ಹೆಚ್ಚಿದ ಪಾಕ್‌ನ‌ ಧಾರ್ಮಿಕ ಮೂಲಭೂತವಾದ


Team Udayavani, Dec 31, 2020, 5:30 AM IST

Pak

ನೆರೆಯ ಪಾಕಿಸ್ಥಾನ, ಆಫ್ಘಾನಿಸ್ಥಾನ ಹಾಗೂ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾಕ ಹಿಂದೂಗಳು, ಸಿಕ್ಖರು, ಬೌದ್ಧ ಧರ್ಮೀಯರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರ ಮೇಲೆ ನಡೆಯುತ್ತಿರುವ ಧಾರ್ಮಿಕ ಹಿಂಸೆ ಅಷ್ಟಿಷ್ಟಲ್ಲ. ಈ ಕಾರಣಕ್ಕಾಗಿಯೇ ಬದುಕುಳಿಯುವುದಕ್ಕಾಗಿ ಪ್ರತೀ ವರ್ಷ ಅಲ್ಲಿನ ಅಲ್ಪಸಂಖ್ಯಾಕರು ನೆರೆಯ ರಾಷ್ಟ್ರಗಳಿಗೆ ಆಶ್ರಯ ಅರಸಿ ತಮ್ಮ ದೇಶಗಳಿಂದ ಪಲಾಯನಗೈಯ್ಯುತ್ತಾರೆ. ಈ ಹಿನ್ನೆಲೆಯಲ್ಲೇ ಈ ಮೂರೂ ರಾಷ್ಟ್ರಗಳ ಧಾರ್ಮಿಕ ಮೂಲಭೂತವಾದದಿಂದ ತತ್ತರಿಸಿ ಭಾರತಕ್ಕೆ ಆಶ್ರಯ ಕೋರಿ ಬಂದ ಅಲ್ಲಿನ ಅಲ್ಪಸಂಖ್ಯಾಕ ವರ್ಗಗಳಿಗೆ ಪೌರತ್ವ ಕೊಡುವಂಥ ಸಿಎಎ ಅನ್ನು ಕೇಂದ್ರ ಸರಕಾರ ಜಾರಿ ಮಾಡಿದೆ.

ಅದರಲ್ಲೂ ಪಾಕಿಸ್ಥಾನವಂತೂ ಮಾನವ ಹಕ್ಕುಗಳ ಉಲ್ಲಂಘನೆಯನ್ನೇ ಮೂಲಗುಣವಾಗಿಸಿಕೊಂಡುಬಿಟ್ಟಿದೆ. ಈ ತಿಂಗಳಲ್ಲೇ ಅಮೆರಿಕದ ಸೆನೆಟ್‌, “ಜನರ ಧಾರ್ಮಿಕ ಸ್ವಾತಂತ್ರ್ಯವನ್ನು ಹತ್ತಿಕ್ಕುತ್ತಿರುವ’ ರಾಷ್ಟ್ರಗಳ ಪಟ್ಟಿಯಲ್ಲಿ ಪಾಕಿಸ್ಥಾನದ ಹೆಸರನ್ನೂ ಘೋಷಿಸಿತ್ತು. ಅಮೆರಿಕದ ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಮೇಲಿನ ಸಮಿತಿಯ ವರದಿಯ ಹಿನ್ನೆಲೆಯಲ್ಲಿ ಅಮೆರಿಕನ್‌ ಸರಕಾರ ಹೀಗೆ ಘೋಷಣೆ ಮಾಡಿತ್ತು. ಆ ವರದಿಯಲ್ಲಿ ಪಾಕಿಸ್ಥಾನದ ಇಸ್ಲಾಮಿಕ್‌ ಮೂಲಭೂತವಾದಿಗಳು ಹಿಂದೂ, ಕ್ರಿಶ್ಚಿಯನ್‌, ಸಿಕ್ಖ್ ಸಮುದಾಯಗಳ ಹೆಣ್ಣುಮಕ್ಕಳನ್ನು ಅಪಹರಿಸಿ, ಬಲವಂತದಿಂದ ಮತಾಂತರ ಮಾಡುವುದು, ಚೀನಕ್ಕೆ ಮಾರಾಟ ಮಾಡುವುದು ಮತ್ತು ಅತ್ಯಾಚಾರ ನಡೆಸುತ್ತಿದ್ದಾರೆ. ಇವೆಲ್ಲ ಸರಕಾರದ ನೆರಳಿನಲ್ಲಿಯೇ ನಡೆಯುತ್ತಿದೆ ಎಂದು ಹೇಳಿತ್ತು.

ಒಂದು ವರದಿಯ ಪ್ರಕಾರ ಪ್ರತೀ ವರ್ಷವೂ ಪಾಕಿಸ್ಥಾನದಲ್ಲಿ ಅಲ್ಪಸಂಖ್ಯಾಕ ವರ್ಗಗಳಿಗೆ ಸೇರಿದ 1,000ಕ್ಕೂ ಅಧಿಕ ಹೆಣ್ಣುಮಕ್ಕಳನ್ನು ಇಸ್ಲಾಂಗೆ ಬಲವಂತವಾಗಿ ಮತಾಂತರಿಸಲಾಗುತ್ತಿದೆ. ಮಾನವ ಹಕ್ಕು ಹೋರಾಟಗಾರರ ಪ್ರಕಾರ, ಕೋವಿಡ್‌ನ‌ ಈ ಸಂದರ್ಭದಲ್ಲಂತೂ ಈ ದುಷ್ಕೃತ್ಯಗಳು ಹೆಚ್ಚಾಗಿ ಬಿಟ್ಟಿವೆ. ದಕ್ಷಿಣ ಸಿಂಧ್‌ ಪ್ರಾಂತ್ಯಕ್ಕೆ ಸೇರಿದ ಬಡ ಹಿಂದೂ ಹೆಣ್ಣುಮಕ್ಕಳೇ ಮೂಲಭೂತವಾದಿಗಳ ದುಷ್ಕೃತ್ಯಕ್ಕೆ ಹೆಚ್ಚು ತುತ್ತಾಗುತ್ತಾ ಬಂದಿದ್ದಾರೆ. ಕಳೆದೆರಡು ತಿಂಗಳಲ್ಲಿ ಕ್ರಿಶ್ಚಿಯನ್‌ ಸಮುದಾಯದ ಇಬ್ಬರು ಹೆಣ್ಣುಮಕ್ಕಳ ಅಪಹರಣ ಮತ್ತು ಬಲವಂತದ ಮತಾಂತರ ವಿಚಾರ ಈಗ ಮಾನವ ಹಕ್ಕು ಹೋರಾಟಗಾರರಿಂದ ಬಹಳ ಆಕ್ರೋಶಕ್ಕೆ ಗುರಿಯಾಗುತ್ತಿದೆ.

