ಗರ್ಭಪಾತ ಅವಧಿಯ ಮಿತಿ ಹೆಚ್ಚಳ : ಕಾನೂನಿಗೆ ತಿದ್ದುಪಡಿ ಸ್ವಾಗತಾರ್ಹ


Team Udayavani, Jan 31, 2020, 6:43 AM IST

pregnency

ಅಪ್ರಾಪ್ತ ವಯಸ್ಸಿನವರು ತಮ್ಮದಲ್ಲದ ತಪ್ಪಿನಿಂದ ಗರ್ಭವತಿಯಾದರೆ ಕೆಲವೊಮ್ಮೆ 20 ವಾರಗಳ ಬಳಿಕವೇ ತಿಳಿಯುತ್ತದೆ. ಇಂಥ ಸಂದರ್ಭದಲ್ಲಿ ಈ ಅನಪೇಕ್ಷಿತ ಗರ್ಭವನ್ನು ತೆಗೆಸಲು ಕಾನೂನು ಅಡ್ಡಿಯಾಗುತ್ತಿತ್ತು.

ಕಾನೂನು ಸಮ್ಮತ ಗರ್ಭಪಾತದ ಅವಧಿಯನ್ನು 20 ವಾರಗಳಿಂದ 24 ವಾರಕ್ಕೇರಿಸುವ ಮಸೂದೆಗೆ ಕೇಂದ್ರ ಸಂಪುಟದ ಅನುಮತಿ ಸಿಕ್ಕಿದೆ. ಮಹಿಳೆಯರ ಮತ್ತು ವೈದ್ಯಕೀಯ ಲೋಕದ ಬಹುಕಾಲದ ಬೇಡಿಕೆಯನ್ನು ಈ ಮೂಲಕ ಈಡೇರಿಸಲು ಸರಕಾರ ಮುಂದಾಗಿದೆ.

ಭಾರತದಲ್ಲಿ ವೈದ್ಯಕೀಯವಾಗಿ 20 ವಾರಗಳೊಳಗಿನ ಗರ್ಭವನ್ನು ಮಾತ್ರ ತೆಗೆಯಲು ಅನುಮತಿಯಿತ್ತು. ಇದರಿಂದ ಅತ್ಯಾಚಾರ ಸಂತ್ರಸ್ತೆಯರಿಗೆ, ಅಂಗವಿಕಲ, ಬುದ್ಧಿಮಾಂದ್ಯ ಯುವತಿಯರಿಗೆ ಸಂಕಷ್ಟವಾಗುತ್ತಿತ್ತು. ಅಪ್ರಾಪ್ತ ವಯಸ್ಸಿನವರು ತಮ್ಮದಲ್ಲದ ತಪ್ಪಿನಿಂದ ಗರ್ಭವತಿಯಾದರೆ ಕೆಲವೊಮ್ಮೆ 20 ವಾರಗಳ ಬಳಿಕವೇ ತಿಳಿಯುತ್ತದೆ. ಇಂಥ ಸಂದರ್ಭದಲ್ಲಿ ಈ ಅನಪೇಕ್ಷಿತ ಗರ್ಭವನ್ನು ತೆಗೆಸಲು ಕಾನೂನು ಅಡ್ಡಿಯಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ವೈದ್ಯಕೀಯವಾಗಿ ಗರ್ಭಪಾತ ಮಾಡಿಕೊಳ್ಳುವ ಅವಧಿಯ ಮಿತಿಯನ್ನು ಹೆಚ್ಚಿಸಬೇಕೆಂಬ ಬೇಡಿಕೆಯಿತ್ತು.

