ಹಾಪ್‌ಕಾಮ್ಸ್‌ನಂಥ ಸಹಕಾರಿ ವ್ಯವಸ್ಥೆ ಸಾಯಲು ಬಿಡಬೇಡಿ


Team Udayavani, Nov 10, 2022, 6:00 AM IST

ಹಾಪ್‌ಕಾಮ್ಸ್‌ನಂಥ ಸಹಕಾರಿ ವ್ಯವಸ್ಥೆ ಸಾಯಲು ಬಿಡಬೇಡಿ

ಸಮರ್ಥ ನಿರ್ವಹಣೆ ಮತ್ತು ಮೇಲ್ವಿಚಾರಣೆ ಇಲ್ಲದೆ ಇದ್ದರೆ ಸಂಸ್ಥೆ ಯೊಂದು ಹೇಗೆ ಅಧಃಪತನಕ್ಕೆ ಇಳಿಯುತ್ತದೆ ಎನ್ನುವುದಕ್ಕೆ ತೋಟದ ಬೆಳೆಗಾರರ ಸಹಕಾರಿ ಮಾರಾಟ ಮತ್ತು ಸಂಸ್ಕರಣ ಸಂಘ (ಹಾಪ್‌ಕಾಮ್ಸ್‌) ತಾಜಾ ಉದಾಹರಣೆ. ಹಣ್ಣು ಮತ್ತು ತರಕಾರಿಗಳನ್ನು ರೈತರಿಂದ ನೇರವಾಗಿ ತಲುಪಿಸುವ ಉದ್ದೇಶದಿಂದ ರಚನೆಯಾದ ಹಾಪ್‌ಕಾಮ್ಸ್‌ ನಷ್ಟಕ್ಕೀಡಾ ಗಿದ್ದು, ಹೀಗಾಗಿ ಒಂದೊಂದೇ ಮಳಿಗೆಗಳು ಮುಚ್ಚಲ್ಪಡುತ್ತಿವೆ ಎಂದು ವರದಿಯಾಗಿದೆ. ಒಂದೇ ಹಂತದಲ್ಲಿ ಒಟ್ಟು 56 ಮಳಿಗೆಗಳನ್ನು ಮುಚ್ಚಲಾ ಗುತ್ತಿದೆ. 2,000ದಷ್ಟಿದ್ದ ಸಿಬಂದಿ 500ಕ್ಕೆ ಇಳಿದಿದೆ. ಹಣವಿಲ್ಲದೆ, ಅರ್ಧ ವೇತನ ನೀಡುವ ಸ್ಥಿತಿಗೆ ಬಂದಿದೆ.

ಅತ್ಯಂತ ಮಹತ್ವಾಕಾಂಕ್ಷೆಯೊಂದಿಗೆ ರೂಪಿಸಲಾಗಿರುವ ಹಾಪ್‌ಕಾಮ್ಸ್‌ ಒಂದು ಕಾಲದಲ್ಲಿ ಇಡೀ ರಾಜ್ಯವನ್ನು ವ್ಯಾಪಿಸುವ ಮಟ್ಟಕ್ಕೆ ಬೆಳೆದಿತ್ತು. ರಾಜ್ಯದಲ್ಲಿ 300ಕ್ಕೂ ಹೆಚ್ಚು ಮಳಿಗೆಗಳನ್ನು ಸ್ಥಾಪಿಸಲಾಗಿತ್ತು. ಅತ್ತ ಬೆಳೆಗಾರ ರಿಗೂ ಇತ್ತ ಗ್ರಾಹಕರಿಗೂ ನ್ಯಾಯ ಒದಗಿಸುವ ಉದ್ದೇಶದೊಂದಿಗೆ ಹಾಪ್‌ಕಾಮ್ಸ್‌ ರೂಪಿಸಲಾಗಿತ್ತು. ಸಹಕಾರಿ ಪರಿಕಲ್ಪನೆಯಡಿ ರಚನೆಯಾಗಿರುವ ಹಾಪ್‌ಕಾಮ್ಸ್‌ನ ಮೂಲ ಉದ್ದೇಶವೇ ಗ್ರಾಹಕರಿಗೆ ತಾಜಾ ಗುಣ ಮಟ್ಟದಲ್ಲಿ ಮತ್ತು ಕಡಿಮೆ ಬೆಲೆಯಲ್ಲಿ ಹಣ್ಣು, ತರಕಾರಿಗಳನ್ನು ಪೂರೈಸು ವುದು ಜತೆಗೆ ಬೆಳೆಗಾರರಿಗೆ ಮಧ್ಯವರ್ತಿಗಳ ದಬ್ಟಾಳಿಕೆ ತಪ್ಪಿಸುವುದು ಆಗಿತ್ತು. ಆದರೆ ಬರುಬರುತ್ತಾ ಅತೀವ ಭ್ರಷ್ಟಾಚಾರ ಮತ್ತು ನಿರಾಸಕ್ತಿಯ ಫ‌ಲವಾಗಿ ಈ ಪರಿಕಲ್ಪನೆಯೇ ನುಚ್ಚುನೂರಾಯಿತು. ಖಾಸಗಿ ವ್ಯಾಪಾರಿ ಗಳ ಜತೆ ಹೊಂದಾಣಿಕೆ ಮಾಡಿಕೊಂಡು, ಹೆಚ್ಚಿನ ಬೆಲೆಯಲ್ಲಿ ಹಣ್ಣು ತರಕಾರಿಗಳನ್ನು ಮಾರಾಟ ಮಾಡುವುದರಿಂದ ಸಹಜವಾಗಿಯೇ ಗ್ರಾಹ ಕರು ಅತ್ತ ತಲೆ ಹಾಕದಂತೆ ಆಯಿತು.

