ಮಕ್ಕಳ ಕಲಿಕಾ ಸಾಮರ್ಥ್ಯ ವೃದ್ಧಿಗೆ ಆದ್ಯತೆ ಬೇಕು


Team Udayavani, Oct 19, 2021, 6:30 AM IST

ಮಕ್ಕಳ ಕಲಿಕಾ ಸಾಮರ್ಥ್ಯ ವೃದ್ಧಿಗೆ ಆದ್ಯತೆ ಬೇಕು

ಸಾಂದರ್ಭಿಕ ಚಿತ್ರ.

ಸರಿಸುಮಾರು ಒಂದೂವರೆ ವರ್ಷದಿಂದ ಶಾಲೆಯತ್ತ ಸುಳಿಯದ ಪುಟ್ಟ ಮಕ್ಕಳೀಗ ಶಾಲೆಗೆ ಹೋಗಲು ಸಿದ್ಧರಾಗಬೇಕಿದೆ. ಇದೇ 25ರಿಂದ ಪ್ರಾಥಮಿಕ ಶಾಲೆಗಳೂ ಆರಂಭವಾಗಲಿದ್ದು, ರಾಜ್ಯ ಸರಕಾರ ಸೋಮವಾರ ಅಧಿಕೃತವಾಗಿ ಪ್ರಕಟನೆ ಹೊರಡಿಸಿದೆ. ಸದ್ಯ 6ನೇ ತರಗತಿಯಿಂದ ಸ್ನಾತಕೋತ್ತರ ಪದವಿವರೆಗೂ ಭೌತಿಕ ತರಗತಿಗಳು ಆರಂಭವಾಗಿದ್ದು, ಇವು ಉತ್ತಮವಾಗಿಯೇ ನಡೆಯುತ್ತಿವೆ. ಜತೆಗೆ ರಾಜ್ಯದ ಯಾವುದೇ ಭಾಗದಲ್ಲೂ ಶಾಲೆಗಳಲ್ಲಿ ಕೊರೊನಾ ಕಾಣಿಸಿಕೊಂಡಿರುವುದಾಗಲಿ, ಇನ್ನಾವುದೇ ಸಮಸ್ಯೆಗಳಾಗಲಿ ಕಾಣಿಸಿಕೊಂಡಿಲ್ಲ. ಆದರೂ ಕೇರಳದಿಂದ ಬಂದ ಕೆಲವು ವಿದ್ಯಾರ್ಥಿಗಳಲ್ಲಿ ಕೊರೊನಾ ಕಾಣಿಸಿಕೊಂಡು ಈ ಸಮಸ್ಯೆಯೂ ಸದ್ಯ ಬಗೆಹರಿದಿದೆ.

ಪ್ರಸ್ತುತದಲ್ಲಿ ತಜ್ಞರೇ ಹೇಳಿರುವಂತೆ ಮೂರನೇ ಅಲೆಯ ಅಪಾಯದಿಂದ ಪಾರಾಗಿದ್ದೇವೆ. ತ್ವರಿತಗತಿಯಲ್ಲಿ ಲಸಿಕೆ ನೀಡುತ್ತಿರುವ ಕ್ರಮವಾಗಿರಬಹುದು, ಸರಕಾರಗಳ ನಿಯಂತ್ರಣ ಕ್ರಮಗಳಿರಬಹುದು. ಇದರಿಂದಾಗಿ ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ದಿನಕ್ಕೆ ಸರಾಸರಿ 500ಕ್ಕಿಂತ ಕೆಳಗೆ ಇಳಿದಿವೆ. ಎಷ್ಟೋ ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ವರದಿಯಾಗುತ್ತಿವೆ. ಅಲ್ಲದೆ ಮರಣ ದರವೂ ಇಳಿದಿದೆ.

ಇದುವರೆಗೆ ರಾಜ್ಯ ಸರಕಾರ ಮತ್ತು ಹೆತ್ತವರಿಗೆ ಇದ್ದ ಒಂದೇ ಒಂದು ಆತಂಕವೆಂದರೆ ಅದು ಮೂರನೇ ಅಲೆ. ಸೆಪ್ಟಂಬರ್‌ನಲ್ಲಿಯೇ ಮೂರನೇ ಅಲೆ ಕಾಡಲಿದೆ ಎಂದು ಬಹುಹಿಂದೆಯೇ ತಜ್ಞರು ಎಚ್ಚರಿಕೆ ನೀಡಿದ್ದರು. ಅದರಲ್ಲೂ 3ನೇ ಅಲೆ ವೇಳೆ ಮಕ್ಕಳಿಗೇ ಹೆಚ್ಚು ಅಪಾಯ ಎಂಬ ಆತಂಕವೂ ಇತ್ತು. ಮಧ್ಯಾಂತರದಲ್ಲಿ ಹವಾಮಾನ ಬದಲಾವಣೆಯಿಂದಾಗಿ ಸೆಪ್ಟಂಬರ್‌ನಲ್ಲಿ ಮಕ್ಕಳಲ್ಲಿ ಶೀತ, ಜ್ವರದಂಥ ಕಾಯಿಲೆಗಳು ಕಾಣಿಸಿಕೊಂಡಿದ್ದರೂ ಇದು ಕೊರೊನಾ ಆಗಿರಲಿಲ್ಲ. ಒಂದು ಲೆಕ್ಕಾಚಾರದಲ್ಲಿ ಮಕ್ಕಳಲ್ಲೂ ಕೊರೊನಾ ಪ್ರತಿಕಾಯಗಳು ಬೆಳೆದಿರುವ ಸಾಧ್ಯತೆಗಳನ್ನೂ ತಳ್ಳಿಹಾಕುವಂತಿಲ್ಲ. ಇನ್ನು ಇಡೀ ದೇಶದಲ್ಲಿ ಕೇರಳ ರಾಜ್ಯವೊಂದನ್ನು ಹೊರತುಪಡಿಸಿದರೆ ಅಷ್ಟೇನೂ ಕೊರೊನಾ ಕಾಟವೂ ಇಲ್ಲ.

