ಲೋಕ ಅದಾಲತ್‌ನಿಂದ ನ್ಯಾಯಾಂಗದ ಮೇಲೆ ವಿಶ್ವಾಸ ಹೆಚ್ಚಲಿ


Team Udayavani, Jun 25, 2022, 6:00 AM IST

ಲೋಕ ಅದಾಲತ್‌ನಿಂದ ನ್ಯಾಯಾಂಗದ ಮೇಲೆ ವಿಶ್ವಾಸ ಹೆಚ್ಚಲಿ

ನ್ಯಾಯಾಲಯಗಳಲ್ಲಿ ಲಕ್ಷಾಂತರ ಪ್ರಕರಣಗಳು ಬಾಕಿ ಇದ್ದು ವರ್ಷಗಟ್ಟಲೆ ವಿಚಾರಣೆ ನಡೆಯುತ್ತಲೇ ಇರುವ ಈ ಸಂದರ್ಭದಲ್ಲಿ “ಲೋಕ ಅದಾಲತ್‌’ ಒಂದು ರೀತಿಯ ಭರವಸೆಯ ಬೆಳಕು ಎಂಬಂತಾ ಗಿರುವುದು ಸ್ವಾಗತಾರ್ಹ. ವರ್ಷಗಟ್ಟಲೆ ನ್ಯಾಯಾಲಯಗಳಲ್ಲಿ ಇತ್ಯರ್ಥ ಗೊಳ್ಳದ ಪ್ರಕರಣಗಳು ಲೋಕ ಅದಾಲತ್‌ನಲ್ಲಿ ಪರಸ್ಪರ ರಾಜಿ- ಸಂಧಾನದ ಮೂಲಕ ವಿಲೇವಾರಿ ಆಗುತ್ತಿರುವುದು ಒಳ್ಳೆಯ ಬೆಳವಣಿಗೆ. ಇದರಿಂದ ಜನಸಾಮಾನ್ಯರ ವ್ಯಾಜ್ಯಗಳು ತ್ವರಿತಗತಿಯಲ್ಲಿ ವಿಲೇವಾರಿಯಾಗಿ ನೆಮ್ಮದಿ ಭಾವ ಮೂಡಿಸುವಂತಾಗಲಿದೆ.

ಇತ್ತೀಚೆಗೆ ಲೋಕ ಅದಾಲತ್‌ ವ್ಯಾಪ್ತಿಯು ವಿಸ್ತಾರಗೊಂಡಿರುವುದು ಗಮನಾರ್ಹ. ರೇರಾ, ಕೆಇಆರ್‌ಸಿ, ಆರ್‌ಟಿಐ ಸೇರಿ ಇತರ ಸೇವಾ ವ್ಯಾಪ್ತಿಗಳೂ ಇದರಡಿ ಬಂದಿವೆ. ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಸಂಚಾರ ಉಲ್ಲಂಘನೆ ಪ್ರಕರಣಗಳ ಇತ್ಯರ್ಥಕ್ಕೂ ಮುಂದಾಗಿರುವುದು ಅತೀ ದೊಡ್ಡ ಬೆಳವಣಿಗೆ ಎಂದೇ ಹೇಳಬಹುದು.

ಹತ್ತಾರು ವರ್ಷಗಳಿಂದ ಬಾಕಿ ಇರುವ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಂದ ನೂರು ಕೋಟಿ ರೂ.ಗೂ ಅಧಿಕ ದಂಡ ಬರಬೇಕಿದೆ. ಆದರೆ ಪ್ರಕರಣ ಇತ್ಯರ್ಥಕ್ಕೆ ಸುಗಮ ಹಾದಿ ಎಂಬುದಿಲ್ಲ. ಹೀಗಾಗಿ ಲೋಕ ಅದಾಲತ್‌ ಮೂಲಕ ಪರಿಹರಿಸಲು ಮುಂದಾಗಿರುವ ಪ್ರಯತ್ನ ನಿಜಕ್ಕೂ ಶ್ಲಾಘನೀಯ. ಲೋಕ ಅದಾಲತ್‌ ಕೇವಲ ವ್ಯಾಜ್ಯ ಗಳನ್ನಷ್ಟೇ ಇತ್ಯರ್ಥಗೊಳಿಸುತ್ತಿಲ್ಲ. ಪ್ರವಾಹ, ಆ್ಯಸಿಡ್‌ ದಾಳಿ, ಅತ್ಯಾಚಾರ, ದೌರ್ಜನ್ಯ ಪ್ರಕರಣಗಳಲ್ಲೂ ಪರಿಹಾರ ಕೊಡಿಸುವ ಕೆಲಸವನ್ನೂ ಮಾಡುತ್ತಿದೆ. ಇದು ಎಷ್ಟೋ ಕುಟುಂಬಗಳಿಗೆ ಅನುಕೂಲವಾಗಲಿದೆ.

