Operation Kaveri ; ಸೂಡಾನ್‌ ಕಾರ್ಯಾಚರಣೆ ಶುರು ಸ್ತುತ್ಯರ್ಹ

, Sudan,ಎಸ್‌. ಜೈಶಂಕರ್‌ ,ಆಪರೇಷನ್‌ ಕಾವೇರಿ,ಕೇಂದ್ರ ಸರಕಾರ 

Team Udayavani, Apr 25, 2023, 6:05 AM IST

sudanOperation Kaveri ; ಸೂಡಾನ್‌ ಕಾರ್ಯಾಚರಣೆ ಶುರು ಸ್ತುತ್ಯರ್ಹ

ಅಧಿಕಾರಕ್ಕಾಗಿ ಸೂಡಾನ್‌ ಸೇನೆ ಮತ್ತು ಅಲ್ಲಿನ ಅರೆ ಸೇನಾ ಪಡೆಗಳ ನಡುವೆ ನಡೆಯುತ್ತಿರುವ ಹೋರಾಟದಲ್ಲಿ 800 ಮಂದಿ ಕನ್ನಡಿಗರೂ ಸೇರಿದಂತೆ 3 ಸಾವಿರ ಮಂದಿ ಭಾರತೀಯರು ಸಿಕ್ಕಿ ಹಾಕಿಕೊಂಡಿದ್ದಾರೆ. ಅವರನ್ನು ಪಾರು ಮಾಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ “ಆಪರೇಷನ್‌ ಕಾವೇರಿ’ ಎಂಬ ಹೆಸರಿನ ರಕ್ಷಣ ಕಾರ್ಯಾಚರಣೆಯನ್ನು ಶುರು ಮಾಡಿರುವುದು ಸ್ತುತ್ಯರ್ಹವಾದ ಸಂಗತಿ ಯಾಗಿದೆ. ವಿದೇಶಾಂಗ ಸಚಿವ ಎಸ್‌. ಜೈಶಂಕರ್‌ ಅವರೇ ಸೋಮವಾರ ಟ್ವೀಟ್‌ ಮಾಡಿದ ಮಾಹಿತಿಯಂತೆ ಸದ್ಯ ಹಲವು ಮಂದಿಯನ್ನು ರಕ್ಷಿಸಲಾಗಿದೆ. ಈ ಕಾರ್ಯಕ್ಕಾಗಿ ಐಎನ್‌ಎಸ್‌ ಸುಮೇಧ, ಐಎಎಫ್ನ ಸಿ-130ಜೆ ಎಂಬ ಎರಡು ಬೃಹತ್‌ ವಿಮಾನಗಳನ್ನು ಪೋರ್ಟ್‌ ಸೂಡಾನ್‌ಗೆ ಕಳುಹಿಸಲಾಗಿದೆ.

ಹೀಗಾಗಿ ಆಂತರಿಕ ಸಂಘರ್ಷದಿಂದ ಬಳಲಿ ಬೆಂಡಾಗಿರುವ ರಾಷ್ಟ್ರದಿಂದ ನಮ್ಮವರನ್ನು ಕರೆ ತರುವ ಕೆಲಸ ಶುರುವಾಗಿದೆ. ಇದರಿಂದ ಅಲ್ಲಿ ಸಿಲುಕಿದ್ದ ಭಾರತೀಯರು ನಿಟ್ಟುಸಿರು ಬಿಡುವಂತಾಗಿದೆ. ಆಂತರಿಕ ಸಂಘರ್ಷವೋ, ಯುದ್ಧಕ್ಕೆ ತುತ್ತಾಗಿರುವ ಯಾವುದೇ ಒಂದು ದೇಶದಲ್ಲಿ ಸಿಕ್ಕಿ ಹಾಕಿಕೊಂಡಿರುವ ನಮ್ಮವರನ್ನು ಸುರಕ್ಷಿತವಾಗಿ ಕರೆದು ತರಬೇಕಾದರೆ ಬಹಳಷ್ಟು ಎಚ್ಚರಿಕೆಯನ್ನು ವಹಿಸಲೇಬೇಕಾಗುತ್ತದೆ. ಇತ್ತೀಚೆಗೆ ಕೆಲವು ಮುಖಂಡರು ಕೇಂದ್ರ ಸರಕಾರ ನಿರ್ಲಿಪ್ತವಾಗಿ ಕುಳಿತಿದೆ. ಅವರ ಬಗ್ಗೆ ಯಾವುದೇ ಕಾಳಜಿ ಇಲ್ಲ ಎಂದು ಕಟುವಾಗಿ ಟೀಕಿಸಿದ್ದರು. ಇದು ನಿಜಕ್ಕೂ ಖಂಡನೀಯ ವಿಚಾರ. ನಿಗದಿತ ದೇಶದಲ್ಲಿ ರಾಯಭಾರ ಕಚೇರಿ ಇದ್ದರೂ ಅಲ್ಲಿನ ಆಡಳಿತ ವ್ಯವಸ್ಥೆ ಮತ್ತು ಬಿಕ್ಕಟ್ಟಿನ ಸ್ಥಿತಿಯಲ್ಲಿ ಹೇಗೆ, ಏನಾಗಲಿದೆ ಎಂಬ ಅಂಶವನ್ನು ನಿರೀಕ್ಷಿಸುವುದು ಸಾಧ್ಯವಿಲ್ಲ. ಅದಕ್ಕಾಗಿ ಇತರ ದೇಶಗಳು ತಮ್ಮವರನ್ನು ಕಾಪಾಡುವ ನಿಟ್ಟಿನಲ್ಲಿ ಯಾವ ರೀತಿಯ ತಂತ್ರಗಳನ್ನು ಅನುಸರಿಸುತ್ತಿವೆ ಎಂಬುದರ ಬಗ್ಗೆ ನಿಕಟ ಸಂಪರ್ಕ ಇರಿಸಿಕೊಂಡು ಮುಂದಡಿ ಇರಿಸಬೇಕಾಗುತ್ತದೆ.