ಸರಿಸುಮಾರು 22 ಕೋಟಿ ಜನಸಂಖ್ಯೆಯಿರುವ ಪಾಕಿಸ್ಥಾನದಲ್ಲಿ ಅಲ್ಪಸಂಖ್ಯಾಕರ ಸಂಖ್ಯೆ ಕೇವಲ 3.2 ರಷ್ಟಿದೆ. ಸರಕಾರದ ನಿರಂತರ ಅವಗಣನೆಗೆ ಗುರಿಯಾಗಿರುವ ಈ ವರ್ಗ, ಮೂಲಭೂತವಾದಿಗಳಿಗೆ ಸುಲಭವಾಗಿ ತುತ್ತಾಗುತ್ತಿದೆ. ಬಲವಂತದ ಮತಾಂತರದ ವಿರುದ್ಧವಾಗಲಿ ಅಥವಾ ಯಾವುದೇ ರೀತಿಯ ವ್ಯಾಜ್ಯದ ಬಗ್ಗೆ ಅಲ್ಪಸಂಖ್ಯಾಕರು ಸಿಡಿದು ನಿಂತರೆ, ಅವರನ್ನು ಧರ್ಮನಿಂದನೆ ಆರೋಪದಲ್ಲಿ ಮತ್ತಷ್ಟು ಹತ್ತಿಕ್ಕುವ ಪ್ರಯತ್ನ ಮಾಡಲಾಗುತ್ತಿದೆ.

ಅಂತಾರಾಷ್ಟ್ರೀಯ ವೇದಿಕೆಗಳಲ್ಲೆಲ್ಲ ಭಾರತಕ್ಕೆ ಶಾಂತಿಯ ಪಾಠ ಮಾಡಲು ಪ್ರಯತ್ನಿಸುವ, ಸಿಎಎಯಂಥ ಮಾನವೀಯ ಪ್ರಯತ್ನಗಳ ಬಗ್ಗೆ ಕುಹಕವಾಡುವ ಪಾಕ್‌ ಪ್ರಧಾನಿ ಇಮ್ರಾನ್‌ ಖಾನ್‌, ತಮ್ಮ ಅವಧಿಯಲ್ಲಿ ಮೂಲಭೂತವಾದಿ ಸಂಘಟನೆಗಳು ಮತ್ತಷ್ಟು ಬಲಿಷ್ಠವಾಗಿ ಬೇರೂರಲು ಬಿಟ್ಟಿದ್ದಾರೆ. ಇವೆಲ್ಲದರ ನಡುವೆಯೂ ಇನ್ನೊಂದೆಡೆ ಭಾರತವು ಪಾಕ್‌, ಬಾಂಗ್ಲಾ ಹಾಗೂ ಅಫ್ಘಾನಿಸ್ಥಾನದಲ್ಲಿ ಧಾರ್ಮಿಕ ಮೂಲಭೂತವಾದಕ್ಕೆ ತುತ್ತಾಗಿರುವ ಸಂತ್ರಸ್ತರ ಪರವಾಗಿ ಮಾತನಾಡುತ್ತಿರುವುದು ಶ್ಲಾಘನೀಯ ವಿಚಾರ.

ದುರಂತವೆಂದರೆ, ಅಂತಾರಾಷ್ಟ್ರೀಯ ಸಮುದಾಯ ಪಾಕ್‌ನ ಈ ದುಷ್ಕೃತ್ಯಗಳನ್ನು ನಿಲ್ಲಿಸುವುದಕ್ಕಿಂತ ಹೆಚ್ಚಾಗಿ, ಬಾಯಾ¾ತಿನ ಖಂಡನೆಗಷ್ಟೇ ತಮ್ಮ ಜವಾಬ್ದಾರಿಯನ್ನು ಸೀಮಿತಗೊಳಿಸಿಕೊಂಡಿರುವುದು. ಭಾರತದ ಸಣ್ಣಪುಟ್ಟ ವಿಚಾರಗಳಲ್ಲೂ ಮೂಗು ತೂರಿಸುವ ಜಾಗತಿಕ ಸಮುದಾಯ ಪಾಕಿಸ್ಥಾನದ ಮಟ್ಟಿಗೆ ಮೃದು ಧೋರಣೆ ಅನುಸರಿಸುತ್ತಿರುವುದು ಸರ್ವಥಾ ಸರಿಯಲ್ಲ.

ಟಾಪ್ ನ್ಯೂಸ್

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

7-rbi

Editorial: ರೆಪೊ ದರದಲ್ಲಿ ಯಥಾಸ್ಥಿತಿ: ಆರ್‌ಬಿಐ ಜಾಣ್ಮೆಯ ನಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.