ದಟ್ಟಣೆ ತಡೆಗಾಗಿ ಸಮೂಹ ಸಾರಿಗೆಗೆ ಸಿಗಲಿ ಹೆಚ್ಚಿನ ಒತ್ತು


Team Udayavani, Jun 2, 2023, 6:00 AM IST

ದಟ್ಟಣೆ ತಡೆಗಾಗಿ ಸಮೂಹ ಸಾರಿಗೆಗೆ ಸಿಗಲಿ ಹೆಚ್ಚಿನ ಒತ್ತು

ರಾಜ್ಯದಲ್ಲಿ ವಾಹನಗಳ ಸಂಖ್ಯೆ ಮೂರು ಕೋಟಿ ಗಡಿ ದಾಟಿದೆ. ಈ ಮೂಲಕ ಕಳೆದೊಂದು ದಶಕದಲ್ಲಿ ರಸ್ತೆಗಿಳಿದ ವಾಹನಗಳು ದುಪ್ಪಟ್ಟಾಗಿವೆ. ಇದರಲ್ಲಿ ರಾಜಧಾನಿ ಬೆಂಗಳೂರಿನಲ್ಲೇ 1.09 ಕೋಟಿ ಇವೆ. ಮತ್ತೊಂದೆಡೆ ಇದೇ ಅವಧಿಯಲ್ಲಿ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಯಂತಹ ಸಮೂಹ ಸಾರಿಗೆ ವ್ಯವಸ್ಥೆಯಲ್ಲಿ ಸೇರ್ಪಡೆಗೊಂಡ ಬಸ್‌ಗಳ ಸಂಖ್ಯೆ ನಗಣ್ಯವಾಗಿದೆ.

ಕೋವಿಡ್‌ ಸೇರಿದಂತೆ ಇದರ ಹಿಂದಿನ ಕಾರಣಗಳು ಏನೇ ಇದ್ದರೂ ಸರಕಾರದ ಆದ್ಯತೆಗಳು ಮತ್ತು ಅವುಗಳ ಅನುಷ್ಠಾನದಲ್ಲಿರುವ ಆಸಕ್ತಿಗೆ ಇದು ಕನ್ನಡಿ ಹಿಡಿಯುತ್ತದೆ.

ವಾಹನ ದಟ್ಟಣೆಯು ರಸ್ತೆಗಳ ಮೇಲೆ ಹೊರೆ ಮಾತ್ರವಲ್ಲ; ಸಂಚಾರದಟ್ಟಣೆ, ವಾಯುಮಾಲಿನ್ಯ ಸಹಿತ ಹಲವು ರೀತಿಯ ಸಮಸ್ಯೆಗಳಿಗೆ ಎಡೆಮಾಡಿಕೊಡಲಿದೆ. ವಿಶ್ವದ ಅತೀ ಹೆಚ್ಚು ಟ್ರಾಫಿಕ್‌ವುಳ್ಳ ಎರಡನೇ ನಗರ ಎಂಬ ಅಪಖ್ಯಾತಿ ಬೆಂಗಳೂರಿಗಿದೆ. ಇದೇ ದಟ್ಟಣೆಯಲ್ಲಿ ಹೆಚ್ಚು ಹೊತ್ತು ಕಳೆಯುವ ವಾಹನ ಚಾಲಕರಲ್ಲಿ ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚುತ್ತಿವೆ ಎಂದೂ ಮತ್ತೊಂದು ಅಧ್ಯಯನ ಹೇಳುತ್ತದೆ. ಇದೇ ಗತಿಯಲ್ಲಿ ವಾಹನಗಳ ಸಂಖ್ಯೆ ಏರಿಕೆಯಾದರೆ ಸ್ಥಿತಿ ಮತ್ತಷ್ಟು ಚಿಂತಾಜನಕ ಆಗಲಿದೆ ಎಂಬುದರಲ್ಲಿ ಎರಡುಮಾತಿಲ್ಲ.

