Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ


Team Udayavani, Mar 29, 2024, 12:00 PM IST

10-editorial

ಕರ್ನಾಟಕದ ರಾಜಧಾನಿ “ಸಿಲಿಕಾನ್‌ ಸಿಟಿ’ ಎಂದೇ ಖ್ಯಾತವಾಗಿರುವ ಬೆಂಗಳೂರಿನಲ್ಲಿ ಸದ್ಯ ನೀರಿನ ಸಮಸ್ಯೆ ಉಲ್ಬಣಿಸಿದೆ. ಕಳೆದ ಮಳೆಗಾಲದಲ್ಲಿ ವಾಡಿಕೆಯಷ್ಟು ಮಳೆ ಸುರಿಯದ್ದರಿಂದಾಗಿ ರಾಜ್ಯದ ಬಹುತೇಕ ಭಾಗಗಳಲ್ಲಿ ಬರದ ಪರಿಸ್ಥಿತಿ ತಲೆದೋರಿದೆ. ಇದರ ಪರಿಣಾಮ ನೈಸರ್ಗಿಕ ಜಲಮೂಲಗಳು ಬತ್ತಿ ಹೋಗಿದ್ದು ಹಲವೆಡೆ ಕುಡಿಯುವ ನೀರಿಗೂ ತತ್ವಾರ ಬಂದೊದಗಿದೆ. ಇದೇ ವೇಳೆ ಕಳೆದೊಂದು ತಿಂಗಳಿಂದೀಚೆಗೆ ಬಿಸಿಲಿನ ಝಳ ವಿಪರೀತ ಹೆಚ್ಚಿದ್ದು ನದಿ, ಜಲಾಶಯಗಳಲ್ಲಿನ ನೀರಿನ ಪ್ರಮಾಣ ದಿನೇ ದಿನೆ ಕಡಿಮೆಯಾಗುತ್ತಿದೆ. ಇದರ ಪರಿಣಾಮವಾಗಿ ನಗರ ಪ್ರದೇಶಗಳಲ್ಲಿ ಸಮರ್ಪಕವಾಗಿ ನೀರು ಪೂರೈಸಲು ನಗರಾಡಳಿತ ಸಂಸ್ಥೆಗಳು ಹರಸಾಹಸ ಪಡುತ್ತಿವೆ. ನೀರಿನ ತೀವ್ರ ಅಭಾವ ನಗರದ ಜನರನ್ನು ಹೈರಾಣಾಗಿಸಿದೆ. ನೆರೆಯ ಕೇರಳ ಸರಕಾರ ಇದನ್ನೇ ಬಂಡವಾಳ ಮಾಡಿಕೊಳ್ಳಲು ಮುಂದಾಗಿದ್ದು, ಮಾಹಿತಿ ತಂತ್ರಜ್ಞಾನ ಕಂಪೆನಿಗಳಿಗೆ ರಾಜ್ಯಕ್ಕೆ ಬರುವಂತೆ ಬಹಿರಂಗ ಆಹ್ವಾನ ನೀಡಿದೆ. ನೈಸರ್ಗಿಕ ವಿಪತ್ತನ್ನು ದಾಳವನ್ನಾಗಿಸಿಕೊಳ್ಳ ಹೊರಟ ಕೇರಳ ಸರಕಾರದ ಈ ನಡೆ ಬಾಲಿಶತನದ ಪರಮಾವಧಿಯೇ ಸರಿ.

ಮಳೆ ಕೊರತೆಯಿಂದಾಗಿ ಕರ್ನಾಟಕದಲ್ಲಿ ನೀರಿನ ಅಭಾವ ತಲೆದೋರಿದ್ದು ಇದು ಕೇವಲ ರಾಜ್ಯಕ್ಕೆ ಮಾತ್ರ ಸೀಮಿತವಾಗಿರದೆ ದೇಶದ ವಿವಿಧೆಡೆಗಳಲ್ಲಿ ಬರ ಕಾಣಿಸಿಕೊಂಡಿದೆ. ನೀರಿನ ಅಭಾವ ತೀವ್ರವಾಗಿರುವ ಈ ಸಂದರ್ಭದಲ್ಲಿ ಬೆಂಗಳೂರು ಆದಿಯಾಗಿ ಮಹಾನಗರಗಳಲ್ಲಿ ಸಮರ್ಪಕವಾಗಿ ನೀರು ಪೂರೈಸುವುದು ಹರಸಾಹಸವೇ ಸರಿ. ಟ್ಯಾಂಕರ್‌ಗಳ ಮೂಲಕ ನೀರು ಪೂರೈಸುವ ಪ್ರಯತ್ನ ಸಾಗಿದ್ದರೂ ಪೂರ್ಣ ಪ್ರಮಾಣದಲ್ಲಿ ನೀರು ಪೂರೈಸುವುದು ಅಸಾಧ್ಯದ ಮಾತೇ ಸರಿ. ಸದ್ಯದ ವಾಸ್ತವ ಸ್ಥಿತಿಯಲ್ಲಿ ಜನರ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸುವುದು ಕಷ್ಟಸಾಧ್ಯವೇ. ಇದರ ಹೊರತಾಗಿಯೂ ಸರಕಾರ ಮತ್ತು ಪಾಲಿಕೆ ನಗರದ ಜನತೆಗೆ ನೀರು ಪೂರೈಸಲು ತನ್ನ ಕೈಲಾದಷ್ಟು ಪ್ರಯತ್ನವನ್ನು ಮಾಡುತ್ತಿದೆ.

