ಒಲಿಂಪಿಕ್ಸ್‌ನಲ್ಲಿ ಭಾರತೀಯರ ಗಣನೀಯ ಸಾಧನೆ


Team Udayavani, Aug 9, 2021, 6:00 AM IST

ಒಲಿಂಪಿಕ್ಸ್‌ನಲ್ಲಿ ಭಾರತೀಯರ ಗಣನೀಯ ಸಾಧನೆ

ಒಲಿಂಪಿಕ್ಸ್‌ ಇತಿಹಾಸದಲ್ಲೇ ಭಾರತ ಹಿಂದೆಂದೂ ಕಂಡರಿಯದ ಸಾಧನೆ ಮಾಡಿದೆ. ಇದೇ ಮೊದಲ ಬಾರಿಗೆ ದೇಶಕ್ಕೆ ಏಳು ಪದಕಗಳು ಲಭಿಸಿದ್ದು, ಮುಂದಿನ ದಿನಗಳಲ್ಲಿ ದೇಶ ಇನ್ನಷ್ಟು ಪದಕಗಳನ್ನು ತರಬಹುದು ಎಂಬ ನಿರೀಕ್ಷೆ ದೊಡ್ಡ ಮಟ್ಟದಲ್ಲಿ ಮೂಡಿದೆ. ಒಲಿಂಪಿಕ್ಸ್‌ ಕೂಟದ ಆರಂಭದ ದಿನವೇ ಮೀರಾಬಾಯಿ ಚಾನು ಅವರು ವೇಟ್‌ಲಿಫ್ಟಿಂಗ್‌ನಲ್ಲಿ ದೇಶಕ್ಕೆ ಬೆಳ್ಳಿ ತಂದು ಕೊಟ್ಟಿದ್ದರು. ಈ ಮೂಲಕ ಭಾರತ ಶುಭಾರಂಭವನ್ನೇ ಮಾಡಿತ್ತು. ಜತೆಗೆ, ನಂತರದ ದಿನಗಳಲ್ಲೂ ಭಾರತೀಯ ಕ್ರೀಡಾಳುಗಳು ಉತ್ತಮ ಪ್ರದರ್ಶನವನ್ನೇ ನೀಡುತ್ತಾ ಬಂದರು.

ಈ ಬಾರಿ ಶೂಟಿಂಗ್‌ನಲ್ಲಿ ಪದಕ ತಂದೇ ತರುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದ ಮನು ಭಾಕರ್‌, ತಾಂತ್ರಿಕ ಸಮಸ್ಯೆಯಿಂದ ಪದಕ ವಂಚಿತರಾದರು. ಈ ನಿರಾಸೆಯ ಬೆನ್ನಲ್ಲೇ ಬಿಲ್ಲುಗಾರಿಕೆ ಸ್ಪರ್ಧಾಳುಗಳೂ ಪದಕ ಗೆಲ್ಲುವಲ್ಲಿ ವಿಫ‌ಲರಾದರು. ಆದರೂ, ಬಾಕ್ಸಿಂಗ್‌, ಕುಸ್ತಿ, ಬ್ಯಾಡ್ಮಿಂಟನ್‌ನಲ್ಲಿ ಎಂದಿನಂತೆಯೇ ಉತ್ತಮ ಪ್ರದರ್ಶನ ತೋರುವಲ್ಲಿ ಭಾರತೀಯರು ಯಶಸ್ವಿಯಾದರು.

ಇನ್ನೇನು ಕೂಟ ಮುಗಿಯಲು ಒಂದು ದಿನ ಬಾಕಿ ಇದೆ ಎನ್ನುವಾಗ, ಜಾವೆಲಿನ್‌ ಥ್ರೋ ಸ್ಪರ್ಧಿ ನೀರಜ್‌ ಚೋಪ್ರಾ ಭಾರತಕ್ಕೆ ಬಂಗಾರ ತಂದುಕೊಟ್ಟರು. ಆ್ಯತ್ಲೆಟಿಕ್ಸ್‌ ವಿಭಾಗದಲ್ಲಿ ಇದು ಭಾರತಕ್ಕೆ ಶತಮಾನದ ಪದಕವಾಯಿತು. ಸ್ವಾತಂತ್ರಾéನಂತರದಲ್ಲಿ ಇದೇ ಮೊದಲ ಬಾರಿಗೆ ಆ್ಯತ್ಲೆಟಿಕ್ಸ್‌ ವಿಭಾಗದಲ್ಲಿ ಪದಕವೊಂದು ಬಂತು ಎನ್ನುವುದೂ ಸಂತಸದ ವಿಚಾರವೇ.

