ನಿಗಮ ಮಂಡಳಿ ನೇಮಕ ಎಚ್ಚರಿಕೆ ಹೆಜ್ಜೆ


Team Udayavani, Jul 28, 2020, 9:03 AM IST

ನಿಗಮ ಮಂಡಳಿ ನೇಮಕ ಎಚ್ಚರಿಕೆ ಹೆಜ್ಜೆ

ರಾಜ್ಯ ಸರಕಾರ ಒಂದು ವರ್ಷ ಪೂರೈಸಿದ ಮರುದಿನವೇ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಪಕ್ಷದ ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡುವ ಮೂಲಕ ಪಕ್ಷ ಮತ್ತು ಸಾರ್ವಜನಿಕರಿಗೆ ಎರಡು ರೀತಿಯ ಸಂದೇಶ ರವಾ ನಿಸುವ ಪ್ರಯತ್ನ ಮಾಡಿದ್ದಾರೆ. ಅಧಿಕಾರಕ್ಕೆ ಬಂದಾಗಿನಿಂದಲೂ ಪ್ರವಾಹ, ಉಪ ಚುನಾವಣೆ, ಹಾಗೂ ಕೊರೊನಾದಂತಹ ಸಾಂಕ್ರಾಮಿಕ ರೋಗದ ಎದುರು ಹೋರಾಟ ಮಾಡುವುದರಲ್ಲಿಯೇ ಅಧಿಕಾರದ ಬಹುತೇಕ ಸಮಯ ವ್ಯರ್ಥ ವಾಗಿರುವುದರಿಂದ ಸರಕಾರ ನಿರೀಕ್ಷಿಸಿದ ಮಟ್ಟದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿಲ್ಲ ಎನ್ನುವ ಭಾವನೆ ಸಾರ್ವಜನಿಕರ ಜತೆಗೆ ಪಕ್ಷದ ಶಾಸಕರು ಹಾಗೂ ಕಾರ್ಯಕರ್ತರಲ್ಲಿಯೂ ಮೂಡಿದೆ ಎನ್ನುವ ಭಾವನೆ ಅವರಲ್ಲಿ ವ್ಯಕ್ತವಾದಂತಿದೆ.

ಈ ಹಿನ್ನೆಲೆಯಲ್ಲಿ ಸರಕಾರ ವರ್ಷ ಕಳೆಯುತ್ತಿದ್ದಂತೆ ಆಡಳಿತ ಯಂತ್ರಕ್ಕೆ ಚುರುಕು ನೀಡುವುದು ಹಾಗೂ ಶಾಸಕರಿಗೆ ನಿಗಮ ಮಂಡಳಿ ಅಧಿಕಾರ ನೀಡಿ ಅವರ ಮನಸ್ಸಿನ ಬೇಸರವನ್ನೂ ಕಳೆಯುವ ಪ್ರಯತ್ನ ಮಾಡಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಈ ದಿಢೀರ್‌ ನಿರ್ಧಾರ ಪಕ್ಷದಲ್ಲಿ ಸಾಕಷ್ಟು ರಾಜಕೀಯ ಚಟುವಟಿಕೆಗಳು ಗರಿಗೆದರಲು ಕಾರಣವಾಗುವ ಸಾಧ್ಯತೆ ಇದೆ. ವರ್ಷಾಚರಣೆ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿಸಲು ಮಾಡಿದ ಪ್ರಯತ್ನದಂತೆ ಕಾಣಿಸುತ್ತಿದೆ. ಅಲ್ಲದೇ ಈ ನೇಮಕ ಸಚಿವ ಸಂಪುಟ ವಿಸ್ತರಣೆಯ ಪೂರ್ವ ಸಿದ್ಧತೆಯ ಸೂಚನೆ ಯಂತೆಯೂ ಕಾಣಿಸುತ್ತದೆ. ಅದೇ ಕಾರಣಕ್ಕೆ ಸಚಿವಾಕಾಂಕ್ಷಿಗಳಾಗಿರುವ ಹಿರಿಯ ಶಾಸಕರಿಗೂ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನ ನೀಡಿ ಸಮಾಧಾನಪಡಿಸಿ ಮುಂದೆ ಎದುರಾಗಬಹು ದಾದ ಅಸಮಾಧಾನ, ಆಕ್ರೋಶ, ಬಂಡಾಯ ಎಲ್ಲವನ್ನೂ ಆರಂಭದಲ್ಲಿಯೇ ತಡೆಯುವ ಪ್ರಯತ್ನದಂತೆ ಕಾಣಿಸುತ್ತದೆ. ಆದರೆ, ಈಗ ಮಾಡಿರುವ ನೇಮಕದಿಂದಲೂ ಕೆಲವು ಶಾಸಕರು ಅಸಮಾಧಾನಗೊಂಡಿದ್ದು, ತಮಗೆ ಯಾವುದೇ ನಿಗಮ- ಮಂಡಳಿ ಅಧ್ಯಕ್ಷ ಹುದ್ದೆ ಬೇಡ ಎಂದು ಬಹಿರಂಗ ವಾಗಿಯೇ ತಿರಸ್ಕರಿಸುತ್ತಿದ್ದಾರೆ. ನಾಲ್ಕು ಶಾಸಕರ ಹೆಸರು ಅಧಿಕೃತ ಆದೇಶಕ್ಕೂ ಮೊದಲೇ ತಡೆ ಹಿಡಿಯಲಾಯಿತು. ಚಿತ್ರದುರ್ಗದ ತಿಪ್ಪಾರೆಡ್ಡಿ, ಗಂಗಾವತಿಯ ಶಾಸಕ ಪರಣ್ಣ ಮುನವಳ್ಳಿ, ಮುದ್ದೇಬಿಹಾಳ್‌ ಶಾಸಕ ಎ.ಎಸ್‌. ಪಾಟೀಲ್‌ ನಡಹಳ್ಳಿ, ಸುರಪುರ ಶಾಸಕ ನರಸಿಂಹ ನಾಯಕ್‌ (ರಾಜು ಗೌಡ) ಹಾಗೂ ದತ್ತಾತ್ರೆಯ ಪಾಟೀಲ್‌ ರೇವೂರ್‌ ಎಲ್ಲರೂ ಒಂದಿಲ್ಲೊಂದು ರೀತಿಯಲ್ಲಿ ಪ್ರಾದೇಶಿಕತೆ, ಜಾತಿ, ಜಿಲ್ಲಾ ಪ್ರಾತಿನಿಧ್ಯದ ಆಧಾರದಲ್ಲಿ ಸಚಿವ ಸ್ಥಾನ ನೀಡಬೇಕೆಂಬ ಬೇಡಿಕೆ ಇಟ್ಟಿದ್ದಾರೆ.

