ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ


Team Udayavani, Mar 28, 2024, 6:45 AM IST

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರನ್ನು ಬಂಧಿಸಿರುವ ವಿಷಯ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿರುವುದರಲ್ಲಿ ವಿಶೇಷವೇನಿಲ್ಲವಾದರೂ ಇದನ್ನು ಮುಂದಿಟ್ಟು ವಿಶ್ವದ ಕೆಲವು ದಿಗ್ಗಜ ರಾಷ್ಟ್ರಗಳು ಭಾರತಕ್ಕೆ ಪ್ರಜಾಸತ್ತೆ, ಕಾನೂನಿನ ಪಾಠ ಹೇಳಲು ಮುಂದಾಗಿರುವುದು ನಿಜಕ್ಕೂ ಅಚ್ಚರಿಯನ್ನುಂಟು ಮಾಡಿದೆ. ಕೇಜ್ರಿವಾಲ್‌ ಬಂಧನದ ಕುರಿತಾಗಿ ಜರ್ಮನಿ, ಅಮೆರಿಕದ ವಿದೇಶಾಂಗ ಸಚಿವಾಲಯಗಳು ನೀಡಿರುವ ಪ್ರತಿಕ್ರಿಯೆ, ಪ್ರಜಾಸತ್ತೆ ಮತ್ತು ಕಾನೂನಿನ ಕುರಿತಂತೆ ವ್ಯಕ್ತಪಡಿಸಿರುವ ಅಭಿಪ್ರಾಯಗಳನ್ನು ಗಮನಿಸಿದಾಗ ಭಾರತದ ಆಂತರಿಕ ವಿಚಾರಗಳಲ್ಲಿ ಈ ದೇಶಗಳು ಮೂಗು ತೂರಿಸಲು ಯತ್ನಿಸಿರುವುದು ಸುಸ್ಪಷ್ಟ.

ಅರವಿಂದ ಕೇಜ್ರಿವಾಲ್‌ ಬಂಧನ, ವಿಚಾರಣೆ ಇವೆಲ್ಲವೂ ದೇಶದ ಕಾನೂನು ವ್ಯವಸ್ಥೆಯಡಿಯಲ್ಲಿಯೇ ನಡೆಯುತ್ತಿವೆ. ರಾಜಕಾರಣಿಗಳ ವಿರುದ್ಧದ ಪ್ರಕರಣ ಎಂದ ಮೇಲೆ ಆಡಳಿತ-ವಿಪಕ್ಷಗಳ ವಾಗ್ಯುದ್ಧ, ಆರೋಪ-ಪ್ರತ್ಯಾರೋಪ ಮತ್ತಿತರ ಬೆಳವಣಿಗೆಗಳು ಸಾಮಾನ್ಯ. ಇವುಗಳಿಗೂ ಕಾನೂನು ಪ್ರಕ್ರಿಯೆಗೂ ಯಾವುದೇ ಸಂಬಂಧವಿಲ್ಲವಾಗಿದ್ದು, ಕಾನೂನು ತನ್ನದೇ ಆದ ಹಾದಿಯಲ್ಲಿ ಸಾಗುತ್ತದೆ. ವಿಶ್ವದ ಇತರ ದೇಶಗಳಿಗೆ ಹೋಲಿಸಿದಲ್ಲಿ ಭಾರತದಲ್ಲಿ ನ್ಯಾಯಾಂಗ ವ್ಯವಸ್ಥೆ ಬಲಿಷ್ಠವಾಗಿದ್ದು, ಈ ಬಗ್ಗೆ ದೇಶದ ಯಾವೊಬ್ಬ ಪ್ರಜೆಯೂ ಅಪನಂಬಿಕೆಯನ್ನು ಹೊಂದಲು ಸಾಧ್ಯವಿಲ್ಲ. ಕೇಜ್ರಿವಾಲ್‌ ಬಂಧನವೂ ದೇಶದ ಕಾನೂನು ಚೌಕಟ್ಟಿನೊಳಗೇ ನಡೆದಿದ್ದು, ವಿಚಾರಣೆ ಕೂಡ ನಿಷ್ಪಕ್ಷವಾಗಿಯೇ ನಡೆಯುತ್ತಿದೆ. ರಾಜಕೀಯ ಕೆಸರೆರಚಾಟ ಏನೇ ಇದ್ದರೂ ಅದು ಕೇವಲ ರಾಜಕೀಯಕ್ಕೆ ಸೀಮಿತವೇ ಹೊರತು ಅದನ್ನು ದೇಶದ ನ್ಯಾಯಾಂಗ ವ್ಯವಸ್ಥೆಗೆ ಆರೋಪಿಸಲಾಗದು.