ಕೆಲವು ಅಧಿಕಾರಿಗಳು ಮತ್ತು ಸಿಬಂದಿಯ ಸ್ವಾರ್ಥ, ದೂರದೃಷ್ಟಿ ಕೊರತೆ ಫ‌ಲವಾಗಿ ಈ ಕಾಲಘಟ್ಟದಲ್ಲಿ ಮತ್ತಷ್ಟು ಉಜ್ವಲವಾಗಿ ಬೆಳೆಯಬೇಕಿದ್ದ ಪರಿಕಲ್ಪನೆಯೊಂದು ನಾಶ ವಾಗುವ ಹಂತದಲ್ಲಿದೆ. ಸಣ್ಣಪುಟ್ಟ ಅಂಗಡಿಗಳ ಜತೆ ಆನ್‌ಲೈನ್‌ ಮತ್ತು ಆಫ್ಲೈನ್‌ನಲ್ಲಿ ದೊಡ್ಡ ದೊಡ್ಡ ಕಂಪೆನಿಗಳು ಇಂದು ಹಣ್ಣು ಮತ್ತು ತರ ಕಾರಿಗಳನ್ನು ಮಾರುವ ಕಾಯಕಕ್ಕೆ ಇಳಿದು ಭರ್ಜರಿ ಲಾಭ ಮಾಡಿಕೊಳ್ಳು ತ್ತಿವೆ. ಗ್ರಾಹಕನಿಗೆ ಮನೆಯಲ್ಲೇ ಕುಳಿತು ತನಗೆ ಬೇಕಾದ ಹಣ್ಣು ಮತ್ತು ತರಕಾರಿಯನ್ನು ರೈತನಿಂದಲೇ ನೇರವಾಗಿ ತರಿಸಿಕೊಳ್ಳುವ ಆ್ಯಪ್‌ಗ್ಳು ಕಾರುಬಾರು ನಡೆಸುತ್ತಿವೆ. ಹಾಪ್‌ಕಾಮ್ಸ್‌ಗೆ ತನ್ನ ವ್ಯಾಪಾರ ವಹಿವಾಟನ್ನು ಆನ್‌ಲೈನ್‌ ಮಾರ್ಗದಲ್ಲೂ ವಿಸ್ತರಿಸುವ ಅವಕಾಶ ಇತ್ತು. ರಾಜ್ಯದೆಲ್ಲೆಡೆ ತನ್ನ ಮಳಿಗೆಗಳನ್ನು ವಿಸ್ತರಿಸಿ ಗ್ರಾಹಕರ ವಿಶ್ವಾಸವನ್ನು ಗಳಿಸಿಕೊಳ್ಳುವ ಅವಕಾಶ ಇತ್ತು. ಇದರಿಂದ ಕಾರ್ಪೋರೆಟ್‌ ಕಂಪೆನಿಗಳು ಬೇಕಾಬಿಟ್ಟಿ ಬೆಲೆ ವಿಧಿಸಿ ಗ್ರಾಹಕರಿಗೂ ಬೆಳಗಾರರಿಗೂ ಮೋಸ ಮಾಡುತ್ತಿರುವುದನ್ನು ನೋಡಿ ಸುಮ್ಮನಿರಬೇಕಾಗಿದೆ. ಸಹಕಾರಿ ಸಂಸ್ಥೆ ಎಂದಾಕ್ಷಣ ಜನರಿಗೆ ಸಹಜವಾಗಿಯೇ ವಿಶ್ವಾಸಾರ್ಹತೆ ಹೆಚ್ಚುವುದರಲ್ಲಿ ಅನುಮಾನ ಇಲ್ಲ. ಆದರೆ ಇಂಥ ಅವಕಾಶಗಳನ್ನು ಕೈ ಚೆಲ್ಲಿ ನಷ್ಟಕ್ಕೆ ಕಾರಣವಾದ ಬಗ್ಗೆ ಪರಾಮರ್ಶೆ ನಡೆಯಬೇಕು.

ಈ ಸಂಘಕ್ಕೆ ಸರಕಾರ ಸಮರ್ಥ ಆಡಳಿತಾಧಿಕಾರಿ ನೇಮಿಸಿ, ಪುನರುತ್ಥಾನಕ್ಕೆ ಕೈ ಹಾಕಬೇಕಾಗಿದೆ. ಆಸಕ್ತಿ ಇರುವ ಮತ್ತು ಸಮರ್ಥ ಸಿಬಂದಿಯನ್ನು ನೇಮಿಸಿ ಖಾಸಗಿಯವರಿಗೆ ಸಡ್ಡು ಹೊಡೆಯಬೇಕು. ರೈತರಿಂದ ಉತ್ತಮ ಗುಣಮಟ್ಟದ ಉತ್ಪನ್ನಗಳನ್ನು ಖರೀದಿಸಿ, ಅವುಗಳನ್ನು ಆನ್‌ಲೈನ್‌ ಮತ್ತು ಆಫ್ಲೈನ್‌ ಮೂಲಕ ಗ್ರಾಹಕರಿಗೆ ತಲುಪಿಸುವ ಸ್ಪರ್ಧಾತ್ಮಕ ಮತ್ತು ಪಾರದರ್ಶಕ ವ್ಯವಸ್ಥೆಯನ್ನು ಜಾರಿಗೊಳಿಸಬೇಕು.

ಟಾಪ್ ನ್ಯೂಸ್

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.