ಈಗಾಗಲೇ ಲೋಕ ಅದಾಲತ್‌ ಮೂಲಕ ಲಕ್ಷಾಂತರ ಪ್ರಕರಣಗಳು ಇತ್ಯರ್ಥಗೊಂಡಿರುವುದು ನೋಡಿದರೆ ಜನಸಾಮಾನ್ಯರಲ್ಲಿ ಅದಾಲತ್‌ ಬಗ್ಗೆ ವಿಶ್ವಾಸ ಮೂಡಿರುವುದು ಸಾಬೀತಾಗುತ್ತದೆ. ಜತೆಗೆ ಲೋಕ ಅದಾಲತ್‌ ಕುರಿತು ಮತ್ತಷ್ಟು ಜಾಗೃತಿ ಮೂಡಿಸುವ ಅಗತ್ಯವಿದೆ. ಎಷ್ಟೋ ಮಂದಿ ಸಣ್ಣ ಪುಟ್ಟ ಕಲಹ, ವ್ಯಾಜ್ಯಗಳಿಂದ ಪೊಲೀಸ್‌ ಠಾಣೆ ಮೆಟ್ಟಿಲೇರಿ, ನ್ಯಾಯಾಲಯಗಳಿಗೆ ಅಲೆದಾಡುತ್ತಾ ತಮ್ಮ ಅಮೂಲ್ಯ ಸಮಯ ವ್ಯಯ ಮಾಡುವ ಜತೆಗೆ ಕೆಲಸ ಕಾರ್ಯ ಬಿಟ್ಟು ಮಾನಸಿಕ ಒತ್ತಡ ಹಾಗೂ ವೇದನೆಗೆ ಒಳಗಾಗಿ ಅಂತಿಮವಾಗಿ ಅದು ಜೀವನದ ಮೇಲೆ ಪರಿಣಾಮ ಬೀರುವಂತಾಗುತ್ತದೆ. ಹೀಗಾಗಿ ಪ್ರಕರಣಗಳನ್ನು ಪ್ರಾರಂಭದಲ್ಲೇ ಇತ್ಯರ್ಥಗೊಳಿಸಲು ಲೋಕ ಅದಾಲತ್‌ ಒಂದು ವರದಾನ ಎಂದೇ ಹೇಳಬಹುದು.

ಅವಕಾಶ ವಂಚಿತ ವರ್ಗಗಳಿಗೆ ಉಚಿತವಾಗಿ ಕಾನೂನಿನ ನೆರವು ಮತ್ತು ಪರಿಹಾರ ನೀಡುವ ಉದ್ದೇಶದೊಂದಿಗೆ ಶಾಸನಾತ್ಮಕ ಹೊಣೆಗಾರಿಕೆ ನಿರ್ವಹಿಸುತ್ತಿರುವ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಲೋಕ ಅದಾಲತ್‌ ಜನತಾ ನ್ಯಾಯಾಲಯಗಳ ಮೂಲಕ ಸುಲಭವಾಗಿ ವ್ಯಾಜ್ಯಗಳನ್ನು ಇತ್ಯರ್ಥಪಡಿಸುವ ಬಹುದೊಡ್ಡ ಕೆಲಸ ಮಾಡುತ್ತಿದೆ.

ಇಂದು ಸಹ ರಾಷ್ಟ್ರೀಯ ಲೋಕ ಅದಾಲತ್‌ ನಡೆಯಲಿದ್ದು, ಹೈಕೋರ್ಟ್‌ ಸೇರಿದಂತೆ ಎಲ್ಲ 30 ಜಿಲ್ಲೆಗಳಲ್ಲಿ, 176 ತಾಲೂಕುಗಳಲ್ಲಿ ನ್ಯಾಯಾಧೀಶರು ಕಲಾಪಗಳನ್ನು ನಡೆಸಿ ಪ್ರಕರಣಗಳನ್ನು ಇತ್ಯರ್ಥ ಪಡಿಸಲಿದ್ದಾರೆ. ಈ ವರೆಗೆ ನ್ಯಾಯಾಲಯದಲ್ಲಿ ಬಾಕಿ ಇರುವ 3.02 ಲಕ್ಷ, ವ್ಯಾಜ್ಯಪೂರ್ವ 1.18 ಲಕ್ಷ ಪ್ರಕರಣಗಳು ಸೇರಿ 5 ಲಕ್ಕಕ್ಕೂ ಹೆಚ್ಚು ಪ್ರಕರಣಗಳನ್ನು ಲೋಕ ಅದಾಲತ್‌ನಲ್ಲಿ ಇತ್ಯರ್ಥ ಪಡಿಸಲು ಗುರುತಿಸಲಾಗಿದೆ. ಹೈಕೋರ್ಟ್‌ನಲ್ಲಿ 13 ನ್ಯಾಯಾಧೀಶರು ಕಲಾಪಗಳನ್ನು ನಡೆಸಲಿದ್ದು, ರಾಜ್ಯಾದ್ಯಂತ 995 ಬೆಂಚ್‌ಗಳು ಲೋಕ ಅದಾಲತ್‌ ಪ್ರಕರಣಗಳ ವಿಚಾರಣೆ ನಡೆಸಲಿದ್ದಾರೆ. ರಾಜ್ಯದ ನಾಗರಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು.

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.