ಹಮ್‌ ನಿಭಾಯೇಂಗೆ ಮತ್ತು ಸಂಕಲ್ಪ ಪತ್ರ


Team Udayavani, Apr 9, 2019, 6:00 AM IST

f-23

ಲೋಕಸಭೆಯ ಪ್ರಥಮ ಹಂತದ ಚುನಾವಣೆಗೆ ಮೂರು ದಿನ ಬಾಕಿಯಿರುವಾಗಲೇ, ಬಿಜೆಪಿ ತನ್ನ ಬಹು ನಿರೀಕ್ಷಿತ ಪ್ರಣಾಳಿಕೆ ಬಿಡುಗಡೆಗೊಳಿಸಿದೆ. ಆಶ್ವಾಸನೆಗಳ ಜತೆಗೆ ದೀರ್ಘ‌ಕಾಲೀನವಾಗಿ ಪ್ರಭಾವ ಬೀರಬಲ್ಲ ಹಲವು ಕಾರ್ಯಕ್ರಮಗಳನ್ನೊಳಗೊಂಡಿರುವ ಪ್ರಣಾಳಿಕೆಗೆ ಬಿಜೆಪಿ ಸಂಕಲ್ಪ ಪತ್ರ ಎಂದು ಹೆಸರು ಕೊಟ್ಟಿದೆ. ರಾಜಕೀಯ ಪಕ್ಷಗಳು ಚುನಾವಣೆ ಕಾಲದಲ್ಲಿ ಬಿಡುಗಡೆಗೊಳಿಸುವ ಪ್ರಣಾಳಿಕೆಯಲ್ಲಿ ನೀಡುವ ಆಶ್ವಾಸನೆಯನ್ನು ಸಾಮಾನ್ಯ ಮತದಾರರು ಗಂಭೀರವಾಗಿ ಪರಿಗಣಿಸುವುದಿಲ್ಲ ಎನ್ನುವುದು ನಿಜವೇ ಆಗಿದ್ದರೂ ಒಂದು ಪಕ್ಷದ ಚಿಂತನೆ, ಭವಿಷ್ಯದ ದೃಷ್ಟಿಕೋನ ಇತ್ಯಾದಿ ವಿಚಾರಗಳನ್ನು ತಿಳಿದುಕೊಳ್ಳಲು ಇದು ನೆರವಾಗುತ್ತದೆ. ಪ್ರಣಾಳಿಕೆ ಬಿಡುಗಡೆ ಗೊಳಿಸುವ ವಿಚಾರದಲ್ಲಿ ಬಿಜೆಪಿಯನ್ನು ಕಾಂಗ್ರೆಸ್‌ ಹಿಂದಿಕಿತ್ತು. ಆದರೆ ಪ್ರಣಾಳಿಕೆಯ ಅಂಶದಲ್ಲಿರುವ ವಿಚಾರದಲ್ಲಿ ಕಾಂಗ್ರೆಸನ್ನು ಬಿಜೆಪಿ ಹಿಂದಿಕ್ಕಿದೆ.

ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಬಹುಚರ್ಚಿತವಾಗಿರುವುದು ಬಡ ಕುಟುಂಬಗಳಿಗೆ ಪ್ರತಿ ವರ್ಷ 72,000 ರೂ. ನೀಡುವುದು, ರೈತರಿಗಾಗಿ ಪ್ರತ್ಯೇಕ ಬಜೆಟ್‌ ಮಂಡಿಸುವುದು, ಒಂದೇ ಶ್ರೇಣಿಯ ಜಿಎಸ್‌ಟಿ, ಮಹಿಳೆಯರಿಗೆ ಶೇ. 33 ಮೀಸಲಾತಿ ಮತ್ತು ಜಮ್ಮು-ಕಾಶ್ಮೀರದಲ್ಲಿ ಸೇನೆಗೆ ನೀಡಲಾಗಿರುವ ವಿಶೇಷಾಧಿಕಾರವನ್ನು ರದ್ದುಪಡಿಸುವಂಥ ಆಶ್ವಾಸನೆಗಳು. 121 ಸಾರ್ವಜನಿಕ ಸಂಪರ್ಕಗಳನ್ನು ಏರ್ಪಡಿಸಿ 53 ಸಮಾಲೋಚನೆಗಳನ್ನು ನಡೆಸಿ. ತಜ್ಞರ ಸಲಹೆಗಳನ್ನು ಪಡೆದು ಪ್ರಣಾಳಿಕೆಯನ್ನು ರಚಿಸಲಾಗಿದೆ ಎಂದು ಕಾಂಗ್ರೆಸ್‌ ಹೇಳಿಕೊಂಡಿದೆ. ಆದರೆ ಬಿಡುಗಡೆಯಾದ ಗಳಿಗೆಯಿಂದಲೇ ಕಾಂಗ್ರೆಸ್‌ ಪ್ರಣಾಳಿಕೆ ವಿವಾದಕ್ಕೀಡಾಗಿದೆ. ಮುಖ್ಯವಾಗಿ ಸೇನೆಯ ವಿಶೇಷಾಧಿಕಾರವನ್ನು ಹಿಂದೆಗೆದುಕೊಳ್ಳುವ ವಿಚಾರ ತೀವ್ರ ಟೀಕೆಗೆ ಗುರಿಯಾಗಿ ಪಕ್ಷಕ್ಕೆ ಮುಜುಗರವಾಗಿದೆ. ಜೊತೆಗೆ ವಾರ್ಷಿಕ 72,000 ರೂ. ನೀಡುವುದಾಗಿ ಹೇಳಿದ್ದರೂ ಇದಕ್ಕೆ ಅಗತ್ಯವಿರುವ ಸಂಪನ್ಮೂಲವನ್ನು ಹೇಗೆ ಹೊಂದಿಸಬೇಕೆಂಬ ಸ್ಪಷ್ಟತೆ ಪಕ್ಷಕ್ಕೆ ಇಲ್ಲ. ರಾಹುಲ್‌ ಗಾಂಧಿಯ ಸಲಹೆಗಾರ ಸ್ಯಾಮ್‌ ಪಿತ್ರೊಡ ಮಧ್ಯಮ ವರ್ಗದವರ ಮೇಲೆ ತೆರಿಗೆ ಹಾಕಿ ಸಂಪನ್ಮೂಲ ಸಂಗ್ರಹಿಸಲಾಗುವುದು ಎಂದರೆ ರಾಹುಲ್‌ ಗಾಂಧಿ ಶ್ರೀಮಂತರಿಗೆ ತೆರಿಗೆ ಹಾಕುತ್ತೇವೆ ಎನ್ನುತ್ತಾರೆ. ಪಿ.ಚಿದಂಬರಂ ಸೇರಿದಂತೆ ಕೆಲವು ನಾಯಕರು ದೇಶದ ಆರ್ಥಿಕ ಸ್ಥಿತಿ ಸದೃಢವಾಗಿರುವುದರಿಂದ ಹೆಚ್ಚುವರಿ ತೆರಿಗೆ ಹಾಕುವ ಅಗತ್ಯ ಇಲ್ಲ ಎನ್ನುವ ಸಮಜಾಯಿಸಿ ನೀಡುತ್ತಿದ್ದಾರೆ. ವರ್ಷಕ್ಕೆ 3,60,000 ಕೋಟಿ ರೂ. ಸಂಗ್ರಹಿಸುವುದು ಹೇಗೆ ಎನ್ನುವ ಸ್ಪಷ್ಟ ಕಲ್ಪನೆ ಯಾರಿಗೂ ಇಲ್ಲ ಎನ್ನುವುದು ಇದರಿಂದ ಸ್ಪಷ್ಟವಾಗುತ್ತದೆ. ಹೀಗಾಗಿ ಕಾಂಗ್ರೆಸ್‌ನ ಈ ಆಶ್ವಾಸನೆಯ ಬಗ್ಗೆ ಸಾರ್ವಜನಿಕ ವಲಯದಲ್ಲಿ ಹಲವಾರು ಪ್ರಶ್ನೆಗಳಿವೆ. ಇದರ ಬದಲು ತನ್ನ ಅಚ್ಚುಮೆಚ್ಚಿನ ನರೇಗ ಯೋಜನೆಯನ್ನೇ ಇನ್ನಷ್ಟು ಬಲಪಡಿಸುವ ಯೋಜನೆಯನ್ನು ಘೋಷಿಸಿದ್ದರೆ ಒಂದಷ್ಟು ಅನುಕೂಲವಾಗುತ್ತಿತ್ತು. ಅದೇ ರೀತಿ ಸೇನೆಯ ವಿಶೇಷಾಧಿಕಾರವನ್ನು ಹಿಂದೆಗೆಯುವ ವಿಚಾರವನ್ನು ಪ್ರಣಾಳಿಕೆಯಲ್ಲಿ ಅಳವಡಿಸಿಕೊಳ್ಳುವುದಕ್ಕಿಂತ ಅಧಿಕಾರಕ್ಕೇರಿದ ಬಳಿಕ ಕೂಲಂಕಷವಾಗಿ ಪರಿಶೀಲಿಸಿ ನಿರ್ಧಾರ ಕೈಗೊಳ್ಳುವುದಾಗಿ ಹೇಳಬಹುದಿತ್ತು.ಜಿಎಸ್‌ಟಿ ವಿಚಾರದಲ್ಲೂ ಎಲ್ಲ ಉತ್ಪನ್ನ ಮತ್ತು ಸೇವೆಗಳಿಗೆ ಒಂದೇ ದರವನ್ನು ಹೇಗೆ ಅನ್ವಯಿಸಬಹುದು ಎನ್ನುವುದನ್ನು ಕಾಂಗ್ರೆಸ್‌ ವಿವರಿಸಿಲ್ಲ.

