ಜನಸಂಖ್ಯೆ ನಿಯಂತ್ರಣದಲ್ಲಿ ಭಾರತದ ಯಶಸ್ಸು 


Team Udayavani, Nov 26, 2021, 6:00 AM IST

ಜನಸಂಖ್ಯೆ ನಿಯಂತ್ರಣದಲ್ಲಿ ಭಾರತದ ಯಶಸ್ಸು 

ಭಾರತದಲ್ಲಿ ಜನಸಂಖ್ಯೆಯ ಪ್ರಮಾಣದಲ್ಲಿ ಇಳಿಕೆ ಶುರುವಾಗಿದೆ. ರಾಷ್ಟ್ರೀಯ ಕೌಟುಂಬಿಕ ಆರೋಗ್ಯ ಸಮೀಕ್ಷೆ-5ರ ಪ್ರಕಾರ ಭಾರತದ ಜನನ ಪ್ರಮಾಣ, ಪ್ರತೀ ಮಹಿಳೆಗೆ 2019-21ರ ವರೆಗೆ 2 ಇದೆ. ಕಳೆದ 5 ವರ್ಷಕ್ಕೆ ಹೋಲಿಕೆ ಮಾಡಿದರೆ ಅಥವಾ ಹಿಂದಿನ ರಾಷ್ಟ್ರೀಯ ಕೌಟುಂಬಿಕ ಆರೋಗ್ಯ ಸಮೀಕ್ಷೆ-4ರ ಪ್ರಕಾರ ಇದು 2.2 ಇತ್ತು. ಅಂದರೆ ಪ್ರತೀ ಮಹಿಳೆಗೆ 2.2 ಮಕ್ಕಳು ಜನಿಸುತ್ತಿದ್ದರು.

ಭಾರತದ ಎಲ್ಲ ದೃಷ್ಟಿಯಿಂದಲೂ ಹೇಳುವುದಾದರೆ ಜನಸಂಖ್ಯೆ ಪ್ರಮಾಣದಲ್ಲಿ ಕುಸಿತ ಶುರುವಾಗಿರುವುದು ಉತ್ತಮ ಸಂಗತಿ. ಈಗಾಗಲೇ ಚೀನ ಕಠಿನ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೂಲಕ ಜನಸಂಖ್ಯೆಯನ್ನು ನಿಯಂತ್ರಣಕ್ಕೆ ತಂದಿದೆ. ಆದರೆ ಭಾರತ ಮಾತ್ರ ಅಂಥ ಯಾವುದೇ ಕಠಿನ ನಿರ್ಧಾರಗಳನ್ನು ತೆಗೆದುಕೊಳ್ಳದೇ ಕೇವಲ ಸರಕಾರಿ ಯೋಜನೆಗಳ ಮೂಲಕವೇ ನಿಯಂತ್ರಣ ಸಾಧಿಸಿದೆ.

ಹುಟ್ಟು ಮತ್ತು ಸಾವಿನ ನಡುವಿನ ಅಂತರದ ಲೆಕ್ಕಾಚಾರದಲ್ಲಿ ಹೇಳುವುದಾದರೆ ಜನಸಂಖ್ಯೆ ಸಮತೋಲಿತವಾಗಿರಬೇಕು ಎಂದರೆ ದೇಶದಲ್ಲಿ ಪ್ರತೀ ಮಹಿಳೆ 2.1 ಮಗುವಿಗೆ ಜನ್ಮ ನೀಡಬೇಕು. ಈಗ ಭಾರತದಲ್ಲಿ ಪ್ರತೀ ಮಹಿಳೆ 2 ಮಕ್ಕಳಿಗೆ ಜನ್ಮ ನೀಡುತ್ತಿದ್ದಾರೆ ಎಂಬುದು ಉತ್ತಮ ಸಂಗತಿಯಾಗಿದೆ ಎಂದು ವಿಶ್ಲೇಷಕರು ಹೇಳುತ್ತಾರೆ. ಅದಲ್ಲದೇ ಈ ರಾಷ್ಟ್ರೀಯ ಕೌಟುಂಬಿಕ ಆರೋಗ್ಯ ಸಮೀಕ್ಷೆ-5 ಹೇಳುವ ಪ್ರಕಾರ ಭಾರತದಲ್ಲಿ ಈಗ ಜನಸಂಖ್ಯೆಯ ಇಳಿಕೆ ಕಾಣಿಸುತ್ತಿದೆ.

