ನಿಲ್ಲದ ನೇಪಾಲದ ತಗಾದೆ : ಸಂಬಂಧ ಹಾಳಾಗದಿರಲಿ


Team Udayavani, Jul 14, 2020, 9:13 AM IST

ನಿಲ್ಲದ ನೇಪಾಲದ ತಗಾದೆ : ಸಂಬಂಧ ಹಾಳಾಗದಿರಲಿ

ಕೆಲವು ಸಮಯದಿಂದ ನೆರೆ ರಾಷ್ಟ್ರ ನೇಪಾಲವು ಭಾರತ ವಿರೋಧಿ ಹೆಜ್ಜೆಗಳನ್ನು ಇಡುತ್ತಲೇ ಇದೆ. ಲಿಪುಲೇಖ್‌, ಲಿಂಪಿಯಾಧುರಾ ಮತ್ತು ಕಾಲಾಪಾನಿ ಪ್ರದೇಶಗಳ ವಿಚಾರವಾಗಿ ಎರಡೂ ರಾಷ್ಟ್ರಗಳ ನಡುವೆ ಬಿಕ್ಕಟ್ಟು ಸೃಷ್ಟಿಯಾಗಿರುವುದು ಸತ್ಯವಾದರೂ ಈ ವಿಚಾರವನ್ನು ಮಾತುಕತೆಯ ಮೂಲಕ ಬಗೆಹರಿಸಲು ಭಾರತ ಪ್ರಯತ್ನಿಸುತ್ತಿದೆ. ಒಟ್ಟಲ್ಲಿ ಯಾವುದೇ ಕಾರಣಕ್ಕೂ ಎರಡೂ ರಾಷ್ಟ್ರಗಳ ನಡುವಿನ ಸಂಬಂಧ ಹಾಳಾಗದಂತೆ ಎಚ್ಚರವಹಿಸಲು ಭಾರತ ಎಚ್ಚರಿಕೆಯಿಂದ ಮುನ್ನಡೆಯುತ್ತಿದ್ದರೆ, ಅತ್ತ ನೇಪಾಲದ ಕೆ.ಪಿ.ಓಲಿ ನೇತೃತ್ವದ ಕಮ್ಯುನಿಸ್ಟ್‌ ಸರಕಾರ ಮಾತ್ರ ಭಾರತ ವಿರೋಧಿ ನಡೆಯನ್ನು ನಿಲ್ಲಿಸುವ ಲಕ್ಷಣ ಕಾಣಿಸುತ್ತಿಲ್ಲ.

ಕೆಲ ದಿನಗಳ ಹಿಂದೆ ನೇಪಾಲವು ತನ್ನ ರಾಷ್ಟ್ರದಲ್ಲಿ ಭಾರತದ ಖಾಸಗಿ ಸುದ್ದಿ ವಾಹಿನಿಗಳ ಪ್ರಸಾರವನ್ನು ನಿಲ್ಲಿಸಿದೆ. ದೂರದರ್ಶನವೊಂದನ್ನು ಹೊರತುಪಡಿಸಿ, ಈಗ ಭಾರತದ ಯಾವ ಸುದ್ದಿವಾಹಿನಿಗಳೂ ಅಲ್ಲಿ ಪ್ರಸಾರವಾಗುತ್ತಿಲ್ಲ. ಭಾರತೀಯ ಚಾನೆಲ್‌ಗಳು ಆಧಾರ ರಹಿತ, ಸುಳ್ಳುಸುದ್ದಿಗಳನ್ನು ಪ್ರಸಾರ ಮಾಡುತ್ತಿದ್ದು, ಇದು ನೇಪಾಲದ ಜನರಿಗೆ ಹಾಗೂ ನೇಪಾಲಿ ರಾಷ್ಟ್ರೀಯ ಭಾವನೆಗೆ ಘಾಸಿ ಮಾಡಿದೆ ಎನ್ನುವುದು ಈಗಿನ ವಾದ. ಗಮನಿಸಬೇಕಾದ ಸಂಗತಿಯೆಂದರೆ, ಇತ್ತೀಚೆಗೆ ಚೀನ ಸಹ ಭಾರತದ ಕೆಲವು ಸುದ್ದಿ ಮಾಧ್ಯಮಗಳನ್ನು ನಿಷೇಧಿಸಿತ್ತು ಎನ್ನುವುದು. ಆದರೆ ಸರ್ವಾಧಿಕಾರಿ ಆಡಳಿತದ ಚೀನಕ್ಕೂ, ನೇಪಾಲದ ಆಡಳಿತ ವ್ಯವಸ್ಥೆಗೂ ಬಹಳ ಅಂತರ ವಿರಬೇಕಲ್ಲವೇ? ಈ ಕಾರಣಕ್ಕಾಗಿಯೇ ಭಾರತದ ಸುದ್ದಿ ಮಾಧ್ಯಮಗಳ ಬಗ್ಗೆ ಅಸಮಾಧಾನವಿದ್ದರೆ, ದೂರುಗಳಿದ್ದರೆ ಮೊದಲು ಈ ವಿಷಯದ ಬಗ್ಗೆ ಸರಕಾರದ ಮಟ್ಟದಲ್ಲಿ ಮಾತುಕತೆ ನಡೆಸಿ, ತೀರ್ಮಾನಕ್ಕೆ ಬರಬೇಕಿತ್ತು. ಸತ್ಯವೇನೆಂದರೆ, ಓಲಿಯವರು ತಮ್ಮ ಸರ್ವಾಧಿಕಾರಿ ಗುಣದಿಂದ, ಚೀನ ಪರ ಒಲವಿನಿಂದ ಪಕ್ಷದಲ್ಲೇ ತೀವ್ರ ಪ್ರತಿರೋಧ ಎದುರಿಸುತ್ತಿದ್ದಾರೆ. ಕೋವಿಡ್‌ ನಿರ್ವಹಣೆಯಲ್ಲಿ ಅವರ ಸರಕಾರ ಎಡವಿದೆ ಎಂಬ ಆರೋಪವೂ ಎದುರಾಗುತ್ತಿದೆ. ಇದೆಲ್ಲದರ ಪರಿಣಾಮವಾಗಿ, ಅವರ ಕುರ್ಚಿ ಇಂದೋ ನಾಳೆಯೋ ಉರುಳಿಬೀಳುವಂಥ ಸ್ಥಿತಿ ಎದುರಾಗಿದ್ದು, ಇದಕ್ಕೆಲ್ಲ ಖುದ್ದು ಓಲಿಯವರೇ ಸಂಪೂರ್ಣ ಜವಾಬ್ದಾರ. ಆದರೆ, ತಾವಾಗಿಯೇ ತಂದುಕೊಂಡಿರುವ ಈ ಸಂಕಷ್ಟಕ್ಕೆ ಅವರು ಭಾರತದತ್ತ ಬೆರಳು ತೋರಿಸುತ್ತಿರುವುದು ಹಾಸ್ಯಾಸ್ಪದ. ಭಾರತೀಯ ಸುದ್ದಿವಾಹಿನಿಗಳನ್ನು ನಿಷೇಧಿಸಿ ಜನರಿಂದ ಸತ್ಯವನ್ನು ಮುಚ್ಚಿಡುವ ಓಲಿ ಪ್ರಯತ್ನದ ಹಿಂದೆ ಚೀನದ ಸಲಹೆ ಕೆಲಸ ಮಾಡಿರಲಿಕ್ಕೂ ಸಾಕು!