ಬಿಜೆಪಿ ಪ್ರಣಾಳಿಕೆಯಲ್ಲಿ ರಾಷ್ಟ್ರೀಯತೆಗೆ ಆದ್ಯತೆ ನೀಡಿದೆ. ಅಧಿಕಾರದಲ್ಲಿರುವ ಪಕ್ಷಕ್ಕೆ ಇನ್ನೊಂದು ಅವಧಿಗೆ ಅಧಿಕಾರ ಕೋರುವ ಪ್ರಣಾಳಿಕೆ ಬಿಡುಗಡೆಗೊಳಿಸುವುದು ನಿಜಕ್ಕೂ ಕಠಿಣ ಪರೀಕ್ಷೆಯಾಗುತ್ತದೆ. ಈ ಆಶ್ವಾಸನೆಗಳನ್ನು ನಿಮ್ಮ ಅಧಿಕಾರಾವಧಿಯಲ್ಲಿ ಏಕೆ ಈಡೇರಿಸಿಲ್ಲ ಎಂಬ ಸಹಜ ಪ್ರಶ್ನೆಯನ್ನು ಆಡಳಿತ ಪಕ್ಷ ಎದುರಿಸಬೇಕಾಗುತ್ತದೆ. ಅದಕ್ಕೆ ಉತ್ತರಿಸಲು ಬಿಜೆಪಿ ಪ್ರಯತ್ನಿಸಿದೆ.

ಬಿಜೆಪಿ ಪ್ರಣಾಳಿಕೆಯಲ್ಲಿ ಮತ ತಂದುಕೊಡಬಹುದು ಎಂದು ಭಾವಿಸಲಾಗಿರುವ 3ಅಂಶಗಳಿಗೆ ಒತ್ತುಕೊಡಲಾಗಿದೆ. ಅದು ರಾಷ್ಟ್ರೀಯತೆ ಅಥವಾ ರಾಷ್ಟ್ರೀಯ ಭದ್ರತೆ, ಗ್ರಾಮೀಣ ಭಾರತದ ಅಭಿವೃದ್ಧಿ ಮತ್ತು ಒಟ್ಟಾರೆ ಆರ್ಥಿಕ ಪ್ರಗತಿ. ಮೂರನೇ ಅಂಶದಲ್ಲಿ ಉದ್ಯೋಗ, ಜಿಎಸ್‌ಟಿ ಸುಧಾರಣೆ, ಉತ್ಪಾದನೆ ಹೆಚ್ಚಳ, ಜಿಡಿಪಿ ಅಭಿವೃದ್ಧಿ ರಫ್ತು ಹೆಚ್ಚಳ ಸೇರಿದಂತೆ ಎಲ್ಲ ವಿಷಯಗಳು ಅಡಕವಾಗಿದೆ. 2022ಕ್ಕೆ ರೈತರ ಆದಾಯ ದ್ವಿಗುಣ, ಗ್ರಾಮೀಣ ಭಾರತದಲ್ಲಿ 5 ವರ್ಷಗಳಲ್ಲಿ 25 ಲಕ್ಷ ಕೋಟಿ ರೂ. ಹೂಡಿಕೆ, ರೈತರಿಗೆ ವಾರ್ಷಿಕ 6,000 ರೂ. ಕೊಡುಗೆ ಇತ್ಯಾದಿ ಭರವಸೆಗಳನ್ನು ಪುನರುಚ್ಚರಿಸಿದೆ. ಸ್ವಾತಂತ್ರೊéàತ್ಸವದ 75ನೇ ವರ್ಷಕ್ಕೆ 75 ಸಂಕಲ್ಪಗಳನ್ನು ಬಿಜೆಪಿ ಮಾಡಿದೆ. ಇದೇ ವೇಳೆ 100ನೇ ಸ್ವಾತಂತ್ರ್ಯೋತ್ಸವ ಆಚರಣೆಗಾಗುವಾಗ ದೇಶವನ್ನು ಸರ್ವಾಂಗೀಣವಾಗಿ ಅಭಿವೃದ್ಧಿ ಹೊಂದಿದ ದೇಶವಾಗಿ ರೂಪಿಸುವ ದೊಡ್ಡ ಕನಸನ್ನೂ ಬಿತ್ತಿದೆ. ಇದಾಗಲು ಇನ್ನೂ 27 ವರ್ಷಗಳಿರುವುದರಿಂದ ಈ ವಿಚಾರವನ್ನು ಚರ್ಚಿಸಲು ಅವಸರವೇನಿಲ್ಲದಿದ್ದರೂ ಒಂದು ಪಕ್ಷ ಇಷ್ಟು ಸುದೀರ್ಘ‌ವಾಧಿಯ ಬಗ್ಗೆಯೂ ಯೋಚಿಸುತ್ತಿದೆ ಎನ್ನುವುದು ಧನಾತ್ಮಕವಾದ ಅಂಶ. ಎರಡೂ ರಾಷ್ಟ್ರೀಯ ಪಕ್ಷಗಳ ಪ್ರಣಾಳಿಕೆಗಳು ಜನರ ಮಧ್ಯೆ ಇದ್ದು, ಯಾವುದು ಉತ್ತಮ ಎಂದು ನಿರ್ಧರಿಸುವ ಹೊಣೆ ಅವರದ್ದು.

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.