ಮಳೆ ಅವಾಂತರ ಮಾನವನಿಗೆ ಎಚ್ಚರಿಕೆ !


Team Udayavani, Aug 3, 2022, 6:00 AM IST

ಮಳೆ ಅವಾಂತರ ಮಾನವನಿಗೆ ಎಚ್ಚರಿಕೆ !

ಇತ್ತೀಚಿನ ವರ್ಷಗಳಲ್ಲಿ ಮನುಷ್ಯ ಅತಿಯಾಸೆಯಿಂದ ಪ್ರಕೃತಿನಾಶವನ್ನು ನಿರಂತರವಾಗಿ ಮಾಡುತ್ತಾ ಬರುತ್ತಿದ್ದು, ಆಯಾ ಋತುಗಳಲ್ಲಿ ಮನುಷ್ಯ ಇದರ ಪರಿಣಾಮವನ್ನು ಎದುರಿಸಬೇಕಾಗಿದೆ.

ದಶಕಗಳ ಹಿಂದೆಯೂ ಸಾಕಷ್ಟು ಮಳೆಯಾಗಿದೆ. ಆದರೆ ಪ್ರಕೃತಿ ಸಹಜವಾಗಿ ಹರಿಯುತ್ತಿದ್ದ ನದಿಗಳು, ಹೊಳೆಗಳು, ಹಳ್ಳ-ಕೊಳ್ಳಗಳು, ಬೆಟ್ಟ-ಗುಡ್ಡಗಳು, ಜಲಪಾತ, ಅರಣ್ಯಗಳು ಇದ್ದುದರಿಂದ ಎಷ್ಟೇ ಮಳೆ ಸುರಿದರೂ ಅದರ ಪರಿಣಾಮ ಮನುಷ್ಯರಿಗೆ ತಟ್ಟುತ್ತಿರಲಿಲ್ಲ.

ಆದರೆ ಇತ್ತೀಚಿನ ದಿನಗಳಲ್ಲಿ ನಿರಂತರವಾಗಿ ಬೃಹದಾಕಾರದಲ್ಲಿ ನಡೆಯುತ್ತಿರುವ ನಗರೀಕರಣ, ಜಲಮೂಲಗಳ ಒತ್ತುವರಿ ಮತ್ತು ಅರಣ್ಯ ನಾಶ, ಮಾಲಿನ್ಯ ಹೆಚ್ಚಳ, ಕೈಗಾರೀಕರಣ ಸೇರಿದಂತೆ ಹಲವಾರು ಕಾರಣದಿಂದ ಹವಾಮಾನ ವೈಪರೀತ್ಯವನ್ನು ಎದುರಿಸಬೇಕಾಗಿದೆ. ನದಿ ಹರಿಯುವ ಜಾಗವನ್ನು ಒತ್ತುವರಿ ಮಾಡಿ ಕಟ್ಟಡಗಳನ್ನು ನಿರ್ಮಿಸಿಕೊಂಡಿದ್ದು, ನೇರವಾಗಿ ಮಳೆ ನೀರು ನುಗ್ಗಿ ಅವಾಂತರಗಳು ಸೃಷ್ಟಿಯಾಗುತ್ತಿವೆ.

ಸಾಮಾನ್ಯವಾಗಿ ಮೇ ತಿಂಗಳಿನಲ್ಲಿ ಬಿರು ಬೇಸಗೆ ಇರುತ್ತದೆ. ಆದರೆ ಈ ಬಾರಿಯ ಮೇ ತಿಂಗಳಿನಲ್ಲಿ 1972ರ ಬಳಿಕ ತಾಪಮಾನ ಕನಿಷ್ಠ ಮಟ್ಟಕ್ಕೆ ಕುಸಿದಿತ್ತು. 22.4 ಕನಿಷ್ಠ ತಾಪಮಾನಕ್ಕೆ ಕುಸಿದು ಬೇಸಗೆಯಲ್ಲಿ ಚಳಿಗಾಲದ ಅನುಭವವಾಗಿತ್ತು. ಕಳೆದ ವರ್ಷ ನವೆಂಬರ್‌ನಲ್ಲಿ ಸುರಿದ ಅಕಾಲಿಕ ಮಳೆಯಿಂದ ಮಾವು ಹೂ ಕಟ್ಟುವಿಕೆ ಮೇಲೆ ಪರಿಣಾಮ ಬೀರಿತ್ತು. ಇದರಿಂದಾಗಿ ಈ ವರ್ಷ ಒಂದು ತಿಂಗಳು ತಡವಾಗಿ ಮಾವು ಮಾರುಕಟ್ಟೆಗೆ ಬಂದಿತ್ತು. ತೊಗರಿ, ಅವರೇ ಸೇರಿ ಇನ್ನಿತರ ಬೆಳೆಗಳ ಮೇಲೆ ಪರಿಣಾಮ ಬೀರಿತ್ತು.