ಸದ್ಯದ ಬೆಳವಣಿಗೆಯಲ್ಲಿ ಕೂಡ ಕೇಂದ್ರ ಸರಕಾರ ಫ್ರಾನ್ಸ್‌ ಸೇನೆಯ ನೆರವಿನಿಂದ ನಮ್ಮವರನ್ನು ಮೊದಲ ಹಂತದಲ್ಲಿ ಪಾರು ಮಾಡುವಲ್ಲಿ ಯಶಸ್ವಿಯಾಗಿದೆ. ಸೂಡಾನ್‌ ರಾಜಧಾನಿ ಖಾತೊìಮ್‌ನಲ್ಲಿ ಇರುವ ಭಾರತದ ರಾಯಭಾರ ಕಚೇರಿ ಸಿಬಂದಿಗೆ ತಾವು ಇರುವಲ್ಲಿಂದಲೇ ಕೆಲಸ ನಿರ್ವಹಿಸಲು ಸೂಚಿಸಲಾಗಿದೆ. ಅಲ್ಲಿನ ಸೇನೆಯ ಜತೆಗೆ ನಿಕಟ ಸಂಪರ್ಕ ಸಾಧಿಸಿಕೊಂಡು ಯುದ್ಧ ಪೀಡಿತ ಸ್ಥಳಗಳಲ್ಲಿ ಇರುವ ನಮ್ಮವರನ್ನು ಪತ್ತೆ ಮಾಡಿ ಕರೆತರುವುದೇ ದೊಡ್ಡ ಸಾಹಸದ ಕೆಲಸ.

ಇಂಥ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ನಡೆಸುವುದು ನಮ್ಮ ದೇಶದ ವೀರ ಯೋಧರಿಗೆ ಮತ್ತು ಸೇನೆಗೆ, ಸರಕಾರಕ್ಕೆ ಹೊಸತೇನೂ ಅಲ್ಲ. ಕೊರೊನಾ ಸೋಂಕಿನ ಸಂದರ್ಭದಲ್ಲಿ ಹಲವು ರಾಷ್ಟ್ರಗಳಲ್ಲಿ ಸಿಕ್ಕಿ
ಹಾಕಿಕೊಂಡಿದ್ದವರನ್ನು ಯಶಸ್ವಿಯಾಗಿ ಕೇಂದ್ರ ಸರಕಾರ ಕರೆದು ತಂದದ್ದುಉಂಟು. ಅದಕ್ಕೆ ಸಮುದ್ರ ಸೇತು ಎಂದು ಹೆಸರಿಸಲಾಗಿತ್ತು. 2021ರಲ್ಲಿ “ದೇವಿಶಕ್ತಿ’ ಎಂಬ ಹೆಸರಿನ ಮೂಲಕ ತಾಲಿಬಾನ್‌ ನಿಯಂತ್ರಣದಲ್ಲಿ ಇರುವ ಅಫ್ಘಾನಿಸ್ಥಾನದಲ್ಲಿಇದ್ದ ಭಾರತೀಯ ಮೂಲದ ನಾಗರಿಕರನ್ನು ಸುರಕ್ಷಿತವಾಗಿ ಕರೆದು ತರಲಾಗಿತ್ತು. ಇಲ್ಲಿ ಉಲ್ಲೇಖ ಮಾಡಿರುವುದು ಒಂದೆರಡು ಉದಾಹರಣೆಗಳು ಮಾತ್ರ.