ಈ ಬೇಡಿಕೆ ಈಡೇರಲು ಕಾರಣವಾಗಿದ್ದು ಗುಜರಾತ್‌ನ ವಿವಾಹಿತ ಮಹಿಳೆಯೊಬ್ಬರ ಪ್ರಕರಣ. ಗರ್ಭದಲ್ಲಿರುವ ಮಗುವಿಗೆ ಗಂಭೀರವಾದ ಹೃದಯ ಸಂಬಂಧಿ ಸಮಸ್ಯೆಯಿದೆ ಎಂದು ತಿಳಿದು ಬಂದ ಬಳಿಕ ಗಂಡ ಮತ್ತು ಹೆಂಡತಿ ಸಮಾಲೋಚನೆ ಮಾಡಿ ಗರ್ಭಪಾತ ಮಾಡಿಸಿಕೊಳ್ಳಲು ನಿರ್ಧರಿಸುತ್ತಾರೆ. ಆದರೆ ಅದಾಗಲೇ ಗರ್ಭಕ್ಕೆ 23 ವಾರವಾಗಿದ್ದ ಕಾರಣ ವೈದ್ಯರು ಗರ್ಭಪಾತ ಮಾಡಲು ಒಪ್ಪುವುದಿಲ್ಲ. ಈ ದಂಪತಿ ನ್ಯಾಯಾಲಯದ ಮೆಟ್ಟಿಲೇರುತ್ತಾರೆ. ನ್ಯಾಯಾಲಯದಿಂದ ಅವರಿಗೆ ಅನುಕೂಲಕರವಾದ ತೀರ್ಪು ಬರದಿದ್ದರೂ ಜನಿಸಲಿರುವ ಮಗುವಿನ ಬೆಳವಣಿಗೆ ಸಮರ್ಪಕವಾಗಿಲ್ಲ ಎಂದು ತಿಳಿದ ಬಳಿಕವೂ ಅದನ್ನು ಉಳಿಸಿಕೊಳ್ಳಬೇಕೆ ಅಥವಾ ಬೇಡವೇ ಎಂದು ತೀರ್ಮಾನಿಸುವ ಹಕ್ಕು ಯಾರದ್ದು ಎಂಬ ಚರ್ಚೆಗೆ ಈ ಪ್ರಕರಣ ನಾಂದಿಯಾಗಿತ್ತು. ಈ ಪ್ರಕರಣದ ಹಿನ್ನೆಲೆಯಲ್ಲೇ ಕಾನೂನು ಸಮ್ಮತ ಗರ್ಭಪಾತದ ಅವಧಿಯನ್ನು ಹೆಚ್ಚಿಸಬೇಕೆಂಬ ವಿಚಾರ ಮುನ್ನೆಲೆಗೆ ಬಂದಿತ್ತು.ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳು ಅತ್ಯಾಚಾರಕ್ಕೊಳಗಾಗಿ ಗರ್ಭ ಧರಿಸಿದ ಪ್ರಕರಣದಲ್ಲೂ ಈ ಕಾನೂನು ದೊಡ್ಡ ಅಡಚಣೆಯಾಗಿತ್ತು. ಅನಂತರ ಇದನ್ನು ಸುಪ್ರೀಂ ಕೋರ್ಟ್‌ ಇತ್ಯರ್ಥಪಡಿಸಬೇಕಾಯಿತು. ಭಾರತ ಎಂದಲ್ಲ ಹಲವು ದೇಶಗಳಲ್ಲಿ ಗರ್ಭಪಾತಕ್ಕೆ ಸಂಬಂಧಿಸಿದಂತೆ ಇಂಥ ಜಟಿಲ ಕಾನೂನುಗಳಿವೆ. ಇದು ಧಾರ್ಮಿಕ ಹಾಗೂ ಸಾಮಾಜಿಕ ಆಯಾಮಗಳನ್ನು ಒಳಗೊಂಡಿರುವ ವಿಚಾರವಾಗಿರುವುದರಿಂದ ಕಾನೂನು ರಚಿಸುವಾಗ ಬಹಳ ಎಚ್ಚರಿಕೆಯಿಂದ ಎಲ್ಲ ಅಂಶಗಳನ್ನು ಪರಿಶೀಲಿಸಬೇಕಾಗುತ್ತದೆ. ಐರ್ಲ್ಯಾಂಡ್‌ ದೇಶದಲ್ಲಿದ್ದ ಜಟಿಲ ಗರ್ಭಪಾತ ಕಾನೂನಿನಿಂದಾಗಿಯೇ ಬೆಳಗಾವಿ ಮೂಲದ ದಂತ ವೈದ್ಯೆಯೊಬ್ಬರು ಪ್ರಾಣ ಕಳೆದುಕೊಂಡ ಪ್ರಕರಣವಿನ್ನೂ ನೆನಪಿನಿಂದ ಮಾಸಿಲ್ಲ.

ನಮ್ಮ ದೇಶದಲ್ಲಿ ಗರ್ಭಪಾತ ಕಾನೂನು ಮತ್ತು ಲಿಂಗಪತ್ತೆ ಕಾನೂನಿಗೆ ಸಂಬಂಧಿಸಿದಂತೆ ಹೆಚ್ಚಿನವರಲ್ಲಿ ಅರಿವಿನ ಕೊರತೆಯಿದೆ. ಬಹುತೇಕ ಮಂದಿ ಇದು ಎರಡೂ ಒಂದೇ ಎಂದು ಭಾವಿಸಿದ್ದಾರೆ. ಅಲ್ಲದೆ ಗರ್ಭಪಾತ ಮಹಾಪಾಪ ಎಂಬ ಧಾರ್ಮಿಕ ನಂಬಿಕೆ ಬಹುತೇಕ ಎಲ್ಲ ಸಮುದಾಯಗಳಲ್ಲಿ ಇದೆ. ಪರೋಕ್ಷವಾಗಿ ಇದು ಮಹಿಳೆಗೆ ದೇಹದ ಮೇಲಿರುವ ಹಕ್ಕನ್ನು ಬೇರೆ ಯಾರೋ ನಿಯಂತ್ರಿಸಿದಂತೆ ಆಗುತ್ತದೆ. ಮೆಡಿಕಲ್‌ ಟರ್ಮಿನೇಶನ್‌ ಆಫ್ ಪ್ರಾಗ್ನೆನ್ಸಿ ಕಾಯಿದೆಗೆ ತಿದ್ದುಪಡಿ ತರುವ ಮೂಲಕ ಮಹಿಳೆಗೆ ಆಕೆಯ ದೇಹದ ಮೇಲೆ ಹೆಚ್ಚು ಹಕ್ಕು ಸಿಕ್ಕಿದಂತಾಗಿದೆ.ಸಂಸತ್ತಿನ ಉಭಯ ಸದನಗಳಲ್ಲಿ ತಿದ್ದುಪಡಿ ಕಾಯಿದೆ ಅಡ್ಡಿಯಿಲ್ಲದೆ ಮಂಜೂರಾಗುವುದು ಅಗತ್ಯ. ಆದರೆ ಕಾನೂನು ದುರುಪಯೋಗವಾಗದಂತೆ ನೋಡಿಕೊಳ್ಳುವುದು ಮುಖ್ಯ. ಲಿಂಗಪತ್ತೆ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದ್ದರೂ ಈಗಲೂ ಅಲ್ಲಲ್ಲಿ ಅಕ್ರಮವಾಗಿ ಈ ಪರೀಕ್ಷೆ ನಡೆಯುತ್ತಿರುತ್ತದೆ. ಗರ್ಭಪಾತ ಕಾನೂನಿಗೂ ಈ ಗತಿಯಾಗಬಾರದು.

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.