ಮೈನ್‌ಪುರಿ ಕಾರ್ಯಕ್ರಮ ಬಲವಂತದ್ದೇ?


Team Udayavani, Apr 20, 2019, 6:00 AM IST

15

ರಾಜಕೀಯ ಕ್ಷೇತ್ರದ ಅನಿವಾರ್ಯತೆಯೇ ಹಾಗೆ. ಅಲ್ಲಿ ಆಜನ್ಮ ಶತ್ರುತ್ವ-ಮಿತ್ರತ್ವ ಇಲ್ಲವೇ ಇಲ್ಲ. ಪರಿಸ್ಥಿತಿಗೆ ಅನುಗುಣವಾಗಿ ಪಟ್ಟಿಗೆ ಪ್ರತಿ ಪಟ್ಟು, ವ್ಯೂಹಕ್ಕೆ ಪ್ರತಿವ್ಯೂಹ ರಚನೆ ಮಾಡಬೇಕಾಗುತ್ತದೆ. ಉತ್ತರ ಪ್ರದೇಶದ ಮೈನ್‌ಪುರಿ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿರುವ ಸಮಾಜವಾದಿ
ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್‌ ಯಾದವ್‌ ಪರವಾಗಿ ಬಹುಜನ ಸಮಾಜ ಪಕ್ಷದ ವರಿಷ್ಠ ನಾಯಕಿ ಮಾಯಾವತಿ ಅವರು ಪ್ರಚಾರ ನಡೆಸಿರುವ ಹಿನ್ನೆಲೆಯಲ್ಲಿ ಈ ಅಂಶಕ್ಕೆ ಹೆಚ್ಚಿನ ಮಹತ್ವ ಬಂದಿದೆ. ಬರೋಬ್ಬರಿ 22 ವರ್ಷಗಳ ಕಾಲ ಇಬ್ಬರು ನಾಯಕರು ನಾಯಕರು ಮುಖ ನೋಡಿ ಮಾತನಾಡಿಯೇ ಇರಲಿಲ್ಲ. ಉತ್ತರ ಪ್ರದೇಶದ ವಿಧಾನಸಭೆಯ ಬಳಿಕ ಫ‌ೂಲ್‌ಪುರ್‌, ಗೋರಖ್‌ಪುರ ಲೋಕಸಭೆ ಉಪ- ಚುನಾವಣೆಗಾಗಿ ನಡೆಸಿದ್ದ ಸಮಾಜವಾದಿ ಪಕ್ಷ- ಬಹುಜನ ಸಮಾಜವಾದಿ ಪಕ್ಷದ ಮೈತ್ರಿಯ ಪ್ರಯೋಗ ಯಶಸ್ವಿಯಾದದ್ದೇ ಅದನ್ನು ಹಾಲಿ ಲೋಕಸಭೆ ಚುನಾವಣೆಗಾಗಿ ರೂಪಿಸಲು ನಿರ್ಧರಿಸಲಾಗಿತ್ತು.

ಸಮಾಜವಾದಿ ಪಕ್ಷ-ಬಹುಜನ ಸಮಾಜ ಪಕ್ಷ- ರಾಷ್ಟ್ರೀಯ ಲೋಕದಳ ಪಕ್ಷಗಳ ಮೈತ್ರಿಗೆ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್‌ ಯಾದವ್‌ಗೆ ಎಳ್ಳಷ್ಟೂ ಮನಸ್ಸು ಇರಲಿಲ್ಲ. ಅವರು ಈ ವಿಚಾರದಲ್ಲಿ ಅನೇಕ ಬಾರಿ ಬಹಿರಂಗವಾಗಿಯೇ ಆಕ್ಷೇಪ ಮಾಡಿದ್ದರು. ಸದ್ಯ ಅವರು ಅಜಂಗಢ ಕ್ಷೇತ್ರದ ಸಂಸದರು. ಇದೀಗ ಶಕ್ತಿಕೇಂದ್ರದಿಂದ ಮತ್ತೆ ಲೋಕಸಭೆಗೆ ಪ್ರವೇಶ ಮಾಡಲು ಮುಂದಾಗಿದ್ದಾರೆ. ಬಿಎಸ್‌ಪಿ ನಾಯಕಿ ಮಾಯಾವತಿ ಮಾತನಾಡಿ ಪ್ರಧಾನಿ ನರೇಂದ್ರ ಮೋದಿ ಹಿಂದುಳಿದ ವರ್ಗಗಳ ನಕಲಿ ನಾಯಕ; ಮುಲಾಯಂ ಸಿಂಗ್‌ ಯಾದವ್‌ ನಿಜವಾದ ಸಮುದಾಯದ ನಾಯಕ ಎಂದು ಘೋಷಿಸಿದ್ದಾರೆ. ಮುಲಾಯಂ ಕೂಡ ರ್ಯಾಲಿಗೆ ಬಂದಿರುವ ಮಾಯಾವತಿಯವರಿಗೆ ಸ್ವಾಗತ, ಅವರು ನಮ್ಮ ಕಷ್ಟದ ದಿನಗಳಲ್ಲಿ ಜೊತೆಗೆ ಇದ್ದವರು ಎಂದು ಕೊಂಡಾಡಿದ್ದಾರೆ.

