ಎಲ್‌ಎಸಿಯಲ್ಲಿ ಚೀನದ ಷಡ್ಯಂತ್ರ ಎದುರಿಸಲು ಭಾರತೀಯ ಸೇನೆ ಸಜ್ಜು


Team Udayavani, Oct 21, 2021, 6:00 AM IST

ಎಲ್‌ಎಸಿಯಲ್ಲಿ ಚೀನದ ಷಡ್ಯಂತ್ರ ಎದುರಿಸಲು ಭಾರತೀಯ ಸೇನೆ ಸಜ್ಜು

ಭಾರತ ಮತ್ತು ಪಾಕಿಸ್ಥಾನ ನಡುವಣ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನವು ಜಮ್ಮು-ಕಾಶ್ಮೀರದಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಸುವ ಕುತಂತ್ರದಲ್ಲಿ ತೊಡಗಿದ್ದರೆ ಇತ್ತ ಅರುಣಾಚಲ ಪ್ರದೇಶ ವಲಯದ ವಾಸ್ತವ ನಿಯಂತ್ರಣ ರೇಖೆ(ಎಲ್‌ಎಸಿ)ಯ ತನ್ನ ಒಳಪ್ರದೇಶಗಳಲ್ಲಿ ಚೀನ ಸೇನಾ ಕಾರ್ಯಾಚರಣೆಗಳನ್ನು ಹೆಚ್ಚಿಸಿದೆಯಲ್ಲದೆ ಅಧಿಕ ಸಂಖ್ಯೆಯಲ್ಲಿ ಯೋಧರನ್ನು ನಿಯೋಜಿಸಿದೆ. ಎಲ್‌ಎಸಿಯಲ್ಲಿನ ಈ ಬೆಳವಣಿಗೆಗಳು ಗಡಿಯಲ್ಲಿ ಒಂದಿಷ್ಟು ಆತಂಕಕ್ಕೆ ಕಾರಣವಾಗಿದ್ದು ಮತ್ತೊಮ್ಮೆ ಚೀನ ಗಡಿ ಸಂಘರ್ಷಕ್ಕೆ ಸಂಚು ರೂಪಿಸಿದೆಯೇ ಎಂಬ ಅನುಮಾನ ಕಾಡತೊಡಗಿದೆ.

ವರ್ಷದ ಹಿಂದೆ ಲಡಾಖ್‌ ಘರ್ಷಣೆಗೂ ಮುನ್ನ ಚೀನದ ಪಡೆಗಳು ಇದೇ ಮಾದರಿಯಲ್ಲಿ ಗಡಿ ಭಾಗದಲ್ಲಿ ಗಸ್ತು ತಿರುಗುವಿಕೆಯನ್ನು ಹೆಚ್ಚಿಸಿದ್ದವು. ಎಲ್‌ಎಸಿಯಲ್ಲಿ ತಿಂಗಳುಗಳ ಕಾಲ ನಡೆದ ಸಂಘರ್ಷದಲ್ಲಿ ಭಾರತ ದಿಟ್ಟ ಪ್ರತ್ಯುತ್ತರ ನೀಡಿದ ಬಳಿಕ ಉಭಯ ದೇಶಗಳ ನಡುವೆ ಹಲವಾರು ಸುತ್ತಿನ ಸೇನಾ ಮಟ್ಟದ ಮಾತುಕತೆಗಳು ನಡೆದು ಕೊನೆಯಲ್ಲಿ ಚೀನ ತನ್ನ ಪಡೆಗಳನ್ನು ಎಲ್‌ಎಸಿಯಿಂದ ವಾಪಸ್‌ ಕರೆಸಿಕೊಳ್ಳಲು ಸಮ್ಮತಿಸಿತ್ತು. ಇದರ ಹೊರತಾಗಿಯೂ ಎಲ್‌ಎಸಿಯಲ್ಲಿ ಗಸ್ತು ಹೆಚ್ಚಿಸಿದ್ದೇ ಅಲ್ಲದೆ ಗಡಿ ಪ್ರದೇಶದಲ್ಲಿ ವಿವಿಧ ಸೇನಾ ಮೂಲಸೌಕರ್ಯ ಕಾಮಗಾರಿಗಳನ್ನು ಕೈಗೆತ್ತಿಕೊಂಡಿತ್ತು.

ಕಳೆದೊಂದು ವಾರದಿಂದೀಚೆಗೆ ಗಡಿಯಲ್ಲಿ ಚೀನ ಸೇನೆಯ ವಿವಿಧ ಪಡೆಗಳ ಜಂಟಿ ತಾಲೀಮು, ಸಮರಾಭ್ಯಾಸ ಚಟುವಟಿಕೆಗಳನ್ನೂ ಹೆಚ್ಚಿಸಿದೆ. ಚೀನ ಸೇನೆಯ ವಾರ್ಷಿಕ ತರಬೇತಿಯ ಭಾಗವಾಗಿ ಸೇನಾ ಚಟುವಟಿಕೆಗಳು ತೀವ್ರವಾಗಿವೆ ಎನ್ನಲಾಗಿದೆಯಾದರೂ ಗಡಿ ಪ್ರದೇಶದಲ್ಲಿ ಭಾರೀ ಸಂಖ್ಯೆಯಲ್ಲಿ ಯೋಧರನ್ನು ನಿಯೋಜಿಸಿರುವುದು ಚೀನದ ನಡೆಯ ಕುರಿತಂತೆ ಅನುಮಾನಗಳು ಮೂಡುವಂತೆ ಮಾಡಿದೆ.