ಇಂತಹ ಪರಿಸ್ಥಿತಿಯಲ್ಲಿ ಜರ್ಮನಿ, ಅಮೆರಿಕದ ವಿದೇಶಾಂಗ ಸಚಿವಾಲಯಗಳು ಕೇಜ್ರಿವಾಲ್‌ ಬಂಧನದ ಬಗೆಗೆ ಯಾವುದೋ ಒತ್ತಡಕ್ಕೆ ಸಿಲುಕಿದ ಮಾದರಿಯಲ್ಲಿ ಹೇಳಿಕೆಗಳನ್ನು ನೀಡಿದ್ದೇ ಅಲ್ಲದೆ ಭಾರತಕ್ಕೆ ಪ್ರಜಾಪ್ರಭುತ್ವ, ನ್ಯಾಯಾಂಗ ಸ್ವಾತಂತ್ರ್ಯದ ಬಗೆಗೆ ಬೋಧನೆ ಮಾಡಹೊರಟಿರುವುದು ತೀರಾ ಅನವಶ್ಯಕ ಮತ್ತು ಅತಿರೇಕದ ಕ್ರಮವಾಗಿದೆ. ಕೇಜ್ರಿವಾಲ್‌ ಬಂಧನ, ಭಾರತದ ಆಂತರಿಕ ವಿಷಯವಾಗಿದ್ದು, ಇದರಿಂದ ಜನರ ಸ್ವಾತಂತ್ರ್ಯ, ನ್ಯಾಯಾಂಗ ಅಥವಾ ಆಡಳಿತ ವ್ಯವಸ್ಥೆಯಲ್ಲಿ ಅಲ್ಲೋಲ ಕಲ್ಲೋಲವಾಗುವಂಥ ಬೆಳವಣಿಗೆಗಳು ದೇಶದಲ್ಲಿ ನಡೆದಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶದಲ್ಲಿ ನಡೆಯುತ್ತಿರುವ ರಾಜಕೀಯ ವಾಕ್ಸಮರವನ್ನೇ ಮುಂದಿಟ್ಟು ವಿದೇಶಗಳ ವಿದೇಶಾಂಗ ಸಚಿವಾಲಯಗಳು ಹೇಳಿಕೆ ನೀಡುತ್ತವೆ ಎಂದಾದರೆ ಅದಕ್ಕಿಂತ ಬಲುದೊಡ್ಡ ವಿಪರ್ಯಾಸ ಬೇರೊಂದಿಲ್ಲ.

ಜರ್ಮನಿ ಮತ್ತು ಅಮೆರಿಕದ ರಾಜತಾಂತ್ರಿಕರನ್ನು ಕರೆಸಿ, ಭಾರತದ ವಿದೇಶಾಂಗ ಸಚಿವಾಲಯ ಸ್ಪಷ್ಟ ಮಾತುಗಳಲ್ಲಿ ಈ ಬಗ್ಗೆ ತನ್ನ ವಿರೋಧವನ್ನು ದಾಖಲಿಸಿದೆ. ದೇಶವೊಂದರ ಆಂತರಿಕ ವ್ಯವಹಾರದಲ್ಲಿ ಹಸ್ತಕ್ಷೇಪ ನಡೆಸುವುದು ದೇಶದ ಸಾರ್ವಭೌಮತೆಯ ಮೇಲೆ ಸವಾರಿ ಮಾಡಿದಂತೆ ಮಾತ್ರವಲ್ಲದೆ ದ್ವಿಪಕ್ಷೀಯ ಸಂಬಂಧದ ಮೇಲೂ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಖಡಕ್‌ ಆಗಿಯೇ ತಿಳಿಸಿದೆ. ಇನ್ನಾದರೂ ವಿಶ್ವ ರಾಷ್ಟ್ರಗಳು ಬೇರೊಂದು ದೇಶದ ಬಗೆಗೆ ಹೇಳಿಕೆ ನೀಡುವು ದಕ್ಕೂ ಮುನ್ನ ಒಂದಿಷ್ಟು ರಾಜತಾಂತ್ರಿಕ ಮುತ್ಸದ್ಧಿತನವನ್ನು ಪ್ರದರ್ಶಿಸಬೇಕಾಗಿದೆ. ನಮ್ಮ ನೆರೆಯ ಚೀನ, ಪಾಕಿಸ್ಥಾನದ ಮಾದರಿಯಲ್ಲಿ ಭಾರತದಲ್ಲಿ ನಡೆಯುವ ಸಣ್ಣಪುಟ್ಟ ಬೆಳವಣಿಗೆಗಳಿಗೂ ಪ್ರತಿಕ್ರಿಯಿಸುವ ಚಾಳಿಯಿಂದ ವಿಶ್ವ ರಾಷ್ಟ್ರಗಳು ಹೊರಬರಬೇಕು. ಇದರ ಬದಲು ವಿಶ್ವ ಸಮುದಾಯವನ್ನು ಇನ್ನಿಲ್ಲದಂತೆ ಕಾಡುತ್ತಿರುವ ಭಯೋತ್ಪಾದನೆ ದಮನದ ವಿಚಾರದಲ್ಲಿ ಈ ರಾಷ್ಟ್ರಗಳು ಕಿಂಚಿತ್‌ ಗಮನಹರಿಸಿದ್ದಲ್ಲಿ ಜಾಗತಿಕವಾಗಿ ಶಾಂತಿ ನೆಲೆಸುತ್ತಿತ್ತು.

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.