ಆಂತರಿಕ ವಿಚಾರದಲ್ಲಿ ಯಾರೂ ಮೂಗು ತೂರಿಸುವ ಅಗತ್ಯವಿಲ್ಲ 


Team Udayavani, Apr 15, 2022, 6:00 AM IST

Untitled-1

ಉಕ್ರೇನ್‌ ಮೇಲಿನ ರಷ್ಯಾ ಆಕ್ರಮಣದ ನಡುವೆಯೇ ಇಡೀ ಜಗತ್ತಿನಾದ್ಯಂತ ಮಾನವ ಹಕ್ಕುಗಳ ಉಲ್ಲಂಘನೆ ವಿಚಾರ ಬಹುಚರ್ಚಿತ ವಿಷಯವಾಗಿದೆ. ಮಾನವ ಹಕ್ಕುಗಳ ಉಲ್ಲಂಘನೆ ಎಂಬುದು ಯಾವುದೇ ಸಮಾಜ ಒಪ್ಪತಕ್ಕ ವಿಚಾರವಂತೂ ಅಲ್ಲವೇ ಅಲ್ಲ. ಇಂಥ ವಿಚಾರದಲ್ಲಿ ಜಗತ್ತಿನ ಎಲ್ಲ ಸರಕಾರಗಳು ತೀರಾ ಮುತುವರ್ಜಿಯಿಂದ ಇರಬೇಕಾದದ್ದು ಮತ್ತು ಪ್ರತಿಯೊಬ್ಬರ ಹಕ್ಕುಗಳಿಗೆ ಸಮಾನ ಗೌರವ ನೀಡಬೇಕಾದದ್ದು ಕರ್ತವ್ಯ ಕೂಡ ಆಗಿದೆ.

ಆದರೆ, ಬಹಳಷ್ಟು ಸಂದರ್ಭದಲ್ಲಿ ಮಾನವ ಹಕ್ಕು ವಿಚಾರಗಳು ಬೇರೆ ಕಾರಣಗಳಿಗಾಗಿ ಚರ್ಚೆಗೆ ಬರುವುದು ಮಾತ್ರ ವಿಷಾದದ ಸಂಗತಿ. ಇಂದು ಒಂದು ದೇಶ, ಮಗದೊಂದು ದೇಶಕ್ಕೆ ಮಾನವ ಹಕ್ಕುಗಳ ವಿಚಾರ ಕುರಿತಾಗಿ ಪಾಠ ಹೇಳುವ ಅನಿವಾರ್ಯತೆ ಅಥವಾ ಅಗತ್ಯ ಖಂಡಿತವಾಗಿಯೂ ಇಲ್ಲ.

ಇತ್ತೀಚೆಗಷ್ಟೇ ಅಮೆರಿಕ ವಿದೇಶಾಂಗ ಸಚಿವ ಆ್ಯಂಟನಿ ಬ್ಲಿಂಕನ್‌, ಭಾರತದ ಮಾನವ ಹಕ್ಕುಗಳ ವಿಚಾರದ ಕುರಿತಾಗಿ ಮಾತನಾಡಿ, ಇಲ್ಲಿ ನಡೆಯುತ್ತಿರುವ ಕೆಲವೊಂದು ಬೆಳವಣಿಗೆಗಳ ಬಗ್ಗೆ ನಾವು ಕಳವಳಕಾರಿ ಮನೋಭಾವ ಹೊಂದಿದ್ದೇವೆ ಎಂದಿದ್ದರು. ಅಂದರೆ, ಮಾನವ ಹಕ್ಕುಗಳ ಸಂಘಟನೆಗಳು, ಜೈಲಿನ ಪರಿಸ್ಥಿತಿ, ಮಾಧ್ಯಮದವರಿಗೆ ವಿನಾಕಾರಣ ಕಿರುಕುಳ ನೀಡಲಾಗುತ್ತಿದೆ ಎಂಬುದು ಅವರ ಮಾತಿನ ಸಾರಾಂಶವಾಗಿತ್ತು. ಕೆಲವೊಮ್ಮೆ ಅಮೆರಿಕದ ಈ ಅನಿಸಿಕೆಗಳು ಜಾಗತಿಕ ಮಟ್ಟದಲ್ಲಿ ಸುದ್ದಿಯಾಗುತ್ತವೆ ಎಂಬುದು ಸುಳ್ಳೇನಲ್ಲ. ಇದಕ್ಕೆ ಕಾರಣವೂ ಇದೆ. ಜಗತ್ತಿಗೇ ದೊಡ್ಡಣ್ಣ ಎಂದು ಗುರುತಿಸಿಕೊಂಡಿರುವ ಅಮೆರಿಕ ಯಾವುದೋ ಒಂದು ದೇಶದ ಮೇಲೆ ಅಭಿಪ್ರಾಯ ವ್ಯಕ್ತಪಡಿಸಿದರೆ, ಉಳಿದ ದೇಶಗಳು ಒಪ್ಪಿಕೊಳ್ಳುವುದು ಸಾಮಾನ್ಯ. ಹೀಗಾಗಿ ಅಮೆರಿಕ ಏನು ಹೇಳುತ್ತದೆಯೋ ಅದಕ್ಕೆ ಒಂದಷ್ಟು ಪ್ರಾಮುಖ್ಯವೂ ಇರುತ್ತದೆ. ಆದರೆ ಈಗ ಪರಿಸ್ಥಿತಿ ಬದಲಾಗಿದೆ. ಅಮೆರಿಕ, ಇನ್ನೊಂದು ದೇಶದ ಮಾನವ ಹಕ್ಕುಗಳ ಉಲ್ಲಂಘನೆ ವಿಚಾರ ಮಾತನಾಡುವಾಗ ತನ್ನ ದೇಶದಲ್ಲಿ ಏನಾಗುತ್ತಿದೆ ಎಂಬುದನ್ನು ಮೊದಲು ಅರಿತುಕೊಳ್ಳಬೇಕಿದೆ. ಈ ವಿಚಾರದಲ್ಲಿ ಭಾರತದ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌, ಅಮೆರಿಕಕ್ಕೆ ತಕ್ಕನಾದ ಉತ್ತರವನ್ನೇ ನೀಡಿದ್ದಾರೆ.

