ಗ್ರಾ.ಪಂ.ಚುನಾವಣೆ ಘೋಷಣೆ; ಸುರಕ್ಷತೆಯ ಪಾಲನೆ ಮುಖ್ಯ


Team Udayavani, Dec 2, 2020, 6:01 AM IST

ಗ್ರಾ.ಪಂ.ಚುನಾವಣೆ ಘೋಷಣೆ; ಸುರಕ್ಷತೆಯ ಪಾಲನೆ ಮುಖ್ಯ

ಸಾಂದರ್ಭಿಕ ಚಿತ್ರ

ಗ್ರಾಮ ಪಂಚಾಯತ್‌ ಚುನಾವಣೆ ನಡೆಯುತ್ತದೋ ಇಲ್ಲವೋ ಎನ್ನುವ ಚರ್ಚೆ-ಗೊಂದಲ ನಡೆದೇ ಇತ್ತು. ಕೊನೆಗೂ ಈ ಗೊಂದಲಗಳಿಗೆಲ್ಲ ತೆರೆಬಿದ್ದಿದ್ದು, ಡಿ. 22 ಹಾಗೂ ಡಿ. 27ರಂದು 30 ಜಿಲ್ಲೆಗಳ 5,762 ಗ್ರಾಮ ಪಂಚಾಯತ್‌ಗಳಿಗೆ ಚುನಾವಣೆಯ ವೇಳಾಪಟ್ಟಿ ಘೋಷಿಸಿದೆ ರಾಜ್ಯ ಚುನಾವಣ ಆಯೋಗ. ಮತದಾನದ ಸಮಯದಲ್ಲಿ ಮತದಾರರು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಮತಗಟ್ಟೆ ಪ್ರವೇಶಿಸುವ ಮುನ್ನ ಸ್ಯಾನಿಟೈಸರ್‌ ಬಳಸಬೇಕು ಎಂಬ ಮುನ್ನೆಚ್ಚರಿಕೆಯ ಕ್ರಮಗಳೂ ಇರಲಿವೆ.

ಆದಾಗ್ಯೂ ಕೋವಿಡ್‌ನ‌ ಈ ಸಮಯದಲ್ಲಿ ಚುನಾವಣೆಗಳನ್ನು ನಡೆಸುವ ವಿಚಾರ ಹಲವು ಆತಂಕಗಳನ್ನು ಹುಟ್ಟುಹಾಕುವುದು ಸಹಜವೇ. ಇದರ ನಡುವೆಯೇ ದೇಶಾದ್ಯಂತ ಹಲವು ಚುನಾವಣೆಗಳು ನಡೆದಿವೆ. ಬಿಹಾರದಲ್ಲಿ ವಿಧಾನಸಭಾ ಚುನಾವಣೆ, ದೇಶಾದ್ಯಂತ ಕೆಲವು ರಾಜ್ಯಗಳಲ್ಲಿ ಲೋಕಸಭಾ ಉಪಚುನಾವಣೆ ಹಾಗೂ ಕರ್ನಾಟಕದಲ್ಲಿ ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳೂ ನಡೆದವು.

ಚುನಾವಣ ಆಯೋಗ ಈ ಚುನಾವಣೆಗಳ ಸಮಯದಲ್ಲೂ ಸುರಕ್ಷತ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿತ್ತು. ಆದರೆ ಪ್ರಚಾರ ಸಂದರ್ಭಗಳಲ್ಲಿ ಅಭ್ಯರ್ಥಿಗಳು, ರಾಜಕೀಯ ಕಾರ್ಯಕರ್ತರು ಬಹುತೇಕ ನಿಯಮಗಳನ್ನು ಉಲ್ಲಂ ಸಿರುವುದನ್ನು ನೋಡಿದ್ದೇವೆ. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರವೆನ್ನುವುದು ನೆಪಮಾತ್ರಕ್ಕೆ ಎನ್ನುವಂತಾಗಿತ್ತು. ಇನ್ನು ಗೆದ್ದ ಅಭ್ಯರ್ಥಿಗಳ ಬೆಂಬಲಿಗರೂ ಸಾಮಾಜಿಕ ಅಂತರ ಪರಿಪಾಲನೆಯನ್ನು ಮರೆತು ವಿಜೃಂಭಿಸಿದ್ದು ಕೂಡ ವರದಿಯಾಗಿತ್ತು.

