ದಟ್ಟಣೆ ತಡೆಗಾಗಿ ಸಮೂಹ ಸಾರಿಗೆಗೆ ಸಿಗಲಿ ಹೆಚ್ಚಿನ ಒತ್ತು


Team Udayavani, Jun 2, 2023, 6:00 AM IST

ದಟ್ಟಣೆ ತಡೆಗಾಗಿ ಸಮೂಹ ಸಾರಿಗೆಗೆ ಸಿಗಲಿ ಹೆಚ್ಚಿನ ಒತ್ತು

ರಾಜ್ಯದಲ್ಲಿ ವಾಹನಗಳ ಸಂಖ್ಯೆ ಮೂರು ಕೋಟಿ ಗಡಿ ದಾಟಿದೆ. ಈ ಮೂಲಕ ಕಳೆದೊಂದು ದಶಕದಲ್ಲಿ ರಸ್ತೆಗಿಳಿದ ವಾಹನಗಳು ದುಪ್ಪಟ್ಟಾಗಿವೆ. ಇದರಲ್ಲಿ ರಾಜಧಾನಿ ಬೆಂಗಳೂರಿನಲ್ಲೇ 1.09 ಕೋಟಿ ಇವೆ. ಮತ್ತೊಂದೆಡೆ ಇದೇ ಅವಧಿಯಲ್ಲಿ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಯಂತಹ ಸಮೂಹ ಸಾರಿಗೆ ವ್ಯವಸ್ಥೆಯಲ್ಲಿ ಸೇರ್ಪಡೆಗೊಂಡ ಬಸ್‌ಗಳ ಸಂಖ್ಯೆ ನಗಣ್ಯವಾಗಿದೆ.

ಕೋವಿಡ್‌ ಸೇರಿದಂತೆ ಇದರ ಹಿಂದಿನ ಕಾರಣಗಳು ಏನೇ ಇದ್ದರೂ ಸರಕಾರದ ಆದ್ಯತೆಗಳು ಮತ್ತು ಅವುಗಳ ಅನುಷ್ಠಾನದಲ್ಲಿರುವ ಆಸಕ್ತಿಗೆ ಇದು ಕನ್ನಡಿ ಹಿಡಿಯುತ್ತದೆ.

ವಾಹನ ದಟ್ಟಣೆಯು ರಸ್ತೆಗಳ ಮೇಲೆ ಹೊರೆ ಮಾತ್ರವಲ್ಲ; ಸಂಚಾರದಟ್ಟಣೆ, ವಾಯುಮಾಲಿನ್ಯ ಸಹಿತ ಹಲವು ರೀತಿಯ ಸಮಸ್ಯೆಗಳಿಗೆ ಎಡೆಮಾಡಿಕೊಡಲಿದೆ. ವಿಶ್ವದ ಅತೀ ಹೆಚ್ಚು ಟ್ರಾಫಿಕ್‌ವುಳ್ಳ ಎರಡನೇ ನಗರ ಎಂಬ ಅಪಖ್ಯಾತಿ ಬೆಂಗಳೂರಿಗಿದೆ. ಇದೇ ದಟ್ಟಣೆಯಲ್ಲಿ ಹೆಚ್ಚು ಹೊತ್ತು ಕಳೆಯುವ ವಾಹನ ಚಾಲಕರಲ್ಲಿ ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚುತ್ತಿವೆ ಎಂದೂ ಮತ್ತೊಂದು ಅಧ್ಯಯನ ಹೇಳುತ್ತದೆ. ಇದೇ ಗತಿಯಲ್ಲಿ ವಾಹನಗಳ ಸಂಖ್ಯೆ ಏರಿಕೆಯಾದರೆ ಸ್ಥಿತಿ ಮತ್ತಷ್ಟು ಚಿಂತಾಜನಕ ಆಗಲಿದೆ ಎಂಬುದರಲ್ಲಿ ಎರಡುಮಾತಿಲ್ಲ.

ಬರುವ ಸರಕಾರಗಳಿಗೆ ಈಗಲೂ ಮೇಲ್ಸೇತುವೆಗಳು, ಕೆಳ ಸೇತುವೆಗಳು, ರಸ್ತೆ ವಿಸ್ತರಣೆಯಂತಹ ಕ್ರಮಗಳು ಅಭಿವೃದ್ಧಿಯ ಕುರು ಹುಗಳಾಗಿವೆ. ಇದೇ ಕಾರಣಕ್ಕೆ ಪ್ರತೀ ವರ್ಷ ಸಾವಿರಾರು ಕೋಟಿ ಹಣ ಈ ರಸ್ತೆಗಳಲ್ಲೇ ಹರಿದುಹೋಗುತ್ತದೆ. ಇದು ಖಾಸಗಿ ವಾಹನಗಳು ರಸ್ತೆ ಗಿಳಿಯಲು ಪ್ರೇರಣೆ ಹೊರತು, ದಟ್ಟಣೆಗೆ ಪರಿಹಾರವಲ್ಲ. ಮತ್ತೂಂದೆಡೆ ಸಮೂಹ ಸಾರಿಗೆ ವ್ಯವಸ್ಥೆಯನ್ನು ಪ್ರೋತ್ಸಾಹಿಸುವ ಬದಲಿಗೆ ಸಾಧ್ಯವಾದಷ್ಟು ಅದನ್ನು ದುರ್ಬಲಗೊಳಿಸುವ ಕಡೆಗೆ ಸರಕಾರ ಹೆಜ್ಜೆ ಇಡುತ್ತಿವೆ ಎಂಬುದು ಅವುಗಳ ಧೋರಣೆಯಿಂದಲೇ ಗೊತ್ತಾಗುತ್ತದೆ. ಇದಕ್ಕೆ ಪೂರಕವಾಗಿ ಹೇಳುವುದಾದರೆ, ವಿದ್ಯಾರ್ಥಿಗಳು ಸೇರಿದಂತೆ ವಿವಿಧ ವರ್ಗಗಳಿಗೆ ನೀಡುವ ರಿಯಾಯಿತಿ ಪಾಸಿನ ಅನುದಾನ ಇನ್ನೂ ಸಾವಿರಾರು ಕೋಟಿ ಬಾಕಿ ಉಳಿಸಿಕೊಳ್ಳಲಾಗಿದೆ. ಕಳೆದೊಂದು ದಶಕದಲ್ಲಿ ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ಬಸ್‌ಗಳ ಸಂಖ್ಯೆ 24 ಸಾವಿರ ಆಸುಪಾಸಿನಲ್ಲೇ ಇದೆ.