ಆದರೆ ಈ ವಿಚಾರದಲ್ಲಿ ಅನಗತ್ಯ ಆಕ್ಷೇಪಗಳನ್ನು ಮಾಡುವ ಬದಲು ಯಾವ ರೀತಿಯಾಗಿ ಕಾರ್ಯಾಚರಣೆ ನಡೆಸಬಹುದು ಎಂಬ ಬಗ್ಗೆ ಸಮರ್ಪಕ ಸಲಹೆ ಸೂಚನೆಗಳನ್ನು ನೀಡಿದರೆ ಹೆಚ್ಚು ಉಪಕಾರವಾದೀತು.
ಸಂಘರ್ಷ ಪೀಡಿತ ಸೂಡಾನ್‌ನಲ್ಲಿ ಉಂಟಾಗಿರುವ ಪರಿಸ್ಥಿತಿಯನ್ನು ಕೇಂದ್ರ ಸರಕಾರ ಸದ್ಯ ಯೋಗ್ಯ ರೀತಿಯಲ್ಲಿಯೇ ನಿಭಾಯಿಸುತ್ತಿದೆ ಎನ್ನಬಹುದು. ಅದಕ್ಕಾಗಿಯೇ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ. ಶೀಘ್ರವಾಗಿಯೇ ಸಂಕಷ್ಟಕ್ಕೆ ಈಡಾದ ರಾಷ್ಟ್ರದಿಂದ ನಮ್ಮವರು ಸುರಕ್ಷಿತವಾಗಿ ಅವರವರ ಮನೆ ಸೇರಬೇಕು ಎನ್ನುವುದಷ್ಟೇ ಹಾರೈಕೆ.

 

ಟಾಪ್ ನ್ಯೂಸ್

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

18

Benjana Padavu: ನೇಣು ಬಿಗಿದು ಆತ್ಮಹತ್ಯೆ

Encounter in Kashmir:

ಕಾಶ್ಮೀರದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ

17-

Bantwala: ರಾಂಗ್‌ಸೈಡಿನಲ್ಲಿ ಬಂದು ಎರಡು ಬೈಕ್‌ಗಳಿಗೆ  ಢಿಕ್ಕಿ ಹೊಡೆದ ಲಾರಿ

Man shot a Cow on head twice

Manipur; ಹಸುವಿಗೆ ಗುಂಡಿಟ್ಟು ಕೊಂದ ಕ್ರೂರಿ!: ವ್ಯಾಪಕ ಆಕ್ರೋಶ

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

sunita williams

Sunita williams ಬಾಹ್ಯಾಕಾಶ ಯಾನ 90 ನಿಮಿಷಗಳಿದ್ದಾಗ ರದ್ದು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

ಮತದಾನಕ್ಕೆ ಬಿಸಿಲು ಅಡ್ಡಿಯಾಗದಿರಲಿ

Editorial:ಮಣಿಪುರ- ಒಡೆದ ಮನಸು‌ ಬೆಸೆಯುವ ಕಾರ್ಯವಾಗಲಿ

Editorial: ಮಣಿಪುರ- ಒಡೆದ ಮನಸು‌ ಬೆಸೆಯುವ ಕಾರ್ಯವಾಗಲಿ

Economy

ಉತ್ಪಾದನ ವಲಯದಲ್ಲಿ ಜಿಗಿತ: ಆರ್ಥಿಕತೆಗೆ ಮತ್ತಷ್ಟು ಬಲ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

18

Benjana Padavu: ನೇಣು ಬಿಗಿದು ಆತ್ಮಹತ್ಯೆ

Encounter in Kashmir:

ಕಾಶ್ಮೀರದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ

17-

Bantwala: ರಾಂಗ್‌ಸೈಡಿನಲ್ಲಿ ಬಂದು ಎರಡು ಬೈಕ್‌ಗಳಿಗೆ  ಢಿಕ್ಕಿ ಹೊಡೆದ ಲಾರಿ

Man shot a Cow on head twice

Manipur; ಹಸುವಿಗೆ ಗುಂಡಿಟ್ಟು ಕೊಂದ ಕ್ರೂರಿ!: ವ್ಯಾಪಕ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.