ಜನರ ಆರೋಗ್ಯಕ್ಕಿಂತ ಐಪಿಎಲ್‌ ದೊಡ್ಡದಲ್ಲ


Team Udayavani, Mar 13, 2020, 6:25 AM IST

IPL-2020

ಐಪಿಎಲ್‌ನಂಥ ಬೃಹತ್‌ ಕ್ರೀಡಾಕೂಟವೊಂದನ್ನು ರದ್ದುಪಡಿಸಿದರೆ ಭಾರೀ ಪ್ರಮಾಣದ
ನಷ್ಟವಾಗುತ್ತದೆ ಎನ್ನುವುದು ನಿಜ. ಹಾಗೆಂದು ಜನರ ಆರೋಗ್ಯವನ್ನು ಪಣಕ್ಕಿಡುವುದು ಸರಿಯಲ್ಲ. ಈ ಪರಿಸ್ಥಿತಿಯಲ್ಲಿ ಐಪಿಎಲ್‌ ರದ್ದುಪಡಿಸುವುದೇ ಸರಿ.

ಜಗತ್ತಿನಾದ್ಯಂತ ಹಾಹಾಕಾರ ಎಬ್ಬಿಸಿರುವ ಕೊರೊನಾ ವೈರಸ್‌ನ ಕರಿನೆರಳು ಕ್ರೀಡಾ ಕ್ಷೇತ್ರದ ಮೇಲೂ ದಟ್ಟವಾಗಿಯೇ ಕವಿದಿದೆ. ಭಾರತದಲ್ಲಿ ಈ ಮಾಸಾಂತ್ಯದಲ್ಲಿ ಪ್ರಾರಂಭವಾಗಲಿರುವ ಐಪಿಎಲ್‌ ಕ್ರಿಕೆಟ್‌ ಕೂಟ, ವರ್ಷಾಂತ್ಯದಲ್ಲಿ ಜಪಾನ್‌ನ ಟೋಕಿಯೊ ನಗರದಲ್ಲಿ ನಡೆಯಲಿರುವ ಒಲಿಂಪಿಕ್ಸ್‌ ಕೂಟವೂ ಸೇರಿದಂತೆ ಹಲವು ಪ್ರಮುಖ ಕ್ರೀಡಾಕೂಟಗಳ ಭವಿಷ್ಯ ಕೊರೊನಾದಿಂದಾಗಿ ಅತಂತ್ರವಾಗಿದೆ.

ಕ್ರೀಡಾಕೂಟಗಳೆಂದರೆ ಜನರಿಗೆ ಭರಪೂರ ಮನರಂಜನೆ ಸಿಗುವ ಕಾರ್ಯಕ್ರಮ. ಸಹಜವಾಗಿಯೇ ಕ್ರೀಡಾಕೂಟಗಳಿಗೆ ಪ್ರೇಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರುತ್ತಾರೆ. ಇಂಥ ಕಡೆಗೆ ಕೊರೊನಾ ವೈರಸ್‌ ಸೋಂಕು ಇರುವ ವ್ಯಕ್ತಿಯೇನಾದರೂ ಬಂದರೆ ಅದರಿಂದ ಆಗಬಹುದಾದ ಹಾನಿ ಅಪಾರ. ಈ ಹಿನ್ನೆಲೆಯಲ್ಲಿ ಅನೇಕ ದೇಶಗಳು ಕ್ರೀಡಾಕೂಟಗಳು ಸೇರಿದಂತೆ ಎಲ್ಲ ರೀತಿಯ ಸಾಮಾಜಿಕ ಮತ್ತು ಸಾರ್ವಜನಿಕ ಕಾರ್ಯಕ್ರಮಗಳನ್ನು ನಿಷೇಧಿಸಿವೆ. ಕೊರೊನಾ ಹಾವಳಿ ವಿಪರೀತವಿರುವ ಇಟಲಿ ದೇಶವಂತೂ ಪೂರ್ತಿ ಸ್ತಬ್ಧಗೊಂಡಿದೆ. ನಮ್ಮದೇ ದೇಶದ ಕೇರಳ ರಾಜ್ಯದಲ್ಲೂ ಕೆಲವು ನಗರಗಳ ರಸ್ತೆಗಳು ಜನಸಂಚಾರವಿಲ್ಲದೆ ಬಿಕೋ ಎನ್ನುತ್ತಿವೆ.