ಬರುವ ಸರಕಾರಗಳಿಗೆ ಈಗಲೂ ಮೇಲ್ಸೇತುವೆಗಳು, ಕೆಳ ಸೇತುವೆಗಳು, ರಸ್ತೆ ವಿಸ್ತರಣೆಯಂತಹ ಕ್ರಮಗಳು ಅಭಿವೃದ್ಧಿಯ ಕುರು ಹುಗಳಾಗಿವೆ. ಇದೇ ಕಾರಣಕ್ಕೆ ಪ್ರತೀ ವರ್ಷ ಸಾವಿರಾರು ಕೋಟಿ ಹಣ ಈ ರಸ್ತೆಗಳಲ್ಲೇ ಹರಿದುಹೋಗುತ್ತದೆ. ಇದು ಖಾಸಗಿ ವಾಹನಗಳು ರಸ್ತೆ ಗಿಳಿಯಲು ಪ್ರೇರಣೆ ಹೊರತು, ದಟ್ಟಣೆಗೆ ಪರಿಹಾರವಲ್ಲ. ಮತ್ತೂಂದೆಡೆ ಸಮೂಹ ಸಾರಿಗೆ ವ್ಯವಸ್ಥೆಯನ್ನು ಪ್ರೋತ್ಸಾಹಿಸುವ ಬದಲಿಗೆ ಸಾಧ್ಯವಾದಷ್ಟು ಅದನ್ನು ದುರ್ಬಲಗೊಳಿಸುವ ಕಡೆಗೆ ಸರಕಾರ ಹೆಜ್ಜೆ ಇಡುತ್ತಿವೆ ಎಂಬುದು ಅವುಗಳ ಧೋರಣೆಯಿಂದಲೇ ಗೊತ್ತಾಗುತ್ತದೆ. ಇದಕ್ಕೆ ಪೂರಕವಾಗಿ ಹೇಳುವುದಾದರೆ, ವಿದ್ಯಾರ್ಥಿಗಳು ಸೇರಿದಂತೆ ವಿವಿಧ ವರ್ಗಗಳಿಗೆ ನೀಡುವ ರಿಯಾಯಿತಿ ಪಾಸಿನ ಅನುದಾನ ಇನ್ನೂ ಸಾವಿರಾರು ಕೋಟಿ ಬಾಕಿ ಉಳಿಸಿಕೊಳ್ಳಲಾಗಿದೆ. ಕಳೆದೊಂದು ದಶಕದಲ್ಲಿ ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ಬಸ್‌ಗಳ ಸಂಖ್ಯೆ 24 ಸಾವಿರ ಆಸುಪಾಸಿನಲ್ಲೇ ಇದೆ.

ಒಂದು ಕುಟುಂಬಕ್ಕೆ ಒಂದೇ ವಾಹನ ಎಂಬ ನಿರ್ಬಂಧ, ವಾಹನ ನಿಲುಗಡೆಗೆ ಜಾಗ ಲಭ್ಯವಿದ್ದರೆ ಮಾತ್ರ ನೋಂದಣಿಗೆ ಅವಕಾಶ, ವಾಹನ ದಟ್ಟಣೆವುಳ್ಳ ರಸ್ತೆಗಳಲ್ಲಿ ತೆರಿಗೆ ವಿಧಿಸುವುದು, ಕಾರ್‌ ಪೂಲಿಂಗ್‌, ನಿಗಮಗಳಲ್ಲಿ ಬಸ್‌ಗಳ ಸಂಖ್ಯೆ ಜತೆಗೆ ನಿಖರ ಮತ್ತು ಸಮರ್ಪಕ ಸೇವೆಗಳನ್ನು ಕಲ್ಪಿಸುವಂತಹ ಕ್ರಮಗಳು ಹೆಚ್ಚಾಗಬೇಕಿದೆ. ಈಗಲೂ ಸುಮಾರು 2,600 ಹಳ್ಳಿಗಳಲ್ಲಿ ಬಸ್‌ಗಳ ಸಂಪರ್ಕ ಇಲ್ಲ. ಇದ್ದ ಬಸ್‌ಗಳಲ್ಲಿ ಬಹುತೇಕ “ಪೀಕ್‌ ಅವರ್‌’ (ಬೆಳಗ್ಗೆ ಮತ್ತು ಸಂಜೆ)ನಲ್ಲಿ ಗರಿಷ್ಠ ಸಾಮರ್ಥ್ಯಕ್ಕಿಂತ ಹೆಚ್ಚು ದಟ್ಟಣೆ ಇರುತ್ತದೆ. ಈ ಸ್ಥಿತಿಯನ್ನು ಸುಧಾರಿಸುವ ಆವಶ್ಯಕತೆ ಈಗ ತುರ್ತು ಇದೆ.