ಇಂತಹ ಪರಿಸ್ಥಿತಿಯಲ್ಲಿ ನೆರೆಯ ರಾಜ್ಯವೊಂದು ನೀರಿನ ಅಭಾವವನ್ನು ಮುಂದಿಟ್ಟು ಐಟಿ ಕಂಪೆನಿಗಳನ್ನು ತನ್ನತ್ತ ಸೆಳೆಯುವ ಪ್ರಯತ್ನಕ್ಕೆ ಕೈಹಾಕಿರುವುದು ವಿವೇಚನಾರಹಿತ ನಡೆಯಾಗಿದೆ. ಐಟಿ ಕಂಪೆನಿಗಳಾದಿಯಾಗಿ ಕೈಗಾರಿಕೆಗಳಿಗೆ ಅತ್ಯವಶ್ಯವಾಗಿರುವ ಮೂಲಸೌಕರ್ಯಗಳನ್ನು ಒದಗಿಸಿಕೊಟ್ಟು, ಒಂದಿಷ್ಟು ಪ್ರೋತ್ಸಾಹದಾಯಕ ಯೋಜನೆಗಳನ್ನು ಘೋಷಿಸುವ ಮೂಲಕ ರಾಜ್ಯ ಸರಕಾರಗಳು ಕೈಗಾರಿಕೋದ್ಯಮಿಗಳನ್ನು ಆಹ್ವಾನಿಸುವುದು ಹೊಸದೇನಲ್ಲ. ಆದರೆ ಅಚ್ಚರಿ ಎಂದರೆ ರಾಜ್ಯ ಸರಕಾರವೊಂದು ಬೆಂಗಳೂರಿನಲ್ಲಿನ ಸದ್ಯ ತಲೆದೋರಿರುವ ನೀರಿನ ಅಭಾವವನ್ನೇ ನೆಪವಾಗಿಸಿ, “ನಾವು ನೀರಿನ ಸಹಿತ ಎಲ್ಲ ಮೂಲಸೌಕರ್ಯಗಳನ್ನು ಒದಗಿಸುತ್ತೇವೆ, ರಾಜ್ಯದಲ್ಲಿ ನಿಮ್ಮ ಕಂಪೆನಿಗಳನ್ನು ತೆರೆಯಿರಿ’ ಎಂದು ಐಟಿ ಕಂಪೆನಿಗಳಿಗೆ ಆಹ್ವಾನ ನೀಡುವ ಮೂಲಕ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದೆ. ಕೇರಳದ ಕೈಗಾರಿಕ ಸಚಿವರು ಸ್ವತಃ ಐಟಿ ಕಂಪೆನಿಗಳಿಗೆ ಪತ್ರ ಬರೆದು ಇಂತಹ ಆಹ್ವಾನ ನೀಡಿರುವುದು ವಿರೋಧಾಭಾಸ ಮಾತ್ರವಲ್ಲದೆ ಹಾಸ್ಯಾಸ್ಪದ ಕೂಡ.

ಬೆಂಗಳೂರಿನಂತೆ ಕೇರಳವನ್ನು ಐಟಿ ಕೇಂದ್ರವನ್ನಾಗಿಸುವ ಅಲ್ಲಿನ ಸರಕಾರ ಉದ್ದೇಶ ಉತ್ತಮವಾದುದೆ. ಆದರೆ ಬೆಂಗಳೂರಿನಲ್ಲಿ ನೀರಿನ ಅಭಾವವಿದೆ. ನಮ್ಮಲ್ಲಿ 44 ನದಿಗಳಿವೆ, ನೀರಿನ ಸಮಸ್ಯೆಯೇ ಇಲ್ಲ ಎಂಬ ಉಲ್ಲೇಖವೇ ಕೇರಳದ ಸಚಿವರ ನೈಜ ಕಳಕಳಿ ಏನು ಎಂಬ ಪ್ರಶ್ನೆ ಮೂಡಿಸುತ್ತದೆ. ನೈಸರ್ಗಿಕ ವಿಪತ್ತುಗಳ ಸಂದರ್ಭದಲ್ಲಿ ನೆರೆಯ ರಾಜ್ಯಗಳು ಸಂಕಷ್ಟಪೀಡಿತ ರಾಜ್ಯಗಳಿಗೆ ನೆರವಿನ ಹಸ್ತ ಚಾಚಬೇಕಿರುವುದು ಒಕ್ಕೂಟ ವ್ಯವಸ್ಥೆಯ ಮೂಲಧರ್ಮ. ಇದನ್ನು ಬಿಟ್ಟು ಸಂಕಷ್ಟದ ಸಂದರ್ಭದಲ್ಲಿ ತನ್ನ ಬೇಳೆ ಬೇಯಿಸಿಕೊಳ್ಳುವ ಮನೋಧರ್ಮ ಸರಿಯಲ್ಲ.

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.