ಕೇಂದ್ರ ಆರೋಗ್ಯ ಇಲಾಖೆ ಕೊರೊನಾ ಹರಡುವುದನ್ನು ತಡೆಯುವ ಸಲುವಾಗಿ ಅನೇಕ ಮಾರ್ಗಸೂಚಿಗಳನ್ನು ಪ್ರಕಟಿಸಿದೆ ಹಾಗೂ ಹಲವು ನಿರ್ಬಂಧಗಳನ್ನು ಹೇರಿದೆ. ಈ ಪೈಕಿ ವಿಸಾ ನಿರ್ಬಂಧವೂ ಒಂದು. ರಾಜತಾಂತ್ರಿಕ ಮತ್ತು ನೌಕರಿಗೆ ಸಂಬಂಧಪಟ್ಟಿರುವ ವಿಸಾಗಳನ್ನು ಹೊರತುಪಡಿಸಿ ಉಳಿದ ಎಲ್ಲ ವಿಸಾಗಳ ನೀಡಿಕೆಯನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

ಈ ನಿರ್ಬಂಧದಿಂದಾಗಿ ಮೊದಲ ಹೊಡೆತ ಬೀಳುವುದು ಐಪಿಎಲ್‌ ಕ್ರೀಡಾಕೂಟಕ್ಕೆ. ಏಕೆಂದರೆ ಐಪಿಎಲ್‌ನಲ್ಲಿ ಆಡುವ ಸುಮಾರು 60ರಷ್ಟು ವಿದೇಶಿ ಆಟಗಾರರು ಬಿಸಿನೆಸ್‌ ವಿಸಾ ಮೇಲೆ ಬರುತ್ತಾರೆ. ನಿರ್ಬಂಧದಿಂದಾಗಿ ಎ.15ರ ತನಕ ಇವರು ಭಾರತಕ್ಕೆ ಬರುವಂತಿಲ್ಲ. ಹೀಗಾಗಿ ಐಪಿಎಲ್‌ ಮೊದಲ ಸುತ್ತಿನಲ್ಲಿ ತನ್ನ ರೋಚಕತೆಯನ್ನು ಕಳೆದುಕೊಳ್ಳಲಿದೆ. ಈಗ ಇರುವ ಪ್ರಶ್ನೆಯೇನೆಂದರೆ ಇಂಥ ಪರಿಸ್ಥಿತಿಯಲ್ಲೂ ಐಪಿಎಲ್‌ ಕೂಟವನ್ನು ನಡೆಸಬೇಕೆ ಎನ್ನುವುದು.

ಅನಿವಾರ್ಯ ಎಂದಾದರೆ ಕ್ರೀಡಾಕೂಟಗಳನ್ನು ಜನ ಸೇರಿಸದೆ ನಡೆಸಬೇಕೆಂದು ಆರೋಗ್ಯ ಇಲಾಖೆ ಎಲ್ಲ ರಾಷ್ಟ್ರೀಯ ಕ್ರೀಡಾ ಸಂಸ್ಥೆಗಳಿಗೆ ಸಲಹೆಯಿತ್ತಿದೆ. ಐಪಿಎಲ್‌ನಂಥ ಕ್ರೀಡಾಕೂಟವನ್ನು ಪ್ರೇಕ್ಷಕರಿಲ್ಲದೆ ಆಡುವುದನ್ನು ಊಹಿಸಲು ಕಷ್ಟವಾಗುತ್ತದೆ. ಹೀಗಾಗಿ ಐಪಿಎಲ್‌ ಆಡಳಿತ ಸಮಿತಿ ಮತ್ತು ಬಿಸಿಸಿಐ ಈ ವರ್ಷದ ಐಪಿಎಲ್‌ ಕೂಟದ ಬಗ್ಗೆ ಮರು ಚಿಂತನೆ ನಡೆಸಬೇಕು.