ವಿದ್ಯುತ್‌ ಚಾಲಿತ ಬಸ್‌ಗಳು ಇತ್ತೀಚಿನ ವರ್ಷಗಳಲ್ಲಿ ಹೆಚ್ಚಾಗುತ್ತಿರುವುದು ವಾಯುಮಾಲಿನ್ಯ ತಡೆ ದೃಷ್ಟಿಯಿಂದ ಉತ್ತಮ ಬೆಳವಣಿಗೆ ಇರಬಹುದು. ಆದರೆ ಮುಂದಿನ ದಶಕಗಳಲ್ಲಿ ಇವುಗಳು ಕೂಡ ದಟ್ಟಣೆ ಸಮಸ್ಯೆಯಿಂದ ಹೊರತಾಗಿಲ್ಲ. ಜತೆಗೆ ಪೆಟ್ರೋಲ್‌-ಡೀಸೆಲ್‌ ಅವಲಂಬನೆ ಬದಲಿಗೆ ಲೀಥಿಯಂ ಮೇಲಿನ ಅವಲಂಬನೆ ಹೆಚ್ಚುತ್ತದೆ. ಹಾಗಾಗಿ, ಸಾಧ್ಯ ವಾದಷ್ಟು ಖಾಸಗಿ ವಾಹನಗಳು ರಸ್ತೆಗಿಳಿಯದಂತೆ ಹಾಗೂ ಅದಕ್ಕೆ ಪರ್ಯಾ ಯವಾಗಿ ಸಮೂಹ ಸಾರಿಗೆ ವ್ಯವಸ್ಥೆಯನ್ನು ಉತ್ತೇಜಿಸುವ ಕ್ರಮಗಳು ಹೆಚ್ಚಾಗಬೇಕು. ಆ ಮೂಲಕ ವಾಹನಗಳ ಸಂಖ್ಯೆಗೆ ಕಡಿವಾಣ ಹಾಕಬೇಕಿದೆ.

ಟಾಪ್ ನ್ಯೂಸ್

baana daariyalli review

Baana Daariyalli movie review; ಗಣೇಶ್- ಗುಬ್ಬಿ ಚಿತ್ರ ಹೇಗಿದೆ?