ಇಲ್ಲೊಂದು ಕುತೂಹಲಕಾರಿಯಾಗಿರುವ ಅಂಶವಿದೆ. ಬಿಎಸ್‌ಪಿ ನಾಯಕಿಯ ಬಗ್ಗೆ ಮುಕ್ತಕಂಠದಿಂದ ಮಾತನಾಡಿರುವ ಹಿರಿಯ ನಾಯಕ ಉತ್ತರಪ್ರದೇಶದ ದೇವ್‌ಬಂದ್‌, ಬದೌನ್‌, ಆಗ್ರಾದ‌ಲ್ಲಿ ಕೆಲ ದಿನಗಳ ಹಿಂದಷ್ಟೇ ಆಯೋಜಿಸಲಾಗಿದ್ದ ಮೈತ್ರಿಕೂಟದ ಚುನಾವಣಾ ಪ್ರಚಾರದಿಂದ ದೂರವೇ ಇದ್ದರು. ಇಷ್ಟು ಮಾತ್ರವಲ್ಲ, ಪುತ್ರ, ಅಜಂಗಢದಿಂದ ಸ್ಪರ್ಧಿಸಿರುವ ಅಖೀಲೇಶ್‌ ಯಾದವ್‌ ನಾಮಪತ್ರ ಸಂದರ್ಭದಲ್ಲಿಯೂ ಹಿರಿಯ ನಾಯಕನ ಅನುಪಸ್ಥಿತಿ ಎದ್ದು ಕಾಣುತ್ತಿತ್ತು. ಹೀಗಾಗಿ, ಸಂಪೂರ್ಣ ಮನಸ್ಸಿನಿಂದ ಮೈತ್ರಿಕೂಟಕ್ಕೆ ಅವರು ಸಮ್ಮತಿ ಸೂಚಿಸಿದ್ದಾರೆ ಎಂದು ಹೇಳಿಕೊಳ್ಳುವುದೇ ಪ್ರಶ್ನಾರ್ಹವಾಗಿದೆ. ಅವರದ್ದೇ ಸ್ಥಳದಲ್ಲಿ ಆಯೋಜಿಸಲಾಗಿದ್ದ ರ್ಯಾಲಿಯಲ್ಲಿ ಭಾಗವಹಿಸುವುದಕ್ಕೂ ಮಾಜಿ ಮುಖ್ಯಮಂತ್ರಿ ಹಿಂದೇಟು ಹಾಕಿದ್ದರು. ಕೇವಲ ಪುತ್ರ ಅಖೀಲೇಶ್‌ ಯಾದವ್‌ ಒತ್ತಾಯಕ್ಕೆ ಮಣಿದು ಅವರು ಬಂದಿದ್ದರು ಎಂದು ಹೇಳಲಾಗುತ್ತಿದೆ.

1995ರಲ್ಲಿ ಲಕ್ನೋದ ಅತಿಥಿ ಗೃಹದಲ್ಲಿ ಬಿಎಸ್‌ಪಿ ಶಾಸಕನನ್ನು ಅಪಹರಿಸಿದ್ದರ ಜತೆಗೆ, ಮಾಯಾವತಿ ಅವರನ್ನು ಸೆರೆಯಲ್ಲಿಟ್ಟಿದ್ದರು ಎಂದು ಹೇಳಲಾಗಿರುವ ಘಟನೆಯ ಬಳಿಕ 2 ಪಕ್ಷಗಳ ನಡುವೆ ಸಂಬಂಧ ಮುರಿದುಬಿದ್ದಿತ್ತು. ಮೈತ್ರಿ ಸರ್ಕಾರದಿಂದ ಬಿಎಸ್‌ಪಿ ದೂರ ಸರಿದದ್ದಕ್ಕಾಗಿ ಈ ಘಟನೆ ನಡೆದಿತ್ತು ಎಂದು ವಿಶ್ಲೇಷಿಸಲಾಗಿತ್ತು.