ಜನರ ಸಂಶಯಗಳಿಗೆ ಇಂಬುಕೊಡುವಂತೆ ಮಾ.8ರಂದು ಆಸ್ಟ್ರೇಲಿಯಾದ ಮೆಲ್ಬೋರ್ನ್ ಸ್ಟೇಡಿಯಂನಲ್ಲಿ ನಡೆದ ವನಿತೆಯರ ಟ್ವೆಂಟಿ-ಟ್ವೆಂಟಿ ಫೈನಲ್‌ ಪಂದ್ಯ ನೋಡಿದ ಓರ್ವ ಪ್ರೇಕ್ಷಕನಲ್ಲಿ ಕೊರೊನಾ ಸೋಂಕು ಇದ್ದದ್ದು ದೃಢಪಟ್ಟಿದೆ. ಆತನ ಸುತ್ತಮುತ್ತ ಕುಳಿತಿದ್ದವರು ನಿತ್ಯದ ಕೆಲಸಗಳನ್ನು ಮಾಡಬಹುದಾದರೂ ನೈರ್ಮಲ್ಯದ ಬಗ್ಗೆ ತುಸು ಹೆಚ್ಚು ಕಾಳಜಿ ವಹಿಸಿಕೊಳ್ಳಬೇಕೆಂದು ಅಲ್ಲಿನ ಆರೋಗ್ಯ ಇಲಾಖೆ ಹೇಳಿದೆ. ಇಂಥ ಪ್ರಕರಣಗಳು ಭಾರತದಲ್ಲಿ ಸಂಭವಿಸುವ ಸಾಧ್ಯತೆಯೂ ಇರುವುದರಿಂದ ಈ ವರ್ಷದ ಮಟ್ಟಿಗೆ ಐಪಿಎಲ್‌ ರದ್ದುಗೊಳಿಸುವುದು ಅಥವಾ ಕನಿಷ್ಠ ಮುಂದೂಡುವುದು ಸಮುಚಿತ ನಿರ್ಧಾರವಾಗಬಹುದು. ಐಪಿಎಲ್‌ ಮುಂದೂಡಬೇಕೆಂದು ಆಗ್ರಹಿಸಿದ ದಾವೆಯೂ ಸುಪ್ರೀಂ ಕೋರ್ಟಿನಲ್ಲಿ ದಾಖಲಾಗಿದ್ದು, ಇದು ಮುಂದಿನ ದಿನಗಳಲ್ಲಿ ವಿಚಾರಣೆಗೆ ಬರಲಿದೆ.

ಐಪಿಎಲ್‌ನಂಥ ಬೃಹತ್‌ ಕ್ರೀಡಾಕೂಟವೊಂದನ್ನು ರದ್ದುಪಡಿಸಿದರೆ ಭಾರೀ ಪ್ರಮಾಣದ ನಷ್ಟವಾಗುತ್ತದೆ ಎನ್ನುವುದು ನಿಜ. ಆಟಗಾರರಿಗೆ, ಬಿಸಿಸಿಐಗೆ, ಫ್ರಾಂಚೈಸಿಗಳಿಗೆ, ಮಾಧ್ಯಮಗಳಿಗೆ ನಷ್ಟವಾಗುತ್ತದೆ. ಮಾತ್ರವಲ್ಲದೆ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ನಷ್ಟ ಅನುಭವಿಸುವ ಅನೇಕ ಮಂದಿಯಿದ್ದಾರೆ. ದೇಶದ ಪ್ರವಾಸೋದ್ಯಮ, ಹೊಟೇಲ್‌ ಉದ್ಯಮಕ್ಕೂ ನಷ್ಟವಾಗುತ್ತದೆ. ಒಟ್ಟಾರೆಯಾಗಿ ದೇಶದ ಆರ್ಥಿಕತೆಗೆ ಹಿನ್ನಡೆಯಾಗುತ್ತದೆ.ಕೊರೊನಾದಿಂದಾಗಿ ಪ್ರವಾಸೋದ್ಯಮ ಈಗಾಗಲೇ ಸಾಕಷ್ಟು ಹಿನ್ನಡೆಯನ್ನು ಅನುಭವಿಸಿದೆ. ಆದರೆ ಹಾಗೆಂದು ಜನರ ಆರೋಗ್ಯವನ್ನು ಪಣಕ್ಕಿಡುವುದು ಸರಿಯಲ್ಲ. ಈ ಪರಿಸ್ಥಿತಿಯಲ್ಲಿ ಐಪಿಎಲ್‌ ರದ್ದುಪಡಿಸುವುದೇ ಸಮರ್ಪಕವಾದ ನಿರ್ಧಾರವಾಗುತ್ತದೆ. ಜನರ
ಪ್ರಾಣಕ್ಕಿಂತ ಕ್ರೀಡಾಕೂಟ ದೊಡ್ಡದಲ್ಲ.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.