ಭಾರತದ ಮಾನವ ಹಕ್ಕುಗಳ ಉಲ್ಲಂಘನೆ ವಿಚಾರ ಒತ್ತಟ್ಟಿಗಿರಲಿ, ಇತ್ತೀಚೆಗಷ್ಟೇ ಅಮೆರಿಕದಲ್ಲಿ ಆದ ಮಾನವ ಹಕ್ಕುಗಳ ಉಲ್ಲಂಘನೆ ವಿಚಾರದ ಬಗ್ಗೆ ನಾನು ಪ್ರಸ್ತಾವಿಸುತ್ತೇನೆ. ಇಲ್ಲಿ ಭಾರತೀಯರ ಮೇಲೆ ಆಗಾಗ ಕಿರುಕುಳ ನೀಡುವ ಪ್ರಕರಣಗಳು ಆಗುತ್ತಲೇ ಇವೆ. ಮೊದಲಿಗೆ ಈ ವಿಚಾರದ ಬಗ್ಗೆ ಅಮೆರಿಕ ಗಮನಹರಿಸಬೇಕು ಎಂದು ಜೈಶಂಕರ್‌ ನೇರವಾಗಿಯೇ ಹೇಳಿದ್ದಾರೆ. ಜೈಶಂಕರ್‌ ಹೇಳಿದ್ದರಲ್ಲಿ ಸುಳ್ಳೇನಿಲ್ಲ. ಇತ್ತೀಚಿನ ದಿನಗಳಲ್ಲಿ ಅಮೆರಿಕದಲ್ಲಿ ವೈಟ್‌ ಸುಪ್ರಿಮಸಿ ಹೆಚ್ಚಾಗಿ ಬೇರೆ ದೇಶಗಳ ಜನರನ್ನು ಕೀಳಾಗಿ ನೋಡುವ ವಿದ್ಯಮಾನಗಳು ಹೆಚ್ಚುತ್ತಿವೆ. ನ್ಯೂಯಾರ್ಕ್‌ ಸೇರಿದಂತೆ ಅಮೆರಿಕದ ನಾನಾ ಭಾಗಗಳಲ್ಲಿ ಪಂಜಾಬ್‌ನ ಸಿಕ್ಖ್ ರುಗಳನ್ನು ನಿಲ್ಲಿಸಿ ಅವರ ಮೇಲೆ ದೈಹಿಕವಾಗಿ ಹಲ್ಲೆಯನ್ನೂ ಮಾಡಲಾಗಿದೆ. ಈ ಸಂಗತಿಗಳನ್ನೂ ಜೈಶಂಕರ್‌ ಅಮೆರಿಕದ ಮುಂದೆ ಪ್ರಸ್ತಾವಿಸಿ, ಉತ್ತಮ ಕೆಲಸವನ್ನೇ ಮಾಡಿದ್ದಾರೆ.

ಹಾಗೆಂದು, ಭಾರತದಲ್ಲಿ ಇಂಥ ಘಟನೆಗಳು ನಡೆಯುತ್ತಲೇ ಇಲ್ಲ ಎಂದು ಹೇಳಲು ಆಗುವುದಿಲ್ಲ. ಖಂಡಿತವಾಗಿಯೂ ಇಂಥ ಘಟನೆಗಳು ನಡೆಯುತ್ತಿವೆ. ಇವುಗಳನ್ನು ನಮ್ಮ ಸರಕಾರಗಳು, ಪೊಲೀಸರು, ಕೋರ್ಟ್‌ಗಳು ನೋಡಿಕೊಳ್ಳುತ್ತವೆ. ಇದರಲ್ಲಿ ಹೊರಗಿನವರು ಖಂಡಿತವಾಗಿಯೂ ಮೂಗು ತೂರಿಸುವ ಅಗತ್ಯತೆ ಇಲ್ಲ.

ಟಾಪ್ ನ್ಯೂಸ್

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

Wild Elephant ದಾಳಿ ಸಮಸ್ಯೆ: ವೈಜ್ಞಾನಿಕ ಪರಿಹಾರ ಅಗತ್ಯ

Wild Elephant ದಾಳಿ ಸಮಸ್ಯೆ: ವೈಜ್ಞಾನಿಕ ಪರಿಹಾರ ಅಗತ್ಯ

Terror 2

Terrorism ನಿಗ್ರಹ ಎಲ್ಲ ದೇಶಗಳ ಧ್ಯೇಯವಾಗಲಿ

1-aww

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಸರಕಾರ ತುರ್ತು ಗಮನ ನೀಡಲಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.