ಎಲ್‌ಎಸಿ ಸಮೀಪವೇ ಉಭಯ ದೇಶಗಳು ಮೂಲಸೌಕರ್ಯಗಳನ್ನು ಹೆಚ್ಚಿಸುವ ಕಾರ್ಯದಲ್ಲಿ ನಿರತವಾಗಿರುವುದರಿಂದ ಇದು ಕೆಲವೊಮ್ಮೆ ಸಂಘರ್ಷಕ್ಕೆ ಕಾರಣವಾಗುತ್ತಿದೆ. ಆದರೆ ಈ ಬಾರಿ ಚೀನ ಭಾರೀ ಸಂಖ್ಯೆಯಲ್ಲಿ ತನ್ನ ಸೈನಿಕರನ್ನು ನಿಯೋಜಿಸಿರುವುದರಿಂದ ಭಾರತ ಕೂಡ ಯಾವುದೇ ತೆರನಾದ ಸಂಭಾವ್ಯ ಪರಿಸ್ಥಿತಿಯನ್ನು ಎದುರಿಸಲು ಸರ್ವಸನ್ನದ್ಧವಾಗಿದೆ. ಭಾರತೀಯ ಸೇನೆಯೂ ಎಲ್‌ಎಸಿಯಲ್ಲಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಿದೆಯಲ್ಲದೆ ಡ್ರೋನ್‌, ರೇಡಾರ್‌ ನಿಗಾ ಮತ್ತು ಯೋಧರ ಗಸ್ತು ತಿರುಗುವಿಕೆಯನ್ನು ಹೆಚ್ಚಿಸಿದೆ.

ಇದನ್ನೂ ಓದಿ:ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

ಇದೇ ವೇಳೆ ಎಲ್‌ಎಸಿಯಲ್ಲಿನ ವಿವಾದಿತ ಪ್ರದೇಶಗಳ ಮೇಲೆ ಅಧಿಪತ್ಯ ಸ್ಥಾಪಿಸುವ ಷಡ್ಯಂತ್ರವಾಗಿ ತನ್ನ ಭೂಭಾಗದೊಳಗೆ ಸಣ್ಣ ಸಣ್ಣ ಸೇನಾ ಗ್ರಾಮಗಳನ್ನು ನಿರ್ಮಿಸುತ್ತಿದೆ. ಇದು ಚೀನದ ಸೇನಾ ಕಾರ್ಯತಂತ್ರದ ಭಾಗವೆನ್ನಲಾಗಿದ್ದು ಈ ಗ್ರಾಮಗಳಲ್ಲಿ ಟಿಬೆಟ್‌ ನಿವಾಸಿಗರು ಅಥವಾ ತನ್ನ ಯೋಧರಿಗೆ ಖಾಯಂ ಆಗಿ ವಾಸ್ತವ್ಯ ಹೂಡುವಂತೆ ಆದೇಶ ನೀಡುವ ಸಾಧ್ಯತೆಗಳಿವೆ ಮತ್ತು ಸಂಘರ್ಷದ ಸಂದರ್ಭದಲ್ಲಿ ಈ ಗ್ರಾಮಗಳನ್ನು ಚೀನ ಸೈನಿಕರು ಬಳಸಿಕೊಳ್ಳುವ ಸಾಧ್ಯತೆ ಇದೆ ಎಂದು ಗುಪ್ತಚರ ಮೂಲಗಳು ತಿಳಿಸಿವೆ.

ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಚೀನದ ಯಾವುದೇ ಷಡ್ಯಂತ್ರ ವನ್ನು ವಿಫ‌ಲಗೊಳಿಸಲು ಭಾರತೀಯ ಸೇನೆ ಸರ್ವಸನ್ನದ್ಧವಾಗಿದೆ. ಯುದ್ಧ ಸನ್ನದ್ಧ ತಂಡವಾದ ಸಮಗ್ರ ಸಮರ ಪಡೆ (ಐಬಿಜಿ) ರಚನೆಗೆ ತಾತ್ವಿಕ ಒಪ್ಪಿಗೆ ಲಭಿಸಿರುವುದರಿಂದ ಯಾವುದೇ ತುರ್ತು ಸಂದರ್ಭದಲ್ಲಿ ಅತ್ಯಂತ ತ್ವರಿತ ಮತ್ತು ಪರಿಣಾಮಕಾರಿ ಕಾರ್ಯಾಚರಣೆಗೆ ಸಜ್ಜಾಗುವ ರೀತಿಯಲ್ಲಿ ಈ ತಂಡವನ್ನು ರಚಿಸಿದ್ದು ಅವಶ್ಯಬಿದ್ದಲ್ಲಿ ಈ ತಂಡವನ್ನು ಬಳಸಿಕೊಳ್ಳಲು ಭಾರತೀಯ ಸೇನೆ ನಿರ್ಧರಿಸಿದೆ. ಗಡಿ ಪ್ರದೇಶದಲ್ಲಿನ ಮೂಲಸೌಕರ್ಯ ಗಳನ್ನು ಹೆಚ್ಚಿಸುವ ಜತೆಯಲ್ಲಿ ಕಟ್ಟುನಿಟ್ಟಿನ ಕಣ್ಗಾವಲು, ತಂತ್ರಜ್ಞಾನದ ಬಳಕೆಯನ್ನು ಹೆಚ್ಚಿಸಿಕೊಂಡಿದ್ದು ಚೀನಕ್ಕೆ ಸಡ್ಡು ಹೊಡೆದಿದೆ.

ಟಾಪ್ ನ್ಯೂಸ್

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.