Asian Games: Indian shooting team aims for another gold with world record

Asian Games: ವಿಶ್ವದಾಖಲೆಯೊಂದಿಗೆ ಮತ್ತೊಂದು ಚಿನ್ನಕ್ಕೆ ಗುರಿಯಿಟ್ಟ ಭಾರತದ ಶೂಟಿಂಗ್ ತಂಡ

ICC World Cup 2023: Ashwin makes entry in to India’s WC squad

ICC World Cup 2023; ಭಾರತ ತಂಡದಲ್ಲಿ ಮಹತ್ವದ ಬದಲಾವಣೆ; ಆರ್.ಅಶ್ವಿನ್ ಗೆ ಬುಲಾವ್

Karnataka Bandh: ಕಾವೇರಿಗಾಗಿ ಜನಾಕ್ರೋಶ, ಹಲವೆಡೆ ಪ್ರತಿಭಟನೆ; ಬಿಗಿ ಪೊಲೀಸ್ ಭದ್ರತೆ

Karnataka Bandh: ಕಾವೇರಿಗಾಗಿ ಜನಾಕ್ರೋಶ, ಹಲವೆಡೆ ಪ್ರತಿಭಟನೆ; ಬಿಗಿ ಪೊಲೀಸ್ ಭದ್ರತೆ

8-health

Sept 29: ವಿಶ್ವ ಹೃದಯ ದಿನ: ಹೃದಯ ಆರೋಗ್ಯಕ್ಕೆ ಸಹಕಾರಿ ಆಹಾರಾಭ್ಯಾಸಗಳು

UK ವಿಶ್ವದಲ್ಲೇ ಬಲಿಷ್ಠ ಲೇಸರ್‌ ನಿರ್ಮಾಣ? ಸೂರ್ಯನಿಗಿಂತಲೂ ಶತಕೋಟಿ ಪಟ್ಟು ಪ್ರಕಾಶಮಾನ

UK ವಿಶ್ವದಲ್ಲೇ ಬಲಿಷ್ಠ ಲೇಸರ್‌ ನಿರ್ಮಾಣ? ಸೂರ್ಯನಿಗಿಂತಲೂ ಶತಕೋಟಿ ಪಟ್ಟು ಪ್ರಕಾಶಮಾನ

1-friday

Daily Horoscope: ಪತ್ರಕರ್ತರಿಗೆ ರಾಜಕಾರಣಿಗಳ ಒತ್ತಡ, ಮಂಗಲ ಕಾರ್ಯದ ಸಿದ್ಧತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಹಾರ ಭದ್ರತೆಯ ಹರಿಕಾರ ಸ್ವಾಮಿನಾಥನ್‌ ಚಿರಸ್ಥಾಯಿ

Green revolution ಆಹಾರ ಭದ್ರತೆಯ ಹರಿಕಾರ ಸ್ವಾಮಿನಾಥನ್‌ ಚಿರಸ್ಥಾಯಿ

drought

Karnataka: ಬರ ನಿರ್ವಹಣೆ: ಕೇಂದ್ರ, ರಾಜ್ಯ ಸರಕಾರಗಳು ಕಾರ್ಯೋನ್ಮುಖವಾಗಲಿ

supreme court

Supreme Court: ಸುಪ್ರೀಂ ಎಚ್ಚರಿಕೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಲಿ

river…

Cauvery: ಎರಡೆರಡು ಬಂದ್‌ ಸರಿಯಾದ ನಿರ್ಧಾರವಲ್ಲ

terrorism

Terrorism: ಉಗ್ರರ ಆಸ್ತಿ ಜಪ್ತಿ: ಭಾರತದಿಂದ ವಿಶ್ವರಾಷ್ಟ್ರಗಳಿಗೆ ಎಚ್ಚರಿಕೆಯ ಕರೆಗಂಟೆ

MUST WATCH

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

ಹೊಸ ಸೇರ್ಪಡೆ

baana daariyalli review

Baana Daariyalli movie review; ಗಣೇಶ್- ಗುಬ್ಬಿ ಚಿತ್ರ ಹೇಗಿದೆ?

Asian Games: Indian shooting team aims for another gold with world record

Asian Games: ವಿಶ್ವದಾಖಲೆಯೊಂದಿಗೆ ಮತ್ತೊಂದು ಚಿನ್ನಕ್ಕೆ ಗುರಿಯಿಟ್ಟ ಭಾರತದ ಶೂಟಿಂಗ್ ತಂಡ

ICC World Cup 2023: Ashwin makes entry in to India’s WC squad

ICC World Cup 2023; ಭಾರತ ತಂಡದಲ್ಲಿ ಮಹತ್ವದ ಬದಲಾವಣೆ; ಆರ್.ಅಶ್ವಿನ್ ಗೆ ಬುಲಾವ್

Karnataka Bandh: ಕಾವೇರಿಗಾಗಿ ಜನಾಕ್ರೋಶ, ಹಲವೆಡೆ ಪ್ರತಿಭಟನೆ; ಬಿಗಿ ಪೊಲೀಸ್ ಭದ್ರತೆ

Karnataka Bandh: ಕಾವೇರಿಗಾಗಿ ಜನಾಕ್ರೋಶ, ಹಲವೆಡೆ ಪ್ರತಿಭಟನೆ; ಬಿಗಿ ಪೊಲೀಸ್ ಭದ್ರತೆ

8-health

Sept 29: ವಿಶ್ವ ಹೃದಯ ದಿನ: ಹೃದಯ ಆರೋಗ್ಯಕ್ಕೆ ಸಹಕಾರಿ ಆಹಾರಾಭ್ಯಾಸಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.