ಠೇವಣಿದಾರರಿಗೆ ವಿಮಾ ಖಾತರಿ; ಬ್ಯಾಂಕ್‌ಗಳ ಮೇಲಿನ ನಂಬಿಕೆಗೆ ಪೂರಕ ಕ್ರಮ


Team Udayavani, Dec 14, 2021, 6:00 AM IST

ಠೇವಣಿದಾರರಿಗೆ ವಿಮಾ ಖಾತರಿ; ಬ್ಯಾಂಕ್‌ಗಳ ಮೇಲಿನ ನಂಬಿಕೆಗೆ ಪೂರಕ ಕ್ರಮ

ದೇಶಾದ್ಯಂತ ಇರುವ ಸಹಕಾರ ಸಂಘಗಳಲ್ಲಿನ ಠೇವಣಿದಾರರ ಹಿತಾಸಕ್ತಿ ಕಾಪಾಡುವ ಸಲುವಾಗಿ ಕೇಂದ್ರ ಸರಕಾರ ಜಾರಿಗೆ ತಂದಿರುವ ಠೇವಣಿದಾರರ ವಿಮೆ ಮತ್ತು ಸಾಲ ಖಾತರಿ(ತಿದ್ದುಪಡಿ) ಕಾಯ್ದೆ ಉತ್ತಮವಾದ ನಿರ್ಧಾರ. ಈಗ ನೂತನವಾಗಿ ಜಾರಿಗೊಳಿಸಲಾಗಿರುವ ಕಾಯ್ದೆಯಲ್ಲಿ ಠೇವಣಿದಾರರ ಹೂಡಿಕೆ ಮೇಲಿನ ವಿಮೆಯನ್ನು ಒಂದು ಲಕ್ಷ ರೂ.ಗಳಿಂದ ಐದು ಲಕ್ಷ ರೂ.ಗಳಿಗೆ ಏರಿಕೆ ಮಾಡಲಾಗಿದ್ದು, ಬಹುತೇಕ ಠೇವಣಿದಾರರಿಗೆ ಅನುಕೂಲವಾಗಿ ಪರಿಣಮಿಸಲಿದೆ.

ಕಳೆದ ಆಗಸ್ಟ್‌ನಲ್ಲೇ ಕೇಂದ್ರ ಸರಕಾರ ಸಂಸತ್‌ನಲ್ಲಿ ಈ ತಿದ್ದುಪಡಿ ಕಾಯ್ದೆಗೆ ಒಪ್ಪಿಗೆ ಪಡೆದಿತ್ತು. ಇದರ ಅನ್ವಯ ರವಿವಾರವಷ್ಟೇ ಹೊಸ ಕಾಯ್ದೆಯಂತೆ ಠೇವಣಿದಾರರಿಗೆ ಹಣ ನೀಡುವ ಕಾರ್ಯ ಶುರುವಾಗಿದೆ. ಅಂದರೆ ಇದುವರೆಗೆ ನಷ್ಟಕ್ಕೀಡಾಗಿರುವ ಸಹಕಾರಿ ಸಂಘಗಳ ಠೇವಣಿದಾರರಿಗೆ ಮೊದಲ ಸುತ್ತಿನಲ್ಲಿ ವಿಮಾ ಹಣ ಬಿಡುಗಡೆ ಮಾಡಲಾಗಿದೆ. ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿರುವಂತೆ ತೊಂದರೆಗೀಡಾಗಿ ಬಾಗಿಲು ಹಾಕಿಕೊಂಡಿರುವ ಸಹಕಾರ ಸಂಘಗಳ ಸುಮಾರು 1 ಲಕ್ಷ ಠೇವಣಿದಾರರಿಗೆ 1,300 ಕೋಟಿ ರೂ.ಗಳನ್ನು ನೀಡಲಾಗಿದೆ. ಇನ್ನು ಮೂರು ಲಕ್ಷ ಠೇವಣಿದಾರರೂ ಬಾಕಿ ಉಳಿದಿದ್ದು ಇವರೆಲ್ಲರೂ ವಿಮೆಯ ಅನುಕೂಲ ಪಡೆಯಲಿದ್ದಾರೆ ಎಂದು ಮೋದಿಯವರೇ ತಿಳಿಸಿದ್ದಾರೆ.

ಸದ್ಯ ಮಹಾರಾಷ್ಟ್ರದ ಪಂಜಾಬ್‌ ಮತ್ತು ಮಹಾರಾಷ್ಟ್ರ ಸಹಕಾರ ಬ್ಯಾಂಕ್‌, ಯೆಸ್‌ ಬ್ಯಾಂಕ್‌, ಲಕ್ಷ್ಮೀ ವಿಲಾಸ ಬ್ಯಾಂಕ್‌, ಬೆಂಗಳೂರಿನ ಶ್ರೀಗುರುರಾಘವೇಂದ್ರ ಸಹಕಾರ ಸಂಘಗಳು ನಷ್ಟದ ಹಾದಿ ಹಿಡಿದಿದ್ದವು.  ಈ ಸಹಕಾರ ಸಂಘಗಳ ನಷ್ಟದಿಂದಾಗಿ ಇವುಗಳಲ್ಲಿ ಹಣವಿಟ್ಟಿದ್ದ ಗ್ರಾಹಕರು ಚಿಂತೆಗೆ ಈಡಾಗಿದ್ದರು. ಇದನ್ನು ಮನಗಂಡೇ ಠೇವಣಿ ಮೇಲೆ ಮೊದಲು ಇದ್ದ ಒಂದು ಲಕ್ಷ ರೂ.ಗಳ ವಿಮಾ ಸೌಲಭ್ಯವನ್ನು 5 ಲಕ್ಷ ರೂ.ಗಳಿಗೆ ಏರಿಕೆ ಮಾಡಲಾಗಿದೆ. ಈ ತಿದ್ದುಪಡಿ ಕಾಯ್ದೆಯಂತೆ, ಒಂದು ಸಹಕಾರ ಸಂಘ ನಷ್ಟಕ್ಕೀಡಾಗಿ 90 ದಿನಗಳ ಒಳಗಾಗಿ ಠೇವಣಿದಾರರ ಕೈಗೆ ವಿಮಾ ಹಣ ಕೈಸೇರಲಿದೆ.