ಒಂದು ಕುಟುಂಬಕ್ಕೆ ಒಂದೇ ವಾಹನ ಎಂಬ ನಿರ್ಬಂಧ, ವಾಹನ ನಿಲುಗಡೆಗೆ ಜಾಗ ಲಭ್ಯವಿದ್ದರೆ ಮಾತ್ರ ನೋಂದಣಿಗೆ ಅವಕಾಶ, ವಾಹನ ದಟ್ಟಣೆವುಳ್ಳ ರಸ್ತೆಗಳಲ್ಲಿ ತೆರಿಗೆ ವಿಧಿಸುವುದು, ಕಾರ್‌ ಪೂಲಿಂಗ್‌, ನಿಗಮಗಳಲ್ಲಿ ಬಸ್‌ಗಳ ಸಂಖ್ಯೆ ಜತೆಗೆ ನಿಖರ ಮತ್ತು ಸಮರ್ಪಕ ಸೇವೆಗಳನ್ನು ಕಲ್ಪಿಸುವಂತಹ ಕ್ರಮಗಳು ಹೆಚ್ಚಾಗಬೇಕಿದೆ. ಈಗಲೂ ಸುಮಾರು 2,600 ಹಳ್ಳಿಗಳಲ್ಲಿ ಬಸ್‌ಗಳ ಸಂಪರ್ಕ ಇಲ್ಲ. ಇದ್ದ ಬಸ್‌ಗಳಲ್ಲಿ ಬಹುತೇಕ “ಪೀಕ್‌ ಅವರ್‌’ (ಬೆಳಗ್ಗೆ ಮತ್ತು ಸಂಜೆ)ನಲ್ಲಿ ಗರಿಷ್ಠ ಸಾಮರ್ಥ್ಯಕ್ಕಿಂತ ಹೆಚ್ಚು ದಟ್ಟಣೆ ಇರುತ್ತದೆ. ಈ ಸ್ಥಿತಿಯನ್ನು ಸುಧಾರಿಸುವ ಆವಶ್ಯಕತೆ ಈಗ ತುರ್ತು ಇದೆ.

ವಿದ್ಯುತ್‌ ಚಾಲಿತ ಬಸ್‌ಗಳು ಇತ್ತೀಚಿನ ವರ್ಷಗಳಲ್ಲಿ ಹೆಚ್ಚಾಗುತ್ತಿರುವುದು ವಾಯುಮಾಲಿನ್ಯ ತಡೆ ದೃಷ್ಟಿಯಿಂದ ಉತ್ತಮ ಬೆಳವಣಿಗೆ ಇರಬಹುದು. ಆದರೆ ಮುಂದಿನ ದಶಕಗಳಲ್ಲಿ ಇವುಗಳು ಕೂಡ ದಟ್ಟಣೆ ಸಮಸ್ಯೆಯಿಂದ ಹೊರತಾಗಿಲ್ಲ. ಜತೆಗೆ ಪೆಟ್ರೋಲ್‌-ಡೀಸೆಲ್‌ ಅವಲಂಬನೆ ಬದಲಿಗೆ ಲೀಥಿಯಂ ಮೇಲಿನ ಅವಲಂಬನೆ ಹೆಚ್ಚುತ್ತದೆ. ಹಾಗಾಗಿ, ಸಾಧ್ಯ ವಾದಷ್ಟು ಖಾಸಗಿ ವಾಹನಗಳು ರಸ್ತೆಗಿಳಿಯದಂತೆ ಹಾಗೂ ಅದಕ್ಕೆ ಪರ್ಯಾ ಯವಾಗಿ ಸಮೂಹ ಸಾರಿಗೆ ವ್ಯವಸ್ಥೆಯನ್ನು ಉತ್ತೇಜಿಸುವ ಕ್ರಮಗಳು ಹೆಚ್ಚಾಗಬೇಕು. ಆ ಮೂಲಕ ವಾಹನಗಳ ಸಂಖ್ಯೆಗೆ ಕಡಿವಾಣ ಹಾಕಬೇಕಿದೆ.

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.