ಇದನ್ನೂ ಓದಿ:ಸೆಕ್ಯೂರಿಟಿ ಗಾರ್ಡ್‌ ಸೋಗಿನಲ್ಲಿ ಮನೆ ಕಳವು: ನಾಲ್ವರು ಭದ್ರತಾ ಸಿಬ್ಬಂದಿ ಸೇರಿ ಐವರ ಬಂಧನ

ಈ ನಿಟ್ಟಿನಲ್ಲಿ ರಾಜ್ಯ ಸರಕಾರ ಮಕ್ಕಳಿಗೂ ಶಾಲೆ ಆರಂಭಿಸುತ್ತಿರುವುದು ಉತ್ತಮ ನಿರ್ಧಾರವೇ ಸರಿ. ಕಳೆದ ಒಂದೂವರೆ ವರ್ಷದಿಂದಲೂ ಮಕ್ಕಳು ಶಾಲೆಯನ್ನೇ ಮರೆತಿದ್ದಾರೆ. ಇದರ ನಡುವೆ ಆನ್‌ಲೈನ್‌ ಪಾಠದ ಕಿರಿಕಿರಿಗೂ ತುತ್ತಾಗಿದ್ದಾರೆ. ಒಂದನೇ ತರಗತಿಯಿಂದ ಐದನೇ ತರಗತಿ ಮಕ್ಕಳನ್ನು ಆನ್‌ಲೈನ್‌ ಪಾಠದ ನೆಪದಲ್ಲಿ ಕಂಪ್ಯೂಟರ್‌ ಅಥವಾ ಮೊಬೈಲ್‌ ಮುಂದೆ ಕುಳಿಸುವುದು ಕಷ್ಟವಾಗಿತ್ತು ಎಂಬುದೂ ಎಲ್ಲರಿಗೂ ಗೊತ್ತಿರುವ ವಿಚಾರ. ಹೀಗಾಗಿ ಮಕ್ಕಳು ಶಾಲೆಗೆ ಹೋದರೆ ಕಲಿಯುವ ಸಾಮರ್ಥ್ಯ ಇನ್ನಷ್ಟು ಹೆಚ್ಚಳವಾಗಬಹುದು. ಮಕ್ಕಳ ಕಲಿಕಾ ಸಾ ಮರ್ಥ್ಯ ಹೆಚ್ಚಿಸುವುದು ಶಿಕ್ಷಕ ಸಮುದಾಯಕ್ಕೂ ದೊಡ್ಡ ಸವಾಲು. ಮಕ್ಕಳ ಮಾನಸಿಕತೆಯನ್ನು ಅರ್ಥ ಮಾಡಿಕೊಂಡು ಅವರ ಕಲಿಕಾ ಸಾಮರ್ಥ್ಯ ವೃದ್ಧಿಸುವತ್ತ ಶಿಕ್ಷಕರು ಹಾಗೂ ಹೆತ್ತವರು ಗಮನಹರಿಸಬೇಕು. ಶಾಲೆ ಎನ್ನುವುದು ಮಕ್ಕಳಿಗೆ ಶಿಕ್ಷೆ ಎಂಬ ಅಭಿಪ್ರಾಯ ಬಾರದಂತೆ ನೋಡಿಕೊಳ್ಳುವ ಅಗತ್ಯವಿದೆ.

ಅ.25ರಂದು ಶಾಲೆ ಆರಂಭವಾಗಲಿದೆ. ಆದರೆ ಇಲ್ಲಿ ಹೆತ್ತವರಾಗಲಿ ಅಥವಾ ಶಿಕ್ಷಕರಾಗಲಿ ಮೈಮರೆಯಲೇಬಾರದು. ಎಲ್ಲ ಕೊರೊನಾ ನಿಯಮಾವಳಿಗಳನ್ನು ಪಾಲಿಸಿಕೊಂಡೇ ಶಾಲಾ ತರಗತಿ ನಡೆಸಬೇಕು. ಇಲ್ಲಿ ಒಂದು ಚೂರು ಯಾಮಾರಿದರೂ ಸಂಕಷ್ಟ ಎದುರಾಗುತ್ತದೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ. ಹೀಗಾಗಿ ಎಲ್ಲ ಎಚ್ಚರಿಕೆಯನ್ನು ಪಾಲನೆ ಮಾಡಿಕೊಂಡು ಶಾಲೆಗಳನ್ನು ತೆರೆಯಲಿ.

ಟಾಪ್ ನ್ಯೂಸ್

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

Wild Elephant ದಾಳಿ ಸಮಸ್ಯೆ: ವೈಜ್ಞಾನಿಕ ಪರಿಹಾರ ಅಗತ್ಯ

Wild Elephant ದಾಳಿ ಸಮಸ್ಯೆ: ವೈಜ್ಞಾನಿಕ ಪರಿಹಾರ ಅಗತ್ಯ

Terror 2

Terrorism ನಿಗ್ರಹ ಎಲ್ಲ ದೇಶಗಳ ಧ್ಯೇಯವಾಗಲಿ

1-aww

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಸರಕಾರ ತುರ್ತು ಗಮನ ನೀಡಲಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.