ಚುನಾವಣ ಆಯೋಗವು ಮತಗಟ್ಟೆಯಲ್ಲಿ ಅಪಾಯಕ್ಕೆಡೆಯಾಗದಂತೆ ಸುರಕ್ಷತ ಕ್ರಮಗಳನ್ನು ಖಂಡಿತ ಜಾರಿಮಾಡುತ್ತದೆ. ಆದರೆ ಅದರ ಆಚೆಗೂ ಸುರಕ್ಷತ ಕ್ರಮಗಳ ಪಾಲನೆಯ ಜವಾಬ್ದಾರಿ ಎಲ್ಲರ ಮೇಲೂ ಇರುತ್ತದೆ. ಈಗ ಗ್ರಾಮ ಪಂಚಾಯತ್‌ ಚುನಾವಣೆಯ ಸಮಯದಲ್ಲೂ ಸುರಕ್ಷತ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದ್ದು, ಪ್ರತಿಯೊಂದು ಮತಗಟ್ಟೆಗಳಲ್ಲೂ ಮತದಾರರ ಗರಿಷ್ಠ ಸಂಖ್ಯೆಯನ್ನೂ ಮಿತಿಗೊಳಿಸಲಾಗಿದೆ. ಕೋವಿಡ್‌ ಸಾಂಕ್ರಾಮಿಕವು ಈಗ ನಗರ ಪ್ರದೇಶಗಳಿಗೆ ಸೀಮಿತವಾಗಿ ಉಳಿದಿಲ್ಲ. ಅದು ಗ್ರಾಮೀಣ ಭಾಗದಲ್ಲೂ ತನ್ನ ಬಾಹುಗಳನ್ನು ಚಾಚಿ ಬಿಟ್ಟಿದೆ. ಸಾಂಕ್ರಾಮಿಕದ ಸ್ವರೂಪ ಏಕತೆರನಾಗಿ ಇರುವುದಿಲ್ಲ. ಕೆಲವರಿಗೆ ಲಕ್ಷಣಗಳು ಸ್ಪಷ್ಟವಾಗಿದ್ದರೆ, ರೋಗಲಕ್ಷಣವಿಲ್ಲದೇ ಇರುವವರೂ ಅನೇಕರಿರುತ್ತಾರೆ. ಈ ಕಾರಣಕ್ಕಾಗಿಯೇ ಮತದಾನದ ಸಮಯದಲ್ಲಿ ಸೋಂಕು ಹರಡದಂತೆ ಸೂಕ್ತ ಎಚ್ಚರಿಕೆಗಳನ್ನು ಪಾಲಿಸುವುದು ಎಲ್ಲರ ಜವಾಬ್ದಾರಿ.

ಚುನಾವಣ ಸಮಯದಲ್ಲಿ ಹಣ ಹಾಗೂ ಇತರ ಆಮಿಷಗಳನ್ನು ಒಡ್ಡುವ ಅಡ್ಡ ಮಾರ್ಗಗಳೂ ಎಷ್ಟೇ ಪ್ರಯತ್ನಗಳ ಅನಂತರವೂ ಇನ್ನೂ ನಿಂತಿಲ್ಲ. ಎಲ್ಲಿಯವರೆಗೂ ಮತದಾರರು ಇಂಥ ಆಮಿಷಗಳಿಗೆ ಬಲಿಯಾಗುವುದನ್ನು ನಿಲ್ಲಿಸುವುದಿಲ್ಲವೋ ಅಲ್ಲಿಯವರೆಗೂ ಬದಲಾವಣೆ ಸಾಧ್ಯವೂ ಇಲ್ಲ. ಈ ನಿಟ್ಟಿನಲ್ಲಿ ಪ್ರಾಮಾಣಿಕತೆಯೇ ಎಲ್ಲರ ಮೂಲಮಂತ್ರವಾಗಬೇಕು. ಇನ್ನು ಗ್ರಾಮ ಪಂಚಾಯತ್‌ ಚುನಾವಣೆಗಳು ಹಳ್ಳಿಯ ಅಖಾಡವಾಗಿದ್ದರೂ ಗ್ರಾಮಾಭಿವೃದ್ಧಿಯಲ್ಲಿ ಮಹತ್ತರ ಪಾತ್ರವಹಿಸುವ ಅವಕಾಶಗಳು ಎನ್ನುವುದನ್ನು ಮತದಾರರು ಮರೆಯಬಾರದು.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

Wild Elephant ದಾಳಿ ಸಮಸ್ಯೆ: ವೈಜ್ಞಾನಿಕ ಪರಿಹಾರ ಅಗತ್ಯ

Wild Elephant ದಾಳಿ ಸಮಸ್ಯೆ: ವೈಜ್ಞಾನಿಕ ಪರಿಹಾರ ಅಗತ್ಯ

Terror 2

Terrorism ನಿಗ್ರಹ ಎಲ್ಲ ದೇಶಗಳ ಧ್ಯೇಯವಾಗಲಿ

1-aww

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಸರಕಾರ ತುರ್ತು ಗಮನ ನೀಡಲಿ

14-editorial

Campaigns: ಪ್ರಚಾರದಲ್ಲಿ ದ್ವೇಷ ಭಾಷಣ: ಸ್ವಯಂ ನಿಯಂತ್ರಣ ಅಗತ್ಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.