ಈಗ ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟ ವಿಸ್ತರಣೆ ಅಥವಾ ಪುನಾ ರಚನೆಗೂ ಮೊದಲೇ ಅವರಿಗೆ ನಿಗಮ ಮಂಡಳಿ ಸ್ಥಾನ ನೀಡಿ ಸಂಪುಟದಿಂದ ದೂರ ಇಡುವ ಮುನ್ಸೂಚನೆ ನೀಡಿದ್ದಾರೆ. ಈಗಾಗಲೇ ಮುಖ್ಯಮಂತ್ರಿ ಯಡಿ ಯೂರಪ್ಪ ಅವರ ಈ ನಿರ್ಧಾರವನ್ನು ಕೆಲವು ಶಾಸಕರು ಬಹಿರಂಗವಾಗಿ ನಿರಾ ಕರಿಸುವ ಮೂಲಕ ತಾವು ಸಚಿವ ಸ್ಥಾನದ ಆಕಾಂಕ್ಷಿಗಳು ಎನ್ನುವ ಸಂದೇಶ ರವಾ ನಿಸಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ವರ್ಷ ತುಂಬಿದ ಸಂಭ್ರಮದ ಸಮಯದಲ್ಲಿಯೇ ಜೇನು ಗೂಡಿಗೆ ಕಲ್ಲು ಹೊಡೆ ಯುವ ಧೈರ್ಯ ಮಾಡಿದ್ದು, ಅದನ್ನು ಮುಂದಿನ ದಿನಗಳಲ್ಲಿ ಹೇಗೆ ಎದುರಿಸಿ ನಿಭಾಯಿಸುತ್ತಾರೆ ಎನ್ನುವುದು ಅತ್ಯಂತ ಮುಖ್ಯವಾಗಿದೆ. ಅಲ್ಲದೇ ಇದೇ ಗೊಂದಲ ಕೊರೊನಾ ಸಾಂಕ್ರಾ ಮಿ ಕದ ಸಂಕಷ್ಟದ ಸಂದರ್ಭದಲ್ಲಿ ಸರಕಾರದ ಆಡಳಿತ ಯಂತ್ರದ ಮೇಲೆ ಪರಿಣಾಮ ಬೀರದಂತೆ ನೋಡಿಕೊಳ್ಳುವ ಜವಾಬ್ದಾರಿಯೂ ಯಡಿಯೂರಪ್ಪ  ಮೇಲಿದೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.