1997ರ ಜೂ.15ರಂದು ಮೈನ್‌ಪುರಿಯಲ್ಲಿ ಆಯೋಜಿಸಲಾಗಿದ್ದ ರ್ಯಾಲಿಯಲ್ಲಿ 2 ತಿಂಗಳ ಅವಧಿಯಲ್ಲಿ ಮಾಯಾವತಿ ಸರ್ಕಾರ ವಜಾಗೊಳ್ಳುತ್ತದೆ ಎಂದಿದ್ದರು. ಈ ದಿನದಿಂದ ಸರಿಯಾಗಿ ನಾಲ್ಕು ದಿನಗಳ ಬಳಿಕ ಲಕ್ನೋದಲ್ಲಿ ಬಿಎಸ್‌ಪಿ ವಿರುದ್ಧ ದೊಡ್ಡ ಪ್ರತಿಭಟನೆಯನ್ನು ಮುಲಾಯಂ ಸಿಂಗ್‌ ಯಾದವ್‌ ಆಯೋಜಿಸಿದ್ದರು. ಅದಕ್ಕೆ ಎಚ್‌.ಡಿ.ದೇವೇಗೌಡ, ಚಂದ್ರಬಾಬು ನಾಯ್ಡು, ಇಂದ್ರಜಿತ್‌ ಗುಪ್ತಾ ಸೇರಿದಂತೆ ಪ್ರಮುಖರು ಭಾಗವಹಿಸಿದ್ದರು.

ಮೈನ್‌ಪುರಿಗೆ ಮಾಯಾವತಿಯವರು ಬಂದು ಮೈತ್ರಿಕೂಟದ ಶಕ್ತಿ ಪ್ರದರ್ಶನವಾಗದಿದ್ದರೂ, ಮುಲಾಯಂ ಜಯ ಸಾಧಿಸುವುದು ಖಚಿತ. ಏಕೆಂದರೆ 2014ರಲ್ಲಿ ಅಜಂಗಢವನ್ನು ಉಳಿಸಿಕೊಂಡು ಮೈನ್‌ಪುರಿಗೆ ರಾಜೀನಾಮೆ ನೀಡಿದ ಬಳಿಕ ಉಂಟಾದ ಉಪ ಚುನಾವಣೆಯಲ್ಲಿ ತಮ್ಮ ಸೋದರ ಸಂಬಂಧಿ ತೇಜ್‌ಪ್ರತಾಪ್‌ ಯಾದವ್‌ರನ್ನು ಗೆಲ್ಲಿಸಿದ್ದರು.

ಇನ್ನು ಬಿಜೆಪಿಯ ನಿರೀಕ್ಷೆಯ ಬಗ್ಗೆ ಮಾತನಾಡುವುದಿದ್ದರೆ, ಈ ಕಾರ್ಯಕ್ರಮ ಅದಕ್ಕೆ ಹಿನ್ನಡೆಯೇ. ಹಿಂದಿನ ಚುನಾವಣೆಯಲ್ಲಿ ಪರಾಭವ ಹೊಂದಿದ್ದ ಪ್ರೇಂ ಸಿಂಗ್‌ ಶಕ್ಯಾ ಅವರನ್ನೇ ಕಣಕ್ಕೆ ಇಳಿಸಿದೆ. ಹೀಗಾಗಿ 5 ದಶಕಗಳಿಂದ ಗೆಲ್ಲದೇ ಇರುವ ಕ್ಷೇತ್ರವನ್ನು ಕೈವಶಪಡಿಸಬೇಕೆಂಬ ಮಹತ್ವಾಕಾಂಕ್ಷೆಗೆ ಹಿನ್ನೆಡೆ ಖಚಿತ. ಒಟ್ಟಿನಲ್ಲಿ 2 ಪಕ್ಷಗಳು ನಡೆಸಿರುವ ರ್ಯಾಲಿ, ಮೈತ್ರಿಗೆ ಮುಲಾಯಂರ ಮನಃಪೂರ್ವಕ ಹಾರೈಕೆ ಇಲ್ಲ ಎನ್ನುವುದು ಸ್ಪಷ್ಟ.

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.