ನೀರಜ್‌ ಚೋಪ್ರಾ ಅವರ ಈ ಬಂಗಾರದ ಸಾಧನೆ ಅಂತಿಂಥದ್ದಲ್ಲ. ಇದೊಂದು ರೀತಿ ಸ್ವರ್ಣಯುಗಕ್ಕೆ ಭಾರತ ದಾಪುಗಾಲಿಟ್ಟ ಕ್ಷಣ ಎಂದೂ ಕರೆಯಬಹುದು. ಕುಸ್ತಿ, ವೇಟ್‌ಲಿಫ್ಟಿಂಗ್‌ನಲ್ಲಿ ಗೆದ್ದು ಪದಕ ತರುವಂಥ ಭಾರತೀಯರು ಆ್ಯತ್ಲೆಟಿಕ್ಸ್‌ನಲ್ಲಿ ಏಕೆ ಪದಕ ಗೆಲ್ಲಲಾಗುತ್ತಿಲ್ಲ ಎಂಬ ವರ್ಷಗಳ ಪ್ರಶ್ನೆಗೆ ನೀರಜ್‌ ಉತ್ತರ ಕೊಟ್ಟರು. ನೀರಜ್‌ ಇವರ ಈ ಸಾಧನೆ ಭವಿಷ್ಯದಲ್ಲಿ ಮತ್ತಷ್ಟು ಕ್ರೀಡಾಳುಗಳನ್ನು ಸೃಷ್ಟಿಸಲು ಉತ್ತೇಜನ ಸಿಕ್ಕಂತಾಗಿದೆ ಎಂಬುದೂ ಸುಳ್ಳಲ್ಲ.

ಹಾಕಿಯಲ್ಲಂತೂ ಭಾರತ ಈ ಬಾರಿ ಶ್ರೇಷ್ಠ ಪ್ರದರ್ಶನ ನೀಡಿದೆ. ಪುರುಷರು ಕಂಚು ಗೆದ್ದರಾದರೂ, ಮಹಿಳೆಯರು ಕಂಚಿನ ಪಂದ್ಯದಲ್ಲಿ ಸೋತರೂ, ಇಡೀ ಭಾರತೀಯರ ಹೃದಯ ಗೆದ್ದರು. ಪುರುಷರ ಹಾಕಿ ತಂಡ ಕಂಚು ಗೆದ್ದಿದ್ದೂ ನಾಲ್ಕು ದಶಕಗಳ ಸಾಧನೆ. ಹಾಗೆಯೇ ಮೂರನೇ ಬಾರಿಗೆ ಒಲಿಂಪಿಕ್ಸ್‌ ಪ್ರವೇಶ ಮಾಡಿದ್ದ ಮಹಿಳಾ ತಂಡವೂ ಸೆಮಿಫೈನಲ್‌ಗೆ ಹೋಗಿ ಸ್ಪರ್ಧಾತ್ಮಕವಾಗಿಯೇ ಹೋರಾಟ ಮಾಡಿತು. ಅಲ್ಲದೆ, ಬ್ರಿಟನ್‌ ವಿರುದ್ಧ ಕಂಚಿನ ಪಂದ್ಯಕ್ಕಾಗಿ ನಡೆದ ಪಂದ್ಯದಲ್ಲಿ ವೀರೋಚಿತವಾಗಿ ಆಟವಾಡಿ ಸೋತಿತು. ಇನ್ನು ಕುಸ್ತಿ, ಬ್ಯಾಡ್ಮಿಂಟನ್‌, ವೇಟ್‌ ಲಿಫ್ಟಿಂಗ್‌ ವಿಭಾಗದಲ್ಲಿ ನಿರೀಕ್ಷೆಯಂತೆಯೇ ಭಾರತ ಸಾಧನೆ ಮಾಡಿದೆ. ಅಂದ ಹಾಗೆ, ಈ ಬಾರಿ ಹಿಂದೆಂದಿಗಿಂತ ಅತೀ ಹೆಚ್ಚು, ಅಂದರೆ ಏಳು ಪದಕಗಳನ್ನು ಗೆದ್ದಿದೆ. ಆದರೆ, 136 ಕೋಟಿ ಜನಸಂಖ್ಯೆ ಇರುವ ಭಾರತಕ್ಕೆ ಇಷ್ಟು ಪದಕ ಸಾಕೇ ಎಂಬ ಪ್ರಶ್ನೆಯೂ ಉದ್ಭವವಾಗುತ್ತದೆ.

ಹಾಗಾದರೆ, ಮುಂದಿನ ದಿನಗಳಲ್ಲಿ ಭಾರತ ಹೆಚ್ಚು ಪದಕ ಗೆಲ್ಲಲು ಏನು ಮಾಡಬೇಕು ಎಂಬ ಬಗ್ಗೆ ಈಗಿನಿಂದಲೇ ಸರಕಾರಗಳು ಯೋಚನೆ ಮಾಡಬೇಕು. ಜಿಲ್ಲಾ ಮಟ್ಟ ಮತ್ತು ತಾಲೂಕು ಮಟ್ಟಗಳಲ್ಲೂ ಕ್ರೀಡಾ ಮೂಲಸೌಕರ್ಯಗಳನ್ನು ಏರ್ಪಡಿಸಿ, ಉತ್ತಮ ವೇದಿಕೆ ಕಲ್ಪಿಸಬೇಕು. ಆಗ ಮಾತ್ರ ಇನ್ನಷ್ಟು ಪ್ರತಿಭೆಗಳು ಹೊರಬಂದು ಅಂತಾರಾಷ್ಟ್ರೀಯ ಕೂಟಗಳಲ್ಲಿ ಗೆಲ್ಲಲು ಸಾಧ್ಯವಾಗುತ್ತದೆ.

ಟಾಪ್ ನ್ಯೂಸ್

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.