ಇತ್ತೀಚಿನ ದಿನಗಳಲ್ಲಿ ಸಹಕಾರಿ ಸಂಘಗಳು ಸೇರಿದಂತೆ ಕೆಲವು ಬ್ಯಾಂಕ್‌ಗಳು ದಿವಾಳಿ ಎದ್ದ ಪರಿಣಾಮ ಬ್ಯಾಂಕಿಂಗ್‌ ವಲಯದ ಮೇಲೆ ಅಡ್ಡಪರಿಣಾಮ ಉಂಟಾಗಿತ್ತು. ಅದರಲ್ಲೂ ಜನ ಬ್ಯಾಂಕ್‌ಗಳಲ್ಲಿ ಉಳಿತಾಯ ಠೇವಣಿ ಇಡಲು ಹಿಂದೆ ಮುಂದೆ ನೋಡುವ ಸ್ಥಿತಿ ಎದುರಾಗಿತ್ತು. ಜತೆಗೆ ಬ್ಯಾಂಕೊಂದು ನಷ್ಟಕ್ಕೀಡಾದ ಮೇಲೆ ಅದನ್ನು ಆರ್‌ಬಿಐ ಮುಚ್ಚಿದ ಮೇಲೆ ತಮ್ಮ ಠೇವಣಿ ಹಣವನ್ನು ಪಡೆಯಲು 8-10 ವರ್ಷಗಳ ವರೆಗೆ ಕಾಯುವ ಸ್ಥಿತಿಯೂ ಎದುರಾಗಿತ್ತು. ಹೀಗಾಗಿ ಬ್ಯಾಂಕ್‌ಗಳ ಮೇಲೆ ಹೂಡಿಕೆದಾರರು ದೃಢವಾದ ನಂಬಿಕೆ ಇಡಲಿ ಮತ್ತು ಉಳಿತಾಯ ಠೇವಣಿಯನ್ನು ಇಡುವಂಥ ಸ್ಥಿತಿ ಮುಂದುವರಿಯಲಿ ಎಂಬ ಕಾರಣದಿಂದ ಈ ಕಾಯ್ದೆ ಜಾರಿಗೆ ತರಲಾಗಿದೆ.

ಬ್ಯಾಂಕ್‌ಗಳು ಮತ್ತು ಸಹಕಾರಿ ಸಂಘಗಳ ಅಸ್ಥಿರ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಜಾರಿಗೆ ತಂದಿರುವ ಈ ತಿದ್ದುಪಡಿ ಕಾಯ್ದೆ ಠೇವಣಿದಾರರಿಗೆ ಧೈರ್ಯ ತಂದುಕೊಟ್ಟಿದೆ ಎಂದು ದೃಢವಾಗಿ ಹೇಳಬಹುದು. ಏಕೆಂದರೆ ಬ್ಯಾಂಕ್‌ಗಳ ಮೂಲ ಬಂಡವಾಳವೇ ಠೇವಣಿಗಳಾಗಿದ್ದರೆ, ಅವುಗಳಿಗೆ ಆಸ್ತಿ ರೂಪದಲ್ಲಿ ಸಿಗುವುದು ಸಾಲ. ಏಕೆಂದರೆ ಠೇವಣಿ ಇರಿಸಿಕೊಂಡು ಇದಕ್ಕೆ ಸುಖಾಸುಮ್ಮನೆ ಬಡ್ಡಿ ಕೊಡುವುದು ಕಷ್ಟಕರ.

ಹೀಗಾಗಿ ಸಾಲ ನೀಡಲೇಬೇಕಾಗುತ್ತದೆ. ಸಾಲದ ಮೇಲಿನ ಬಡ್ಡಿ ರೂಪದಲ್ಲಿ ಬಂದ ಆದಾಯವನ್ನು ಠೇವಣಿದಾರರಿಗೆ ನೀಡಲಾಗುತ್ತದೆ. ಹೀಗಾಗಿ, ಬ್ಯಾಂಕಿಂಗ್‌ ವ್ಯವಸ್ಥೆಯ ಸದೃಢತೆಗಾಗಿ ಇಂಥ ಕಾಯ್ದೆಗಳು ಜರೂರತ್ತಾಗಿ ಬೇಕಾಗಿದೆ.

ಟಾಪ್ ನ್ಯೂಸ್

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.