High Court ಕ್ರಮ ಸ್ವಾಗತಾರ್ಹ ಸರಕಾರ ಎಚ್ಚೆತ್ತುಕೊಳ್ಳಲು ಸಕಾಲ

SC ಮತ್ತು ST ವಿದ್ಯಾರ್ಥಿಗಳ ವಿದ್ಯಾರ್ಥಿ ನಿಲಯಗಳಲ್ಲಿ ಸಿಬಂದಿ ಕೊರತೆ

Team Udayavani, Dec 16, 2023, 5:45 AM IST

highcort dharwad

ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳ ವಿದ್ಯಾರ್ಥಿ ನಿಲಯಗಳಲ್ಲಿ ಸಿಬಂದಿ ಕೊರತೆಗೆ ಸಂಬಂಧಿಸಿದಂತೆ ಮಾಧ್ಯಮಗಳ ವರದಿ ಆಧರಿಸಿ ಹೈಕೋರ್ಟ್‌ ಸ್ವಯಂಪ್ರೇರಣೆಯಿಂದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿರುವುದು ನಿಜಕ್ಕೂ ಸ್ವಾಗತಾರ್ಹ ಹಾಗೂ ಪ್ರಶಂಸನೀಯ.

ಪರಿಶಿಷ್ಟ ಜಾತಿಯ ಬಾಲಕಿಯರ ಮತ್ತು ಬಾಲಕರ ಹಾಸ್ಟೆಲ್‌ನಲ್ಲಿ ಮಂಜೂರಾತಿ ಪ್ರಮಾಣಕ್ಕಿಂತ ಕಡಿಮೆ ಸಿಬಂದಿ ಇ¨ªಾರೆ. ಜತೆಗೆ ಕೆಲವು ಜಿಲ್ಲೆಗಳ ವಸತಿ ನಿಲಯಗಳಲ್ಲಿ ಎರಡು-ಮೂರು ಹಾಸ್ಟೆಲ…ಗಳಲ್ಲಿ ಒಬ್ಬರೇ ವಾರ್ಡನ್‌ ಮತ್ತು ಒಬ್ಬರೇ ಮೇಲ್ವಿಚಾರಕರಿದ್ದಾರೆ. ಇದರಿಂದಾಗಿ ಮಕ್ಕಳ ಲ್ಲಿನ ಶಿಕ್ಷಣದ ಗುಣಮಟ್ಟ ಕಡಿಮೆಯಾಗುತ್ತಿದೆ. ಜತೆಗೆ ಪರೀಕ್ಷೆಗಳಲ್ಲಿ ಉತ್ತಮ ಅಂಕ ಪಡೆಯಲು ಸಾಧ್ಯವಾಗದೆ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಗುರಿ ಯಾಗುವಂತಾಗಿದೆ ಎಂದು ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿರುವುದನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಬೇಕಿದೆ.

ಖಾಲಿ ಹುದ್ದೆಗಳ ವಿಚಾರ ಕೇವಲ ಸಮಾಜ ಕಲ್ಯಾಣ ಇಲಾಖೆಗೆ ಸಂಬಂಧಿಸಿದ್ದಲ್ಲ. ರಾಜ್ಯ ಸರಕಾರದ ಪ್ರಮುಖ 72 ಇಲಾಖೆಗಳ ಜತೆಗೆ ವಿವಿಧ ನಿಗಮ, ಮಂಡಳಿಗಳು, ಪ್ರಾಧಿಕಾರಗಳು ಸೇರಿದಂತೆ ಒಟ್ಟು 2.60 ಲಕ್ಷ ಹುದ್ದೆಗಳು ಖಾಲಿ ಇವೆ. ಒಟ್ಟು ಮಂಜೂರಾದ 7.70 ಲಕ್ಷ ಹುದ್ದೆಗಳ ಪೈಕಿ ಸದ್ಯ 5.20 ಲಕ್ಷ ಹುದ್ದೆಗಳು ಭರ್ತಿಯಾಗಿವೆ. ಉಳಿದಂತೆ ಶೇ.39ರಷ್ಟು ಹುದ್ದೆಗಳು ಖಾಲಿ ಇವೆ. ಅದರಲ್ಲೂ ವಿಶೇಷವಾಗಿ ಭವಿಷ್ಯದ ಪ್ರಜೆಗಳನ್ನು ರೂಪಿಸುವ ಶಿಕ್ಷಣ ಇಲಾಖೆಯಲ್ಲಿಯೇ ಸಾವಿರಾರು ಹುದ್ದೆಗಳು ಹಲವು ವರ್ಷಗಳಿಂದ ಖಾಲಿ ಉಳಿದಿವೆ. ಪ್ರಾಥಮಿಕ ಶಿಕ್ಷಣ ಇಲಾಖೆಯಲ್ಲಿ 1,88,531 ಮಂಜೂರಾದ ಶಿಕ್ಷಕ ಹುದ್ದೆಗಳ ಪೈಕಿ ಅಂದಾಜು 40 ಸಾವಿರ ಶಿಕ್ಷಕ ಹುದ್ದೆಗಳು ಖಾಲಿ ಇವೆ. ಉನ್ನತ ಶಿಕ್ಷಣ ಇಲಾಖೆಯಲ್ಲಿ 16,455 ಮಂಜೂರಾದ ಬೋಧಕ ಸಿಬಂದಿಯಲ್ಲಿ 699 ಹುದ್ದೆಗಳು, ಮಂಜೂರಾದ 19,682 ಬೋಧಕೇತರ ಸಿಬಂದಿಯಲ್ಲಿ 13,558 ಹುದ್ದೆಗಳು ಖಾಲಿ ಇವೆ. ಆರೋಗ್ಯ ಇಲಾಖೆಯಲ್ಲಿ 13,853 ಹುದ್ದೆಗಳು ಖಾಲಿ ಉಳಿದಿವೆ. ಶಿಕ್ಷಣ ಹಾಗೂ ಆರೋಗ್ಯದಂತಹ ಪ್ರಮುಖ ಇಲಾಖೆಗಳಲ್ಲಿಯೇ ಇಷ್ಟೊಂದು ಪ್ರಮಾಣದಲ್ಲಿ ಹುದ್ದೆಗಳು ಖಾಲಿ ಇರುವಾಗ ವಿದ್ಯಾರ್ಥಿ

