ಸಂಸ್ಥೆಗಳ ನಿರೀಕ್ಷೆಗೆ ಅನುಗುಣವಾಗಿಯೇ ಬೆಳವಣಿಗೆ ಕಂಡಿದೆ.

ವಿಚಿತ್ರವೆಂದರೆ ಕಳೆದ ಆರ್ಥಿಕ ವರ್ಷದ ಮೊದಲ ಮೂರು ತ್ತೈಮಾಸಿಕಗಳಲ್ಲಿ ಬೆಳವಣಿಗೆ ದರ ಕೊಂಚ ಹೆಚ್ಚಾಗಿಯೇ ಇದೆ. ಆದರೆ, ಕಡೇ ತ್ತೈಮಾಸಿಕದ ಮೇಲೆ ಉಕ್ರೇನ್‌ ಮತ್ತು ರಷ್ಯಾ ನಡುವಿನ ಯುದ್ಧ, ತೈಲ ದರ ಏರಿಕೆ, ಹಣದುಬ್ಬರ ಅಡ್ಡಪರಿಣಾಮ ಬೀರಿವೆ.

2021-22ರ ಹಣಕಾಸು ವರ್ಷದಲ್ಲಿ ಮೊದಲ ತ್ತೈಮಾಸಿಕದಲ್ಲಿ ಶೇ. 20.1, 2ನೇ ತ್ತೈಮಾಸಿಕದಲ್ಲಿ ಶೇ. 8.4, 3ನೇ ತ್ತೈಮಾಸಿಕದಲ್ಲಿ ಶೇ.5.4 ಹಾಗೂ 4ನೇ ತ್ತೈಮಾಸಿಕದಲ್ಲಿ ಶೇ. 4.1ರಷ್ಟು ಬೆಳವಣಿಗೆಯಾಗಿದೆ. ಇಲ್ಲಿ ಕಡೇ ತ್ತೈಮಾಸಿಕದಲ್ಲಿ ಇಳಿಕೆಯಾಗಿರುವುದು ಕಾಣಿಸಿದೆ.

ಇನ್ನು ವ್ಯಾಪಾರ, ಹೊಟೇಲ್‌ ಮತ್ತು ಸಾರಿಗೆ ವಲಯಗಳಲ್ಲಿಯೂ ಉತ್ತಮ ಸುಧಾರಣೆಯಾಗಿದೆ. ಇಲ್ಲಿ ಶೇ. 11.1ರಷ್ಟು ಬೆಳವಣಿಗೆಯಾಗಿದೆ. ಕಳೆದ ವರ್ಷದ ಇದೇ ವೇಳೆಗೆ ಶೇ.20ರಷ್ಟು ನೇತ್ಯಾತ್ಮಕ ಪ್ರಗತಿಯಾಗಿತ್ತು. ಹಾಗೆಯೇ ಉತ್ಪಾದನಾ ವಲಯವೂ ಶೇ. 9.9ರಷ್ಟು ಪ್ರಗತಿಯಾಗಿದ್ದು, ಕಳೆದ ವರ್ಷದ ಇದೇ ಅವಧಿಯಲ್ಲಿ ಶೇ.0.6ರಷ್ಟು ನೇತ್ಯಾತ್ಮಕ ಬೆಳವಣಿಗೆಯಾಗಿತ್ತು. ಆದರೆ ಕಳೆದ ವರ್ಷ ಕೃಷಿ ವಲಯ ಶೇ.3.3ರಷ್ಟು ಬೆಳವಣಿಗೆ ಸಾಧಿಸಿದ್ದು, ಈ ವರ್ಷ ಶೇ. 3ಕ್ಕೆ ಕುಸಿತವಾಗಿದೆ. ಈ ಎಲ್ಲ ಅಂಕಿ ಅಂಶಗಳು, ಆರ್ಥಿಕತೆಯ ಬಗ್ಗೆ ಆಶಾವಾದ ಮೂಡಿಸುವಂತಿವೆ. ಇದಕ್ಕೆ ಪೂರಕವಾಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಂಬಂಧಿತ ವಲಯಗಳ ಉತ್ತೇಜನಕ್ಕೆ ಮತ್ತಷ್ಟು ಸಹಕಾರ ನೀಡಬೇಕು. ಎಲ್ಲೆಲ್ಲಿ ಕಡಿಮೆ ಬೆಳವಣಿಗೆ ದರವಾಗಿದೆಯೋ ಅಲ್ಲಿ, ಹೆಚ್ಚಿನ ಮುತುವರ್ಜಿ ವಹಿಸಬೇಕು. ಅಲ್ಲದೆ ನಿರುದ್ಯೋಗ ಸಮಸ್ಯೆ ನಿವಾರಣೆಗಾಗಿ ಎಲ್ಲ ರೀತಿಯ ಕ್ರಮ ತೆಗೆದುಕೊಂಡು ಹಣದುಬ್ಬರ ಸಮಸ್ಯೆಯನ್ನೂ ಹೋಗಲಾಡಿಸಬೇಕು. ಆಗಷ್ಟೇ ಮುಂದಿನ ಹಣಕಾಸು ವರ್ಷದಲ್ಲಿ ಮತ್ತಷ್ಟು ಬೆಳವಣಿಗೆ ಕಾಣಲು ಸಾಧ್ಯವಾಗುತ್ತದೆ.

ಟಾಪ್ ನ್ಯೂಸ್

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.