ಓಲಿ ಆಡಳಿತ ಯಾವ ಮಟ್ಟಕ್ಕೆ ಈಗ ಚೀನದ ತಾಳಕ್ಕೆ ಕುಣಿಯುತ್ತಿದೆ ಎಂದರೆ, ಕೆಲ ಸಮಯದಿಂದ ನೇಪಾಲದ ರೇಡಿಯೋಗಳಲ್ಲಿ ಭಾರತ ವಿರೋಧಿ ಹಾಡುಗಳನ್ನೂ ಅದು ಬಿತ್ತರಿಸುತ್ತಿದೆ. ಒಟ್ಟಲ್ಲಿ ನೇಪಾಲವನ್ನು ಭಾರತದಿಂದ ದೂರವಾಗಿಸಿ, ಚೀನದ ಜೋಳಿಗೆಗೆ ಹಾಕಬೇಕೆಂಬ ಕೆ.ಪಿ. ಓಲಿ ಪ್ರಯತ್ನ, ನಿಸ್ಸಂಶಯವಾಗಿಯೂ ನೇಪಾಲಕ್ಕೆ ದೊಡ್ಡ ಹಾನಿ ಮಾಡಲಿದೆ. ಚೀನದ ಬೆಂಬಲದಿಂದ ಓಲಿ ತಮ್ಮ ಕುರ್ಚಿಯನ್ನು ಭದ್ರಗೊಳಿಸಿಕೊಳ್ಳಬಹುದು. ಆದರೆ, ಡ್ರ್ಯಾಗನ್‌ ರಾಷ್ಟ್ರ ಒಮ್ಮೆ ನೇಪಾಲದ ಮೇಲೆ ತನ್ನ ಹಿಡಿತ ಹೆಚ್ಚುಮಾಡಿಕೊಂಡಿತು ಎಂದರೆ, ಅಲ್ಲಿನ ಸಂಸ್ಕೃತಿ ವ್ಯವಸ್ಥೆಯನ್ನೇ ಅದು ನುಚ್ಚುನೂರು ಮಾಡಲಿದೆ. ಭಾರತ ಹಾಗೂ ನೇಪಾಲದ ನಡುವಿನ ಸಂಸ್ಕೃತಿ ಸಂಬಂಧಕ್ಕೂ ಹಾನಿ ಮಾಡಲು ಪ್ರಯತ್ನಿಸುತ್ತಿರುವ ಓಲಿ ಪ್ರಯತ್ನ ವಿಫ‌ಲವಾಗಲೇಬೇಕಿದೆ.

ಟಾಪ್ ನ್ಯೂಸ್

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.