ಇದೇ ಮೇ 16ರಂದು ಹೊಸದಿಲ್ಲಿಯಲ್ಲಿ 49 ಡಿಗ್ರಿ ಸೆಲ್ಸಿಯಸ್‌ ತಾಪಮಾನ ತಲುಪಿತ್ತು. ಈ ಸಂದರ್ಭದಲ್ಲಿ ಬೀಸಿದ ಬಿಸಿಗಾಳಿ, ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಿತ್ತು. ಸುಮಾರು ದಿನಗಳ ಕಾಲ ಉತ್ತರ ಭಾರತ ರಾಜ್ಯಗಳಲ್ಲಿದ್ದ ಬಿಸಿಗಾಳಿ ಜನಜೀವನವನ್ನು ತಲ್ಲಣಗೊಳಿಸಿತ್ತು.

ಕಳೆದ ನಾಲ್ಕು ವರ್ಷಗಳಲ್ಲಿ ಕೊಡಗಿನಲ್ಲಿ ನಿರಂತರವಾಗಿ ಗುಡ್ಡ ಕುಸಿತವಾಗುತ್ತಿದೆ. 2018ರ ಆಗಸ್ಟ್‌ನಲ್ಲಿ ಗುಡ್ಡ ಕುಸಿದು ಮಡಿಕೇರಿಯಲ್ಲಿ ಭಾರೀ ಅವಾಂತರವೇ ಆಗಿದ್ದು, ಮನೆಗಳು ಕೊಚ್ಚಿ ಹೋಗಿದ್ದು ಮಾತ್ರವಲ್ಲ, ಜಮೀನುಗಳ ಚಹರೆಯೇ ಬದಲಾಗಿತ್ತು. ಅದಾದ ಅನಂತರವೂ ನಿರಂತರವಾಗಿ ಪ್ರತೀ ವರ್ಷ ಸಣ್ಣ, ಪುಟ್ಟ ಗುಡ್ಡ ಕುಸಿತವಾಗುತ್ತಲೇ ಇದೆ. ಈ ವರ್ಷವೂ ಗುಡ್ಡ ಕುಸಿತದ ಪರಿಣಾಮ ಎದುರಿಸುತ್ತಿದ್ದೇವೆ.

ಹವಾಮಾನ ತಜ್ಞರು, ಮಳೆ ತಜ್ಞರು ಮತ್ತು ಸರಕಾರದ ಕಂದಾಯ ಇಲಾಖೆಗಳ ಪ್ರಕಾರ ಅರಣ್ಯದಲ್ಲಿರುವ ಮರಗಳ ಅತಿಯಾದ ಕಟಾವು, ಅರಣ್ಯ ಪ್ರದೇಶಗಳಲ್ಲಿ ರೆಸಾರ್ಟ್‌ಗಳನ್ನು ನಿರ್ಮಾಣ ಮಾಡುವುದು, ನಗರೀಕರಣದಿಂದ ಗುಡ್ಡಗಳ ಕುಸಿತವಾಗುತ್ತಿದೆ. ಮಣ್ಣಿನ ಸವಕಲು ಆಗುವುದರಿಂದ ಸುಲಭವಾಗಿ ಬೆಟ್ಟಗಳು, ಕಡಿದಾದ ಕಣಿವೆ ಪ್ರದೇಶಗಳು ನಿರಂತರವಾಗಿ ಕುಸಿತವಾಗುತ್ತಿದೆ. ಇದರ ನೇರವಾದ ಪರಿಣಾಮ ಮಳೆಗಾಲ, ಚಳಿಗಾಲ ಮತ್ತು ಬೇಸಗೆಕಾಲದ ಅವಧಿ ಏರುಪೇರಾಗಲು ಕಾರಣವಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಈ ವರ್ಷ ಪೂರ್ವ ಮುಂಗಾರಿನಿಂದಲೂ ಉತ್ತಮ ಮಳೆಯಾಗಿದೆ. ಜುಲೈನಲ್ಲಿ ಕೂಡ ಸಾಕಷ್ಟು ಮಳೆಯಾಗಿರುವುದರಿಂದ ಈಗಾಗಲೇ ರಾಜ್ಯದ ಬಹುತೇಕ ಅಣೆಕಟ್ಟುಗಳು ಭರ್ತಿಯಾಗಿವೆ. ಇದೀಗ ಮುಂದಿನ 4 ದಿನಗಳ ಕಾಲ ಹವಾಮಾನ ಇಲಾಖೆಯು ರೆಡ್‌ ಅಲರ್ಟ್‌ ನೀಡಿದೆ. ಅತಿಯಾದ ಮಳೆಯಾದರೆ, ಮತ್ತೊಮ್ಮೆ ಅಂತಹ ಅನಾಹುತಗಳು ಸಂಭವಿಸಿದರೂ ಅಚ್ಚರಿ ಇಲ್ಲ. ಮನುಷ್ಯ ಎಚ್ಚೆತ್ತುಕೊಂಡು ಪ್ರಕೃತಿಯನ್ನು ಗೌರವಿಸದಿದ್ದರೆ, ಮತ್ತಷ್ಟು ಪರಿಣಾಮವನ್ನು ಎದುರಿಸಬೇಕಾಗುತ್ತದೆ.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.