ಗಳಿಗೆ ಯಾವ ರೀತಿಯ ಗುಣಮಟ್ಟದ ಶಿಕ್ಷಣ ಸಿಗಲು ಸಾಧ್ಯ? ಶ್ರೀಸಾಮಾನ್ಯರಿಗೆ ಸಕಾಲಕ್ಕೆ ಆರೋಗ್ಯ ಸೇವೆ ಸಿಗುವುದೇ? ಎಂಬುದನ್ನು ಸರಕಾರ ಯೋಚಿಸಬೇಕಿದೆ.

ಸರಕಾರಿ ವ್ಯವಸ್ಥೆಯಲ್ಲಿ ಸಿವಿಲ್‌ ಕಾಮಗಾರಿಗಳಿಗೆ (ಕಟ್ಟಡ, ರಸ್ತೆ,ಸೇತುವೆ ನಿರ್ಮಾಣ) ಕೊಡುವಷ್ಟು ಆದ್ಯತೆಯನ್ನು ಯಾವುದೇ ಸಚಿವರು, ಅಧಿಕಾರಿಗಳು ಸಿಬಂದಿ ನೇಮಕಾತಿಗೆ ಕೊಡುವುದಿಲ್ಲ. ಕಾರಣ ಸಿಬಂದಿ ನೇಮಕಾತಿ ಅಷ್ಟೊಂದು “ಆಕರ್ಷಕ’ವಾಗಿಲ್ಲ. ವಿಶ್ವವಿದ್ಯಾನಿಲಯಗಳಲ್ಲಿ ಕುಲಪತಿಗಳು ಶಿಕ್ಷಣದ ಗುಣಮಟ್ಟ ಹೆಚ್ಚಳ ಹಾಗೂ ಸಂಶೋಧನೆಗಳಿಗೆ ಆದ್ಯತೆ ಕೊಡುವುದಕ್ಕಿಂತಲೂ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ಕೊಡುತ್ತಿದ್ದಾರೆ ಎಂಬುದನ್ನು ಸ್ವತಃ ಉನ್ನತ ಶಿಕ್ಷಣ ಸಚಿವರೇ ಹೇಳಿದ್ದಾರೆಂದರೆ ಅಲ್ಲಿಗೆ ವಿವಿಗಳ ಆದ್ಯತೆ ಏನಾಗಿದೆ ಎಂಬುದು ತಿಳಿಯುತ್ತದೆ. ಸರಕಾರಿ ಸೇವೆಗಳು ಸಕಾಲಕ್ಕೆ ಶ್ರೀಸಾಮಾನ್ಯರಿಗೆ ಲಭ್ಯವಾಗಬೇಕಾದರೆ ಖಾಲಿ ಹುದ್ದೆಗಳನ್ನು ವರ್ಷಾನುಗಟ್ಟಲೆ ಖಾಲಿ ಉಳಿಸಿಕೊಳ್ಳುವುದು ಸೂಕ್ತವಲ್ಲ. ಅಗತ್ಯಕ್ಕೆ ಅನುಗುಣವಾಗಿ ನೇಮಕಾತಿ ಮಾಡಿಕೊಳ್ಳುವ ಕಡೆ ಸರಕಾರ ತುರ್ತಾಗಿ ಕಾರ್ಯೋನ್ಮುಖವಾಗಬೇಕಿದೆ.

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.