1998-99ರಲ್ಲಿ ಭಾರತದಲ್ಲಿ ಪ್ರತಿ ಮಹಿಳೆಗೆ 3.2 ಮಕ್ಕಳು ಜನಿಸುತ್ತಿದ್ದರು. ಹಾಗೆಯೇ ಐದು ವರ್ಷದ ಹಿಂದಿನ ಸಮೀಕ್ಷೆಗೆ ಹೋಲಿಕೆ ಮಾಡಿದರೆ ಆಗ 2.2 ಇತ್ತು. ಜತೆಗೆ ಕೇಂದ್ರಾಡಳಿತ ಪ್ರದೇಶಗಳನ್ನೂ ಸೇರಿಸಿ ಒಟ್ಟು 37 ರಾಜ್ಯಗಳಲ್ಲಿ ಒಟ್ಟಾರೆ ಜನನ ದರ ಕಡಿಮೆಯೇ

ಇದೆ. ಆದರೆ ಉತ್ತರ ಪ್ರದೇಶ, ಬಿಹಾರ ಮತ್ತು ಝಾರ್ಖಂಡ್‌ನಲ್ಲಿ ಮಾತ್ರ ರಾಷ್ಟ್ರೀಯ ಸರಾಸರಿಗಿಂತ ಒಂದಷ್ಟು ಹೆಚ್ಚಾಗಿದೆ ಎಂದು ಇದೇ ಸಮೀಕ್ಷೆ ತಿಳಿಸಿದೆ.

ಇದೇ ಸಮೀಕ್ಷೆ ಮತ್ತೂಂದು ಗಮನಾರ್ಹ ಅಂಶವೊಂದನ್ನು ಬಹಿರಂಗ ಮಾಡಿದೆ. ಭಾರತದಲ್ಲೀಗ ಪ್ರತೀ 1,000 ಪುರುಷರಿಗೆ 1,020 ಮಹಿಳೆಯರಿದ್ದಾರೆ. ಅದೇ 2015-16ರಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಪ್ರತೀ 1,000 ಪುರುಷರಿಗೆ 991 ಮಹಿಳೆಯರು ಇದ್ದರು. ಅಂದರೆ ಭಾರತದಲ್ಲಿ ಲಿಂಗಾನುಪಾತದಲ್ಲಿ ಬಹಳಷ್ಟು ಸುಧಾರಣೆಯಾಗಿರುವುದನ್ನು ಇಲ್ಲಿ ಗಮನಿಸಬಹುದಾಗಿದೆ.

ಕರ್ನಾಟಕದಲ್ಲಿ ಕಳೆದ ಸಮೀಕ್ಷೆಯಲ್ಲಿ ಒಟ್ಟಾರೆ ಜನನ ದರ 1.8 ಇತ್ತು. ಈ ಸಮೀಕ್ಷೆಯಲ್ಲಿ ಇದು 1.7ಕ್ಕೆ ಕುಸಿತ ಕಂಡಿದೆ. ಆದರೆ ಲಿಂಗಾನುಪಾತದಲ್ಲಿ ಕರ್ನಾಟಕ ಕೊಂಚ ಹಿಂದೆ ಉಳಿದಿರುವುದನ್ನು ಕಾಣಬಹುದು. ಇಲ್ಲಿ ಪ್ರತೀ 1000 ಪುರುಷರಿಗೆ 979 ಮಹಿಳೆಯರು ಇದ್ದಾರೆ.

ಇಷ್ಟೆಲ್ಲ ಆದರೂ ಭಾರತ 2031ರ ವೇಳೆಗೆ ಜಗತ್ತಿನಲ್ಲೇ ಅತ್ಯಂತ ಹೆಚ್ಚು ಜನಸಂಖ್ಯೆಯುಳ್ಳ ದೇಶವೆಂಬ ಖ್ಯಾತಿಗೆ ಪಾತ್ರವಾಗಲಿದೆ. ಈ ಮೂಲಕ ಚೀನವನ್ನು ಹಿಂದೆ ಹಾಕಲಿದೆ. ಇಲ್ಲೂ ಒಂದು ಸಮಾಧಾನಕರ ಸಂಗತಿ ಇದೆ. ವಿಶ್ವಸಂಸ್ಥೆಯು ಅಂದಾಜು ಹಾಕಿದ್ದ ಪ್ರಕಾರ, ಭಾರತ 2022ರಲ್ಲೇ ಚೀನವನ್ನು ಹಿಂದೆ ಹಾಕಬೇಕಿತ್ತು. ಆದರೆ ಒಂದು ದಶಕದ ಅನಂತರ ಭಾರತದ ಜನಸಂಖ್ಯೆ ಚೀನ ಮೀರಿಸಲಿದೆ. ಅಲ್ಲದೆ 2040ರಿಂದ 2050ರ ವೇಳೆಗೆ ಭಾರತದ ಜನಸಂಖ್ಯೆ 1.6ರಿಂದ 1.8 ಬಿಲಿಯನ್‌ ಆಗಲಿದೆ ಎಂದೇ ಅಂದಾಜಿಸಲಾಗಿದೆ.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.